ವಿಶಾಖಪಟ್ಟಣಂ: ಬೆಳ್ಳಂಬೆಳಗ್ಗೆ ಲಾರಿ ಮತ್ತು ಬಸ್ ನಡುವೆ ನಡೆದ ಭೀಕರ ಅಪಘಾತದಲ್ಲಿ 14 ಮದಿ ದುರ್ಮರಣ ಹೊಂದಿ ಕೆಲವರ ಸ್ಥಿತಿ ಗಂಭೀರವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಾದಾಪುರದಲ್ಲಿ ನಡೆದಿದೆ.
ಲಾರಿ ಮತ್ತು ಮಿನಿ ಬಸ್ ನಡುವೆ ನಡೆದಿರುವ ಈ ಭೀಕರವಾದ ರಸ್ತೆ ಅಪಘಾತದಲ್ಲಿ 14 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಿನಿ ಬಸ್ನಲ್ಲಿ ಒಟ್ಟು 18 ಮಂದಿ ಪ್ರಯಾಣಿಸುತ್ತಿದ್ದರು. ಆದರೆ ಭೀಕರವಾದ ಮೃತಪಟ್ಟವರಲ್ಲಿ ಮಗು ಸೇರಿದಂತೆ ಎಂಟು ಮಹಿಳೆಯರು ಇದ್ದಾರೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಅಪಘಾತದ ಕುರಿತಾಗಿ ಇನ್ನು ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ ಎಂದು ಪೊಲೀಸರು ಹೇಳಿದ್ದಾರೆ.