ರಾಸಲೀಲೆ ಪ್ರಕರಣಗಳು ಎಲ್ಲಾ ಸರ್ಕಾರದಲ್ಲಿಯೂ ಕೇಳಿ ಬಂದಿವೆ: ಕಟ್ಟಾ ಸುಬ್ರಹ್ಮಣ್ಯ ನಾಯ್ಡು

Public TV
1 Min Read
katta subramanya naidu

ಬೆಂಗಳೂರು: ನಕಲಿ ಸಿಡಿ ತಯಾರಿಸಿ ನಿಮ್ಮ ಸಿಡಿ ಇದೆ ಎಂದು ಯಾರಾದರೂ ಬ್ಲ್ಯಾಕ್ ಮೇಲ್ ಮಾಡಿರುತ್ತಾರೆ. ಹೀಗಾಗಿ ರಕ್ಷಣೆಗಾಗಿ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹೇಳಿದ್ದಾರೆ.

vlcsnap 2021 03 05 23h22m09s626 e1614966779532ರಾಸಲೀಲೆ ಪ್ರಕರಣ ಕುರಿತಾಗಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಕಲಿ ಸಿಡಿ ಯಾವುದು.? ಅಸಲಿ ಯಾವುದು ಎನ್ನು ಡೌಟ್ ಇದೆ. ನಕಲಿ ಸಿಡಿಗಳನ್ನು ತಯಾರಿಸಿ ಯಾವ ಸಿಡಿ ಎಲ್ಲಿಟ್ಟಿದ್ದಾರೆ ಎಂದು 6 ಸಚಿವರಿಗೆ ಭಯ ಇದೆ. ಹೀಗಾಗಿ ಕೋರ್ಟ್ ಮೋರೆ ಹೋಗಿರಬಹುದು.

bc patil dr k sudhakar shivaram hebbar

ಈ ಹಿಂದೆ ಹಲವು ರೀತಿಯ ಆರೋಪಿಗಳು ಬಂದಿವೆ ಅವರೆಲ್ಲ ದೋಷ ಮುಕ್ತರಾಗಿದ್ದಾರೆ. ಹೀಗೆ ಈ ಪ್ರಕರಣದಿಂದಲೂ ಹೊರಗೆ ಬರುತ್ತಾರೆ. ಯಾರು ಬೇಕಾದರೂ ಸಿಡಿ ತಯಾರಿಸುತ್ತಾರೆ. ನಕಲಿ ಸಿಡಿ ಯಾರಾದರೂ ಮಾಡಿರಬಹುದುದು ಹೀಗಾಗಿ ಅವರ ರಕ್ಷಣೆಗೆ ಕೋರ್ಟ್ ಹೋಗಿದ್ದಾರೆ.

st somashekhar bairati basavaraju narayan gowda

ಷಡ್ಯಂತ್ರ ಮಾಡುವವರು, ವಿರೋಧಿಗಳು ಇಂತಹ ಕೆಲಸ ಮಾಡುತ್ತಾರೆ. ಎಲ್ಲಾ ಕಾಲದಲ್ಲಿಯೂ ಸರ್ಕಾರದಲ್ಲಿ ಇಂತಹ ಆರೋಪಗಳು ಕೇಳಿಬಂದಿವೆ. ಆದರೆ ನಂತರ ಅವರೆಲ್ಲ ನಿರ್ದೋಷಿಗಳು ಎಂದು ಸಾಬೀತು ಪಡಿಸಿದ್ದಾರೆ. ಈ ಪ್ರಕರಣವು ಹಾಗೆ ಆಗುತ್ತದೆ ಎಂದು ಹೇಳಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *