Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಲಸಿಕೆಯೊಂದರಿಂದಲೇ ಕೊರೊನಾದಿಂದ ದೂರವಿರಲು ಸಾಧ್ಯ : ಡಾ.ಕೆ.ಸುಧಾಕರ್

Public TV
Last updated: June 24, 2021 6:50 pm
Public TV
Share
2 Min Read
K Sudhakar 1
SHARE

ಬೆಂಗಳೂರು: ಲಸಿಕೆಯೊಂದರಿಂದಲೇ ಕೊರೊನಾ ಸೋಂಕಿನಿಂದ ದೂರವಿರಲು ಸಾಧ್ಯ. ಡಿಸೆಂಬರ್ ಅಂತ್ಯಕ್ಕೆ ಎಲ್ಲರಿಗೂ ಎರಡೂ ಡೋಸ್ ಲಸಿಕೆಯನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

vaccine medium

ರಾಜ್ಯ ವಕೀಲರ ಪರಿಷತ್ತಿನಲ್ಲಿ ಕೋವಿಡ್-19 ಉಚಿತ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಡಿಸೆಂಬರ್ ಅಂತ್ಯದಲ್ಲಿ ಕರ್ನಾಟಕದ ಸಮಸ್ತ ಜನರಿಗೆ ಎರಡೂ ಡೋಸ್ ನೀಡುವ ಕೆಲಸವನ್ನು ರಾಜ್ಯ ಸರ್ಕಾರ ಮಾಡಲಿದೆ. ಲಸಿಕೆಯೊಂದರಿಂದಲೇ ನಾವು ಕೊರೊನಾದಿಂದ ದೂರವಿರಲು ಸಾಧ್ಯ. ಇಲ್ಲದಿದ್ದರೆ ಯಾವಾಗಲೂ ಮಾಸ್ಕ್ ಧರಿಸಿಕೊಂಡೇ ಇರಬೇಕಾಗುತ್ತದೆ. ಮಾಸ್ಕ್ ಬಿಟ್ಟು ಮುಕ್ತವಾಗಿ ಮೊದಲಿನಂತೆ ಇರುವ ಸ್ಥಿತಿ ಬರಲು ಎಲ್ಲರೂ ಲಸಿಕೆ ಪಡೆಯಬೇಕು ಎಂದರು.

mask 2 1

ಕೋವಿಡ್ ಎರಡನೇ ಅಲೆಯಲ್ಲಿ ನಿರೀಕ್ಷೆಗೆ ಮೀರಿ ಸೋಂಕು ಹೆಚ್ಚಿದ್ದರೂ, ಸರ್ಕಾರದ ಕ್ರಮಗಳಿಂದ ಸಾವಿನ ಪ್ರಮಾಣ ಬಹಳ ಕಡಿಮೆಯಾಗಿದೆ. ಸೋಂಕು ನಿಯಂತ್ರಣಕ್ಕೆ ಆರೋಗ್ಯ ಕ್ಷೇತ್ರದಲ್ಲಿ ಮೂಲಸೌಕರ್ಯ ಹೆಚ್ಚಿಸಲಾಗಿದೆ. ಕಳೆದ ಇಪ್ಪತ್ತೈದು ವರ್ಷಗಳಲ್ಲೇ ವೈದ್ಯರ ನೇರ ನೇಮಕ ಆಗಿರಲಿಲ್ಲ. ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಿಂದ, ಜಿಲ್ಲಾಸ್ಪತ್ರೆಗಳವರೆಗೂ ಖಾಲಿ ಇರುವ 1,760 ವೈದ್ಯ, ವೈದ್ಯಾಧಿಕಾರಿ ಹುದ್ದೆಗಳನ್ನು ತುಂಬಲಾಗಿದೆ. ಮೂರನೇ ಅಲೆಗೆ ಸಂಬಂಧಿಸಿದಂತೆ ಡಾ.ದೇವಿಶೆಟ್ಟಿ ಸಮಿತಿ ನೀಡಿದ ವರದಿಯ ಶಿಫಾರಸು ಆಧರಿಸಿ ಜಿಲ್ಲಾಮಟ್ಟದಲ್ಲಿ ಆರೋಗ್ಯ ಸೌಕರ್ಯ ಬಲಪಡಿಸಲಾಗುತ್ತಿದೆ ಎಂದು ಹೇಳಿದರು.

sudhakar 7 medium

ಲಸಿಕೆ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಹರಡಲಾಗುತ್ತಿದೆ. ಅದನ್ನೇ ಜನರು ಬೇಗ ನಂಬುತ್ತಿದ್ದಾರೆ. ಆದರೆ ಸರ್ಕಾರ ನೀಡುವ ಅಂಕಿ ಅಂಶಗಳನ್ನು ನಂಬಬೇಕು. ಸಿಡುಬು ರೋಗಕ್ಕೆ ಲಸಿಕೆ ಕಂಡುಹಿಡಿದಾಗ ಅದನ್ನು ನಂಬಲು ಹಲವು ವರ್ಷಗಳೇ ಬೇಕಾಯಿತು. ಹೆಪಟೈಟಿಸ್ ಬಿ ಲಸಿಕೆ ಆವಿಷ್ಕಾರವಾದರೂ ಭಾರತಕ್ಕೆ ಬರಲು 20 ವರ್ಷ ಬೇಕಾಯಿತು. ಆದರೆ ಕೋವಿಡ್ ಆರಂಭವಾದ ಬಳಿಕ ಬೇಗ ಲಸಿಕೆ ದೊರೆತಿದೆ. ಇದು ವಿದೇಶದ್ದಾಗಿರದೆ, ದೇಶೀಯವಾಗಿಯೇ ತಯಾರಾಗಿರುವುದು ಹೆಮ್ಮೆಯ ವಿಚಾರ. ಅತ್ಯಂತ ಪರಿಣಾಮಕಾರಿಯಾದ ಈ ಲಸಿಕೆಗಳನ್ನು ಎಲ್ಲರೂ ಪಡೆಯಬೇಕು ಎಂದರು. ಇದನ್ನೂ ಓದಿ: ಹಾಸನ ಪೊಲೀಸರ ಕಾರ್ಯಾಚರಣೆಯಿಂದ ಸುರಕ್ಷಿತವಾಗಿ ಪೋಷಕರನ್ನು ಸೇರಿದ ಹೆಣ್ಣುಮಕ್ಕಳು

ವಿದೇಶದ ಲಸಿಕೆಗಳು ಹೆಚ್ಚು ದರ ಹೊಂದಿವೆ. ಆದರೆ ನಮ್ಮ ದೇಶದ ಲಸಿಕೆಗಳನ್ನು ಪ್ರಧಾನಿ ನರೇಂದ್ರ ಮೋದಿಯವರು ಸಂಪೂರ್ಣ ಉಚಿತವಾಗಿ ನೀಡಿದ್ದಾರೆ. ಲಸಿಕೆಯ ಬಗ್ಗೆ ವೈಜ್ಞಾನಿಕ ನೆಲೆಗಟ್ಟಿನಲ್ಲಿ ಅರ್ಥ ಮಾಡಿಕೊಂಡು ಜನರಿಗೆ ಉತ್ತಮ ಸಂದೇಶ ನೀಡಬೇಕು ಎಂದು ಅಭಿಪ್ರಾಯಪಟ್ಟರು.

PM MODI medium

ರಾಜ್ಯದಲ್ಲಿರುವ ಸುಮಾರು 1 ಲಕ್ಷ ವಕೀಲರು ಹಾಗೂ ಅವರ ಕುಟುಂಬ ಸದಸ್ಯರಿಗೆ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲು ರಾಜ್ಯ ಸರ್ಕಾರ ಕ್ರಮ ವಹಿಸಿದೆ. ಹೆಚ್ಚು ಜನರ ಸಂಪರ್ಕ ಇರುವ ವೃತ್ತಿಪರರಿಗೆ ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದರು. ಇದನ್ನೂ ಓದಿ: ರಾಜ್ಯದಲ್ಲಿ ಎರಡು ಡೆಲ್ಟಾ ಪ್ಲಸ್ ಕೇಸ್ ದಾಖಲು – ಸುಧಾಕರ್

TAGGED:bengaluruCoronaPublic TVsocial mediaState Governmentvaccineಕೊರೊನಾಪಬ್ಲಿಕ್ ಟಿವಿ Sudhakarಬೆಂಗಳೂರುರಾಜ್ಯ ಸರ್ಕಾರಲಸಿಕೆಸಾಮಾಜಿಕ ಜಾಲತಾಣಸುಧಾಕರ್
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
9 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
10 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
11 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
12 hours ago

You Might Also Like

Nganthoi Sharma
Latest

ವಿಮಾನ ಪತನ – ಗಗನ ಸಖಿಯ ಫೋಟೋ ಹಿಡಿದು ಕಣ್ಣೀರಿಟ್ಟ ಕುಟುಂಬಸ್ಥರು

Public TV
By Public TV
57 minutes ago
Amit Shah
Latest

1.25 ಲಕ್ಷ ಲೀಟರ್‌ ಇಂಧನ ಇತ್ತು, ಮಧ್ಯಾಹ್ನ ತಾಪಮಾನ ಹೆಚ್ಚಿದ್ದರಿಂದ ರಕ್ಷಿಸುವ ಅವಕಾಶ ಇರಲಿಲ್ಲ: ಅಮಿತ್‌ ಶಾ

Public TV
By Public TV
16 minutes ago
rabindranath tagore
Crime

ಸೇಡಿಗಾಗಿ ಠಾಗೂರ್ ಮನೆ ಮೇಲೆ ದಾಳಿ – 50ಕ್ಕೂ ಹೆಚ್ಚು ಜನರ ಮೇಲೆ ಕೇಸ್ 

Public TV
By Public TV
31 minutes ago
Air India crash in Ahmedabad Former Gujarat CM Vijay Rupanis first vehicle number was 1206. He always used to pick the same number plate for his vehicles Today is 12 06
Latest

ತಮ್ಮ ಫೇವರೇಟ್‌ ನಂಬರ್‌ ದಿನವೇ ಮೃತಪಟ್ಟ ಗುಜರಾತ್‌ ಮಾಜಿ ಸಿಎಂ ರೂಪಾನಿ

Public TV
By Public TV
2 hours ago
Rajasthan Married girl died plane crash
Latest

Ahmedabad Plane Crash | ಮೊದಲ ಬಾರಿಗೆ ಪತಿ ನೋಡಲು ಹೊರಟಿದ್ದ ನವವಿವಾಹಿತೆ ಸಾವು

Public TV
By Public TV
2 hours ago
Air India Flight Crash
Latest

ಪತನಗೊಂಡ ವಿಮಾನದಲ್ಲಿ ಮಗಳು, ಮೊಮ್ಮಗ ಇದ್ರು; ಬೆಳಿಗ್ಗೆಯಷ್ಟೇ ಅವಳ ಜೊತೆ ಮಾತಾಡಿದ್ದೆ – ಕಣ್ಣೀರಿಟ್ಟ ತಂದೆ

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?