Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Search
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Davanagere

ಲಸಿಕೆ ಹಾಕಿಸಿಕೊಳ್ಳದಿದ್ದರೆ ಸರ್ಕಾರಿ ಸೌಲಭ್ಯ ಕಡಿತ – ಡಿಸಿ ಖಡಕ್ ಎಚ್ಚರಿಕೆ

Public TV
Last updated: February 18, 2021 5:27 pm
Public TV
Share
2 Min Read
mahantesh bilagi 1
SHARE

ದಾವಣಗೆರೆ: ಇಡೀ ದೇಶದಲ್ಲಿ ಈಗಾಗಲೇ ಹೆಲ್ತ್ ಕೇರ್ ವರ್ಕರ್ಸ್ ಹಾಗೂ ಕೊರೊನಾ ವಾರಿಯರ್ಸ್ ಲಸಿಕೆಯನ್ನು ನೀಡುತ್ತಿದ್ದ ಆರೋಗ್ಯ ಸಿಬ್ಬಂದಿ ದಾವಣಗೆರೆಯಲ್ಲಿ ಲಸಿಕೆ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. ಅಂಥವರಿಗೆ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್ ಲಸಿಕೆಯನ್ನು ಇದುವರೆಗೂ ಹಾಕಿಸಿಕೊಳ್ಳದ ಆರೋಗ್ಯ ಕ್ಷೇತ್ರ ಹಾಗೂ ಕೊರೊನಾ ವಾರಿಯರ್ಸ್ ಲಸಿಕಾ ಕೇಂದ್ರಕ್ಕೆ ತೆರಳಿ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ತಪ್ಪಿದಲ್ಲಿ ಅಂಥವರಿಗೆ ಸರ್ಕಾರದಿಂದ ಯಾವುದೇ ಸೌಲಭ್ಯ ನೀಡಲಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಎಚ್ಚರಿಕೆ ನೀಡಿದ್ದಾರೆ.

mahantesh bilagi
ಮೊದಲ ಹಂತದಲ್ಲಿ ಆರೋಗ್ಯ ಕ್ಷೇತ್ರದವರಿಗೆ ನೀಡಲಾದ ಕೋವಿಡ್ ಲಸಿಕೆ ಕಾರ್ಯಕ್ರಮದಲ್ಲಿ ಜಿಲ್ಲೆಯ 18920 ಫಲಾನುಭವಿಗಳಿಗೆ ಲಸಿಕೆ ನೀಡುವ ಗುರಿ ಬದಲಿಗೆ ಈವರೆಗೆ 9979 ಮಂದಿ ಲಸಿಕೆ ಹಾಕಿಸಿಕೊಂಡಿದ್ದು, ಶೇ.52.7 ಸಾಧನೆಯಾಗಿದೆ. ಎರಡನೇ ಹಂತದಲ್ಲಿ ಪೊಲೀಸ್, ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ನಗರಾಭಿವೃದ್ಧಿ ಇಲಾಖೆ ಅಧಿಕಾರಿ, ಸಿಬ್ಬಂದಿ ಮುಂಚೂಣಿ ಕಾರ್ಯಕರ್ತರೆಂದು ಪರಿಗಣಿಸಿ ಅವರಿಗೆ ಕೋವಿಡ್ ಲಸಿಕೆ ನೀಡಲಾಗುತ್ತದೆ.

ಪೊಲೀಸ್ ಇಲಾಖೆಯ 2076 ಮಂದಿಗೆ ಕೋವಿಡ್ ಲಸಿಕೆ ನೀಡಿಕೆಯ ಗುರಿಯ ಬದಲಿಗೆ, ಕೇವಲ 629 ಮಂದಿ ಮಾತ್ರ ಪಡೆದಿದ್ದಾರೆ. ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ 3413 ಜನರ ಪೈಕಿ 408, ನಗರಾಭಿವೃದ್ಧಿ ಇಲಾಖೆಯ 1644 ಜನರ ಪೈಕಿ 350 ಜನ ಮಾತ್ರ ಪಡೆದಿದ್ದಾರೆ. ಹೀಗಾಗಿ ಕೋವಿಡ್ ಲಸಿಕೆ ಕಾರ್ಯಕ್ರಮದಲ್ಲಿ ಜಿಲ್ಲೆಯ ಸಾಧನೆ ತೃಪ್ತಿಕರವಾಗಿಲ್ಲ. ಜಿಲ್ಲೆಯ ಕಳಪೆ ಸಾಧನೆಯನ್ನು ರಾಜ್ಯ ಆರೋಗ್ಯ ಇಲಾಖೆ ಆಯುಕ್ತರು ಗಂಭೀರವಾಗಿ ಪರಿಗಣಿಸಿದ್ದಾರೆ.

vaccine hyderabad 2

ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು, ಅಲ್ಲದೆ ಆರೋಗ್ಯ ಇಲಾಖೆಯ ಉನ್ನತ ಅಧಿಕಾರಿಗಳು ಖುದ್ದಾಗಿ ಈಗಾಗಲೇ ಕೋವಿಡ್ ಲಸಿಕೆ ಪಡೆದುಕೊಂಡಿದ್ದು, ಯಾರಿಗೂ ಯಾವುದೇ ಅಡ್ಡಪರಿಣಾಮ ಬೀರಿಲ್ಲ. ಕೋವ್ಯಾಕ್ಸಿನ್ ಹಾಗೂ ಕೋವಿಶೀಲ್ಡ್ ಎರಡೂ ಲಸಿಕೆಗಳು ಉತ್ತಮವಾಗಿದ್ದು, ಕೋವಿಡ್ ಲಸಿಕೆ ಕುರಿತಂತೆ ಯಾರೂ ತಪ್ಪು ಕಲ್ಪನೆ ಹೊಂದಬಾರದು. ಪೂರ್ವಾಗ್ರಹ ಪೀಡಿತರಂತೆ ವರ್ತಿಸಬಾರದು. ಅಲ್ಲದೆ ಕೋವಿಡ್ ಲಸಿಕೆ ಪಡೆಯದೇ ಇರುವ ಫಲಾನುಭವಿಗಳು ಒಂದು ವೇಳೆ ಕೋವಿಡ್ ಸೋಂಕಿಗೆ ಒಳಗಾದಲ್ಲಿ, ಅಂಥವರು ತಮ್ಮ ಸ್ವಂತ ಖರ್ಚಿನಿಂದಲೇ ಚಿಕಿತ್ಸಾ ವೆಚ್ಚ ಭರಿಸಬೇಕಾಗುತ್ತದೆ. ಸರ್ಕಾರದಿಂದ ಯಾವುದೇ ಸೌಲಭ್ಯ ನೀಡಲಾಗುವುದಿಲ್ಲ ಎಂಬುದಾಗಿ ಈಗಾಗಲೇ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಹೀಗಾಗಿ ಇದುವರೆಗೂ ಕೋವಿಡ್ ಲಸಿಕೆ ಪಡೆಯದೇ ಇರುವವರು ಕೂಡಲೇ ತಂಡೋಪತಂಡವಾಗಿ ಆಯಾ ಲಸಿಕಾ ಕೇಂದ್ರಕ್ಕೆ ತೆರಳಿ, ಲಸಿಕೆ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಸೂಚನೆ ನೀಡಿದರು.

TAGGED:CovidDistrict Collector mahantesh bilagiPublic TVvaccineಕೋವಿಡ್ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿದಾವಣಗೆರೆಪಬ್ಲಿಕ್ ಟಿವಿ Davangereಲಸಿಕೆ
Share This Article
Facebook Whatsapp Whatsapp Telegram

You Might Also Like

Indian Embassy Israel
Latest

ಇಸ್ರೇಲ್ – ಇರಾನ್ ಸಂಘರ್ಷ | 24×7 ಸಹಾಯವಾಣಿ ಆರಂಭಿಸಿದ ಭಾರತ

Public TV
By Public TV
2 minutes ago
Ahmedabad Air India Plane Crash 4
Latest

Ahmedabad Tragedy | ಮೃತರ ಕುಟುಂಬಗಳಿಗೆ ತಲಾ 25 ಲಕ್ಷ ಮಧ್ಯಂತರ ಪರಿಹಾರ ಘೋಷಿಸಿದ ಏರ್‌ ಇಂಡಿಯಾ

Public TV
By Public TV
2 minutes ago
Tata Group Air India
Latest

ಮೃತ ಪ್ರಯಾಣಿಕರ ಕುಟುಂಬಕ್ಕೆ 1 ಕೋಟಿ ಪರಿಹಾರ: ಟಾಟಾ ಗ್ರೂಪ್‌ ಘೋಷಣೆ

Public TV
By Public TV
25 minutes ago
WTC SA 3
Cricket

ಚೋಕರ್ಸ್‌ ಹಣೆಪಟ್ಟಿ ಕಳಚಿದ ಹರಿಣರು – ದ. ಆಫ್ರಿಕಾಗೆ ವಿಶ್ವ ಟೆಸ್ಟ್‌ ಚಾಂಪಿಯನ್‌ ಕಿರೀಟ, ದಶಕಗಳ ಕನಸು ನನಸು

Public TV
By Public TV
36 minutes ago
M.P Renukacharya
Davanagere

ಜಾತಿಗಣತಿ ವರದಿ ಬಿಡುಗಡೆ ಮಾಡ್ತೀನಿ ಎಂದಿದ್ದ ಸಿಎಂ ಪೌರುಷ ಏನಾಯ್ತು? – ರೇಣುಕಾಚಾರ್ಯ

Public TV
By Public TV
42 minutes ago
Forever Naveen Kumar Kannada Cinema Sandalwood
Cinema

ಸೆಲೆಬ್ರಿಟಿ ವಸ್ತ್ರವಿನ್ಯಾಸಕ ನವೀನ್ ಕುಮಾರ್‌ಗೆ ಅಮೆರಿಕ ಗೌರವ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?