– ಹೋರಾಟಗಾರರು ರೈತರು ಹೌದೋ, ಅಲ್ವೋ?
ವಿಜಯಪುರ: ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವವರು ರೈತರು ಹೌದೋ? ಅಲ್ಲವೋ ಎನ್ನುವುದು ಸ್ಪಷ್ಟವಾಗುತ್ತಿಲ್ಲ ಎಂದು ಉಡುಪಿ ಪೇಜಾವರ ಮಠಾಧೀಶ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
- Advertisement 2-
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತದ ಧ್ವಜವನ್ನು ಕೆಳಗಿಳಿಸುವುದು, ಕಾಲಿನಿಂದ ತುಳಿಯುವುದು. ಸಂವಿಧಾನದ ಪ್ರತಿಯನ್ನು ಸುಡುವುದು. ಖಲಿಸ್ತಾನ ಪರ ಘೋಷಣೆ ಕೂಗುವುದು. ಇದೆಲ್ಲವನ್ನು ಗಮನಿಸಿದರೆ ಹೋರಾಟ ದಿಕ್ಕು ತಪ್ಪಿದೆ ಅನ್ನಿಸುತ್ತಿದೆ. ಅವರು ರೈತರಲ್ಲ ಎಂಬ ಸಂಶಯ ಮೂಡಿದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸದ್ಯಕ್ಕೆ ತೆಗೆದುಕೊಂಡಿರುವ ನಿಲುವು ಸರಿಯಾದ ದಿಕ್ಕಿನಲ್ಲಿವೆ ಎಂದು ಕೇಂದ್ರದ ನಿಲುವನ್ನ ಸಮರ್ಥಿಸಿಕೊಂಡರು.
- Advertisement 3-
ರೈತರೊಂದಿಗೆ ಮಾತುಕತೆಗೆ ಕೇಂದ್ರ ಸರ್ಕಾರ ಸಿದ್ಧವಿದ್ದು, ಆಹ್ವಾನ ನೀಡುತ್ತಿದೆ. ಅದರ ಬಗ್ಗೆ ಸ್ಪಷ್ಟ ತಿಳುವಳಿಕೆ ಇಲ್ಲದ ರೀತಿಯಲ್ಲಿ ಹೋರಾಟ ಮುಂದುವರೆಸಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
- Advertisement 4-
ಶ್ರದ್ಧೆ, ಭಕ್ತಿಯ ಪ್ರತಿಕವಾಗಿ ರಾಮ ಮಂದಿರ ನಿರ್ಮಾಣವಾಗಲಿದೆ. ರಾಮ ಮಂದಿರ ಹಿಂದೂ ಸಂಸ್ಕೃತಿಯ ಪ್ರತೀಕ. ಈ ನಿಟ್ಟಿನಲ್ಲಿ ಎಲ್ಲ ಕಾರ್ಯಕರ್ತರು ಶ್ರಮಿಸುತ್ತಿದ್ದಾರೆ. ಶ್ರೀರಾಮನನ್ನು ಪೂಜಿಸುವವರು ಉದಾರವಾಗಿ ದಾನ ನೀಡುತ್ತಿದ್ದಾರೆ. ಇದು ಅಭಿಮಾನ, ಶ್ರದ್ಧೆಯ ಪ್ರತೀಕವಾಗಿದೆ. ಎಲ್ಲೆಲ್ಲಿ ಸಾಧ್ಯವೂ ಅಲ್ಲಿಗೆ ತೆರಳಿ ನಿಧಿ ಸಂಗ್ರಹಿಸುತ್ತೇವೆ ಎಂದರು.