ಹುಬ್ಬಳ್ಳಿ: ರೈಲ್ವೇ ಸಾರಿಗೆ ಜನಪ್ರಿಯತೆ ಪಡೆದ ಸೇವೆಯಾಗಿದ್ದು, ಮೊದಲು ಜನರೆಲ್ಲ ರೈಲ್ವೇ ಶಬ್ದವನ್ನು ಕೇಳಿಕೊಂಡು ಸಮಯ ತಿಳಿದುಕೊಳ್ಳುವಂತ ಕಾಲಮಾನವೊಂದಿತ್ತು. ಅಲ್ಲದೇ ರೈಲು ಗಾಡಿಯನ್ನು ನೋಡಿ ಹರ್ಷವನ್ನ ವ್ಯಕ್ತಪಡಿಸುವ ಅಂತಹ ಸಂದರ್ಭ ಗತಿಸಿ ದಶಕಗಳೆ ಉರುಳಿ ಹೋಗಿದೆ. ಅಂತಹ ನೆನಪನ್ನು ಮತ್ತೊಮ್ಮೆ ಮರುಕಳಿಸುವಂತೆ ಮಾಡಿದೆ.
ಬೆಳಗಿನ ಜಾವ 5.30 ಆದರೆ ಸಾಕು, ವಾಣಿಜ್ಯ ನಗರಿಯ ರೈಲು ನಿಲ್ದಾಣ ಗಿಜಿಗುಡುತ್ತಿರುತ್ತದೆ. ಹುಬ್ಬಳ್ಳಿ ರೈಲ್ವೇ ನಿಲ್ದಾಣಕ್ಕೆ ನಡೆದು ಬರುವ ಅದೆಷ್ಟೋ ಪ್ರಯಾಣಿಕರಿಗೆ ಉತ್ತಮ ಸೇವೆಯನ್ನು ನೀಡುತ್ತಾ ಬಂದಿರುವ ರಾಣಿ ಚನ್ನಮ್ಮ ಎಕ್ಸ್ಪ್ರೆಸ್ ರೈಲು ಈಗ 25 ವಸಂತಗಳನ್ನು ಪೂರೈಸಿದೆ. ಬೆಳ್ಳಿ ಹಬ್ಬದ ‘ಟ್ರ್ಯಾಕ್’ನಲ್ಲಿ ಓಡುತ್ತಿರುವ ಈ ರೈಲು ನೈಋತ್ಯ ರೈಲ್ವೆಯ ‘ರಾಣಿ’ಯಾಗಿದೆ. ಇನ್ನೂ ಹಳ್ಳಿಗಳಲ್ಲಿಯ ಜನರು ಮುಂಜಾನೆ ಹೊಲಕ್ಕೆ ಹೋಗಲು ಕೂಡ ರಾಣಿ ಚೆನ್ನಮ್ಮ ರೈಲಿನ ಸಮಯವನ್ನು ಗಮನಿಸುತ್ತಿರುವುದು ಕೂಡ ವಿಶೇಷವಾಗಿದೆ.
ಈ ಭಾಗದ ಜನರಿಗೆ ಸಂಪರ್ಕ ಸೇತುವೆಯಷ್ಟೇ ಅಲ್ಲ, ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರ ಮಹಿಳೆಯ ಹೆಸರು ರೈಲಿಗೆ ಇರುವ ಕಾರಣ ಈ ರೈಲಿನೊಂದಿಗೆ ಭಾವನಾತ್ಮಕ ಬೆಸುಗೆಯಿದೆ. ಮೀಟರ್ ಗೇಜ್ನಲ್ಲಿದ್ದ ಈ ರೈಲು ಬಳಿಕ ಬ್ರಾಡ್ಗೇಜ್ಗೆ ಪರಿವರ್ತನೆಯಾಯಿತು. ಇದಕ್ಕೂ ಮೊದಲು ಕರ್ನಾಟಕ ಎಕ್ಸ್ಪ್ರೆಸ್, ಡೆಕ್ಕನ್ ಎಕ್ಸ್ಪ್ರೆಸ್ ಮತ್ತು ಕಿತ್ತೂರು ಎಕ್ಸ್ಪ್ರೆಸ್ ಎಂದು ಕರೆಯಲಾಗುತ್ತಿತ್ತು.
ಒಟ್ಟಿನಲ್ಲಿ ಇಪ್ಪತ್ತೈದು ವರ್ಷಗಳ ಪ್ರಯಾಣವನ್ನು ಪೂರ್ಣಗೊಳಿಸಿದ ರಾಣಿ ಚೆನ್ನಮ್ಮ ಎಕ್ಸ್ಪ್ರೆಸ್ ರೈಲು ಇಂದಿಗೂ ರೈಲ್ವೇ ಪ್ರಯಾಣಿಕರ ಜೀವನಾಡಿಯಾಗಿದೆ. ಯಾರೊಬ್ಬರನ್ನು ಕೇಳಿದರೂ ಕೂಡ ರಾಣಿಚೆನ್ನಮ್ಮ ರೈಲಿನ ಬಗ್ಗೆ ಗೊತ್ತಿರದೇ ಇರಲು ಸಾಧ್ಯವಿಲ್ಲ.