ರಾಯಚೂರಿನಲ್ಲಿ ಅಧಿಕಾರಿಗಳ ದಾಳಿ – 59 ಬಾಲಕಾರ್ಮಿಕರ ರಕ್ಷಣೆ

Public TV
1 Min Read
Raichur Officers 2 1

ರಾಯಚೂರು: ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಇಂದು 59 ಬಾಲಕಾರ್ಮಿಕರನ್ನು ರಕ್ಷಣೆ ಮಾಡಿದ್ದಾರೆ.

ದೇವದುರ್ಗ ತಾಲೂಕಿನಲ್ಲಿ ದಾಳಿ ನಡೆಸಿ ಕೃಷಿ ಕೆಲಸಕ್ಕೆ ವಾಹನಗಳಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ವಾಹನಗಳನ್ನು ಜಪ್ತಿ ಮಾಡಿ, 59 ಬಾಲ ಕಾರ್ಮಿಕರ ರಕ್ಷಣೆ ಮಾಡಲಾಗಿದೆ.

Raichur Officers

ಬಾಲಕಾರ್ಮಿಕ ಘಟಕದ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಸೇರಿ ದಾಳಿ ಮಾಡಿದ್ದು, ದಾಳಿ ವೇಳೆ 10 ವಾಹನಗಳನ್ನು ಜಪ್ತಿ ಮಾಡಿದ್ದಾರೆ. ನಿನ್ನೆ ಸಿರವಾರ ತಾಲೂಕಿನ ಕವಿತಾಳದಲ್ಲಿ ದಾಳಿ ನಡೆಸಿ 32 ಮಕ್ಕಳನ್ನು ರಕ್ಷಿಸಿದ್ದರು. ಇಂದು ಸಹ ಕಾರ್ಯಾಚರಣೆ ಮುಂದುವರಿಸಿದ ಅಧಿಕಾರಿಗಳ ತಂಡ, ಬಾಲಕ ಕಾರ್ಮಿಕರನ್ನು ರಕ್ಷಿಸಿ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದೆ.

Share This Article
Leave a Comment

Leave a Reply

Your email address will not be published. Required fields are marked *