Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೈತರಿಗೆ ಉಚಿತ ಗೊಬ್ಬರ, ಬಿತ್ತನೆ ಬೀಜ ಕೊಡಿ ಸಿಎಂಗೆ ಸಿದ್ದರಾಮಯ್ಯ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೈತರಿಗೆ ಉಚಿತ ಗೊಬ್ಬರ, ಬಿತ್ತನೆ ಬೀಜ ಕೊಡಿ ಸಿಎಂಗೆ ಸಿದ್ದರಾಮಯ್ಯ ಮನವಿ

Bengaluru City

ರೈತರಿಗೆ ಉಚಿತ ಗೊಬ್ಬರ, ಬಿತ್ತನೆ ಬೀಜ ಕೊಡಿ ಸಿಎಂಗೆ ಸಿದ್ದರಾಮಯ್ಯ ಮನವಿ

Public TV
Last updated: June 5, 2021 1:50 pm
Public TV
Share
3 Min Read
SIDDARAMAHIA 1
SHARE

-ಬಿಜೆಪಿ ಬಾಯಿ ಮಾತಿನಲ್ಲಿ ಮಾತ್ರ ರಾಷ್ಟ್ರಪ್ರೇಮದ ಮಾತು

ಬೆಂಗಳೂರು: ಸರ್ಕಾರದ ನೀತಿಗಳು ಮತ್ತು ಕೋವಿಡ್ ಮುಂತಾದ ಕಾರಣಗಳಿಂದಾಗಿ ಇಂದು ರೈತರ ಬಳಿ ಬಿತ್ತನೆ ಚಟುವಟಿಕೆಗಳಿಗೆ ಕೈಯಲ್ಲಿ ಹಣವಿಲ್ಲದಂತಾಗಿದೆ. ಹಾಗಾಗಿ ರೈತರಿಗೆ ಬಿತ್ತನೆ ಬೀಜ ಮತ್ತು ಗೊಬ್ಬರವನ್ನು ಉಚಿತವಾಗಿ ನೀಡಲು ಕ್ರಮವಹಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

yediyurappa corona 1 1

ಈ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ ಅವರು, ಕೂಡಲೇ ಸಾಲ ವಿತರಣೆ ಚಟುವಟಿಕೆಗಳನ್ನು ಆರಂಭಿಸಬೇಕು. ಹೆಸರು, ಉದ್ದು, ಅಲಸಂಡೆ, ತೊಗರಿ ಮುಂತಾದ ದ್ವಿದಳ ಧಾನ್ಯಗಳು ಹಾಗೂ ಸೋಯಾ, ಶೇಂಗಾ ಮುಂತಾದ ಎಣ್ಣೆ ಬೀಜಗಳನ್ನು ಹೇಗಾದರೂ ಮಾಡಿ ಸಂಗ್ರಹಿಸಿ ಬೇಡಿಕೆ ಇದ್ದಷ್ಟು ನೀಡಲು ಕೂಡಲೇ ಸಮರೋಪಾದಿಯಲ್ಲಿ ಸಮರ್ಪಕ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ:ಮೋದಿ ಮತ್ತು ಯಡಿಯೂರಪ್ಪ ಸರ್ಕಾರ ಸಂಪೂರ್ಣ ವಿಫಲವಾಗಿದೆ – ಸಿದ್ದರಾಮಯ್ಯ

ಪತ್ರದಲ್ಲಿ ಏನಿದೆ?

ಈ ವರ್ಷ ಕೇವಲ ಶೇ. 19ರಷ್ಟು ಅಂದರೆ 410 ಕ್ವಿಂಟಾಲ್ ಹೆಸರು ಕಾಳು ಬಿತ್ತನೆ ಬೀಜವನ್ನು ರೈತ ಸಂಪರ್ಕ ಕೇಂದ್ರಗಳಿಗೆ ವಿತರಣೆ ಮಾಡಲಾಗಿದೆ. ಕಳೆದ ವರ್ಷ ತುಮಕೂರಿಗೆ 851 ಕ್ವಿಂಟಾಲ್ ಕಾಳನ್ನು ವಿತರಿಸಿದ್ದರೆ ಈ ವರ್ಷ ಕೇವಲ 90 ಕ್ವಿಂಟಾಲ್ ವಿತರಿಸಲಾಗಿದೆ. ಹಾಸನಕ್ಕೆ 618 ಕ್ವಿಂಟಾಲಿಗೆ ಬದಲಾಗಿ 87.5 ಕ್ವಿಂಟಾಲ್, ಮೈಸೂರಿಗೆ 418 ಕ್ವಿಂಟಾಲ್ ಬೇಡಿಕೆಗೆ ಬದಲಾಗಿ 165.50, ಚಾಮರಾಜನಗರಕ್ಕೆ 222 ಕ್ವಿಂಟಾಲಿನ ಬದಲು 67.5 ಕ್ವಿಂಟಾಲ್ ನೀಡಲಾಗಿದೆ. ಇದನ್ನು ದ್ರೋಹವೆನ್ನದೆ ಇನ್ನು ಯಾವ ಭಾಷೆಯಲ್ಲಿ ಹೇಳಬೇಕು?

MDK Agriculture Farmers 6

ಈ ವರ್ಷದ ಪೂರ್ವ ಮುಂಗಾರಿನಲ್ಲಿ ಮಳೆಯ ಪ್ರಮಾಣವೂ ಕಡಿಮೆಯಾಗಿಲ್ಲ. ಕಳೆದ ಬಾರಿಗೆ ಹೋಲಿಸಿದರೆ ಸರಾಸರಿಗಿಂತ ಶೇ. 15-20 ರಷ್ಟು ಹೆಚ್ಚು ಮಳೆಯಾಗಿದೆ. ಆದರೆ ಸರ್ಕಾರ ಬಿತ್ತನೆ ಬೀಜ ಸರಬರಾಜು ಮಾಡದೆ ತೊಂದರೆ ಮಾಡಿದೆ. ನನಗಿರುವ ಮಾಹಿತಿಯ ಪ್ರಕಾರ ಈ ವರ್ಷ ಬೇಡಿಕೆಯನ್ನು ಅಂದಾಜು ಮಾಡದೆ, ಸಾಕಷ್ಟು ಪ್ರಮಾಣದಲ್ಲಿ ಬಿತ್ತನೆ ಬೀಜವನ್ನು ಸಂಗ್ರಹಣೆ ಮಾಡಿಕೊಳ್ಳದೆ ಮೈಮರೆಯಲಾಗಿದೆ. ಕಡೆಗೆ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕಳೆದ ವರ್ಷ ಬಿತ್ತನೆ ಬೀಜ ಪಡೆದ ರೈತರಿಗೆ ಈ ವರ್ಷ ನೀಡಲಾಗದು ಎಂದು ರೈತ ಸಂಪರ್ಕ ಕೇಂದ್ರಗಳಲ್ಲಿ ಹೇಳಿ ಕಳಿಸಿದ್ದಾರೆ. ಕೃಷಿ ಇಲಾಖೆಯೂ ಸಹ ಸುತ್ತೋಲೆಗಳನ್ನು ಹೊರಡಿಸಿದೆ. ಇದನ್ನೂ ಓದಿ:ಅದಾನಿ, ಅಂಬಾನಿ ಪರ ಕಾನೂನನ್ನು ಹಿಂಪಡೆಯಿರಿ- ಸಿದ್ದರಾಮಯ್ಯ

ಈಗ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿತ್ತನೆ ಕೆಲಸಗಳು ಪ್ರಾರಂಭವಾಗುತ್ತವೆ. ಅಲ್ಲಿಗೂ ಸಹ ಸಾಕಷ್ಟು ಪ್ರಮಾಣದ ಬಿತ್ತನೆ ಕಾಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪಗಳು ಬರುತ್ತಿವೆ. ನನಗೆ ಇರುವ ಮಾಹಿತಿ ಪ್ರಕಾರ ಕೃಷಿ ಇಲಾಖೆ 8391 ಕ್ವಿಂಟಾಲಿಗೆ ಬದಲು ಕೇವಲ 5000 ರಿಂದ 5500 ಕ್ವಿಂಟಾಲ್ ಹೆಸರು ಕಾಳನ್ನು ವಿತರಿಸಲು ಈಗ ಹೊರಟಿದೆ. ಇದು ಸರಿಯಾದ ಕ್ರಮವಲ್ಲ.

fertilizer urea

ಇದೆಲ್ಲದರಿಂದ ಆಗುವ ಪರಿಣಾಮಗಳೇನು?
ರೈತರಿಗೆ ಸಮರ್ಪಕ ಬಿತ್ತನೆ ಬೀಜ ಸಿಗದೆ ಬಿತ್ತನೆ ಮಾಡದಿದ್ದರೆ ಅಥವಾ ರೈತರು ತಮ್ಮ ಬಳಿ ಇದ್ದ ಗುಣಮಟ್ಟವಿಲ್ಲದ ಬೀಜಗಳನ್ನು ಬಿತ್ತನೆ ಮಾಡಿದರೆ ಉತ್ಪಾದನೆ ಕುಂಠಿತಗೊಳ್ಳುತ್ತದೆ. ಇದರಿಂದ ರೈತರಿಗೆ ಆದಾಯ ಖೋತಾ ಆಗುತ್ತದೆ. ವಿದೇಶಗಳಿಂದ ಆಮದು ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತದೆ. ಕಾಳುಗಳನ್ನು ಬಳಸುವ ಗ್ರಾಹಕರಿಗೆ ಸುಲಭದ ದರದಲ್ಲಿ ಕೈಗೆಟುಕದೆ ದ್ವಿದಳ ಧಾನ್ಯಗಳ ಬಳಕೆಯನ್ನು ಕಡಿಮೆ ಮಾಡಲಾರಂಭಿಸುತ್ತಾರೆ. ಇದರಿಂದ ಒಟ್ಟಾರೆ ರಾಷ್ಟ್ರದ ಜನರ ಆರೋಗ್ಯದ ಮಟ್ಟ ಕುಸಿತವಾಗುತ್ತದೆ. ಇದನ್ನೂ ಓದಿ:ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಗ್ಯದಲ್ಲಿ ಚೇತರಿಕೆ: ನಾಡಿದ್ದು ಡಿಸ್ಚಾರ್ಜ್

ನಿಜವಾದ ರಾಷ್ಟ್ರಪ್ರೇಮವೆಂದರೆ ತನ್ನ ಜನರಿಗೆ ಉತ್ತಮ ಆಹಾರವನ್ನು ನೀಡಿ ಸದೃಢರಾಗಿಸುವುದೂ ಹೌದಲ್ಲವೆ? ಕೇವಲ ಬಾಯಿ ಮಾತಿನಲ್ಲಿ ರಾಷ್ಟ್ರಪ್ರೇಮದ ಮಾತನಾಡಿ ಅದಾನಿ, ಧಮಾನಿ, ಅಂಬಾನಿಗಳ ಕೈಗೆ ಆಹಾರ ಧಾನ್ಯಗಳ ಸಂಗ್ರಹಣೆ ಮತ್ತು ವಿತರಣೆಯನ್ನು ಕೊಟ್ಟು, ಅವರಿಗೆ ಜನರನ್ನು ಹುರಿದು ಮುಕ್ಕಲು ಬಿಟ್ಟು ಜನರ ಬಳಿ ಇರುವ ಬಿಡಿಗಾಸುಗಳನ್ನು ಲೂಟಿ ಹೊಡೆಯಲು ಅವಕಾಶ ಮಾಡಿಕೊಟ್ಟು ಹಸಿರು ಶಾಲನ್ನು ಹೆಗಲ ಮೇಲೆ ಹಾಕಿಕೊಂಡರೆ ಅದು ರೈತ ಪ್ರೇಮವಾಗುತ್ತದೆಯೇ? ವೇಷಗಳನ್ನು ಧರಿಸಿ ಘೋಷಣೆಗಳನ್ನು ಕೂಗಿದರೆ ಅದು ರಾಷ್ಟ್ರಪ್ರೇಮವಾಗುತ್ತದೆಯೇ? ಸುಳ್ಳು ಘೋಷಣೆಗಳ ಕೆಸರಿನಲ್ಲಿ ಮುಳುಗಿಸಿ ಜನರನ್ನು ಭೀಕರ ಶೋಷಣೆ ಮಾಡುವುದರಿಂದ ದೇಶ ಪ್ರಗತಿ ಹೊಂದಲು ಸಾಧ್ಯವೇ? ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.

TAGGED:farmersgovernmentPublic TVseedssiddaramaiahYediyurappaಕರ್ನಾಟಕಕೃಷಿಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಬೀಜಯಡಿಯೂರಪ್ಪರಸಗೊಬ್ಬರರೈತಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Vijay Deverakonda Rashmika Mandanna
ಮದ್ವೆ ಬಳಿಕ ಬಳಿಕ ಒಟ್ಟಿಗೆ ಶೂಟಿಂಗ್‌ಗೆ ತೆರಳಿದ ವಿರೋಶ್ ಜೋಡಿಗೆ ಅದ್ಧೂರಿ ಸ್ವಾಗತ
Cinema Latest Sandalwood South cinema Top Stories
Amita Singh Tomar
ಕೌನ್ ಬನೇಗಾ ಕರೋಡ್ ಪತಿಯಲ್ಲಿ 50 ಲಕ್ಷ ಗೆದ್ದಿದ್ದ ತಹಶೀಲ್ದಾರ್ ಅರೆಸ್ಟ್‌!
Cinema Crime Latest National Top Stories TV Shows
Dhurandhar 2 2
ಒಂದೇ ವಾರದಲ್ಲಿ 1000 ಕೋಟಿ ಕ್ಲಬ್ ಸೇರಿದ `ಧುರಂಧರ್ 2′
Bollywood Cinema Latest Top Stories
Rashmika Vijay 5
ಹನಿಮೂನ್ ಅಲ್ಲ ಬಡ್ಡೀಮೂನ್ – ರಶ್ಮಿಕಾ, ವಿಜಯ್ ಹೊಸ ಟ್ರೆಂಡ್
Cinema Latest South cinema Top Stories

You Might Also Like

Sri Mariyamma Temple Karkala
Bengaluru City

ಮಾಹಿತಿ ನೀಡದ್ದಕ್ಕೆ ಕಾರ್ಕಳದ ಶ್ರೀ ಮಾರಿಯಮ್ಮ ದೇವಸ್ಥಾನದ ಮೊಕ್ತೇಸರರಿಗೆ 1 ಲಕ್ಷ ರೂ. ದಂಡ

Public TV
By Public TV
5 minutes ago
Ujire Ashok Bhat vents his anger against the Yakshagana audience
Dakshina Kannada

ಶಿಳ್ಳೆ ಹಾಕಿದ್ದು ಯಾರು? ಕೂರಲು ಆಗದೇ ಇದ್ರೆ ಬನ್ಸ್‌ ತಿಂದು ಹೋಗಿ – ಯಕ್ಷಗಾನ ಪ್ರೇಕ್ಷಕರ ವಿರುದ್ಧ ಅಶೋಕ್‌ ಭಟ್‌ ಗರಂ

Public TV
By Public TV
11 minutes ago
india sets up high level group led by rajnath singh to monitor middle east crisis
Latest

ಇಂಧನ ಸರಬರಾಜು ಮೇಲೆ ನಿಗಾ ಇಡಲು ರಾಜನಾಥ್ ಸಿಂಗ್ ನೇತೃತ್ವದಲ್ಲಿ ಅಂತರ-ಸಚಿವಾಲಯ ಸಮಿತಿ ರಚನೆ

Public TV
By Public TV
46 minutes ago
Rishikesh Vaidya 1
Crime

ನಾನು ಶಿವನ ಅವತಾರ ನೀನೇ ನನ್ನ ಪಾರ್ವತಿ ಎಂದು ಮಹಿಳೆಯ ರೇಪ್ – ಸ್ವಯಂ ಘೋಷಿತ ದೇವಮಾನವ ಅರೆಸ್ಟ್‌

Public TV
By Public TV
1 hour ago
Madhu Bangarappa 1
Bagalkot

SSLC ಪರೀಕ್ಷೆ| 625 ಅಂಕದ ಬದಲು 525ಕ್ಕೆ ಇಳಿಕೆ

Public TV
By Public TV
2 hours ago
WEATHER 1 e1679398614299
Bengaluru City

ರಾಜ್ಯದ ಹವಾಮಾನ ವರದಿ 25-03-2026

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?