ಚಿತ್ರದುರ್ಗ: ಲಂಚ ಪಡೆಯುತ್ತಿದ್ದ ಪಿಡಿಓ ರೆಡ್ ಹ್ಯಾಂಡಾಗಿ ಎಸಿಬಿ ಬಲೆಗೆ ಸಿಕ್ಕಿ ಬಿದ್ದಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಹೊಳಲ್ಕೆರೆ ತಾಲೂಕಿನ ಟಿ.ನುಲೇನೂರು ಗ್ರಾ.ಪಂ ಪಿಡಿಓ ಶ್ರೀನಿವಾಸ್ ಎಸಿಬಿ ಅಧಿಕಾರಿಗಳ ಬಲೆಗೆ ಸಿಕ್ಕಿ ಬಿದ್ದಿದ್ದಾರೆ. ಮನೆಯ ಇ-ಸ್ವತ್ತು ಹಾಗೂ ಜಾಬ್ ಕಾರ್ಡ್ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ವೇಳೆ ಎಸಿಬಿ ಬಲೆಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ನ 20 ಜನ ಸಿಎಂ ಸೂಟ್ಗೆ ಆರ್ಡರ್ ಮಾಡಿದ್ದಾರೆ: ಬಡಗಲಪೂರ ನಾಗೇಂದ್ರ
ಗ್ರಾಮದ ಗುರುಶಾಂತಪ್ಪ ಎಂಬುವರ ಬಳಿ ಪಿಡಿಓ ಶ್ರೀನಿವಾಸ್ ಅವರು, 2ಸಾವಿರ ರೂಪಾಯಿ ಲಂಚ ಕೊಟ್ಟರೆ ಮಾತ್ರ, ತಮ್ಮ ಕೆಲಸ ಮಾಡಿಕೊಡುವುದಾಗಿ ಬೇಡಿಕೆ ಇಟ್ಟಿದ್ದರು. ಇಂದು ಪಿಡಿಓ ಸಾಹೇಬ್ರು ಲಂಚ ಸ್ವೀಕರಿಸುವ ವೇಳೆ ಗ್ರಾಮಪಂಚಾಯ್ತಿ ಕಚೇರಿ ಮೇಲೆ ಎಸಿಬಿ ಎಸ್ ಐ ಪ್ರವೀಣ್ ನೇತೃತ್ವದಲ್ಲಿ ಎಸಿಬಿ ಅಧಿಕಾರಿಗಳು ದಾಳಿನಡೆಸಿದ್ದು, ಶ್ರೀನಿವಾಸ್ನನ್ನು ವಶಕ್ಕೆ ಪಡೆದು ತನಿಖೆ ನಡೆಸುತಿದ್ದಾರೆ.
ಭ್ರಷ್ಟಚಾರಕ್ಕೆ ಬ್ರೇಕ್ ಹಾಕಲು ಸರ್ಕಾರ ಹಲವು ತಂತ್ರಜ್ಞಾನಗಳನ್ನು ಜಾರಿಗೊಳಿಸಿದೆ. ಆದರೂ ಅಧಿಕಾರಿಗಳು ಮಾತ್ರ ಅವರ ಕೈ ಕಸುಬನ್ನು ಬಿಟ್ಟಿಲ್ಲ, ಇದಕ್ಕೆ ತಾಜಾ ಉಧಾಹರಣೆಈ ಘಟನೆಯಾಗಿದೆ.