Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಾಕ್‍ಡೌನ್ ಪೂರ್ಣಗೊಂಡ ತಕ್ಷಣ ಶಿಕ್ಷಕರ ಹಾಜರಿಗೆ ಸೂಚನೆ: ಸುರೇಶ್ ಕುಮಾರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಲಾಕ್‍ಡೌನ್ ಪೂರ್ಣಗೊಂಡ ತಕ್ಷಣ ಶಿಕ್ಷಕರ ಹಾಜರಿಗೆ ಸೂಚನೆ: ಸುರೇಶ್ ಕುಮಾರ್

Bengaluru City

ಲಾಕ್‍ಡೌನ್ ಪೂರ್ಣಗೊಂಡ ತಕ್ಷಣ ಶಿಕ್ಷಕರ ಹಾಜರಿಗೆ ಸೂಚನೆ: ಸುರೇಶ್ ಕುಮಾರ್

Public TV
Last updated: June 14, 2021 4:45 pm
Public TV
Share
3 Min Read
Suresh Kumar Meeting 1
SHARE

ಬೆಂಗಳೂರು : ಶಾಲಾರಂಭದ ಕುರಿತು ಈಗಾಗಲೇ ಮಾರ್ಗದರ್ಶಿ ಸೂತ್ರಗಳನ್ನು ಹೊರಡಿಸಲಾಗಿದೆಯಾದರೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಲಾಕ್‍ಡೌನ್ ಜಾರಿಯಲ್ಲಿದ್ದು, ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗಿರುವುದರಿಂದ ಶಿಕ್ಷಕರು ಲಾಕ್‍ಡೌನ್ ತೆರವಾದ ದಿನದಿಂದಲೇ ಶಾಲೆಗಳಿಗೆ ಭೌತಿಕವಾಗಿ ಹಾಜರಾಗಲು ಅವಕಾಶ ನೀಡಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.

ಸೋಮವಾರ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳ ಸಭೆಯಲ್ಲಿ ಮಂಗಳವಾರದಿಂದ ಶಾಲೆಗಳಿಗೆ ಶಿಕ್ಷಕರು ಹಾಜರಾಗಿ ಮಕ್ಕಳ ನೋಂದಣಿ ಪ್ರಾರಂಭಿಸಬೇಕಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಯಲ್ಲಿರುವುದರಿಂದ ಶಿಕ್ಷಕರ ಚಲನವಲನಕ್ಕೆ ತೊಂದರೆಯಾಗಿರುವ ಹಿನ್ನೆಲೆಯಲ್ಲಿ ಲಾಕ್‍ಡೌನ್ ಪೂರ್ಣಗೊಂಡ ನಂತರ ಶಿಕ್ಷಕರು ಶಾಲೆಗಳಿಗೆ ಹಾಜರಾಗುವಂತೆ ಸುತ್ತೋಲೆ ಹೊರಡಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.

Suresh Kumar Meeting 2 medium

ಮೊದಲ ಪಿಯು ಮೌಲ್ಯಾಂಕನ ಅವಧಿ ವಿಸ್ತರಣೆ
ಹಲವು ಉಪನ್ಯಾಸಕ ಸಂಘಟನೆಗಳ ಕೋರಿಕೆಯ ಮೇರೆಗೆ ಮೊದಲ ಪಿ.ಯು.ಸಿ. ಮೌಲ್ಯಾಂಕನ ಪ್ರಕ್ರಿಯೆಯನ್ನು ಎಲ್ಲ ಜಿಲ್ಲೆಗಳ ಲಾಕ್‍ಡೌನ್ ಅವಧಿ ಪೂರ್ಣಗೊಳ್ಳುವವರೆಗೆ ಸಮಯ ವಿಸ್ತರಿಸಿ ಆದೇಶವನ್ನು ಹೊರಡಿಸಲಾಗುತ್ತದೆ ಎಂದು ಸಹ ಸಚಿವರು ಹೇಳಿದ್ದಾರೆ. ಈ ಕುರಿತಂತೆ ಪದವಿಪೂರ್ವ ಶಿಕ್ಷಕರಿಗೆ ಸೂಚನೆ ನೀಡಲಾಗಿದ್ದು, ಸದ್ಯದಲ್ಲಿಯೇ ಅವರು ಕ್ರಮ ಜರುಗಿಸಲಿದ್ದಾರೆ ಎಂದು ಅವರು ಹೇಳಿದರು.

ಚೈಲ್ಡ್ ಪ್ರೊಫೈಲ್ ನಿಯಮಿತ ದಾಖಲೆ:
ಈ ಬಾರಿ ನಿಗದಿತ ಅವಧಿಯ ಮೌಲ್ಯಮಾಪನ ಪ್ರಕ್ರಿಯೆಯನ್ನು ಹೆಚ್ಚು ಸಮರ್ಥವಾಗಿ ಜಾರಿಯಲ್ಲಿಡುವ ಅವಶ್ಯಕತೆ ಇದೆ. ಪ್ರತಿ ಸೂಚಿತ ಅವಧಿಗೆ ವಿದ್ಯಾರ್ಥಿಗಳ ಚೈಲ್ಡ್ ಪ್ರೊಫೈಲ್ ಗಳನ್ನು ನಿಯಮಿತವಾಗಿ ದಾಖಲಿಸುವ, ಕಲಿಕಾ ಸಾಮಥ್ರ್ಯಗಳನ್ನು ಅಳೆಯುವ ಮಾನದಂಡಗಳಾಗಿ ರೂಪಿಸುವ ಸದೃಢ ವ್ಯವಸ್ಥೆಯನ್ನು ಜಾರಿಯಲ್ಲಿಡುವ ವ್ಯವಸ್ಥೆ ರೂಪಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಕೌನ್ಸಿಲಿಂಗ್ ಅತ್ಯವಶ್ಯಕವಾಗಿದ್ದು, ಇಂಥಹ ಸಂದರ್ಭದಲ್ಲಿ ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಿಯಾ ಯೋಜನೆಯನ್ನು ಸಿದ್ಧಪಡಿಸಿ ಮಂಡಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

Suresh Kumar Meeting 3 medium

ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ
ಈ ಬಾರಿಯ ಎರಡು ದಿನಗಳ ಎಸ್.ಎಸ್.ಎಲ್.ಸಿ. ಪರೀಕ್ಷೆ ನಿರ್ವಹಣೆ ಕುರಿತಂತೆ ಜೂ. 28 ರಂದು ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ವಿಡಿಯೋ ಸಂವಾದ ಸಭೆ ನಡೆಯಲಿದ್ದು, ಸಭೆಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಇಲಾಖೆಯ ಆಯುಕ್ತರನ್ನು ಸುರಕ್ಷತಾ ವಾತಾವರಣದಲ್ಲಿ ಪರೀಕ್ಷೆ ನಡೆಸುವ ಕ್ರಮಗಳ ಕುರಿತು ವಿಸ್ತ್ರತ ಚರ್ಚೆ ನಡೆಸಿ ಮಾರ್ಗದರ್ಶನ ನೀಡಲಾಗುವುದು ಎಂದು ಸುರೇಶ್ ಕುಮಾರ್ ತಿಳಿಸಿದರು.

ಕೊಠಡಿ ಮೇಲ್ವಿಚಾರಕ ಶಿಕ್ಷಕರಿಗೆ ಕೋವಿಡ್ ಲಸಿಕೆ
ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ಕೊಠಡಿ ಮೇಲ್ವಿಚಾರಕರುಗಳಿಗೆ ಕೋವಿಡ್ – 19ರ ಲಸಿಕೆಯನ್ನು ನೀಡುವ ಪ್ರಕ್ರಿಯೆಯನ್ನು ಪರೀಕ್ಷೆಗೆ ಮುನ್ನ ಪೂರ್ಣಗೊಳಿಸುವಲ್ಲಿ ಜಿಲ್ಲಾಡಳಿತದೊಂದಿಗೆ ಸಮನ್ವಯತೆ ಸಾಧಿಸಿ ಕ್ರಮ ವಹಿಸಬೇಕೆಂದೂ ಸೂಚಿಸಲಾಗಿದೆ ಎಂದೂ ಸಚಿವರು ಹೇಳಿದರು.

schools coronavirus 1590998858 1591973086 1602736488

ಶಿಕ್ಷಕರ ವರ್ಗಾವಣಾ ವೇಳಾಪಟ್ಟಿ ಶೀಘ್ರದಲ್ಲೇ ಪ್ರಕಟ
ಶಿಕ್ಷಕರ ವರ್ಗಾವಣಾ ಪ್ರಕ್ರಿಯೆಯ ಕುರಿತಂತೆ ನಿಯಮಗಳ ಆಕ್ಷೇಪಣಾ ಸಲ್ಲಿಕೆ ಅವಧಿ ಪೂರ್ಣಗೊಳ್ಳುತಿರುವ ಹಿನ್ನೆಲೆಯಲ್ಲಿ ಕೂಡಲೇ ಸರ್ಕಾರದ ಅಧಿಸೂಚನೆಯನ್ನು ಹೊರಡಿಸಿ ಸಾಧ್ಯವಾದಷ್ಟು ಶೀಘ್ರವೇ ವರ್ಗಾವಣಾ ಪ್ರಕ್ರಿಯೆ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ ಎಂದು ಸಚಿವರು ಹೇಳಿದರು. ಯಾವುದೇ ಅಡೆತಡೆಗಳು ಬಾರದ ರೀತಿಯಲ್ಲಿ ತಂತ್ರಜ್ಞಾನಾಧಾರಿತ ವರ್ಗಾವಣಾ ಪ್ರಕ್ರಿಯೆ ನಡೆಸಬೇಕೆಂದು ಸೂಚಿಸಲಾಗಿದೆಯೆಂದರು.

ಪ್ಯಾಕೇಜ್ ಪರಿಹಾರ ನೇರ ಶಿಕ್ಷಕರ ಖಾತೆಗೆ
ಖಾಸಗಿ ಖಾಸಗಿ ಶಾಲಾ ಶಿಕ್ಷಕರಿಗೆ ಮುಖ್ಯಮಂತ್ರಿಗಳು ಘೋಷಿಸಿರುವ ಪ್ಯಾಕೇಜ್ ಪರಿಹಾರವನ್ನು ಕ್ಲಪ್ತ ಸಮಯದಲ್ಲಿ ಫಲಾನುಭವಿಗಳಿಗೆ ನೇರವಾಗಿ ವಿತರಿಸುವ ಪ್ರಕ್ರಿಯೆಯನ್ನು ಕ್ಷಿಪ್ರಗೊಳಿಸಬೇಕೆಂದೂ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಶಿಕ್ಷಕರ, ಶಿಕ್ಷಕೇತರರ ಹಾಗೂ ಅತಿಥಿ ಶಿಕ್ಷಕರ ಬ್ಯಾಂಕ್‍ಖಾತೆಗಳ ವಿವರಗಳನ್ನು ಶೀಘ್ರ ಸಂಗ್ರಹಿಸಿ ಅನುದಾನವನ್ನು ನೇರ ಶಿಕ್ಷಕರ ಖಾತೆಗಳಿಗೆ ವರ್ಗಾಯಿಸಬೇಕು. ಅತ್ಯಂತ ಸಮರ್ಪಕವಾಗಿ ಈ ಪ್ರಕ್ರಿಯೆ ನಿರ್ವಹಣೆಯಾಗಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು.

dvg schools shoe 1 medium

ಸಭೆಯಲ್ಲಿ ಶಿಕ್ಷಣ ಇಲಾಖೆಯ ಪ್ರಧಾನಕಾರ್ಯದರ್ಶಿಎಸ್.ಆರ್.ಉಮಾಶಂಕರ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್, ಪದವಿಪೂರ್ವ ಶಿಕ್ಷಣ ನಿರ್ದೇಶಕಿ ಸ್ನೇಹಲ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

TAGGED:Corona VirusDepartment of EducationLockdownPublic TVsuresh kumarteachersಕೊರೊನಾ ವೈರಸ್ಪಬ್ಲಿಕ್ ಟಿವಿಲಾಕ್‍ಡೌನ್ಶಿಕ್ಷಕರುಶಿಕ್ಷಣ ಇಲಾಖೆಸುರೇಶ್ ಕುಮಾರ್
Share This Article
Facebook Whatsapp Whatsapp Telegram

Cinema news

Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National
Ranya Rao
ಇಂದಿಗೆ ಕಾಫಿಫೋಸಾ ಅವಧಿ ಅಂತ್ಯ – ಜೈಲಿನಿಂದ ರನ್ಯಾರಾವ್‌ ಬಿಡುಗಡೆ
Cinema Crime Karnataka Latest Main Post
ranya rao 2 1
ಗೋಲ್ಡ್ ಸ್ಮಗ್ಲಿಂಗ್ ಕೇಸ್ – ಇಂದು ರನ್ಯಾ ರಾವ್ ಜೈಲಿನಿಂದ ರಿಲೀಸ್
Bengaluru City Cinema Districts Karnataka Latest Top Stories
Duniya Vijay 1
ಝಾಂಬಿ ಡ್ರಗ್ಸ್ ಕೇಸಲ್ಲಿ ನಟ ದುನಿಯಾ ವಿಜಯ್‌ಗೆ ಸಂಕಷ್ಟ – ಡಿಲೀಟ್ ವಿಡಿಯೋ ರಿಟ್ರೀವ್‌ಗಾಗಿ ಇನ್‌ಸ್ಟಾಗೆ ಪೊಲೀಸರ ಪತ್ರ
Bengaluru City Cinema Districts Karnataka Latest Sandalwood Top Stories

You Might Also Like

West Bengal Election Voting
Latest

ಪಶ್ಚಿಮ ಬಂಗಾಳದಲ್ಲಿ 89.93%, ತಮಿಳುನಾಡಿನಲ್ಲಿ 82.24% ಮತದಾನ

Public TV
By Public TV
20 minutes ago
tirupati father kills wife and mother dies by suicide with children
Crime

ಪತ್ನಿ, ತಾಯಿಯನ್ನು ಕೊಂದು ಮಕ್ಕಳೊಂದಿಗೆ ರೈಲಿಗೆ ತಲೆ ಕೊಟ್ಟ ವ್ಯಕ್ತಿ

Public TV
By Public TV
35 minutes ago
Wild elephant attacks three ETF staff in Hassan Beluru
Districts

ಮೂವರು ಇಟಿಎಫ್‌ ಸಿಬ್ಬಂದಿ ಮೇಲೆ ಕಾಡಾನೆ ದಾಳಿ – ಗಾರ್ಡ್‌ ಸ್ಥಿತಿ ಗಂಭೀರ

Public TV
By Public TV
2 hours ago
Donald Trump Angry
Latest

ಭಾರತ, ಚೀನಾ ನರಕದ ಕೂಪಗಳು| ಲ್ಯಾಪ್‌ಟಾಪ್ ಹೊಂದಿರುವ ದರೋಡೆಕೋರರು: ಟ್ರಂಪ್‌ ಕೆಂಡಾಮಂಡಲ

Public TV
By Public TV
2 hours ago
Arvind Kejriwal 4
Court

ಕೋರ್ಟ್‌ ವಿಚಾರಣೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಶೇರ್‌ – ಅರವಿಂದ್ ಕೇಜ್ರಿವಾಲ್‌ಗೆ ನೋಟಿಸ್

Public TV
By Public TV
2 hours ago
PETROL
Latest

ಪೆಟ್ರೋಲ್, ಡೀಸೆಲ್ ದರ ಏರಿಕೆಯ ಚಿಂತನೆ ಇಲ್ಲ – ವದಂತಿಗಳಿಗೆ ಬ್ರೇಕ್ ಹಾಕಿದ ಕೇಂದ್ರ ಸರ್ಕಾರ

Public TV
By Public TV
2 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?