Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಸಿಕೆ ಪಡೆದ ನಂತರ ಕೊರೊನಾ ನಿಯಮಗಳನ್ನ ಮರೀಯಬೇಡಿ: ಪ್ರಧಾನಿ ಮೋದಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಲಸಿಕೆ ಪಡೆದ ನಂತರ ಕೊರೊನಾ ನಿಯಮಗಳನ್ನ ಮರೀಯಬೇಡಿ: ಪ್ರಧಾನಿ ಮೋದಿ

Karnataka

ಲಸಿಕೆ ಪಡೆದ ನಂತರ ಕೊರೊನಾ ನಿಯಮಗಳನ್ನ ಮರೀಯಬೇಡಿ: ಪ್ರಧಾನಿ ಮೋದಿ

Public TV
Last updated: January 16, 2021 11:12 am
Public TV
Share
3 Min Read
PM MODI 1
SHARE

– ಕೊರೊನಾ ವಾರಿಯರ್ಸ್ ನೆನೆದು ಮೋದಿ ಭಾವುಕ
– ನಮ್ಮ ಲಸಿಕೆ ಸುರಕ್ಷಿತ, ಕಡಿಮೆ ಬೆಲೆ

ನವದೆಹಲಿ: ಕೊರೊನಾ ಲಸಿಕೆ ಕಂಡು ಹಿಡಿಯಲು ನಮ್ಮ ವಿಜ್ಞಾನಿಗಳು ಸತತ ಪರಿಶ್ರಮ ಪಟ್ಟಿದ್ದಾರೆ. ವಿಜ್ಞಾನಿಗಳು ಹಬ್ಬ, ಸಂತೋಷಕೂಟದಲ್ಲಿ ಭಾಗಿಯಾಗದೇ ಲಸಿಕೆಗಾಗಿ ಶ್ರಮ ವಹಿಸಿದ್ದರು ಎಂದು ಲಸಿಕೆ ಸಂಶೋಧಕರಿಗೆ ಪ್ರಧಾನಿ ನರೇಂದ್ರ ಮೋದಿ ಧನ್ಯವಾದ ಸಲ್ಲಿಸಿದರು.

ಮೊದಲ ಡೋಸ್ ತೆಗೆದುಕೊಂಡವರು ಎರಡನೇ ಡೋಸ್ ಪಡೆದುಕೊಳ್ಳುವದನ್ನ ಮರೀಯಬೇಡಿ. ಎರಡನೇ ಡೋಸ್ ಪಡೆದ ನಂತರವೇ ನಿಮ್ಮ ದೇಹದಲ್ಲಿ ಕೊರೊನಾ ವಿರುದ್ಧದ ಶಕ್ತಿ ಹೆಚ್ಚಾಗಲಿದೆ. ಕೊರೊನಾ ಪಡೆದು ನಂತರ ಮಾಸ್ಕ್ ಧರಿಸುವಿಕೆ, ಸಾಮಾಜಿಕ ಅಂತರ ಸೇರಿದಂತೆ ಇನ್ನಿತರ ಕೊರೊನಾ ನಿಯಮಗಳನ್ನ ಮರೆಯಬೇಡಿ. ಭಾರತ ಸರ್ಕಾರ ಮೊದಲ ಹಂತದಲ್ಲಿ ಮೂರು ಕೋಟಿ ಜನರಿಗೆ ಲಸಿಕೆ ನೀಡಲಾಗುತ್ತಿದೆ. ಎರಡನೇ ಹಂತದಲ್ಲಿ ಈ ಸಂಖ್ಯೆ 30ಕೋಟಿ ತಲುಪುವ ಗುರಿಯನ್ನ ಭಾರತ ಹೊಂದಿದೆ. ಎರಡನೇ ಹಂತದಲ್ಲಿ ವೃದ್ಧರು, ರೋಗಿಗಳಿಗೆ ಆದ್ಯತೆ ನೀಡಲಾಗುವುದು.

PM MODI

ಆತ್ಮನಿರ್ಭರ ಭಾರತದಡಿಯಲ್ಲಿ ಲಸಿಕೆ: ಈ ದೊಡ್ಡ ಅಭಿಯಾನ ಇಡೀ ವಿಶ್ವದ ಗಮನ ಸೆಳೆಯುವ ಮೂಲಕ ನಮ್ಮ ಶಕ್ತಿ ಪ್ರದರ್ಶನವಾಗುತ್ತಿದೆ. ಲಸಿಕೆಗೆ ಸಂಬಂಧಿಸಿದ ಸುಳ್ಳು ಸುದ್ದಿಗಳಿಂದ ದೂರ ಉಳಿದುಕೊಳ್ಳಿ. ನಮ್ಮ ಲಸಿಕೆಯ ವಿಶ್ವಾಸದಿಂದಲೇ ಇತರೆ ದೇಶಗಳು ನಮಗೆ ಬೇಡಿಕೆ ಇಡುತ್ತಿವೆ. ಎರಡು ಲಸಿಕೆಗಳು ಸದ್ಯಕ್ಕೆ ಲಭ್ಯವಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಲಸಿಕೆಗಳನ್ನ ನಮ್ಮ ವಿಕ್ಞಾನಿಗಳು ಕಂಡು ಹಿಡಿಯಲಿದ್ದಾರೆ. ಆತ್ಮನಿರ್ಭರ ಭಾರತದಡಿಯಲ್ಲಿ ಸಂಶೋಧನೆ ಆಗುತ್ತಿರುವ ಲಸಿಕೆಗಳ ಕ್ಷಮತೆ ಗುಣಮಟ್ಟವಾದಗಿದ್ದು, ಕಡಿಮೆ ಬೆಲೆಯನ್ನ ಹೊಂದಿವೆ ಎಂದರು.

modi

ಕೊರೊನಾ ವಿರುದ್ಧ ಹೋರಾಟದಲ್ಲಿ ಆತ್ಮವಿಶ್ವಾಸ ಕಡಿಮೆಯಾಗದಂತೆ ನೋಡಿಕೊಳ್ಳಲಾಗುತ್ತದೆ. ಕೊರೊನಾ ಬಂದಾಗ ದೇಶದಲ್ಲಿ ಒಂದೇ ಟೆಸ್ಟಿಂಗ್ ಲ್ಯಾಬ್ ಇತ್ತು. ಇಂದು 23 ಸಾವಿರಕ್ಕೂ ಅಧಿಕ ಲ್ಯಾಬ್ ಗಳಿವೆ. ಪಿಪಿಇ ಕಿಟ್, ಮಾಸ್ಕ್ ಸೇರಿದಂತೆ ಇನ್ನಿತರ ವೈದ್ಯಕೀಯ ವಸ್ತುಗಳಿಗಾಗಿ ವಿದೇಶದಿಂದ ಆಮದು ಮಾಡಿಕೊಳ್ಳಲಾಗುತ್ತಿತ್ತು. ಆದ್ರೆ ಇಂದು ಆತ್ಮನಿರ್ಭರ ಭಾರತದಡಿಯಲ್ಲಿ ಸ್ವಾವಲಂಬನೆ ಹೊಂದಿದ್ದು, ನಿರ್ಯಾತ ಸಹ ಮಾಡಲಾಗುತ್ತಿದೆ. ಇದಕ್ಕೆಲ್ಲ ಭಾರತೀಯರ ಆತ್ಮನಿರ್ಭರದ ಆತ್ಮವಿಶ್ವಾಸ ಕಾರಣ.

PM MODI 2

ಭಾವುಕರಾದ ಪ್ರಧಾನಿ ಮೋದಿ: ಕೊರೊನಾ ಲಸಿಕೆ ಕಾರ್ಯಕ್ರಮ ಮಾನವೀಯ ಮತ್ತು ಮಹತ್ವದ ಸಿದ್ಧಾಂತಗಳಡಿಯಲ್ಲಿದೆ. ಈ ಕೊರೊನಾ ಎಷ್ಟೋ ಜನರನ್ನ ಏಕಾಂಗಿಯನ್ನಾಗಿ ಮಾಡಿತು. ಮಗುವನ್ನ ತಾಯಿಯಿಂದ ದೂರು ಮಾಡಿತು. ವೃದ್ಧರು ಒಂಟಿಯಾಗಿ ಆಸ್ಪತ್ರೆಯಲ್ಲಿ ಹೋರಾಟ ನಡೆಸಿದರು. ಈ ವೈರಸ್ ನಿಂದ ಅಗಲಿದೆ ಜನರಿಗೆ ಸಂಪ್ರದಾಯಬದ್ಧವಾಗಿ ಕಳುಹಿಸಿಕೊಡಲು ಸಾಧ್ಯವಾಗಲಿಲ್ಲ. ಇದನ್ನೆಲ್ಲ ನೋಡಿದ ಮನಸ್ಸು ಭಾರವಾಗುತ್ತೆ ಎಂದು ಭಾವುಕರಾದರು.

ಕೊರೊನಾ ಮಹಾಮಾರಿ ವಿರುದ್ಧ ಸಂಜೀವಿನಿ ಲಸಿಕೆಗೆ ಮೋದಿ ಚಾಲನೆhttps://t.co/M8FK2ru9FY#PMModi #CoronaVirus #COVID19 #KannadaNews #Karnataka #Covishield #Covaxin #CoronaVaccine

— PublicTV (@publictvnews) January 16, 2021

ಸರಿಯಾದ ಸಮಯಲ್ಲಿ ತೆಗೆದುಕೊಂಡ ಸೂಕ್ತ ನಿರ್ಧಾರಗಳನ್ನ ತೆಗೆದುಕೊಂಡಿತು. ಜನತಾ ಕಫ್ರ್ಯೂ ಜನರನ್ನ ಲಾಕ್‍ಡೌನ್ ಗೆ ಸಿದ್ಧಗೊಳಿಸಿತು. ಕೊರೊನಾ ಆಕ್ರಮಣ ತಡೆಯಲು ದೊಡ್ಡ ಅಸ್ತ್ರವೇ ಲಾಕ್‍ಡೌನ್ ಆಗಿತ್ತು. ಈ ನಿರ್ಧಾರ ಅಷ್ಟು ಸರಳವಾಗಿರಲಿಲ್ಲ. ಆದರೂ ಭಾರತ ಸರ್ಕಾರ ಕೊರೊನಾ ತಡೆಗಾಗಿ ಲಾಕ್‍ಡೌನ್ ಸೇರಿದಂತೆ ಕಟ್ಟು ನಿಟ್ಟಿನ ಕ್ರಮಗಳನ್ನ ತೆಗೆದುಕೊಂಡಿತು. ಮೂಲಭೂತ ಸೇವೆಗಳು, ರೇಷನ್, ಔಷಧಿ, ಗ್ಯಾಸ್ ನೀಡುವ ಕೆಲಸ ಮಾಡಲಾಯ್ತು. ವಿದೇಶದಲ್ಲಿ ಸಿಲುಕಿದ ಭಾರತೀಯರನ್ನ ನಾವು ಕರೆ ತಂದಿದ್ದೇವೆ. ವಂದೇ ಭಾರತ್ ಮಿಷನ್ ಅಡಿ ಸುಮಾರು 35 ಲಕ್ಷ ಭಾರತೀಯರು ತಾಯ್ನಾಡಿಗೆ ಮರಳಿದರು. ಭಾರತ ತೆಗೆದುಕೊಂಡ ನಿರ್ಧಾರಗಳನ್ನ ಇಂದು ಇಡೀ ವಿಶ್ವ ಪಾಲನೆ ಮಾಡುತ್ತಿದೆ.

#WATCH | PM Narendra Modi gets emotional while talking about the hardships faced by healthcare and frontline workers during the pandemic. pic.twitter.com/B0YQsqtSgW

— ANI (@ANI) January 16, 2021

ಮಾನವ ಸಂಕುಲಕ್ಕೆ ಒಳ್ಳೆಯದಾಗಲಿದೆ: ಕೊರೊನಾ ತಡೆಗಾಗಿ ದೇಶ ಹೇಗೆ ಒಗ್ಗಟ್ಟಾಗಿ ನಿಂತಿತು ಅನ್ನೋದನ್ನ ಇಡೀ ವಿಶ್ವ ಆಶ್ಚರ್ಯಚಕಿತದಿಂದ ನೋಡುತ್ತಿದ್ದೇವೆ. ಕೊರೊನಾ ಮರಣ ಪ್ರಮಾಣ ದರ ಸಹ ಕಡಿಮೆಯಾಗಿದ್ದು, ಸೋಂಕಿತರು ಗುಣಮುಖರಾಗಿ ಮನೆ ಸೇರುತ್ತಿದ್ದಾರೆ. ಭಾರತ 150ಕ್ಕೂ ಹೆಚ್ಚು ದೇಶಗಳಿಗೆ ವೈದ್ಯಕೀಯ ನೆರೆವು ನೀಡಿದೆ. ಇಂದು ನಾವು ನನ್ನ ಲಸಿಕೆಯನ್ನ ಕಂಡು ಹಿಡಿದಿದ್ದೇವೆ. ನಮ್ಮ ಲಸಿಕೆ ಇಡೀ ಮಾನವ ಕುಲಕ್ಕೆ ಒಳ್ಳೆಯದಾಗಲಿದೆ ಎಂದು ಹೇಳಿದರು.

#WATCH live: PM Modi launches nation-wide COVID-19 vaccination drive via video conference. https://t.co/ZS0oJofkVl

— ANI (@ANI) January 16, 2021

TAGGED:Aatmanirbhar BharatCorona VaccineCOVAXINCovishieldprime minister modiPublic TVಆತ್ಮ ನಿರ್ಭರ ಭಾರತಕೊರೊನಾ ಲಸಿಕೆಕೊವ್ಯಾಕ್ಸಿನ್ಕೋವಿಶೀಲ್ಡ್‌ಪಬ್ಲಿಕ್ ಟಿವಿಪ್ರಧಾನಿ ಮೋದಿ
Share This Article
Facebook Whatsapp Whatsapp Telegram

Cinema news

Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema
Rashmika Mandanna Vijay Deverakonda Wedding
Rashmika Mandanna-Vijay Deverakonda Wedding: ಮದುವೆಯ ಫೋಟೊ ಹಂಚಿಕೊಂಡ ರಶ್ಮಿಕಾ ಮಂದಣ್ಣ
Cinema Latest Main Post South cinema

You Might Also Like

R Ashok
Bengaluru City

ಕರ್ನಾಟಕವನ್ನು ಪಾಪರ್‌ ಮಾಡಲು ಮುಂದಾದ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್

Public TV
By Public TV
18 minutes ago
Israel Iran airstrikes
Latest

ಇಸ್ರೇಲ್‌ ಏರ್‌ಸ್ಪೇಸ್‌ ಬಂದ್‌; ಏರ್‌ ಇಂಡಿಯಾ, ಇಂಡಿಗೋ ವಿಮಾನಗಳು ತುರ್ತು ಯೂ-ಟರ್ನ್‌

Public TV
By Public TV
50 minutes ago
West Bengal Pink Booth SHINING Patrol
Latest

ಚುನಾವಣೆ ಹೊತ್ತಲ್ಲೇ ಮಹಿಳಾ ಸುರಕ್ಷತೆಗೆ ಒತ್ತು – ಪ.ಬಂಗಾಳದಲ್ಲಿ ಪಿಂಕ್ ಬೂತ್, ಶೈನಿಂಗ್ ಹೆಸರಿನ ಮಹಿಳಾ ಗಸ್ತು ತಂಡಗಳ ಸ್ಥಾಪನೆ

Public TV
By Public TV
54 minutes ago
Bahrain 2
Latest

ಸೌದಿ, ಯುಎಇ, ಕತಾರ್‌ ಮೇಲೂ ಇರಾನ್‌ ಆಕ್ರಮಣ – ಗಲ್ಫ್‌ ರಾಷ್ಟ್ರಗಳಲ್ಲಿ ಎಷ್ಟು ಭಾರತೀಯರಿದ್ದಾರೆ?

Public TV
By Public TV
55 minutes ago
Iran Israel Strike
Latest

ಇರಾನ್ ಪ್ರತಿದಾಳಿ – ಇಸ್ರೇಲ್‌ನಲ್ಲಿರುವ ಭಾರತೀಯರಿಗಾಗಿ ಸಹಾಯವಾಣಿ ಬಿಡುಗಡೆ

Public TV
By Public TV
1 hour ago
Bahrain
Latest

Iran-Israel War | ಅಮೆರಿಕದ ನೌಕಾ ನೆಲೆಯ ಮೇಲೆ ಇರಾನ್‌ ಬ್ಯಾಲಿಸ್ಟಿಕ್ ಮಿಸೈಲ್‌ ದಾಳಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?