Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಾಕ್‍ಡೌನ್ 4.0 ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ಲಾಕ್‍ಡೌನ್ 4.0 ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ

Corona

ಲಾಕ್‍ಡೌನ್ 4.0 ಕೇಂದ್ರದಿಂದ ಹೊಸ ಮಾರ್ಗಸೂಚಿ ಪ್ರಕಟ

Public TV
Last updated: May 17, 2020 9:29 pm
Public TV
Share
4 Min Read
Lockdown 4 2
SHARE

ನವದೆಹಲಿ: ಲಾಕ್‍ಡೌನ್ 4.0 ಮಾರ್ಗಸೂಚಿಯನ್ನು ಕೇಂದ್ರ ಸರ್ಕಾರ ಪ್ರಕಟಿಸಿದೆ. ಕೊರೊನಾ ತಡೆಗಾಗಿ ಕೇಂದ್ರ ಸರ್ಕಾರ ಲಾಕ್‍ಡೌನ್ ನನ್ನು ಮೇ 31ರವರೆಗೆ ವಿಸ್ತರಿಸಿ ಈಗಾಗಲೇ ಆದೇಶ ಹೊರಡಿಸಿದೆ.

ಅಂತಾರಾಜ್ಯಗಳ ಮಧ್ಯೆ ಯಾವುದಕ್ಕೆ ಪರವಾನಿಗೆ?
* ಉಭಯ ರಾಜ್ಯಗಳ ಪರವಾನಿಗೆ ಪಡೆದು ವಾಹನ ಹಾಗೂ ಬಸ್ ಸಂಚಾರಕ್ಕೆ ಪಾಸ್ ನೀಡಬಹುದು.
* ಅಂತಾರಾಜ್ಯಗಳ ಮಧ್ಯ ಬಸ್, ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸುವ ನಿರ್ಧಾರ ಆಯಾಯಾ ರಾಜ್ಯ ಅಥವಾ ಕೇಂದ್ರಾಡಳಿತ ಪ್ರದೇಶಕ್ಕೆ ಬಿಟ್ಟಿದ್ದು.
* ಎಲ್ಲ ರಾಜ್ಯ/ಕೇಂದ್ರಾಡಳಿತ ಪ್ರದೇಶಗಳು ತುರ್ತು ಸಂದರ್ಭಗಳಲ್ಲಿ ವೈದ್ಯಕೀಯ ಸಿಬ್ಬಂದಿ, ಪಾರಾ ಮೆಡಿಕಲ್ ಸಿಬ್ಬಂದಿ, ಸ್ಯಾನಿಟೈಸನ್ ಸಿಬ್ಬಂದಿ, ಅಂಬುಲೆನ್ಸ್ ಬಳಸಿಕೊಳ್ಳಬಹುದು.
ಎಲ್ಲ ಮಾದರಿಯ ಸರಕು ಸಾಗಣೆಯ ವಾಹನಗಳ ಓಡಾಟಕ್ಕೆ ಅನುಮತಿ.

Lockdown 4

ಯಾವುದಕ್ಕೆ ನಿಷೇಧ?
* ದೇಶಿ ಮತ್ತು ವಿದೇಶಿ ವಿಮಾನಗಳ ಹಾರಾಟಕ್ಕೆ ನಿಷೇಧ. (ವೈದ್ಯಕೀಯ ತುರ್ತುಸಂದರ್ಭ ಹೊರತುಪಡಿಸಿ)
* ಮೆಟ್ರೋ, ರೈಲು ಸಂಚಾರ ಇರಲ್ಲ.
* ಶಾಲೆ, ಕಾಲೇಜು, ತರಬೇತಿ, ಶಿಕ್ಷಣ ಸಂಸ್ಥೆಗಳು ಬಂದ್. ಆನ್‍ಲೈನ್ ಅಥವಾ ಸಾಮಾಜಿಕ ಅಂತರ ಕಾಪಾಡಿಕೊಂಡ್ರೆ ಅನುಮತಿ ಸಿಗುವ ಸಾಧ್ಯತೆ.
* ಹೋಟೆಲ್ ಮತ್ತು ರೆಸ್ಟೋರೆಂಟ್ ಗಳಿಗೆ ಹೋಮ್ ಡೆಲಿವರಿ ಅವಕಾಶ.
* ಥಿಯೇಟರ್, ಶಾಪಿಂಗ್ ಮಾಲ್, ಜಿಮ್ ಕೇಂದ್ರ, ಸ್ವಿಮಿಂಗ್ ಪೂಲ್, ಪಾರ್ಕ್, ಸಿನಿಮಾ ಹಾಲ್, ಬಾರ್, ಸಭಾಂಗಣ ತೆರೆಯುವಂತಿಲ್ಲ.
* ಸ್ಪೋರ್ಟ್ಸ್  ಕಾಂಪ್ಲೆಕ್ಸ್ ಮತ್ತು ಸ್ಟೇಡಿಯಂ (ಕ್ರೀಡಾಂಗಣ)ಗಳಿಗೆ ಷರತ್ತು ಬದ್ಧ ಅನುಮತಿ
* ಎಲ್ಲ ಸಾಮಾಜಿಕ/ಧಾರ್ಮಿಕ/ ರಾಜಕೀಯ/ ಕ್ರೀಡಾ/ ಮನರಂಜನಾ/ಸಾಂಸ್ಕೃತಿಕ/ಕೌಟುಂಬಿಕ ಸೇರಿದಂತೆ ಎಲ್ಲ ಕಾರ್ಯಕ್ರಮಗಳಿಗೂ ನಿಷೇಧ
* ಎಲ್ಲ ಧಾರ್ಮಿಕ ಕೇಂದ್ರಗಳಿಗೆ ಸಾರ್ವಜನಿಕರಿಗೆ ಪ್ರವೇಶ ಇಲ್ಲ. ಯಾವುದೇ ಧಾರ್ಮಿಕ ಸಭೆಗಳನ್ನು ನಡೆಸುವಂತಿಲ್ಲ.

Bengaluru Lockdown 2

ಕೋವಿಡ್-19 ನಿರ್ವಹಣೆಗೆ ರಾಷ್ಟ್ರೀಯ ನಿರ್ದೇಶನಗಳು:
ಅನುಬಂಧ 2ರಲ್ಲಿ ನಿರ್ದಿಷ್ಟಪಡಿಸಿದಂತೆ ಕೋವಿಡ್-19 ನಿರ್ವಹಣೆಗೆ ರಾಷ್ಟ್ರೀಯ ನಿರ್ದೇಶನಗಳನ್ನು ದೇಶಾದ್ಯಂತ ಅನುಸರಿಸಲಾಗುವುದು.

ಕಂಟೈನ್‍ಮೆಂಟ್, ಬಫರ್, ರೆಡ್, ಗ್ರೀನ್ ಮತ್ತು ಆರೇಂಜ್ ಝೋನ್:
* ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ನೀಡುವ ಮಾಹಿತಿ ಗಣನೆಗೆ ತೆಗೆದುಕೊಂಡ ನಂತರ ಕೆಂಪು, ಹಸಿರು ಮತ್ತು ಕಿತ್ತಳೆ ವಲಯಗಳೆಂದು ಆಯಾ ರಾಜ್ಯ/ ಕೇಂದ್ರಾಡಳಿತ ಸರ್ಕಾರಗಳು ನಿರ್ಧರಿಸುತ್ತವೆ.
* ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ನೀಡುವ ಮಾಹಿತಿ ಆಧಾರದ ಮೇಲೆ ಆಯಾ ಪ್ರದೇಶದ ಜಿಲ್ಲಾಡಳಿತವು ರೆಡ್, ಗ್ರೀನ್ ಮತ್ತು ಆರೇಂಜ್ ಝೋನ್ ಎಂದು ಘೋಷಿಸಬಹುದು.
* ಕಂಟೈನ್‍ಮೆಂಟ್ ಝೋನ್‍ಗಳ ಮೇಲೆ ಹೆಚ್ಚಿನ ನಿಗಾ ಇಡಬೇಕು. ಇಲ್ಲಿ ತುರ್ತು ಚಿಕಿತ್ಸೆ, ಅಗತ್ಯ ವಸ್ತು, ಔಷಧಿಗಳನ್ನು ಪಡೆಯಲು ಮಾತ್ರ ಜನರು ಮನೆಯಿಂದ ಹೊರಗೆ ಬರಬೇಕು.
* ಕಂಟೈನ್‍ಮೆಂಟ್ ಝೋನ್‍ಗಳಲ್ಲಿ ಜನರ ಚಲನವನದ ಮೇಲೆ ನಿಗಾ ಇಡಬೇಕು. ಮನೆಯಿಂದ ಮನೆಗೆ ಕಣ್ಗಾವಲು ಇಡಬೇಕು. ಜೊತೆಗೆ ಅಗತ್ಯವಿರುವ ಔಷಧಿ ಅಂಗಡಿಗಳ ಮೇಲೂ ನಿಗಾ ಇಡಬೇಕು.

Bengaluru Lockdown 4

ಕರ್ಫ್ಯೂ ಮುಂದುವರಿಕೆ:
ರಾತ್ರಿ 7ರಿಂದ ಬೆಳಗ್ಗೆ 7 ಗಂಟೆ ವರೆಗೆ ಅಗತ್ಯ ಚಟುವಟಿಕೆ ಹೊರತುಪಡಿಸಿ ವೈಯಕ್ತಿಕ ಸಂಚಾರವನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಈ ವೇಳೆ ಸೆಕ್ಷನ್ 144(ಕರ್ಫ್ಯೂ) ಜಾರಿ ಇರಲಿದ್ದು, ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯ ಆಡಳಿತಕ್ಕೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

ಸುರಕ್ಷತೆ ದೃಷ್ಟಿಯಿಂದ 65 ವರ್ಷ ಮೇಲ್ಪಟ್ಟ ವೃದ್ಧರು, ಗರ್ಭಿಣಿಯರು, 10 ವರ್ಷದ ವಳಗಿನ ಮಕ್ಕಳು ಆರೋಗ್ಯ ಸಮಸ್ಯೆ ಹಾಗೂ ಇತರೆ ತುರ್ತು ಸಂದರ್ಭ ಹೊರತುಪಡಿಸಿ ಉಳಿದೆಲ್ಲ ಸಮಯ ಮನೆಯಲ್ಲೇ ಇರಬೇಕು.

Hubballi Lockdown 8

ನಿಷೇಧಿತ ಅಂಶವನ್ನು ಹೊರತುಪಡಿಸಿ, ಉಳಿದೆಲ್ಲ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದ್ದು, ಕಂಟೈನಮೆಂಟ್ ಝೋನ್‍ಗಳಲ್ಲಿ ಅಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಉಳೆದಲ್ಲವನ್ನೂ ಬಂದ್ ಮಾಡಲಾಗುವುದು. ಉಳಿದಂತೆ ಎಲ್ಲ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳು ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರ ಕೈಗೊಳ್ಳಬಹುದಾಗಿದೆ. ಯಾವ ಚಟುವಟಿಕೆಗಳಿಗೆ ಅವಕಾಶ ನೀಡಬೇಕು, ಯಾವುದನ್ನು ಬಂದ್ ಮಾಡಬೇಕು ಎಂಬುದರ ಕುರಿತು ನಿರ್ಧಾರ ಕೈಗೊಳ್ಳಬೇಕು. ಅಗತ್ಯಕ್ಕೆ ತಕ್ಕಂತೆ ಝೋನ್‍ಗಳನ್ನು ಮಾಡಿಕೊಳ್ಳಬೇಕು. ಅಲ್ಲದೆ ಅಗತ್ಯಕ್ಕೆ ತಕ್ಕಂತೆ ನಿರ್ಬಂಧ ಹೇರಬಹುದಾಗಿದೆ ಎಂದು ಕೇಂದ್ರ ಸರ್ಕಾರ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಆರೋಗ್ಯ ಸೇತು ಆ್ಯಪ್ ಬಳಕೆ: ಪ್ರತಿಯೊಬ್ಬರು ಆರೋಗ್ಯ ಸೇತು ಆ್ಯಪ್ ಬಳಸಬೇಕು. ಉದ್ಯೋಗಿಗಳ ಆರೋಗ್ಯದ ದೃಷ್ಟಿಯಿಂದ ಕಂಪನಿಗಳು ಎಲ್ಲ ನೌಕರರಿಗೆ ಆರೋಗ್ಯ ಸೇತು ಆ್ಯಪ್ ಬಳಸುವಂತೆ ಸೂಚಿಸುವುದು. ಪ್ರತಿಯೊಬ್ಬ ಬಳಕೆದಾರರ ತಮ್ಮ ಆರೋಗ್ಯದ ಮಾಹಿತಿಯನ್ನ ಅಪ್‍ಡೇಟ್ ಮಾಡಿಕೊಳ್ಳಬೇಕು.

Ministry of Home Affairs (MHA) issues guidelines on measures to be taken by Ministries/Departments of Government of India, State Governments/UT Governments & State/UT authorities for containment of COVID19. #LockDown4 will remain in effect till 31st May 2020. pic.twitter.com/10WnwnWfte

— ANI (@ANI) May 17, 2020

ಸಲಹೆಗಳು
1. ಸಾರ್ವಜನಿಕ ಪ್ರದೇಶಗಳಲ್ಲಿ ಮಾಸ್ಕ್ ಧರಿಸುವುದು.
2. ಸಾರ್ವಜನಿಕ ಮತ್ತು ಕೆಲಸದ ಸ್ಥಳದಲ್ಲಿ ಉಗುಳುವುದು ದಂಡಾರ್ಹ.
3. ಸಾರ್ವಜನಿಕ ಸ್ಥಳ ಮತ್ತು ಪ್ರಯಾಣದ ವೇಳೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು.
4. ಮದುವೆ ಇನ್ನಿತರ ಸಮಾರಂಭಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಜೊತೆಗೆ 50ಕ್ಕಿಂತ ಹೆಚ್ಚು ಜನರು ಸೇರುವಂತಿಲ್ಲ.
5. ಅಂತ್ಯಕ್ರಿಯೆಗಳ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದರ ಜೊತೆ 20ಕ್ಕಿಂಯ ಹೆಚ್ಚು ಜನರು ಸೇರುವಂತಿಲ್ಲ.

lockdown bengaluru corona
6. ಸಾರ್ವಜನಿಕ ಸ್ಥಳದಲ್ಲಿ ಮದ್ಯ, ಪಾನ್, ಗುಟ್ಕಾ , ತುಂಬಾಕು ಸೇವನೆ ಮಾಡುವಂತಿಲ್ಲ.
7. ಅಂಗಡಿಗಳಲ್ಲಿ ಐದು ಜನಕ್ಕಿಂತ ಹೆಚ್ಚು ಕೆಲಸ ಮಾಡುವಂತಿಲ್ಲ. ಮಾರಾಟಗಾರರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು.
8. ವರ್ಕ್ ಫ್ರಮ್ ಹೋಮ್ ಗೆ ಮೊದಲ ಆದ್ಯತೆ ನೀಡುವುದು.
9. ಕಂಪನಿ, ಸರ್ಕಾರಿ ಕಚೇರಿ ಸೇರಿದಂತೆ ಸಾಮಾನ್ಯ ಪ್ರದೇಶಗಳ ಪ್ರವೇಶ ಮತ್ತು ನಿರ್ಗಮನ ದ್ವಾರದಲ್ಲಿ ಸ್ಯಾನಿಟೈಸರ್, ಥರ್ಮಲ್ ಸ್ಕ್ರೀನಿಂಗ್ ವ್ಯವಸ್ಥೆ ಕಲ್ಪಿಸೋದು.
10. ಕೆಲಸದ ಸ್ಥಳದಲ್ಲಿ ಸಾಮಾಜಿಕ ಅಂತರ ಮತ್ತು ಶಿಫ್ಟ್ ಗಳಲ್ಲಿ ಕೆಲಸಕ್ಕೆ ಪ್ರಾದನ್ಯತೆ

TAGGED:Corona VirusCovid 19Lockdown 4.0Public TVಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಮಾರ್ಗಸೂಚಿಲಾಕ್‍ಡೌನ್ 4.0
Share This Article
Facebook Whatsapp Whatsapp Telegram

Cinema news

darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories
darshan ex manager mallikarjun
8 ವರ್ಷ ನಾಪತ್ತೆಯಾಗಿದ್ದ ದರ್ಶನ್‌ ಮಾಜಿ ಮ್ಯಾನೇಜರ್‌ ದಿಢೀರ್‌ ಪ್ರತ್ಯಕ್ಷ – ನಡೆದಿದ್ದೇನು ಅಂತ ಎಳೆಎಳೆಯಾಗಿ ಬಿಚ್ಚಿಟ್ಟ ಮಲ್ಲಿ
Bengaluru City Cinema Latest Main Post Sandalwood
Udupi Rishab Shetty Home Bhajane Kunitha Yakshagana Harake
ನಟ ರಿಷಬ್ ಶೆಟ್ಟಿ ಮನೆಯಲ್ಲಿ ಕುಣಿತ ಭಜನೆ, ಯಕ್ಷಗಾನ ಹರಕೆ ಪ್ರದರ್ಶನ
Cinema Districts Karnataka Latest Sandalwood Top Stories Udupi

You Might Also Like

Weather 1
Bengaluru City

ಉರಿಬಿಸಿಲಿನ ಮಧ್ಯೆಯೂ ಏ.21ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Public TV
By Public TV
3 minutes ago
Channapatna Wild Elephant Attack
Districts

ರಾತ್ರಿವೇಳೆ ಮನೆ ಬಾಗಿಲಿಗೆ ಬಂದ ಕಾಡಾನೆಗಳು – ಬೆಚ್ಚಿಬಿದ್ದ ಮನೆ ಮಾಲೀಕ

Public TV
By Public TV
12 minutes ago
police rape accused
Crime

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಪೊಲೀಸ್ ಅಧಿಕಾರಿಗೆ 20 ವರ್ಷ ಜೈಲು ಶಿಕ್ಷೆ

Public TV
By Public TV
47 minutes ago
DK Shivakumar
Bengaluru City

ದೆಹಲಿ ನಾಯಕರ ಸೂಚನೆ ಮೇರೆಗೆ ಕ್ರಮ, ವೈಯಕ್ತಿಕ ವಿಚಾರ ಏನಿಲ್ಲ: ಡಿಕೆಶಿ

Public TV
By Public TV
1 hour ago
Vachanand Shri
Davanagere

`ಮಸಾಜ್ ಪ್ರಿಯ’ ವಚನಾನಂದ ಶ್ರೀಗಳಿಗೆ ಹೆಚ್ಚಿದ ಸಂಕಷ್ಟ – ಮಕ್ಕಳ ಕಲ್ಯಾಣ ಸಮಿತಿಗೆ ಹಾಸ್ಟೆಲ್ ವಿದ್ಯಾರ್ಥಿಗಳಿಂದ್ಲೇ ದೂರು

Public TV
By Public TV
2 hours ago
Nida Khan TCS
Crime

ನಾನು ತುಂಬು ಗರ್ಭಿಣಿ: ಜಾಮೀನಿಗೆ ಕೋರ್ಟ್‌ ಮೊರೆ ಹೋದ ಟಿಸಿಎಸ್‌ ‘ಮತಾಂತರ’ ಆರೋಪಿ ನಿದಾ ಖಾನ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?