ಲಸಿಕೆಗಾಗಿ ಆವಾಜ್ – ಆರೋಗ್ಯ ಸಿಬ್ಬಂದಿ ಜೊತೆ ಕಾಂಗ್ರೆಸ್ ಮುಖಂಡನ ವಾಗ್ವಾದ

Public TV
1 Min Read
FotoJet 24 3

ಬೆಂಗಳೂರು: ಲಸಿಕೆ ಪಡೆಯಲು ಕಾಂಗ್ರೆಸ್ ಮುಖಂಡ ಮಾಜಿ ಪುರಸಭಾ ಸದಸ್ಯ ಲಸಿಕಾ ಕೇಂದ್ರಕ್ಕೆ ಬಂದು ಆರೋಗ್ಯ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ.

FotoJet 23 2

ಕೊರೊನಾ ವ್ಯಾಕ್ಸಿನ್ ಗಾಗಿ ಜನ ಪರದಾಡುತ್ತಿದ್ದು, ಕೊರೊನಾ ಲಸಿಕೆ ಪಡೆಯಲು ಆನೇಕಲ್ ಪಟ್ಟಣದ ಸರ್ಕಾರಿ ಶಾಲೆಯಲ್ಲಿ ತೆರೆದಿರುವ ಲಸಿಕಾ ಕೇಂದ್ರದಲ್ಲಿ ಬೆಳಿಗ್ಗೆಯಿಂದಲೇ ಸರತಿ ಸಾಲಲ್ಲಿ ನಿಂತು ವಯ್ಯೋವೃದ್ದರು ಕಾಯುತ್ತಿದ್ದರು. ಈ ವೇಳೆ ಲಸಿಕೆ ಪಡೆಯಲು ಕಾಂಗ್ರೆಸ್ ಮುಖಂಡ ಮಾಜಿ ಪುರಸಭಾ ಸದಸ್ಯ ಮಲ್ಲಿಕಾರ್ಜುನ್ ಲಸಿಕಾ ಕೇಂದ್ರಕ್ಕೆ ಬಂದು ಆರೋಗ್ಯ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ.

FotoJet 22 3

ಪುರಸಭೆ ಮಾಜಿ ಸದಸ್ಯ ಮಲ್ಲಿಕಾರ್ಜುನ್ ಸರತಿ ಸಾಲಲ್ಲಿ ನಿಂತಿದ್ದವರನ್ನು ಬಿಟ್ಟು ತಮಗೆ ವ್ಯಾಕ್ಸಿನ್ ನೀಡುವಂತೆ ಲಸಿಕಾ ಕೇಂದ್ರದ ಸಿಬ್ಬಂದಿಯನ್ನು ಕೇಳಿದ್ದು, ಸಿಬ್ಬಂದಿ ಸಾಲಿನಲ್ಲಿ ಬರುವಂತೆ ತಿಳಿಸಿದ್ದಾರೆ. ಈ ವೇಳೆ ತಾನು ಹಿರಿಯ ವೈದ್ಯರಿಗೆ ಹೇಳಿದ್ದೇನೆ ಎಂದು ತಿಳಿಸಿದ್ದೇನೆ ಲಸಿಕೆ ಕೊಡಿ ಅಂದು ವಾಗ್ವಾದ ತೆಗೆದಿದ್ದಾರೆ. ಈ ನಡುವೆ ಪೊಲೀಸರು ಆರೋಗ್ಯ ಸಿಬ್ಬಂದಿ ಹಾಗೂ ಮಲ್ಲಿಕಾರ್ಜುನ್ ನಡುವೆ ಮಾತಿನ ಚಕಮಕಿ ನಡೆದಿದೆ.

FotoJet 21 3

ಜೊತೆಗೆ ಕಳೆದ ಒಂದು ವಾರದಿಂದ ಇದೇ ರೀತಿ ಗಲಾಟೆ ಮಾಡುತ್ತಿದ್ದಾರೆ. ಇನ್ನು ಆನೇಕಲ್ ಲಸಿಕಾ ಕೇಂದ್ರದಲ್ಲಿ ಲಸಿಕಾ ಅಭಿಯಾನ ನಡೆಸುತ್ತಿದ್ದು, ಆರೋಗ್ಯ ಪೊಟರ್ಲ್ ನಲ್ಲಿ ನೊಂದಣಿ ಮಾಡಿಕೊಂಡವರು ಬರುತ್ತಿರುವಸರಿಂದ ಸ್ಥಳೀಯರಿಗೆ ಲಸಿಕೆ ಕೊರತೆಯಾಗಿದೆ ಎಂದು ಸ್ಥಳೀಯರು ದೂರಿದ್ದಾರೆ. ಇನ್ನೂ ಸಂಬಂಧಪಟ್ಟ ಸಚಿವರು ವ್ಯಾಕ್ಸಿನ್ ಹೆಚ್ಚು ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *