ರೈತರಿಗೆ ಗಾಯದ ಮೇಲೆ ಬರೆ ಎಳೆದ ನಿವಾರ್- ಹತ್ತಿ, ಭತ್ತದ ಬೆಳೆ ನಾಶ

Public TV
1 Min Read
rcr crop loss

ರಾಯಚೂರು: ನೆರೆಯಿಂದ ಕಂಗೆಟ್ಟಿದ್ದ ರೈತರಿಗೆ ಇದೀಗ ಮತ್ತೆ ನಿವಾರ್ ನಿಂದ ಗಾಯದ ಮೇಲೆ ಬರೆ ಎಳೆದಂತೆ ಆಗಿದ್ದು, ಜಿಲ್ಲೆಯ ರೈತರು ನಿವಾರ್ ಚಂಡಮಾರುತದಿಂದ ಮತ್ತೆ ಹಾನಿಗೊಳಗಾಗಿದ್ದಾರೆ.

ಸತತವಾಗಿ ಸುರಿದ ಮಳೆಗೆ ಹತ್ತಿ, ಭತ್ತ ಬೆಳೆ ನಾಶವಾಗಿದ್ದು, ರೈತರು ಮತ್ತೆ ನಷ್ಟಕ್ಕೆ ಸಿಲುಕಿದ್ದಾರೆ. ಬಿಡಿಸಿ ತಂದಿದ್ದ ಹತ್ತಿ, ಭತ್ತದ ಬೆಳೆ ಮಳೆಗೆ ಒದ್ದೆಯಾದರೆ, ಜಮೀನಿನಲ್ಲಿದ್ದ ಹತ್ತಿ, ಭತ್ತ ಬೆಳೆ ಸಹ ಸಂಪೂರ್ಣ ನೆಲಕ್ಕಚ್ಚಿದೆ. ಸ್ವಲ್ಪ ನಿರೀಕ್ಷೆಯಲ್ಲಿದ್ದ ರೈತರು ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ.

WhatsApp Image 2020 11 29 at 5.48.34 PM

ಸತತವಾಗಿ ಸುರಿದ ಮಳೆಗೆ ರೈತರ ಕನಸೆಲ್ಲಾ ನುಚ್ಚು ನೂರಾಗಿದ್ದು, ಅತೀವೃಷ್ಟಿಯಿಂದ ಪಾರಾಗಿ ಜಮೀನಿಗೆ ಖರ್ಚುಮಾಡಿದ ಹಣವಾದರೂ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿದ್ದ ರಾಯಚೂರಿನ ಭತ್ತ ಹಾಗೂ ಹತ್ತಿ ಬೆಳೆಗಾರರಿಗೆ ನಿವಾರ್ ನಿರಾಸೆ ಉಂಟುಮಾಡಿದೆ. ಚಂಡಮಾರುತದ ಪರಿಣಾಮ ಎರಡು ದಿನ ಸುರಿದ ಮಳೆ, ಗಾಳಿಗೆ ಜಿಲ್ಲೆಯ ಸಿರವಾರ, ಮಾನ್ವಿ, ದೇವದುರ್ಗ ಸೇರಿ ಹಲವೆಡೆ ಭತ್ತದ ಬೆಳೆ ಹಾನಿಗೀಡಾಗಿದೆ.

WhatsApp Image 2020 11 29 at 5.48.55 PM

ಎಕರೆಗೆ 45 ಚೀಲ ಭತ್ತ ಸಿಗುವಲ್ಲಿ ಈ ವರ್ಷ 25 ಚೀಲದ ನಿರೀಕ್ಷೆಯಿತ್ತು. ಆದರೆ ಚಂಡಮಾರುತ ಅದನ್ನೂ ಹುಸಿಗೊಳಿಸಿ ರೈತರನ್ನ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿದೆ. ಭತ್ತ ಒದ್ದೆಯಾಗಿರುವುದರಿಂದ ದಲ್ಲಾಳಿಗಳು 75 ಕೆ.ಜಿ ಚೀಲದ ಭತ್ತಕ್ಕೆ 850 ರೂ. ಹೇಳುತ್ತಿದ್ದಾರೆ. ಸರ್ಕಾರ ಬೆಂಬಲ ಬೆಲೆ ನೀಡಿ ಖರೀದಿ ಮಾಡಿದರೆ ಮಾತ್ರ ರೈತರು ಸಂಕಷ್ಟದಿಂದ ಪಾರಾಗಬಹುದು ಎಂದು ರೈತರು ಅಳಲು ತೋಡಿಕೊಂಡಿದ್ದಾರೆ.

WhatsApp Image 2020 11 29 at 5.48.56 PM

ಒಂದು ಎಕರೆ ಭತ್ತ ಕಟಾವು ಮಾಡಲು 7,500 ರೂ. ಖರ್ಚಾಗುತ್ತದೆ. ಗೊಬ್ಬರ, ಕೀಟನಾಶಕ, ಕೂಲಿ ಎಲ್ಲ ಸೇರಿ ಎಕರೆಗೆ 35 ಸಾವಿರ ರೂಪಾಯಿ ಖರ್ಚು ತಗಲುತ್ತೆ. ಆದರೆ ಬೆಳೆಹಾನಿ ಹಾಗೂ ಮಾರುಕಟ್ಟೆಯಲ್ಲಿ ಬೆಲೆ ಇಲ್ಲದಿರುವುದು ರೈತರನ್ನು ಕಂಗೆಡಿಸಿದೆ. ಹತ್ತಿ ಬೆಳೆದ ರೈತರ ಪರಸ್ಥಿತಿಯೂ ಬೇರೆಯಾಗಿಲ್ಲ. ಇನ್ನೇನು ಹತ್ತಿ ಬಿಡಿಸಬೇಕು ಅನ್ನೋ ಸಮಯದಲ್ಲಿ ಸುರಿದ ಮಳೆ ಬೆಳೆಯನ್ನ ಹಾಳು ಮಾಡಿದೆ. ಹತ್ತಿ ಬೆಳೆ ಒದ್ದೆಯಾಗಿರುವುದರಿಂದ ಇಳುವರಿ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ಹತ್ತಿ ಹಾಗೂ ಭತ್ತ ಬೆಳೆಗಾರರು ಸರ್ಕಾರ ನಮ್ಮ ಕಡೆ ಗಮನ ಹರಿಸಬೇಕು ಎಂದು ಒತ್ತಾಯಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *