Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಲಾಕ್‍ಡೌನ್ ಬೇಡ, ಸಮಸ್ಯೆಗೆ ಅದೇ ಪರಿಹಾರವಲ್ಲ: ಅಶ್ವಥ್ ನಾರಾಯಣ್

Public TV
Last updated: April 14, 2021 5:21 pm
Public TV
Share
3 Min Read
ashwathnarayan 5
SHARE

– ರೋಗ ಲಕ್ಷಣಗಳಿದ್ದರೆ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಿ
– ತಪ್ಪದೇ ಲಸಿಕೆ ಹಾಕಿಸಿಕೊಳ್ಳಿ ಅಂತ ಮನವಿ

ಬೆಂಗಳೂರು: ಮತ್ತೆ ಲಾಕ್‍ಡೌನ್ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ. ಈಗಿನ ಸಂದರ್ಭಕ್ಕೆ ಅದು ಸರಿ ಹೊಂದುವುದೂ ಇಲ್ಲ. ಹೊರಗಿನಿಂದ ಬೆಂಗಳೂರಿಗೆ ಬರುತ್ತಿರುವ ಪ್ರತಿಯೊಬ್ಬರೂ ಕೋವಿಡ್ ತಪಾಸಣೆಗೆ ಒಳಗಾಗಬೇಕು ಎಂದು ಉಪಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ್ ಹೇಳಿದರು.

SMG 1 lockdown

ಬೆಂಗಳೂರಿನಲ್ಲಿ ಬುಧವಾರ ಬಿಜೆಪಿ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಡಾ.ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂದರ್ಭದಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ವೈಯಕ್ತಿಕವಾಗಿ ಲಾಕ್‍ಡೌನ್ ಬೇಡ ಅಂತಲೇ ಹೇಳುತ್ತೇನೆ. ಸಮಾಜದಲ್ಲಿ ಯಾರೊಬ್ಬರಿಗೂ ಲಾಕ್‍ಡೌನ್ ತಡೆದುಕೊಳ್ಳುವ ಶಕ್ತಿ ಇಲ್ಲ. ಜೀವ ಉಳಿಯುವುದರ ಜೊತೆಗೆ ಜೀವನವೂ ನಡೆಯಬೇಕು. ಕಳೆದ ಒಂದು ವರ್ಷದಿಂದ ಜನರು ಸಾಕಷ್ಟು ಕಷ್ಟ ಅನುಭವಿಸಿದ್ದಾರೆ. ಮತ್ತೆ ಸಂಕಷ್ಟಕ್ಕೆ ಸಿಲುಕುವುದು ಬೇಡ ಎಂದರು.

ಎಲ್ಲ ಕಡೆ ಕೋವಿಡ್ ಉಚಿತ ತಪಾಸಣೆ ನಡೆಯುತ್ತಿದೆ. ಒಂದು ನಯಾಪೈಸೆಯನ್ನೂ ಖರ್ಚು ಮಾಡಬೇಕಾಗಿಲ್ಲ. ಹೊರಗಿನಿಂದ ನಗರಕ್ಕೆ ಯಾರಾದರೂ ಬಂದರೆ ಕಡ್ಡಾಯವಾಗಿ ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳಬೇಕು. ಯಾರೂ ಉಪೇಕ್ಷೆ ಮಾಡಬಾರದು. ಕೋವಿಡ್ ಲಕ್ಷಣಗಳೇನಾದರೂ ಕಂಡು ಬಂದರೆ ಅದನ್ನು ಕಡೆಗಣಿಸೋದು ಬೇಡ ಎಂದು ಅವರು ತಿಳಿಸಿದರು.

yediyurappa corona 1 1

ಕೋವಿಡ್ ವಿಷಯದಲ್ಲಿ ಪ್ರತಿಪಕ್ಷಗಳು ರಾಜಕೀಯ ಮಾಡುವ ಬದಲು ಸಂಕಷ್ಟದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದು ಡಿಸಿಎಂ ಕಿವಿಮಾತು ಹೇಳಿದರಲ್ಲದೆ, ಜನರು ಕೂಡ ಕಟ್ಟುನಿಟ್ಟಾಗಿ ಕೋವಿಡ್ ನಿಯಮಗಳನ್ನು ಪಾಲಿಸಬೇಕು. ಆ ಬಗ್ಗೆ ಅಸಡ್ಡೆ ತೋರಿಸುವುದು ಸರಿಯಲ್ಲ ಎಂದು ಎಚ್ಚರಿಕೆ ನೀಡಿದರು.

ಯಾರೂ ಸೂಪರ್‍ಮ್ಯಾನ್ ಅಲ್ಲ: ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಅಂಗನವಾಡಿ ಕೇಂದ್ರಗಳು ಸೇರಿದಂತೆ ಎಲ್ಲ ಕಡೆ ಪರೀಕ್ಷೆಗಳನ್ನು ಮಾಡಲಾಗುತ್ತಿದೆ. ”ನನಗೇನೂ ಆಗಿಲ್ಲ. ನಾನು ಚೆನ್ನಾಗಿದ್ದೇನೆ. ಗಟ್ಟಿಮುಟ್ಟಾಗಿದ್ದೇನೆ ಎಂಬ ಅತಿ ಆತ್ಮವಿಶ್ವಾಸ ಯಾರಿಗೂ ಬೇಡ. ಯಾರೂ ಕೂಡ ಸೂಪರ್‍ಮ್ಯಾನ್ ಅಲ್ಲ. ಇದನ್ನು ಎಲ್ಲರೂ ನೆನಪಲ್ಲಿ ಇಟ್ಟುಕೊಳ್ಳಬೇಕು. ಉಚಿತವಾಗಿ ಸಿಗುತ್ತಿರುವ ಸೌಲಭ್ಯಗಳನ್ನು ಎಲ್ಲರೂ ಬಳಸಿಕೊಳ್ಳಬೇಕು” ಎಂದು ಕಿವಿಮಾತು ಹೇಳಿದರು.

ತಪಾಸಣಾ ಕೇಂದ್ರಗಳನ್ನು ಹೆಚ್ಚಿಸಲಾಗುತ್ತಿದೆ. ಆ ಕೇಂದ್ರಗಳ ಬಗ್ಗೆ ಸಂಪೂರ್ಣ ಮಾಹಿತಿ ನೀಡಲಾಗುತ್ತಿದೆ. ದಿನಕ್ಕೆ ಒಂದು ಲಕ್ಷಕ್ಕಿಂತ ಹೆಚ್ಚು ಜನರಿಗೆ ಉಚಿತವಾಗಿ ಟೆಸ್ಟ್ ಮಾಡಲಾಗುತ್ತಿದೆ. ಯಾರಿಗೇ ಲಕ್ಷಣಗಳು ಇದ್ದರೆ ಅಂಥವರೆಲ್ಲ ತಕ್ಷಣ ಬಂದು ತಪಾಸಣೆ ಮಾಡಿಸಿಕೊಳ್ಳಬೇಕು. ಔಷಧ ಇದೆ, ಲಸಿಕೆಯೂ ಲಭ್ಯವಿದೆ. ಆಸ್ಪತ್ರೆಯಷ್ಟೇ ಅಲ್ಲದೆ ಮನೆಯಲ್ಲೂ ಹೋಮ್ ಐಸೋಲೇಷನ್ ಆಗಿ ಚಿಕಿತ್ಸೆ ಪಡೆಯಬಹುದು ಎಂದು ಡಿಸಿಎಂ ತಿಳಿಸಿದರು.

kumar swamy

ಲಸಿಕೆ ಅಭಿಯಾನ ಉತ್ತಮ: ಲಸಿಕೆ ತಯಾರಿಕೆ ಹಾಗೂ ಲಸಿಕೆ ಅಭಿಯಾನವು ಇಡೀ ಜಗತ್ತಿನಲ್ಲಿಯೇ ನಮ್ಮ ದೇಶದಲ್ಲಿ ಉತ್ತಮವಾಗಿ ನಡೆಯುತ್ತಿದೆ. ಹೆಚ್ಚು ಜನರಿಗೆ ಕ್ಷಿಪ್ರವಾಗಿ ವ್ಯಾಕ್ಷಿನ್ ಕೊಟ್ಟಿರುವ ಏಕೈಕ ದೇಶ ನಮ್ಮದು. ಕೋವಿಡ್ ಎರಡನೇ ಅಲೆಯ ಅಪಾಯದ ತೀವ್ರತೆ ಕಡಿಮೆ. ಆದರೆ, ವೇಗವಾಗಿ ಹರಡುತ್ತಿದೆ. ಯುವಜನರು, ಮಧ್ಯವಯಸ್ಕರಿಗೆ ಹೆಚ್ಚು ಅಪಾಯ ಕಾಣುತ್ತಿದೆ. ಕೆಲವರು ರೋಗ ಲಕ್ಷಣಗಳಿದ್ದರೂ ಸೂಕ್ತ ಪರೀಕ್ಷೆ ಮಾಡಿಸಿಕೊಂಡು ಚಿಕಿತ್ಸೆ ಪಡೆಯುತ್ತಿಲ್ಲ. ಇವರಿಂದಲೇ ಹೆಚ್ಚು ಸಮಸ್ಯೆಯಾಗುತ್ತಿದೆ. ಕೋವಿಡ್ ಟೆಸ್ಟ್ ನೆಗೆಟೀವ್ ಬಂದರೂ ಯಾರೂ ಎಚ್ಚರ ತಪ್ಪಬಾರದು ಎಂದು ಅವರು ಎಚ್ಚರಿಕೆ ನೀಡಿದರು.

ಲಸಿಕೆ ಕೊರತೆ ಇಲ್ಲ: ಕೋವಿಡ್ ಲಸಿಕೆಯನ್ನು ರಫ್ತು ಮಾಡಿದ್ದರಿಂದಲೇ ದೇಶದಲ್ಲಿ ಕೊರತೆ ಉಂಟಾಗಲು ಕಾರಣ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮಾಡಿರುವ ಆರೋಪವನ್ನು ಅಶ್ವಥ್ ನಾರಾಯಣ್ ತಳ್ಳಿಹಾಕಿದ್ದು, ಕುಮಾರಸ್ವಾಮಿ ಅವರು ಸರಿಯಾದ ಮಾಹಿತಿ ಇಲ್ಲದೆ ಆಧಾರ ರಹಿತ ಆರೋಪ ಮಾಡಿದ್ದಾರೆ. ರಾಜ್ಯದಲ್ಲಿ ಲಸಿಕೆ ಕೊರತೆ ಇಲ್ಲ. ಸಕಾಲಕ್ಕೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಮುಗ್ಧ ಜನರಿಗೆ ತಪ್ಪು ಮಾಹಿತಿ ಕೊಟ್ಟು ದಾರಿ ತಪ್ಪಿಸೋದು ಬೇಡ. ದೊಡ್ಡ ಸ್ಥಾನದಲ್ಲಿದ್ದವರು, ರಾಜ್ಯದ ಜವಾಬ್ದಾರಿ ಹೊತ್ತಿದ್ದವರು ಇಂಥ ಹೇಳಿಕೆಗಳನ್ನು ಕೊಡುವುದು ಸರಿಯಲ್ಲ ಎಂದರು.

DK SHIVAKUMAR

ಕೋವಿಡ್ ವಿಷಯದಲ್ಲಿ ಸರ್ಕಾರ ಪ್ರತಿಪಕ್ಷಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ಮಾಡುತ್ತಿದೆ. ಇಂಥ ಸಂಕಷ್ಟದ ಸಮಯದಲ್ಲಿ ಅವರನ್ನು ಕಡೆಗಣಿಸುವ ಪ್ರಶ್ನೆಯೇ ಇಲ್ಲ. ಮುಖ್ಯಮಂತ್ರಿ ಯಡಿಯೂರಪ್ಪ ಅವರು ಕಾಲ ಕಾಲಕ್ಕೆ ಅವರ ಸಲಹೆಗಳನ್ನು ಪಡೆದಿದ್ದಾರೆ. ಆದರೆ ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಾಡಿರುವ ಆರೋಪ ಸುಳ್ಳು. ಅವರು ಪೂರ್ವಗ್ರಹಪೀಡಿತರಾಗಿ ದೂರುತ್ತಿದ್ದಾರೆ. ಪ್ರತಿಯೊಂದರಲ್ಲೂ ತಪ್ಪು ಹುಡುಕುವ ಅವರು, ಸಮಸ್ಯೆಗೆ ಪರಿಹಾರ ಹೇಳುವ ಕೆಲಸ ಮಾಡಿಲ್ಲ ಎಂದು ಆರೋಪಿಸಿದರು.

TAGGED:Ashwath NarayanCoronaCorona VaccineCovid 19d k shivakumarKumaraswamyPublic TVyeddyurappaಅಶ್ವತ್ಥನಾರಾಯಣಕುಮಾರಸ್ವಾಮಿಕೊರೊನಾಕೋವಿಡ್ 19ಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಯಡಿಯೂರಪ್ಪಲಸಿಕೆ
Share This Article
Facebook Whatsapp Whatsapp Telegram

Cinema Updates

rakshak bullet
ಸತ್ಯ ಒಪ್ಪಿಕೊಂಡ ರಕ್ಷಕ್: ಆಡಿಯೋ ವೈರಲ್ ಬಗ್ಗೆ ಹೇಳಿದ್ದೇನು?
Bengaluru City Cinema Districts Latest Top Stories
ramya 5 2
ನಿಮ್ಮಿಂದಲೇ ಹೆಣ್ಮಕ್ಕಳಿಗೆ ದೌರ್ಜನ್ಯ – ದರ್ಶನ್‌ ಫ್ಯಾನ್ಸ್‌ ವಿರುದ್ಧ ರಮ್ಯಾ ಕೆಂಡಾಮಂಡಲ
Bengaluru City Cinema Latest Main Post
Rashmika Mandannas New Film Mysaa Launched with a Traditional Pooja Muhurta program 2
ರಶ್ಮಿಕಾ ಮಂದಣ್ಣ ನಟನೆಯ ಮೈಸಾ ಚಿತ್ರಕ್ಕೆ ಮುಹೂರ್ತ- ಗೋಂಡ್ ಹಾಡಿಗೆ ಡಾನ್ಸ್
Cinema Latest South cinema
Darshan The Devil
ʼದಿ ಡೆವಿಲ್ʼ ಶೂಟಿಂಗ್ ಮುಕ್ತಾಯ : ಪೋಸ್ಟ್ ಪ್ರೊಡಕ್ಷನ್ ವರ್ಕ್ ಶುರು
Cinema Latest Sandalwood Top Stories
just married
ಶೈನ್ ಶೆಟ್ಟಿಯ ಜಸ್ಟ್ ಮ್ಯಾರೀಡ್‌ಗೆ ಡೇಟ್ ಫಿಕ್ಸ್
Cinema Latest Sandalwood Top Stories

You Might Also Like

01 12
Big Bulletin

ಬಿಗ್‌ ಬುಲೆಟಿನ್‌ 27 July 2025 ಭಾಗ-1

Public TV
By Public TV
7 hours ago
02 14
Big Bulletin

ಬಿಗ್‌ ಬುಲೆಟಿನ್‌ 27 July 2025 ಭಾಗ-2

Public TV
By Public TV
7 hours ago
IND vs ENG 4th test Ben Stokes offers a draw India denies and continues to bat
Cricket

ಬೆನ್‌ ಸ್ಟೋಕ್ಸ್‌ ಡ್ರಾ ಆಫರ್‌ ರಿಜೆಕ್ಟ್‌ – ಬ್ಯಾಟಿಂಗ್‌ ಮುಂದುವರಿಸಿ ಚಮಕ್‌ ಕೊಟ್ಟ ಜಡೇಜಾ, ಸುಂದರ್‌

Public TV
By Public TV
7 hours ago
Mallikarjun Kharge 3
Districts

ಕಷ್ಟ ಪಟ್ಟಿದ್ದು ನಾನು, ಕೃಷ್ಣ ಸಿಎಂ ಆದ್ರು – ಮುಖ್ಯಮಂತ್ರಿ ಸ್ಥಾನ ಸಿಗದಿದ್ದಕ್ಕೆ ಖರ್ಗೆ ಬಹಿರಂಗ ಬೇಸರ

Public TV
By Public TV
7 hours ago
Ravindra Jadeja Washington Sundar
Cricket

ಜಡೇಜಾ, ಸುಂದರ್‌ ಅಜೇಯ ಶತಕ – ಡ್ರಾದಲ್ಲಿ ಟೆಸ್ಟ್‌ ಅಂತ್ಯ

Public TV
By Public TV
8 hours ago
Chikkamagaluru Elephant Attack
Chikkamagaluru

ಚಿಕ್ಕಮಗಳೂರು | ಆನೆ ದಾಳಿಗೆ ವೃದ್ಧ ಬಲಿ – 4 ದಿನಗಳ ಅಂತರದಲ್ಲಿ ಇಬ್ಬರು ಸಾವು

Public TV
By Public TV
8 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?