Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ರಾಮನಗರ ಜಿಲ್ಲೆ ಕೋವಿಡ್ ಸ್ಥಿತಿಗತಿ ಅವಲೋಕಿಸಿದ ಅಶ್ವತ್ಥನಾರಾಯಣ

Public TV
Last updated: April 16, 2021 3:59 pm
Public TV
Share
3 Min Read
FotoJet 3 39
SHARE

– ಸೋಂಕು ತಡೆಗಟ್ಟಲು ಜಿಲ್ಲಾಡಳಿತಕ್ಕೆ 3 ಅಂಶಗಳ ಸೂತ್ರ ಸೂಚಿಸಿದ ಡಿಸಿಎಂ

ಬೆಂಗಳೂರು: ರಾಮನಗರ ಜಿಲ್ಲೆಯಲ್ಲಿ ಕೋವಿಡ್ ಸೋಂಕನ್ನು ಪರಿಣಾಮಕಾರಿಯಾಗಿ ಹತ್ತಿಕ್ಕಲು ಮೂರು ಅಂಶಗಳ ಸೂತ್ರವನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣರವರು ಸೂಚಿಸಿದ್ದು, ಅದರ ಪ್ರಕಾರ ಅತ್ಯಂತ ಕ್ರಮಬದ್ಧವಾಗಿ ಕೋವಿಡ್ ಸ್ಥಿತಿಯನ್ನು ನಿರ್ವಹಣೆ ಮಾಡುವಂತೆ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ.

ಜಿಲ್ಲೆಯ ಸಂಸದರು, ಶಾಸಕರು, ಎಲ್ಲ ಚುನಾಯಿತ ಪ್ರತಿನಿಧಿಗಳು, ಉನ್ನತ ಅಧಿಕಾರಿಗಳನ್ನು ಒಳಗೊಂಡ ವರ್ಚುಯಲ್ ಸಭೆಯ ಮೂಲಕ ಶುಕ್ರವಾರ ಜಿಲ್ಲೆಯ ಕೋವಿಡ್ ಪರಿಸ್ಥಿತಿಯನ್ನು ಅವಲೋಕನ ಮಾಡಿದ ಡಿಸಿಎಂ, ಕ್ಷಿಪ್ರವಾಗಿ ಸೋಂಕಿತರನ್ನು ಪತ್ತೆ ಹಚ್ಚಿ ಕೋವಿಡ್ ಪರೀಕ್ಷೆ ಮಾಡುವುದು, ಕ್ಷಿಪ್ರವಾಗಿ ಫಲಿತಾಂಶ ನೀಡುವುದು ಹಾಗೂ ಪಾಸಿಟಿವ್ ಬಂದರೆ ಅಷ್ಟೇ ಕ್ಷಿಪ್ರವಾಗಿ ಚಿಕಿತ್ಸೆ ಆರಂಭಿಸುವ ಮೂರು ಅಂಶಗಳ ಸೂತ್ರವನ್ನು ತಿಳಿಸಿದರು.

FotoJet 4 36

ಇದರ ಜೊತೆಗೆ ಲಸಿಕೆ ಅಭಿಯಾನವನ್ನು ಮತ್ತಷ್ಟು ತೀವ್ರಗೊಳಿಸುವಂತೆ ಡಿಸಿಎಂ ಸೂಚಿಸಿದರು. ಸರಕಾರದ ಮಾರ್ಗಸೂಚಿಯಂತೆ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ತಪ್ಪದೇ ಲಸಿಕೆ ಕೊಡಬೇಕು. ಅದಕ್ಕೆ ಬೇಕಾದ ಎಲ್ಲ ಕಾರ್ಯತಂತ್ರವನ್ನು ಅಳವಡಿಸಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

ಜ್ವರ, ಶೀತ ಇದ್ದರೆ ಕೋವಿಡ್ ಪರೀಕ್ಷೆ ಮಾಡಿ: ಯಾರಿಗೆ ಆಗಲಿ ಜ್ವರ, ಶೀತ, ಕೆಮ್ಮು ಇತ್ಯಾದಿ ರೋಗ ಲಕ್ಷಣಗಳಿದ್ದರೆ ಕೂಡಲೇ ಅಂಥವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಬೇಕು ಅಥವಾ ಅಂಥವರು ಯಾರಾದರೂ ಇದ್ದರೆ ನಿರ್ಲಕ್ಷ್ಯ ಮಾಡದೇ ಪರೀಕ್ಷೆ ಮಾಡಿಸಿಕೊಳ್ಳಬೇಕು. ಕೆಲ ಗಂಟೆಗಳಲ್ಲೇ ವರದಿ ಕೊಡುವುದರ ಜೊತೆಗೆ, ಯಾವುದೇ ವ್ಯಕ್ತಿಗೆ ಕೋವಿಡ್ ಪಾಸಿಟಿವ್ ಅಂತ ಗೊತ್ತಾದ ತಕ್ಷಣವೇ ಚಿಕಿತ್ಸೆ ಶುರು ಮಾಡಬೇಕು. ಸಿಮ್‍ಟ್ಯಾಮಿಕ್ ಅಥವಾ ಎ ಸಿಮ್‍ಟ್ಯಾಮಿಕ್ ಅಂತ ವಿಂಗಡಣೆ ಮಾಡುವುದು ಬೇಡ. ಸೋಂಕು ಬಂದ ತಕ್ಷಣ ಚಿಕಿತ್ಸೆ ನೀಡಿದರೆ ರೋಗವು ಉಲ್ಬಣ ಸ್ಥಿತಿಗೆ ಹೋಗುವುದಿಲ್ಲ. ಆಗ ಆಸ್ಪತ್ರೆ, ಐಸಿಯು, ಆಕ್ಸಿಜನ್ ಮುಂತಾದವು ಬೇಕಾಗುವುದಿಲ್ಲ. ಈ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ಉಪ ಮುಖ್ಯಮಂತ್ರಿ ಅವರು ಅಧಿಕಾರಿಗಳಿಗೆ ತಿಳಿಸಿದ್ದಾರೆ.

Nasal Vaccine corona bharath biotech

ಈ ಸೂತ್ರದಂತೆ ಕೆಲಸ ಮಾಡಿದರೆ ಸೋಂಕನ್ನು ಪರಿಣಾಮಕಾರಿಯಾಗಿ ತಡೆಗಟ್ಟಬಹುದು. ಆಗ ಮಾತ್ರ ಯಾವುದೇ ಸಾವು-ನೋವು ಉಂಟಾಗುವುದಿಲ್ಲ. ಇದನ್ನು ತಕ್ಷಣವೇ ಜಾರಿಗೆ ತರಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಹೇಳಿದರು.

ಸಿಬ್ಬಂದಿ ಕೊರತೆ ಆಗಬಾರದು: ಶಾಸಕ ರವಿ ಸಿಬ್ಬಂದಿ ಕೊರತೆ ಬಗ್ಗೆ ಪ್ರಸ್ತಾಪಿಸಿದ್ದಕ್ಕೆ ಉತ್ತರ ನೀಡಿದ ಡಿಸಿಎಂ ಅವರು, ಕೂಡಲೇ ಅಗತ್ಯ ಇರುವ ಕಡೆ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗೆ ಸೂಚಿಸಿದರು. ಸಂಪನ್ಮೂಲ ಕೊರತೆ ಕಂಡು ಬಂದರೆ ವಿಪತ್ತು ನಿರ್ವಹಣಾ ನಿಧಿಯಿಂದ ಖರ್ಚು ಮಾಡಿ ಎಂದು ಸಲಹೆ ನೀಡಿದರು. ಸಾಧ್ಯವಾದಷ್ಟು ಜನಪ್ರತಿನಿಧಿಗಳು ಸಲಹೆ ಸಹಕಾರ ಪಡೆದುಕೊಳ್ಳಿ. ಅವರು ಎತ್ತುವ ಆಕ್ಷೇಪಗಳಿಗೆ ಕಿವಿಗೊಡಿ. ಸಮಸ್ಯೆಗಳ ಬಗ್ಗೆ ತಿಳಿಸಿದರೆ ಕೂಡಲೇ ಅದನ್ನು ಬಗೆಹರಿಸಿ ಎಂದು ಅವರು ಅಧಿಕಾರಿಗಳಿಗೆ ಕಿವಿಮಾತು ಹೇಳಿದರು.

mask 2

ಕೋವಿಡ್ ನಿರ್ವಹಣೆಯಲ್ಲಿ ಮೊದಲಿನಿಂದಲೂ ರಾಮನಗರ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗಿದೆ. ಈಗಲೂ ಉತ್ತಮ ನಿರ್ವಹಣೆ ಇದೆ. ದಿನಕ್ಕೆ 1050 ರಿಂದ 1100 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈ ಸಂಖ್ಯೆಯನ್ನು ಹೆಚ್ಚಿಸಲು ಸೂಚಿಸಿದ್ದೇನೆ. ಹಾಗೆಯೇ, ಜಿಲ್ಲೆಯಲ್ಲಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ಕೊರತೆ ಇಲ್ಲ. ದಯಾನಂದ ಸಾಗರ್ ಮೆಡಿಕಲ್ ಕಾಲೇಜ್, ರಾಜರಾಜೇಶ್ವರಿ ಮೆಡಿಕಲ್ ಕಾಲೇಜ್‍ನಲ್ಲಿ ಬೆಡ್‍ಗಳು ಸಾಕಷ್ಟು ಲಭ್ಯ ಇವೆ. ಸರಕಾರವು ಕೂಡ ಜಿಲ್ಲಾ ಕೇಂದ್ರದಲ್ಲಿ ಕೋವಿಡ್ ಆಸ್ಪತ್ರೆ ಮಾಡಿದೆ ಎಂದು ಅವರು ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಯಾವುದೇ ಸಾವು ಆದರೂ ತಪ್ಪದೇ ಶವ ಪರೀಕ್ಷೆ ಮಾಡಿ. ಅವರು ಯಾವ ಕಾರಣಕ್ಕೆ ಸತ್ತರು ಎಂಬ ಮಾಹಿತಿ ನಮ್ಮಲ್ಲಿರುತ್ತದೆ. ಜೊತೆಗೆ, ಕೋವಿಡ್ ಕೇರ್ ಸೆಂಟರ್‍ಗಳಿಗೆ ಎಲ್ಲರೂ ತಪ್ಪದೇ ಭೇಟಿ ನೀಡಿ ಎಂದರು.

ಲಸಿಕೆ ಪಡೆಯಲು ಮನವೊಲಿಸಿ: ಅಲ್ಪಸಂಖ್ಯಾತ ಸಮುದಾಯದವರೂ ಸೇರಿ ಕೆಲವರು ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿರುವ ದೂರುಗಳು ಬಂದಿವೆ. ಅವರನ್ನು ಮನವೊಲಿಸಿ ಲಸಿಕೆ ಪಡೆಯುವಂತೆ ಮಾಡಿ. ಅದಕ್ಕೆ ಚುನಾಯಿತ ಪ್ರತಿನಿಧಿಗಳ ಸಹಕಾರ ಪಡೆಯಿರಿ. ಯಾವ ಕಾರಣಕ್ಕೂ ಲಸಿಕೆ ಅಭಿಯಾನ ವ್ಯತ್ಯಾಸ ಆಗಬಾರದು ಎಂದು ಡಿಸಿಎಂ ನಿರ್ದೇಶನ ನೀಡಿದರು.

vaccine pakistan

ಸಭೆಯಲ್ಲಿ ಪಾಲ್ಗೊಂಡಿದ್ದ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಎಲ್ಲ ಜನಪ್ರತಿನಿಧಿಗಳು ಕೆಲ ಉತ್ತಮ ಸಲಹೆಗಳನ್ನು ನೀಡಿದ್ದು, ಅವುಗಳನ್ನು ಕೂಡ ಜಾರಿಗೆ ತರಲಾಗುವುದು ಎಂದು ಡಿಸಿಎಂ ಹೇಳಿದರು. ಸದ್ಯಕ್ಕೆ ರಾಮನಗರ ಜಿಲ್ಲಾ ಕೇಂದ್ರದಲ್ಲಿಯೇ ಕೋವಿಡ್ ಟೆಸ್ಟ್‍ಗಳನ್ನು ಮಾಡಲಾಗುತ್ತಿದೆ. ಅಲ್ಲಿ ಯಾವುದೇ ಕೊರತೆ ಇಲ್ಲ. ತಮ್ಮಲ್ಲಿ ರೋಗ ಲಕ್ಷಣಗಳಿದ್ದರೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಲು ತಡ ಮಾಡಬಾರದು. ಎಲ್ಲೆಲ್ಲಿ ಪರೀಕ್ಷೆ ಮಾಡಲಾಗುತ್ತದೆ ಎಂಬ ವಿವರಗಳನ್ನು ಜನರಿಗೆ ವ್ಯಾಪಕವಾಗಿ ತಿಳಿಸುವಂತೆ ಸೂಚಿಸಿದ್ದೇನೆ ಎಂದರು.

ಸಭೆಯಲ್ಲಿ ಜಿಲ್ಲಾಧಿಕಾರಿ ರಾಕೇಶ್ ಕುಮಾರ್ ಜಿಲ್ಲೆಯ ಕೋವಿಡ್ ನಿರ್ವಹಣೆ ಬಗ್ಗೆ ಪವರ್ ಪಾಯಿಂಟ್ ಪ್ರಸೆಂಟೇಶನ್ ನೀಡಿದರು.

ಸಂಸದ ಡಿ.ಕೆ.ಸುರೇಶ್, ಶಾಸಕಿ ಅನಿತಾ ಕುಮಾರಸ್ವಾಮಿ, ಮಂಜುನಾಥ, ರವಿ, ಜಿಲ್ಲಾ ಪಂಚಾಯಿತಿ ಸಿಇಒ ಇಕ್ರಂ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಿರೀಶ್, ಡಿಎಚ್‍ಒ ಡಾ.ನಿರಂಜನ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:bengaluruCoronaPublic TVramanagaraಕೊರೊನಾಡಿಸಿಎಂ ಅಶ್ವತ್ಥ ನಾರಾಯಣಪಬ್ಲಿಕ್ ಟಿವಿ DCM Ashwaththa Narayanaಬೆಂಗಳೂರುರಾಮನಗರ
Share This Article
Facebook Whatsapp Whatsapp Telegram

Cinema Updates

mrunal thakur
ಮೃಣಾಲ್ ಠಾಕೂರ್ ಫ್ಯಾನ್ಸ್‌ಗೆ ಡಬಲ್ ಧಮಾಕ!
3 hours ago
aishwarya rai 1 2
‘ಸಿಂಧೂರ’ ಆಯ್ತು, ಈಗ ಭಗವದ್ಗೀತೆ ಶ್ಲೋಕ- ಭಾರತೀಯ ಸಂಸ್ಕೃತಿ ಪ್ರದರ್ಶಿಸಿದ ಐಶ್ವರ್ಯಾ ರೈ!
6 hours ago
pranitha subhash
ಕಾನ್ ಚಿತ್ರೋತ್ಸವದಲ್ಲಿ ಪ್ರಣಿತಾ ಧರಿಸಿದ್ದ ವಾಚ್ ಬೆಲೆ ಕೇಳಿ ಫ್ಯಾನ್ಸ್ ಶಾಕ್!
7 hours ago
rukmini vasanth
ಬಿಗ್ ಆಫರ್ ಗಿಟ್ಟಿಸಿಕೊಂಡ ಕನ್ನಡತಿ- ಪ್ರಭಾಸ್‌ಗೆ ರುಕ್ಮಿಣಿ ವಸಂತ್ ನಾಯಕಿ?
9 hours ago

You Might Also Like

RCB Playoffs
Cricket

IPL 2025 | ಕೊನೆಯಲ್ಲಿ ʻಸನ್‌ʼ ಸ್ಟ್ರೋಕ್‌ – ಮೊದಲೆರಡು ಸ್ಥಾನ ಕಳೆದುಕೊಂಡರೆ ಆರ್‌ಸಿಬಿಗೆ ಆಗುವ ನಷ್ಟವೇನು?

Public TV
By Public TV
4 minutes ago
Phil Salt
Cricket

ಸನ್‌ ರೈಸರ್ಸ್‌ ಆರ್ಭಟಕ್ಕೆ ಆರ್‌ಸಿಬಿ ಬರ್ನ್‌ – ಹೈದರಾಬಾದ್‌ಗೆ 42 ರನ್‌ಗಳ ಜಯ, 3ನೇ ಸ್ಥಾನಕ್ಕೆ ಕುಸಿದ ಬೆಂಗಳೂರು

Public TV
By Public TV
5 minutes ago
virat kohli rcb fans
Cricket

ಬೆಂಗಳೂರಲ್ಲಿ ಮಿಸ್‌.. ಕೊಹ್ಲಿಗೆ ಲಕ್ನೋದಲ್ಲಿ ಸಿಕ್ತು ಆರ್‌ಸಿಬಿ ಅಭಿಮಾನಿಗಳಿಂದ ‘ಟೆಸ್ಟ್‌ ಫೇರ್‌ವೆಲ್‌’

Public TV
By Public TV
12 minutes ago
RCB Fans
Cricket

ಆರ್‌ಸಿಬಿ ಐಪಿಎಲ್‌ ಟ್ರೋಫಿ ಗೆಲ್ಲೋವರೆಗೂ ನಾನು ಮದುವೆಯಾಗಲ್ಲ: ಫಲಕ ಪ್ರದರ್ಶಿಸಿದ ಅಭಿಮಾನಿ

Public TV
By Public TV
13 minutes ago
Weather 1
Bengaluru City

ಬೆಂಗಳೂರು | ಧಾರಾಕಾರ ಮಳೆಯಿಂದಾಗಿ ಬೆಸ್ಕಾಂಗೆ 3.54 ಕೋಟಿ ನಷ್ಟ

Public TV
By Public TV
2 hours ago
police station
Belgaum

ಕರ್ನಾಟಕದ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದಲ್ಲಿ ಗ್ಯಾಂಗ್ ರೇಪ್

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?