Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ರೋಮ್ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಬಾರಿಸಿದಂತೆ: ಖಂಡ್ರೆ ವ್ಯಂಗ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ರೋಮ್ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಬಾರಿಸಿದಂತೆ: ಖಂಡ್ರೆ ವ್ಯಂಗ್ಯ

Bengaluru City

ರೋಮ್ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು ಬಾರಿಸಿದಂತೆ: ಖಂಡ್ರೆ ವ್ಯಂಗ್ಯ

Public TV
Last updated: June 17, 2021 9:35 pm
Public TV
Share
4 Min Read
Eshwar Khandre 2
SHARE

ಬೆಂಗಳೂರು: ಜನ ಕೊರೊನಾ ಸಂಕಷ್ಟದಲ್ಲಿರುವಾಗ ಬಿಜೆಪಿಗೆ ನಾಯಕತ್ವದ ಚಿಂತೆ. ರೋಮ್ ಪಟ್ಟಣ ಹೊತ್ತಿ ಉರಿಯುತ್ತಿದ್ದಾಗ, ದೊರೆ ನೀರೋ ಪಿಟೀಲು ನುಡಿಸುತ್ತಿದ್ದನಂತೆ. ಅದೇ ರೀತಿ ರಾಜ್ಯ ಸಾಂಕ್ರಾಮಿಕ ಮತ್ತು ಲಾಕ್‍ಡೌನ್ ನಿಂದ ನಲುಗುತ್ತಿರುವಾಗ, ಸರ್ಕಾರ ಜನರ ಸಂಕಷ್ಟ ಪರಿಹರಿಸುವುದನ್ನು ಬಿಟ್ಟು ನಾಯಕತ್ವ ಬದಲಾವಣೆಯ ಕಸರತ್ತಿನಲ್ಲಿ ನಿರತವಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಟೀಕಿಸಿದ್ದಾರೆ.

BJP Leaders 2 medium

ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ಉದ್ದೇಶಿಸಿ ಅವರು, ರಾಜ್ಯದಲ್ಲಿ ಮುಂಗಾರು ಉತ್ತಮವಾಗಿದೆ. ಆದರೆ ರೈತರಿಗೆ ಸೂಕ್ತ ಪ್ರಮಾಣದಲ್ಲಿ ಬಿತ್ತನೆ ಬೀಜ ದೊರಕುತ್ತಿಲ್ಲ. ಕೊರೊನಾ ಸಂಕಷ್ಟದಿಂದ ಹಲವರು ಉದ್ಯೋಗ ಕಳೆದುಕೊಂಡಿದ್ದು ದುಡಿಯುವ ಕೈಗಳಿಗೆ ಕೆಲಸವಿಲ್ಲ. ಕಪ್ಪು ಶಿಲೀಂಧ್ರದ ಸೋಂಕಿಗೆ ಒಳಗಾಗಿರುವವರಿಗೆ ಇನ್ನೂ ಔಷಧ ಸಿಗುತ್ತಿಲ್ಲ. ಇಂತಹ ಸಂಕಷ್ಟದ ಸಮಯದಲ್ಲಿ ಜನರ ನೆರವಿಗೆ ನಿಲ್ಲಬೇಕಾದ ಸರ್ಕಾರದ ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಕಸರತ್ತು ಮಾಡುತ್ತಿದ್ದರೆ, ಶಾಸಕರು, ಮಂತ್ರಿಗಳು ನಾಯಕತ್ವ ಬದಲಾವಣೆಗೆ ಹರ ಸಾಹಸ ಮಾಡುತ್ತಿದ್ದಾರೆ ಇದರಲ್ಲಿ ಏನಾದರೂ ಅರ್ಥ ಇದೆಯೇ ಎಂದು ಪ್ರಶ್ನಿಸಿದರು.

Eshwar Khandre 7 medium

ರಾಜ್ಯದಲ್ಲಿ ಕೋವಿಡ್ ಹೆಚ್ಚಳವಾಗಿ ಜನ ಆಕ್ಸಿಜನ್ ಇಲ್ಲದೆ ಪರದಾಡುತ್ತಿದ್ದಾಗ, ಹಾಸಿಗೆ ದೊರಕದೆ ಹಾದಿ ಬೀದಿಯಲ್ಲಿ ಸಾಯುತ್ತಿದ್ದಾಗ ಸರ್ಕಾರ ಹೇಗೆ ಕೆಲಸ ಮಾಡಬೇಕು ಎಂದು ಹೇಳಲು ದೆಹಲಿಯಿಂದ ಯಾರೂ ಬರಲಿಲ್ಲ. ಈಗ ನಿತ್ಯ ಹತ್ತಾರು ಸಾವಿರ ಹೊಸ ಪ್ರಕರಣ ಬರುತ್ತಿದೆ. ಇದರ ನಿಯಂತ್ರಣಕ್ಕೆ ಕ್ರಮ ವಹಿಸುವ ಬದಲು, ಬಡವರ, ಕಡುಬಡವರ ಸಂಕಷ್ಟ ಆಲಿಸುವ ಬದಲು, ನಾಯಕತ್ವ ಬದಲು ಮಾಡಲು ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬೆಂಗಳೂರಿಗೆ ಆಗಮಿಸಿರುವುದು ಅಸಹ್ಯದ ಪರಮಾವಧಿ. ಸರ್ಕಾರ ತನ್ನ ಲೋಪಗಳನ್ನು ಮುಚ್ಚಿಕೊಳ್ಳಲು ಈ ಕಪಟ ನಾಟಕ ಆಡುತ್ತಿದೆ. ಇದೊಂದು ಲಜ್ಜೆಗೆಟ್ಟ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.

farmers 5 medium

ರೈತರಿಗೆ ಮರಣ ಶಾಸನವಾದ ಬೆಳೆ ವಿಮೆ ಯೋಜನೆ:
ಕೇಂದ್ರ ಸರ್ಕಾರ ತಾನು ರೂಪಿಸಿರುವ ಫಸಲು ವಿಮಾ ಯೋಜನೆ ಒಂದು ಕ್ರಾಂತಿಕಾರಿ ಎಂದು ಕೊಚ್ಚಿಕೊಳ್ಳುತ್ತದೆ. ಕಳೆದ ವರ್ಷ ರಾಜ್ಯದಲ್ಲಿ ಸಂಭವಿಸಿದ ಪ್ರವಾಹದಿಂದಾಗಿ 10 ಸಾವಿರ ಕೋಟಿ ರೂಪಾಯಿ ಬೆಳೆ ನಷ್ಟ ಸಂಭವಿಸಿದೆ. ರೈತರಿಗೆ ಇನ್ನೂ ಪರಿಹಾರವೇ ಸಿಕ್ಕಿಲ್ಲ. ಪ್ರವಾಹದಿಂದ ರೈತರಿಗೆ ನಷ್ಟವಾದಾಗ, ಮಿಡ್ ಸೀಸನ್ ಅಡ್ವರ್ಸಿಟಿ ಅನುಬಂಧವನ್ನು ಜಾರಿ ಮಾಡಿದ್ದರೆ (ಇನ್ವೋಕ್), ಎಲ್ಲ ರೈತರಿಗೂ ಶೇ.25ರಷ್ಟು ಪರಿಹಾರ ಸಿಗುತ್ತಿತ್ತು. ಸರ್ಕಾರ ರೈತರಿಗೆ ನೆರವಾಗುವ ಬದಲು, ವಿಮಾ ಸಂಸ್ಥೆಗಳಿಗೆ ಲಾಭ ಮಾಡಿಕೊಡಲು ಈ ಅವಕಾಶವನ್ನು ಕೈಚೆಲ್ಲಿದೆ ಎಂದು ದೂರಿದರು. ಈ ವಿಮೆ ಯೋಜನೆ ರೈತರಿಗೆ ಮರಣ ಶಾಸನ ಬರೆಯುತ್ತಿದೆ ಎಂದು ಕಿಡಿ ಕಾರಿದರು.

agriculture 1 medium

ರಾಜ್ಯದಲ್ಲಿ 2020-21ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ 13, 44,771 ರೈತರು ಬೆಳೆ ವಿಮಾ ಯೋಜನೆಯಡಿ ನೋಂದಾಯಿಸಿಕೊಂಡು 13196.0386 ಲಕ್ಷ ರೂ. ವಿಮಾ ಕಂತು ಪಾವತಿಸಿದ್ದಾರೆ. ಇದಕ್ಕೆ ರಾಜ್ಯ ಸರ್ಕಾರ ತನ್ನ ಪಾಲಿನ ಸಹಾಯಧನ 62211.7669 ಲಕ್ಷ ರೂ. ಮತ್ತು ಕೇಂದ್ರ ಸರ್ಕಾರ 58487.7250 ಸಹಾಯಧನ ನೀಡಿದೆ. ಅದೇ ರೀತಿ ಹಿಂಗಾರು ಬೆಳೆಗೆ 1 ಲಕ್ಷ 62 ಸಾವಿರದ 102 ರೈತರು ನೋಂದಾಯಿಸಿಕೊಂಡಿದ್ದು, 1025.6209 ಲಕ್ಷ ರೂ. ಪಾವತಿಸಿದ್ದಾರೆ.

agriculture 4 medium

ರಾಜ್ಯ ಸರ್ಕಾರ 7544.4426 ಲಕ್ಷ ರೂ. ಕೇಂದ್ರ ಸರ್ಕಾರ 7424.1660 ಲಕ್ಷ ರೂ ಪಾವತಿಸಿದೆ. ಬೇಸಿಗೆ ಬೆಳೆಗೆ 9,141 ರೈತರು ನೋಂದಾಯಿಸಿಕೊಂಡು 109.6200 ಲಕ್ಷ ರೂ. ಪಾವತಿಸಿದ್ದರೆ, ರಾಜ್ಯ ಸರ್ಕಾರ 563.8100 ಲಕ್ಷ ರೂ. ಮತ್ತು ಕೇಂದ್ರ ಸರ್ಕಾರ 561.5000 ಲಕ್ಷ ರೂ. ಸಹಾಯ ದರ ಪಾವತಿಸಿದೆ. ಅಂದರೆ ರಾಜ್ಯದಿಂದ ವಿಮಾ ಕಂಪನಿಗಳಿಗೆ ಒಟ್ಟು 151124.6899 ಲಕ್ಷ ರೂ. ಪಾವತಿಯಾಗಿದೆ. ವಿಮಾ ಕಂಪನಿಗಳು ರೈತರಿಗೆ ನೀಡಿರುವ ಪರಿಹಾರ ಎಷ್ಟು ಎಂದು ಪ್ರಶ್ನಿಸಿದರು. ನಿಯಮಾನುಸಾರ 2021ರ ಮಾರ್ಚ್ ಒಳಗಾಗಿ ರೈತರಿಗೆ ಕ್ಲೇಮ್ ನೀಡಲಬೇಕಾಗಿತ್ತು. ಇನ್ನೂ ರೈತರಿಗೆ ಪರಿಹಾರ ಸಿಕ್ಕಿಲ್ಲ. ಸರ್ಕಾರ ಏನು ಮಾಡುತ್ತಿದೆ. ಸರ್ಕಾರ ವಿಮಾ ಸಂಸ್ಥೆ ಜೊತಗೆ ಕೈಜೋಡಿಸಿದೆಯೇ ಎಂದು ಪ್ರಶ್ನಿಸಿದ ಈಶ್ವರ ಖಂಡ್ರೆ, ಕೂಡಲೇ ರೈತರಿಗೆ ಕ್ಲೇಮ್ ಹಣ ಪಾವತಿಸಲು ಒತ್ತಾಯಿಸಿದ್ದಾರೆ.

gdg fertilizer medium

ಶ್ವೇತ ಪತ್ರಕ್ಕೆ ಒತ್ತಾಯ:
ಕೂಡಲೇ ರಾಜ್ಯ ಸರ್ಕಾರ ಪ್ರಧಾನಮಂತ್ರಿ ಫಸಲು ಬಿಮಾ ಯೋಜನೆ ಆರಂಭವಾದ ದಿನದಿಂದ ಇಲ್ಲಿಯವರೆಗೆ ರೈತರು ಪಾವತಿಸಿದ ಕಂತು, ಸರ್ಕಾರದ ಸಬ್ಸಿಡಿ ಸೇರಿ ಒಟ್ಟು ಎಷ್ಟು ಹಣವನ್ನು ಯಾವ ಯಾವ ವರ್ಷ ಎಷ್ಟೆಷ್ಟು ಪಾವತಿ ಮಾಡಿದೆ. ಅದಕ್ಕೆ ಪ್ರತಿಯಾಗಿ ವಿಮಾ ಕಂಪನಿಗಳು ನೀಡಿರುವ ಪರಿಹಾರದ ಮೊತ್ತ ಎಷ್ಟು ಎಂದು ಶ್ವೇತ ಪತ್ರ ಹೊರಡಿಸಿದರೆ. ಆಗ ಇದರಿಂದ ರೈತರಿಗೆ ಪ್ರಯೋಜನ ಆಗಿದಿಯೋ ಇಲ್ಲ ವಿಮಾ ಕಂಪನಿಗಳು ಶ್ರೀಮಂತವಾಗಿದೆಯೋ ಎಂಬುದು ಸ್ಪಷ್ಟವಾಗುತ್ತದೆ. ಸರ್ಕಾರ ಕೂಡಲೇ ಶ್ವೇತಪತ್ರ ಹೊರಡಿಸಲಿ ಎಂದು ಆಗ್ರಹಿಸಿದರು.

@BJP4India ಯವರು ರೈತರ ವಿರೋಧಿ ಎಂದು ಮತ್ತೊಮ್ಮೆ ತೋರಿಸಿ ಕೊಟ್ಟಿದ್ದಾರೆ ಮರಣ ಶಾಸನ ಕಾನೂನು ತರುತ್ತಿದ್ದಾರೆ. ಕೋರೊನಾ ಹಾಗೂ ಸರ್ಕಾರದ ಮೋಸದಿಂದ ಜನ ರೋಸಿಹೋಗಿದ್ದಾರೆ. 25 ಜಿಲ್ಲೆಗಳಲ್ಲಿ ಪ್ರವಾಹ ಬಂದಿದೆ.
ಹೋದ ವರ್ಷದ 2020/21 ರ ಸಾಲಿನ ರೈತರು ಫಸಲ್ ಭೀಮಾ ಕಂತು ಕಟ್ಟಿದ್ದರೂ ವಿಮೆ ಹಣ ಇಲ್ಲಿಯವರೆಗೆ ಸಿಕ್ಕಿಲ್ಲ. #BJPAgainstFarmers pic.twitter.com/YJUWFytw3L

— Eshwar Khandre (@eshwar_khandre) June 17, 2021

ಬಿತ್ತನೆ ಬೀಜ ಪೂರೈಕೆಗೆ ಆಗ್ರಹ:
ರಾಜ್ಯದಲ್ಲಿ ಬಿತ್ತನೆ ಬೀಜ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಸೋಯಾಬೀನ್ ಬೆಳೆಗಾರರಿಗೆ ಬಿತ್ತನೆ ಬೀಜವೇ ಸಿಗುತ್ತಿಲ್ಲ. ಬೀದರ್ ಜಿಲ್ಲೆಯೊಂದರಲ್ಲಿ ಈ ಬಾರಿ ಸುಮಾರು 1.80 ಹೆಕ್ಟೆರ್ ಪ್ರದೇಶದಲ್ಲಿ ಸೋಯಾಬೀನ್ ಬೆಳೆಯಲು ರೈತರು ಸಿದ್ಧತೆ ಮಾಡಿಕೊಂಡಿದ್ದರೂ, ಸರ್ಕಾರ ಸಮರ್ಪಕವಾಗಿ ಬೀಜ ಪೂರೈಕೆ ಮಾಡುತ್ತಿಲ್ಲ. ಬಿತ್ತನೆ ಬೀಜಕ್ಕೆ ಬೇಡಿಕೆ ಇರುವ ಹಿನ್ನೆಲೆಯಲ್ಲಿ ದುಬಾರಿ ದರಕ್ಕೆ ಕಾಳಸಂತೆಯಲ್ಲಿ ಮಾರಾಟವಾಗುತ್ತಿದೆ. ಸರ್ಕಾರಕ್ಕೆ ಇದನ್ನು ತಡೆಯುವ ಶಕ್ತಿಯೂ ಇಲ್ಲದಂತಾಗಿದೆ. ಸರ್ಕಾರ ಸಂಪೂರ್ಣ ನಿಷ್ಕ್ರಿಯವಾಗಿದೆ ಎಂದು ಈಶ್ವರ ಖಂಡ್ರೆ ಆರೋಪಿಸಿದರು.

ಸರ್ಕಾರವೇ ಹೇಳಿದ ಪ್ರಕಾರ ಸುಮಾರು 10 ಲಕ್ಷ ಹೆಕ್ಟೆರ್ ಜಮೀನು ಪ್ರವಾಹದಲ್ಲಿ ಹಾಳಾಗಿದೆ. ನಾನು ಈ ಮೊದಲು ಸದನದಲ್ಲಿ ಮತನಾಡಿದ್ದಂತೆ #PMFBY ಯಲ್ಲಿ ಮಿಡ್ ಸೀಸನ್ ಅಡ್ವೇರ್ಸಿಟಿ ಕ್ಲಾಸ್ ನ್ನು ಇನವೊಕ್ ಮಾಡಿದ್ದರೆ ಸುಮಾರು 25 ಸಾವಿರ ಪರಿಹಾರ ಹಣ ಅಂದರೆ ಅಂದಾಜು 1500 ಕೋಟಿ ರೂ ಹಣ ರೈತರಿಗೆ ಸಿಗುವ ಸಾಧ್ಯತೆ ಇತ್ತು.#PMFBYScam pic.twitter.com/jGNdgC7t9y

— Eshwar Khandre (@eshwar_khandre) June 17, 2021

ವಿದ್ಯುತ ದರ ಏರಿಕೆ ಅವೈಜ್ಞಾನಿಕ:
ಸರ್ಕಾರ ಕೊರೊನಾ ಸಂಕಷ್ಟದ ಸಮಯದಲ್ಲಿ ವಿದ್ಯುತ್ ದರ ಏರಿಕೆ ಮಾಡಿರುವುದು ಅನ್ಯಾಯದ ಪರಮಾವಧಿ. ಈ ದರ ಏರಿಕೆ ಅತ್ಯಂತ ಅವೈಜ್ಞಾನಿಕವಾಗಿದೆ. ದೆಹಲಿಯಲ್ಲಿ ಆಪ್ ಸರ್ಕಾರ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತದೆ. ಇಲ್ಲಿ ವಿದ್ಯುತ್ ಶಾಕ್ ನೀಡಲಾಗುತ್ತಿದೆ ಎಂದು ಆರೋಪಿಸಿದರು.

2020-21ನೇ ಸಾಲಿನಲ್ಲಿ ರಾಜ್ಯದ 15,16,014 ರೈತರು ಬೆಳೆವಿಮೆ ನೊಂದಣಿ ಮಾಡಿದ್ದು,ಇದರಲ್ಲಿ ರೈತರು 143.31ಕೋಟಿ, ರಾಜ್ಯ ಸರ್ಕಾರ 703.21ಕೋಟಿ ಹಾಗೂ ಕೇಂದ್ರ ಸರ್ಕಾರ 664.73ಕೋಟಿ ಒಟ್ಟು 1,515ಕೋಟಿ ರೂ ಗಳನ್ನು ವಿಮಾ ಕಂಪನಿಗಳಿಗೆ ನೀಡಿಲಾಗಿದೆ ಆದ್ರೆ ಇಲ್ಲಿಯವರೆಗೆ ಒಂದು ನಯಾ ಪೈಸೆ ಕೊಡಾ ರೈತರಿಗೆ ಬಂದಿಲ್ಲ ಇದು ರೈತವಿರೋಧಿ ಸರ್ಕಾರ. pic.twitter.com/rbUTWJ9D64

— Eshwar Khandre (@eshwar_khandre) June 17, 2021

ರಾಜ್ಯದಲ್ಲಿ ಅಸಾಂಪ್ರದಾಯಿಕ ಇಂಧನ ಮೂಲಗಳಾದ ಸೌರವಿದ್ಯುತ್, ಪವನ ವಿದ್ಯುತ್ ಉತ್ಪಾದನೆ ಹೆಚ್ಚಳವಾಗಿದ್ದು, ಬೇರೆ ರಾಜ್ಯಗಳಿಂದ ವಿದ್ಯುತ್ ಖರೀದಿ ಮಾಡುವ ಅಗತ್ಯವೇ ಇಲ್ಲ. ಆದರೂ ಹಳೆಯ ಒಪ್ಪಂದಗಳು ಇನ್ನೂ ಚಾಲ್ತಿಯಲ್ಲಿದ್ದು, ಅವುಗಳನ್ನು ರದ್ದು ಮಾಡದ ಕಾರಣ ಸರ್ಕಾರಕ್ಕೆ ಸಾವಿರಾರು ಕೋಟಿ ನಷ್ಟ ಆಗುತ್ತಿದೆ. ಆ ನಷ್ಟ ಭರ್ತಿಗೆ ಜನರ ಮೇಲೆ ದರ ಏರಿಕೆಯ ಬರೆ ಹಾಕಲಾಗುತ್ತಿದೆ ಎಂದು ಈಶ್ವರ ಖಂಡ್ರೆ ಆರೋಪಿಸಿದರು.

ಆಗಸ್ಟ್ 15ರ ನಂತರ ರಾಜಕೀಯ ಬದಲಾವಣೆಗಳು: ಈಶ್ವರ್ ಖಂಡ್ರೆhttps://t.co/5CdUkVb697#EShwarKhandre #Congress #KannadaNews #BJP #KarnatakaPolitics @eshwar_khandre @INCKarnataka

— PublicTV (@publictvnews) June 17, 2021

TAGGED:bjpBS YediyurappacongressEshwar KahndreKarnataka PoliticsPublic TVಈಶ್ವರ್ ಖಂಡ್ರೆಕಾಂಗ್ರೆಸ್ಪಬ್ಲಿಕ್ ಟಿವಿಬಿ.ಎಸ್.ಯಡಿಯೂರಪ್ಪಬಿಜೆಪಿ
Share This Article
Facebook Whatsapp Whatsapp Telegram

Cinema news

Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories
Jayamala
ಫಿಲ್ಮ್ ಚೇಂಬರ್‌ ಚುನಾವಣೆ – ಅಧ್ಯಕ್ಷೆ ಪಟ್ಟಕ್ಕೇರಿದ ನಟಿ ಜಯಮಾಲಾ
Bengaluru City Cinema Latest Main Post Sandalwood
Aishwarya Rajesh
ತುಂಡು ಬಟ್ಟೆ ಕೊಟ್ಟು ನಿನ್ನ ಬಾಡಿ ನೋಡ್ಬೇಕು ಅಂದ್ರು – ಕಹಿ ಘಟನೆ ಬಿಚ್ಚಿಟ್ಟ ಐಶ್ವರ್ಯ ರಾಜೇಶ್
Cinema Latest South cinema Top Stories

You Might Also Like

semiconductor chips
Latest

ಸೆಮಿಕಂಡಕ್ಟರ್ ಮಿಷನ್ ವಿಸ್ತರಣೆ – 40 ಸಾವಿರ ಕೋಟಿ ರೂ. ಮೀಸಲು, ಹೆಚ್ಚುವರಿ 10 ಸಾವಿರ ಕೋಟಿ ಘೋಷಣೆ

Public TV
By Public TV
2 minutes ago
Transport
Latest

ರಕ್ಷಣೆಗಿಂತಲೂ ಸಾರಿಗೆಗೆ ಹೆಚ್ಚು ಅನುದಾನ

Public TV
By Public TV
11 minutes ago
farmer agriculture
Latest

Union Budget 2026: ರೈತರಿಗೆ AI ಸಹಕಾರಿ; ‘ಭಾರತ್‌ ವಿಸ್ತಾರ್‌’ ಘೋಷಿಸಿದ ನಿರ್ಮಲಾ ಸೀತಾರಾಮನ್‌

Public TV
By Public TV
37 minutes ago
5b8eff6e 881c 49d0 bfbd e3cb6584182c
Latest

Union Budget 2026 LIVE Updates | ಬೆಂಗಳೂರಿಗೆ ಬುಲೆಟ್‌ ರೈಲು ಘೋಷಣೆ

Public TV
By Public TV
44 minutes ago
Eshwar Khandre
Bidar

ಅನುಮಾನಾಸ್ಪದ ವಸ್ತು ಸ್ಫೋಟ ಕೇಸ್ – ಬ್ರಿಮ್ಸ್‌ಗೆ ಭೇಟಿ ನೀಡಿ, ಗಾಯಾಳು ಮಕ್ಕಳ ಆರೋಗ್ಯ ವಿಚಾರಿಸಿದ ಖಂಡ್ರೆ

Public TV
By Public TV
1 hour ago
High Speed Rail Corridors
Bengaluru City

Budget 2026: ಬೆಂಗಳೂರಿಗೆ ಬುಲೆಟ್‌ ರೈಲು ಘೋಷಣೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?