Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಲಾಕ್‍ಡೌನ್, ನೈಟ್ ಕರ್ಫ್ಯೂ ಇಲ್ಲ, ಬಿಗಿ ಕ್ರಮ ಜಾರಿ: ಸಿಎಸ್ ರವಿಕುಮಾರ್

Public TV
Last updated: April 2, 2021 4:20 pm
Public TV
Share
3 Min Read
cs chief secretery ravikumar
SHARE

– ಭೌತಿಕವಾಗಿ ಶಾಲೆ ನಡೆಸದಿರಲು ನಿರ್ಧಾರ
– ಖಾಸಗಿ ಆಸ್ಪತ್ರೆಗಳಲ್ಲಿ ಶೇ.20ರಷ್ಟು ಬೆಡ್ ನಿಗದಿ
– ಬಸ್ ಪ್ರಯಾಣಿಕರ ಸಂಖ್ಯೆಗೂ ಶೀಘ್ರ ಮಿತಿ
– ಕೇಂದ್ರ ಕ್ಯಾಬಿನೆಟ್ ಕಾರ್ಯದರ್ಶಿಗಳ ಜೊತೆ ಸಿಎಸ್ ಸಭೆ

ಬೆಂಗಳೂರು: ರಾಜ್ಯದಲ್ಲಿ ಯಾವುದೇ ರೀತಿಯ ಲಾಕ್‍ಡೌನ್ ಹಾಗೂ ನೈಟ್ ಕರ್ಫ್ಯೂ ವಿಧಿಸುತ್ತಿಲ್ಲ. ಶಾಲೆಗಳನ್ನು ಸಹ ಭೌತಿಕವಾಗಿ ನಡೆಸದಿರಲು ನಿರ್ಧರಿಸಲಾಗಿದೆ. ಲಾಕ್‍ಡೌನ್ ಇಲ್ಲದಿದ್ದರೂ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಸರ್ಕಾರದ ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಸ್ಪಷ್ಟಪಡಿಸಿದ್ದಾರೆ.

ಕೊರೊನಾ ನಿಯಂತ್ರಣ ಸಂಬಂಧ ರಾಜ್ಯಗಳ ಪ್ರಧಾನ ಕಾರ್ಯದರ್ಶಿಗಳೊಂದಿಗೆ ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿಗಳು ಸಭೆ ನಡೆಸಿದ್ದು, ರಾಜ್ಯದ ಪರವಾಗಿ ಸಿಎಸ್ ರವಿಕುಮಾರ್ ಭಾಗಿಯಾದರು. ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಪರಿಸ್ಥಿತಿ ಕುರಿತು ಸಿಎಸ್ ವಿವರಣೆ ನೀಡಿದ್ದು, ಕ್ಯಾಬಿನೆಟ್ ಕಾರ್ಯದರ್ಶಿಗಳ ಸಭೆ ಬಳಿಕ ವಿಕಾಸಸೌಧದಲ್ಲಿ ರಾಜ್ಯದ ಕಾರ್ಯದರ್ಶಿಗಳ ಜೊತೆ ಸಹ ಸಿಎಸ್ ಸಭೆ ನಡೆಸಿದರು. ಡಿಜಿಪಿ ಪ್ರವೀಣ್ ಸೂದ್, ಗೃಹ ಕಾರ್ಯದರ್ಶಿಗಳು ಮತ್ತು ಕೊರೊನಾಗೆ ಸಂಬಂಧಿಸಿದ ಇಲಾಖೆಗಳ ಪ್ರಧಾನ ಕಾರ್ಯದರ್ಶಿಗಳು ಭಾಗಿಯಾಗಿದ್ದರು.

CORONA VIRUS 2

ಬಳಿಕ ಸಿಎಸ್ ರವಿಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದು, ಕೊರೊನಾ ಹೆಚ್ಚಳದ ಬಗ್ಗೆ ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿಗಳು ಆತಂಕ ವ್ಯಕ್ತಪಡಿಸಿದ್ದಾರೆ. ಮಹಾರಾಷ್ಟ್ರ, ಪಂಜಾಬ್‍ನಲ್ಲಿ ಸಾವಿನ ಸಂಖ್ಯೆ ಹೆಚ್ಚುತ್ತಿದ್ದು, ಸೋಂಕು ತಡೆಗೆ ನಿಗಾ ವಹಿಸಿ, ಲಸಿಕೆ ಹೆಚ್ಚಳಕ್ಕೆ ಸೂಚಿಸಿದ್ದಾರೆ. ಅಲ್ಲದೆ ಲಾಕ್‍ಡೌನ್, ನೈಟ್ ಕರ್ಫ್ಯೂ ಬಗ್ಗೆ ಯೋಚಿಸಬೇಡಿ. ಆದರೆ ನಿಯಮಗಳ ಬಿಗಿ ಪಾಲನೆಗೆ ಸೂಚಿಸಿದರು ಎಂದು ತಿಳಿಸಿದ್ದಾರೆ ಎಂದರು.

ಜನ ಹೆಚ್ಚು ಇರುವ ಕಡೆ ಲಸಿಕೆ ಹಾಕಲು ನಿರ್ಧರಿಸಿದ್ದು, ಕೈಗಾರಿಕೆ, ಐಟಿ ಸಂಸ್ಥೆಗಳಿಗೆ ಹೋಗಿ ಲಸಿಕೆ ಹಾಕಿಸಲು ಕ್ರಮ ವಹಿಸಲಾಗಿದೆ. ಈಗಾಗಲೇ ಜಾತ್ರೆ, ಧಾರ್ಮಿಕ ಉತ್ಸವಗಳನ್ನು ನಿಯಂತ್ರಿಸಿದ್ದೇವೆ. ಶಾಲೆಗಳನ್ನು ಭೌತಿಕವಾಗಿ ನಡೆಸೋದು ಬೇಡ ಎಂದೂ ನಿರ್ಧರಿಸಲಾಗಿದೆ. ಈಗಾಗಲೇ 6-9 ತರಗತಿಗಳನ್ನು ಹದಿನೈದು ದಿನ ಬಂದ್ ಮಾಡಲಾಗಿದೆ ಎಂದರು.

ಬೆಂಗಳೂರು, ಮೈಸೂರು, ಕಲಬುರ್ಗಿ, ಬೀದರ್ ಸೇರಿ ಹಲವು ಕಡೆ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚುತ್ತಿದ್ದು, ಖಾಸಗಿ ಆಸ್ಪತ್ರೆಗಳಲ್ಲಿ ಶೇ.20ರಷ್ಟು ಬೆಡ್ ನಿಗದಿ ಮಾಡಲು ನಿರ್ಧರಿಸಲಾಗಿದೆ. ಮಾಸ್ಕ್, ಸಾಮಾಜಿಕ ಅಂತರ, ನಿಯಮಗಳ ಬಿಗಿ ಪಾಲನೆಗೆ ಸೂಚಿಸಿದ್ದಾರೆ. ಅಲ್ಲದೆ ಲಸಿಕೆ ಹೆಚ್ಚಿಸಲು ಸೂಚನೆ ನೀಡಿದ್ದು, ಲಸಿಕೆ ಹಾಕಿಸಿಕೊಳ್ಳಲು ಈಗ ಹೆಚ್ಚು ಜನ ಬರುತ್ತಿಲ್ಲ. ನಾವೇ ಮನೆ ಬಾಗಿಲಿಗೆ ಹೋಗಿ ಲಸಿಕೆ ಹಾಕುವ ಸ್ಥಿತಿ ಇದೆ. ಹೀಗಾಗಿ ಹೆಚ್ಚು ಜನ ಇರುವ ಕಡೆ ಲಸಿಕೆ ಹಾಕಲು ಕ್ರಮ ತೆಗೆದುಕೊಳ್ಳುತ್ತೇವೆ.

corona vaccine 1 medium

ಕೇಂದ್ರಕ್ಕೆ ವಾಸ್ತವ ಸ್ಥಿತಿ ವರದಿ
ರಾಜ್ಯದಿಂದ ಕೇಂದ್ರಕ್ಕೆ ಕೊರೊನಾ ವಾಸ್ತವ ಸ್ಥಿತಿ ವರದಿಯನ್ನು ಸಲ್ಲಿಸಲಾಗಿದ್ದು, ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾಗೆ ಸಿಎಸ್ ರವಿಕುಮಾರ್ ಮಾಹಿತಿ ನೀಡಿದ್ದಾರೆ. ಕೊರೊನಾ ಪೀಡಿತರ ಸಂಖ್ಯೆ, ಗುಣಮುಖರಾಗುವ ರೋಗಿಗಳ ಸರಾಸರಿ ವಿವರ ಸಲ್ಲಿಕೆಯಾಗಿದೆ. ನೆರೆಯ ಮಹಾರಾಷ್ಟ್ರಕ್ಕೆ ಹೋಲಿಸಿದರೆ ಕರ್ನಾಟಕದ ಸ್ಥಿತಿ ಉತ್ತಮವಾಗಿದೆ. ವಾಣಿಜ್ಯ ಚಟುವಟಿಕೆಗಳನ್ನು ರಾಜ್ಯದಲ್ಲಿ ನಿಯಂತ್ರಿಸುವ ಅಗತ್ಯ ಇಲ್ಲ ಎಂದು ಕೇಂದ್ರಕ್ಕೆ ಸಲ್ಲಿಸಿದ ವರದಿಯಲ್ಲಿ ತಿಳಿಸಿದ್ದಾರೆ.

ಜನಸಂದಣಿಗೆ ಬ್ರೇಕ್ ಹಾಕಲೇಬೇಕಾದ ಅಗತ್ಯವಿದೆ. ಕೊರೊನಾ ನಿಯಂತ್ರಣಕ್ಕೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಧಾರ್ಮಿಕ ಆಚರಣೆಗಳನ್ನು ಸಂಪ್ರದಾಯಕ್ಕಷ್ಟೇ ಸೀಮಿತಗೊಳಿಸಿ ಆಚರಿಸಬೇಕಿದೆ. ಬೇರೆ ವಲಯಗಳ ನೌಕರರಿಗೆ ಡ್ಯೂಟಿ ಪಾಳಿಗಳನ್ನು ಸಹ ಗಮನಿಸಬೇಕಿದೆ ಎಂದು ವರದಿಯಲ್ಲಿ ಹೇಳಿದ್ದಾರೆ.

ಸಮೂಹ ಸಾರಿಗೆಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆಗೂ ಮಿತಿ ಹಾಕಬೇಕಿದ್ದು, ರಾಜ್ಯದಲ್ಲಿ ಇನ್ನಷ್ಟು ಕಠಿಣ ಕ್ರಮಗಳ ಅಗತ್ಯವಿದೆ. ಲಸಿಕೆ ಅಭಿಯಾನವನ್ನು ಇನ್ನೂ ಚುರುಕುಗೊಳಿಸಬೇಕು. ಲಸಿಕೆ ಹಾಕಿಸಿಕೊಳ್ಳುವಲ್ಲಿ ರಾಜ್ಯ ಸರ್ಕಾರ ಎಲ್ಲ ಜಾಗೃತಿ ಕ್ರಮಗಳನ್ನು ಕೈಗೊಂಡಿದೆ ಎಂದು ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿಗೆ ಸಿಎಸ್ ರವಿಕುಮಾರ್ ವಿವರಿಸಿದ್ದಾರೆ.

TAGGED:Cabinet SecretariesChief SecretaryCorona VirusCS RavikumarPublic TVಕೊರೊನಾ ವೈರಸ್ಕ್ಯಾಬಿನೆಟ್ ಕಾರ್ಯದರ್ಶಿಗಳುಪಬ್ಲಿಕ್ ಟಿವಿಪ್ರಧಾನ ಕಾರ್ಯದರ್ಶಿಮುಂಜಾಗೃತಾ ಕ್ರಮಸಿ.ಎಸ್.ರವಿಕುಮಾರ್
Share This Article
Facebook Whatsapp Whatsapp Telegram

Cinema Updates

Darshan Bengaluru Airport
ಥೈಲ್ಯಾಂಡ್‌ನಲ್ಲಿ ಶೂಟಿಂಗ್‌ ಮುಗಿಸಿ ಬೆಂಗಳೂರಿಗೆ ನಟ ದರ್ಶನ್ ವಾಪಸ್
Bengaluru City Cinema Latest Main Post Sandalwood
SAROJADEVI
ಸರೋಜಾದೇವಿ ವೈಕುಂಠ ಸಮಾರಾಧನೆ – ಭಾಗಿಯಾದ ಸೆಲೆಬ್ರೆಟಿಗಳು
Cinema Karnataka Latest Sandalwood Top Stories
Toxic movie
ಮತ್ತೆ ಟಾಕ್ಸಿಕ್ ಅಖಾಡಕ್ಕೆ ರಾಕಿಭಾಯ್
Cinema Latest Sandalwood Top Stories
Om Saiprakash
ಬಿಡುಗಡೆಗೂ ಮುನ್ನ ಓಂ ಸಾಯಿಪ್ರಕಾಶ್ ಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
Cinema Latest Sandalwood Top Stories
Bharjari Bachelors Zee Kannada 2
ಫಿನಾಲೆ ತಲುಪಿದ ಭರ್ಜರಿ ಬ್ಯಾಚುಲರ್ಸ್- ಗೆಲುವಿಗಾಗಿ ಸುನಿಲ್, ರಕ್ಷಕ್ ಬುಲೆಟ್ ಪೈಪೋಟಿ
Cinema Latest Sandalwood Top Stories

You Might Also Like

Udit Raj Rahul Gandhi
Latest

ರಾಹುಲ್ ಗಾಂಧಿ ಒಬಿಸಿಗಳ ಪಾಲಿನ 2ನೇ ಅಂಬೇಡ್ಕರ್ – `ಕೈʼ ಮುಖಂಡ ಉದಿತ್ ರಾಜ್ ಬಣ್ಣನೆ

Public TV
By Public TV
2 minutes ago
Siddaramaiah 9
Districts

ನಾವು ಬಿಜೆಪಿಯವರಿಗಿಂತ ಜಾಸ್ತಿ ಕೆಲಸ ಮಾಡಿದ್ದೇವೆ – ಪುತ್ರನ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

Public TV
By Public TV
37 minutes ago
Siddaramaiah 11
Districts

ಸಚಿವ ಸ್ಥಾನಕ್ಕೆ ಆಗ್ರಹ – ಶಿವಲಿಂಗೇಗೌಡ ಬೆಂಬಲಿಗರ ವಿರುದ್ಧ ವೇದಿಕೆಯಲ್ಲೇ ಸಿಎಂ ಗರಂ

Public TV
By Public TV
42 minutes ago
Begur PSI Assault 1
Bengaluru City

Bengaluru | ಪಿಎಸ್‌ಐ ಹೊಡೆತಕ್ಕೆ ಶಾಶ್ವತ ಕಿವುಡನಾದ ವ್ಯಕ್ತಿ

Public TV
By Public TV
51 minutes ago
DCM Special Officer H Anjaneya
Karnataka

ಅಶ್ಲೀಲ ಪದ ಬಳಸಿ ದೌರ್ಜನ್ಯ ಆರೋಪ – ಡಿಸಿಎಂ ವಿಶೇಷ ಕರ್ತವ್ಯಾಧಿಕಾರಿ ವಿರುದ್ಧ ಮಹಿಳಾ ಆಯೋಗಕ್ಕೆ ದೂರು

Public TV
By Public TV
58 minutes ago
Pratap Simha 1
Districts

ಸಿದ್ದರಾಮಯ್ಯ 10 ವರ್ಷ ಸಿಎಂ ಆಗ್ಬಿಟ್ರೆ ತಾಯಿ ಚಾಮುಂಡಿಗಿಂತ ದೊಡ್ಡವರಾಗಿಬಿಡ್ತಾರೆ: ಪ್ರತಾಪ್‌ ಸಿಂಹ ಕಿಡಿ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?