ರೌಡಿಸಂ ಫೀಲ್ಡ್ ನಲ್ಲಿ ಬೆಳಯಬೇಕೆಂದಿದ್ದ ನಾಲ್ವರಿಗೆ ಪೊಲೀಸರ ಗುಂಡೇಟು

Public TV
1 Min Read
Ane Fire

ಬೆಂಗಳೂರು: ಬಂಧನಕ್ಕೆ ತೆರಳಿದ್ದ ಪೊಲೀಸ್ ಪೇದೆಗಳ ಮೇಲೆ ಹಲ್ಲೆಗೆ ಮುಂದಾಗಿದ್ದ ಕೊಲೆ ಆರೋಪಿಗಳ ಮೇಲೆ ಫೈರಿಂಗ್ ಮಾಡಲಾಗಿದೆ. ಆನೇಕಲ್ ತಾಲೂಕಿನ ಮುತ್ಯಾನಲ್ಲೂರಲ್ಲಿ ಇಬ್ಬರಿಗೆ ಮತ್ತು ಅವಡದೇವನಹಳ್ಳಿಯಲ್ಲಿ ಫೈರಿಂಗ್ ನಡೆದಿದೆ.

Ane Fire 2

ಗೋಪಿ, ಗಂಗಾ, ಬಸವ ಮತ್ತು ಅನಂತ್ ಗುಂಡೇಟು ತಿಂದು ಆರೋಪಿಗಳು. ನಾಲ್ವರನ್ನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಂಧಿತ ನಾಲ್ವರು ರೌಡಿಸಂ ಫೀಲ್ಡ್ ನಲ್ಲಿ ಬೆಳೆಯಬೇಕೆಂದು ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಿದ್ದರು. ಆದ್ರೆ ಈ ನಾಲ್ವರಿಗೆ ವಿನೀತ್ ಅಡ್ಡಿಯಾಗಿದ್ದನು. ಅಕ್ಟೋಬರ್ 30ರಂದು ಅತ್ತಿಬೆಲೆ ಬಳಿಯ ಶೆಟ್ಟಿಹಳ್ಳಿಯಲ್ಲಿ ನಡು ರಸ್ತೆಯಲ್ಲಿಯೇ ವಿನೀತ್ ನನ್ನು ಕೊಲೆ ಮಾಡಲಾಗಿತ್ತು.

Ane Fire 1

ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನ ಬಂಧಿಸುವಲ್ಲಿ ಪೊಲೀಸರು ತೆರಳಿದ್ದರು. ಈ ವೇಳೆ ಪೇದೆಗಳಾದ ಇರ್ಫಾನ್ ಮತ್ತು ನಾಗರಾಜ್ ಮೇಲೆ ಹಲ್ಲೆಗೆ ಮುಂದಾಗಿದ್ದ ಅನಂತ್ ಹಾಗೂ ಬಸವನ ಅತ್ತಿಬೆಲೆ ಇನ್‍ಸ್ಪೆಕ್ಟರ್ ಸತೀಶ್, ಸರ್ಜಾಪುರ ಎಸ್‍ಐ ಹರೀಶ್ ಫೈರಿಂಗ್ ಮಾಡಿದ್ದಾರೆ. ಇತ್ತ ಮಹೇಶ್ ಮತ್ತು ಸುರೇಶ್ ಪೇದೆಯ ಮೇಲೆಯ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದ ಗೋಪಿ, ಗಂಗಾನ ಮೇಲೆ ಆನೇಕಲ್ ಡಿವೈಎಸ್‍ಪಿ ಮಹಾದೇವ್ ಮತ್ತು ಆನೇಕಲ್ ಇನ್‍ಸ್ಪೆಕ್ಟರ್ ಕೃಷ್ಣ ಫೈರಿಂಗ್ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *