Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರಾಮನಗರ ಜಿಲ್ಲೆ ಕೋವಿಡ್ ಸ್ಥಿತಿಗತಿ ಅವಲೋಕಿಸಿದ ಅಶ್ವತ್ಥನಾರಾಯಣ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರಾಮನಗರ ಜಿಲ್ಲೆ ಕೋವಿಡ್ ಸ್ಥಿತಿಗತಿ ಅವಲೋಕಿಸಿದ ಅಶ್ವತ್ಥನಾರಾಯಣ

Bengaluru City

ರಾಮನಗರ ಜಿಲ್ಲೆ ಕೋವಿಡ್ ಸ್ಥಿತಿಗತಿ ಅವಲೋಕಿಸಿದ ಅಶ್ವತ್ಥನಾರಾಯಣ

Public TV
Last updated: April 16, 2021 3:59 pm
Public TV
Share
3 Min Read
FotoJet 3 39
SHARE

– ಸೋಂಕು ತಡೆಗಟ್ಟಲು ಜಿಲ್ಲಾಡಳಿತಕ್ಕೆ 3 ಅಂಶಗಳ ಸೂತ್ರ ಸೂಚಿಸಿದ ಡಿಸಿಎಂ

ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ಹತ್ತಿಕ್ಕಲು ಮೂರು ಅಂಶಗಳ ಸೂತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣರವರು ಸೂಚಿಸಿದ್ದು, ಅದರ ಪ್ರಕಾರ ಅತ್ಯಂತ ಕ್ರಮಬದ್ಧವಾಗಿ ಕೋವಿಡ್ ಸ್ಥಿತಿಯನ್ನು ನಿರ್ವಹಣೆ ಮಾಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯ ಸಂಸದರು, ಶಾಸಕರು, ಎಲ್ಲ ಚುನಾಯಿತ ಪ್ರತಿನಿಧಿಗಳು, ಉನ್ನತ ಅಧಿಕಾರಿಗಳನ್ನು ಒಳಗೊಂಡ ವರ್ಚುಯಲ್ ಸಭೆಯ ಮೂಲಕ ಶುಕ್ರವಾರ ಜಿಲ್ಲೆಯ ಕೋವಿಡ್ ಪರಿಸ್ಥಿತಿಯನ್ನು ಅವಲೋಕನ ಮಾಡಿದ ಡಿಸಿಎಂ, ಕ್ಷಿಪ್ರವಾಗಿ ಸೋಂಕಿತರನ್ನು ಪತ್ತೆ ಹಚ್ಚಿ ಕೋವಿಡ್ ಪರೀಕ್ಷೆ ಮಾಡುವುದು, ಕ್ಷಿಪ್ರವಾಗಿ ಫಲಿತಾಂಶ ನೀಡುವುದು ಹಾಗೂ ಪಾಸಿಟಿವ್ ಬಂದರೆ ಅಷ್ಟೇ ಕ್ಷಿಪ್ರವಾಗಿ ಚಿಕಿತ್ಸೆ ಆರಂಭಿಸುವ ಮೂರು ಅಂಶಗಳ ಸೂತ್ರವನ್ನು ತಿಳಿಸಿದರು.

FotoJet 4 36

ಇದರ ಜೊತೆಗೆ ಲಸಿಕೆ ಅಭಿಯಾನವನ್ನು ಮತ್ತಷ್ಟು ತೀವ್ರಗೊಳಿಸುವಂತೆ ಡಿಸಿಎಂ ಸೂಚಿಸಿದರು. ಸರಕಾರದ ಮಾರ್ಗಸೂಚಿಯಂತೆ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ತಪ್ಪದೇ ಲಸಿಕೆ ಕೊಡಬೇಕು. ಅದಕ್ಕೆ ಬೇಕಾದ ಎಲ್ಲ ಕಾರ್ಯತಂತ್ರವನ್ನು ಅಳವಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜ್ವರ, ಶೀತ ಇದ್ದರೆ ಕೋವಿಡ್ ಪರೀಕ್ಷೆ ಮಾಡಿ: ಯಾರಿಗೆ ಆಗಲಿ ಜ್ವರ, ಶೀತ, ಕೆಮ್ಮು ಇತ್ಯಾದಿ ರೋಗ ಲಕ್ಷಣಗಳಿದ್ದರೆ ಕೂಡಲೇ ಅಂಥವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಅಥವಾ ಅಂಥವರು ಯಾರಾದರೂ ಇದ್ದರೆ ನಿರ್ಲಕ್ಷ್ಯ ಮಾಡದೇ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೆಲ ಗಂಟೆಗಳಲ್ಲೇ ವರದಿ ಕೊಡುವುದರ ಜೊತೆಗೆ, ಯಾವುದೇ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಅಂತ ಗೊತ್ತಾದ ತಕ್ಷಣವೇ ಚಿಕಿತ್ಸೆ ಶುರು ಮಾಡಬೇಕು. ಸಿಮ್‍ಟ್ಯಾಮಿಕ್ ಅಥವಾ ಎ ಸಿಮ್‍ಟ್ಯಾಮಿಕ್ ಅಂತ ವಿಂಗಡಣೆ ಮಾಡುವುದು ಬೇಡ. ಸೋಂಕು ಬಂದ ತಕ್ಷಣ ಚಿಕಿತ್ಸೆ ನೀಡಿದರೆ ರೋಗವು ಉಲ್ಬಣ ಸ್ಥಿತಿಗೆ ಹೋಗುವುದಿಲ್ಲ. ಆಗ ಆಸ್ಪತ್ರೆ, ಐಸಿಯು, ಆಕ್ಸಿಜನ್ ಮುಂತಾದವು ಬೇಕಾಗುವುದಿಲ್ಲ. ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

Nasal Vaccine corona bharath biotech

ಈ ಸೂತ್ರದಂತೆ ಕೆಲಸ ಮಾಡಿದರೆ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಆಗ ಮಾತ್ರ ಯಾವುದೇ ಸಾವು-ನೋವು ಉಂಟಾಗುವುದಿಲ್ಲ. ಇದನ್ನು ತಕ್ಷಣವೇ ಜಾರಿಗೆ ತರಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಹೇಳಿದರು.

ಸಿಬ್ಬಂದಿ ಕೊರತೆ ಆಗಬಾರದು: ಶಾಸಕ ರವಿ ಸಿಬ್ಬಂದಿ ಕೊರತೆ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಉತ್ತರ ನೀಡಿದ ಡಿಸಿಎಂ ಅವರು, ಕೂಡಲೇ ಅಗತ್ಯ ಇರುವ ಕಡೆ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು. ಸಂಪನ್ಮೂಲ ಕೊರತೆ ಕಂಡು ಬಂದರೆ ವಿಪತ್ತು ನಿರ್ವಹಣಾ ನಿಧಿಯಿಂದ ಖರ್ಚು ಮಾಡಿ ಎಂದು ಸಲಹೆ ನೀಡಿದರು. ಸಾಧ್ಯವಾದಷ್ಟು ಜನಪ್ರತಿನಿಧಿಗಳು ಸಲಹೆ ಸಹಕಾರ ಪಡೆದುಕೊಳ್ಳಿ. ಅವರು ಎತ್ತುವ ಆಕ್ಷೇಪಗಳಿಗೆ ಕಿವಿಗೊಡಿ. ಸಮಸ್ಯೆಗಳ ಬಗ್ಗೆ ತಿಳಿಸಿದರೆ ಕೂಡಲೇ ಅದನ್ನು ಬಗೆಹರಿಸಿ ಎಂದು ಅವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

mask 2

ಕೋವಿಡ್ ನಿರ್ವಹಣೆಯಲ್ಲಿ ಮೊದಲಿನಿಂದಲೂ ರಾಮನಗರ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಿದೆ. ಈಗಲೂ ಉತ್ತಮ ನಿರ್ವಹಣೆ ಇದೆ. ದಿನಕ್ಕೆ 1050 ರಿಂದ 1100 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈ ಸಂಖ್ಯೆಯನ್ನು ಹೆಚ್ಚಿಸಲು ಸೂಚಿಸಿದ್ದೇನೆ. ಹಾಗೆಯೇ, ಜಿಲ್ಲೆಯಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಇಲ್ಲ. ದಯಾನಂದ ಸಾಗರ್ ಮೆಡಿಕಲ್ ಕಾಲೇಜ್, ರಾಜರಾಜೇಶ್ವರಿ ಮೆಡಿಕಲ್ ಕಾಲೇಜ್‍ನಲ್ಲಿ ಬೆಡ್‍ಗಳು ಸಾಕಷ್ಟು ಲಭ್ಯ ಇವೆ. ಸರಕಾರವು ಕೂಡ ಜಿಲ್ಲಾ ಕೇಂದ್ರದಲ್ಲಿ ಕೋವಿಡ್ ಆಸ್ಪತ್ರೆ ಮಾಡಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಯಾವುದೇ ಸಾವು ಆದರೂ ತಪ್ಪದೇ ಶವ ಪರೀಕ್ಷೆ ಮಾಡಿ. ಅವರು ಯಾವ ಕಾರಣಕ್ಕೆ ಸತ್ತರು ಎಂಬ ಮಾಹಿತಿ ನಮ್ಮಲ್ಲಿರುತ್ತದೆ. ಜೊತೆಗೆ, ಕೋವಿಡ್ ಕೇರ್ ಸೆಂಟರ್‍ಗಳಿಗೆ ಎಲ್ಲರೂ ತಪ್ಪದೇ ಭೇಟಿ ನೀಡಿ ಎಂದರು.

ಲಸಿಕೆ ಪಡೆಯಲು ಮನವೊಲಿಸಿ: ಅಲ್ಪಸಂಖ್ಯಾತ ಸಮುದಾಯದವರೂ ಸೇರಿ ಕೆಲವರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿರುವ ದೂರುಗಳು ಬಂದಿವೆ. ಅವರನ್ನು ಮನವೊಲಿಸಿ ಲಸಿಕೆ ಪಡೆಯುವಂತೆ ಮಾಡಿ. ಅದಕ್ಕೆ ಚುನಾಯಿತ ಪ್ರತಿನಿಧಿಗಳ ಸಹಕಾರ ಪಡೆಯಿರಿ. ಯಾವ ಕಾರಣಕ್ಕೂ ಲಸಿಕೆ ಅಭಿಯಾನ ವ್ಯತ್ಯಾಸ ಆಗಬಾರದು ಎಂದು ಡಿಸಿಎಂ ನಿರ್ದೇಶನ ನೀಡಿದರು.

vaccine pakistan

ಸಭೆಯಲ್ಲಿ ಪಾಲ್ಗೊಂಡಿದ್ದ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಕೆಲ ಉತ್ತಮ ಸಲಹೆಗಳನ್ನು ನೀಡಿದ್ದು, ಅವುಗಳನ್ನು ಕೂಡ ಜಾರಿಗೆ ತರಲಾಗುವುದು ಎಂದು ಡಿಸಿಎಂ ಹೇಳಿದರು. ಸದ್ಯಕ್ಕೆ ರಾಮನಗರ ಜಿಲ್ಲಾ ಕೇಂದ್ರದಲ್ಲಿಯೇ ಕೋವಿಡ್ ಟೆಸ್ಟ್‍ಗಳನ್ನು ಮಾಡಲಾಗುತ್ತಿದೆ. ಅಲ್ಲಿ ಯಾವುದೇ ಕೊರತೆ ಇಲ್ಲ. ತಮ್ಮಲ್ಲಿ ರೋಗ ಲಕ್ಷಣಗಳಿದ್ದರೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ತಡ ಮಾಡಬಾರದು. ಎಲ್ಲೆಲ್ಲಿ ಪರೀಕ್ಷೆ ಮಾಡಲಾಗುತ್ತದೆ ಎಂಬ ವಿವರಗಳನ್ನು ಜನರಿಗೆ ವ್ಯಾಪಕವಾಗಿ ತಿಳಿಸುವಂತೆ ಸೂಚಿಸಿದ್ದೇನೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಜಿಲ್ಲೆಯ ಕೋವಿಡ್ ನಿರ್ವಹಣೆ ಬಗ್ಗೆ ಪವರ್ ಪಾಯಿಂಟ್ ಪ್ರಸೆಂಟೇಶನ್ ನೀಡಿದರು.

ಸಂಸದ ಡಿ.ಕೆ.ಸುರೇಶ್, ಶಾಸಕಿ ಅನಿತಾ ಕುಮಾರಸ್ವಾಮಿ, ಮಂಜುನಾಥ, ರವಿ, ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್, ಡಿಎಚ್‍ಒ ಡಾ.ನಿರಂಜನ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:bengaluruCoronaPublic TVramanagaraಕೊರೊನಾಡಿಸಿಎಂ ಅಶ್ವತ್ಥ ನಾರಾಯಣಪಬ್ಲಿಕ್ ಟಿವಿ DCM Ashwaththa Narayanaಬೆಂಗಳೂರುರಾಮನಗರ
Share This Article
Facebook Whatsapp Whatsapp Telegram

Cinema news

Alpha Trailor Srimurali
ಅಲ್ಫಾ ಟ್ರೈಲರ್ ಮೆಚ್ಚಿ ಪ್ರಶಂಸಿಸಿದ ನಟ ಶ್ರೀಮುರಳಿ
Cinema Latest Top Stories
CHANDRACHUD
ಅಸಂವಿಧಾನಿಕ ಪದಬಳಕೆ ಆರೋಪ – ಚಕ್ರವರ್ತಿ ಚಂದ್ರಚೂಡ್ ವಿರುದ್ಧ ಎಫ್ಐಆರ್
Bengaluru City Cinema Crime Karnataka Latest Sandalwood Top Stories
santosh kumar sukhibhava movie
‘ಸುಖೀಭವ’ ಚಿತ್ರ ನಿರ್ಮಾಣಕ್ಕೆ ಉದ್ಯಮಿ ಸಂತೋಷ್ ಕುಮಾರ್ ಸಾಥ್
Cinema Latest Sandalwood Top Stories
Bengaluru International Film Festival
ಬೆಂಗಳೂರು ಅಂತಾರಾಷ್ಟ್ರೀಯ ಚಿತ್ರೋತ್ಸವ – ಲಾಸ್ಟ್‌ ಲ್ಯಾಂಡ್‌, ಸಬರ್ ಬೊಂದಾ, ವನ್ಯಾ ಚಿತ್ರಕ್ಕೆ ಪ್ರಶಸ್ತಿ ಗರಿ
Bengaluru City Cinema Karnataka Latest Sandalwood States Top Stories

You Might Also Like

Karnataka origin man killed in Canada Nelamangala resident Chandan Kumar shootout
Bengaluru City

ಕೆನಡಾದಲ್ಲಿ ಕನ್ನಡ ಡಿಂಡಿಮ ಸಾರಿದ್ದ ಕನ್ನಡಿಗನ ಬರ್ಬರ ಕೊಲೆ

Public TV
By Public TV
2 hours ago
Lamborghini Revuelto Crashed
Latest

ಕುಡಿದ ಮತ್ತಿನಲ್ಲಿ ಲ್ಯಾಂಬೋರ್ಗಿನಿ ಚಲಾಯಿಸಿ ಜನರು, ವಾಹನಗಳಿಗೆ ಗುದ್ದಿದ ತಂಬಾಕು ಉದ್ಯಮಿ ಪುತ್ರ

Public TV
By Public TV
4 hours ago
girl hand mobile
Bengaluru City

ಲವ್ವರ್‌ಗೆ ತಾಯಿ, ದೊಡ್ಡಮ್ಮನ ಖಾಸಗಿ ಫೋಟೋ ರವಾನೆ – ಪುತ್ರಿಯ ಫೋನ್‌ ನೋಡಿ ಶಾಕ್‌

Public TV
By Public TV
5 hours ago
g.parameshwara 2
Bengaluru City

ಬೆಂಗಳೂರಲ್ಲಿ ಆರ್‌ಸಿಬಿ ಪಂದ್ಯ ಆಡಿಸಲು ನಮ್ಮ ಕಡೆಯಿಂದ ಕ್ಲಿಯರೆನ್ಸ್ ಸಿಕ್ಕಿಲ್ಲ: ಪರಮೇಶ್ವರ್

Public TV
By Public TV
5 hours ago
Nelamangala Gold Chain Snatch Woman Death
Bengaluru City

ಸ್ಪ್ರೇ ಸಿಂಪಡಿಸಿ ಮಾಂಗಲ್ಯ ಸರ ಕಸಿದು ಕಳ್ಳರು ಪರಾರಿ – ಮಹಿಳೆ ಸಾವು

Public TV
By Public TV
6 hours ago
Uttar Pradesh Meerut PUBG Death
Crime

ಪಬ್‌ಜಿ ಆಡುವಾಗಲೇ ಹೆಚ್ಚಿದ ರಕ್ತದೊತ್ತಡ – ಯುವಕ ಸಾವು

Public TV
By Public TV
6 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?