Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಲಿಂಬೆ ಅಭಿವೃದ್ಧಿ ಮಂಡಳಿ ಉತ್ತೇಜನಕ್ಕೆ ವಿವಿಧ ಸೌಲಭ್ಯ ಕಲ್ಪಿಸಲು ತೋಟಗಾರಿಕೆ ಸಚಿವರಿಗೆ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಲಿಂಬೆ ಅಭಿವೃದ್ಧಿ ಮಂಡಳಿ ಉತ್ತೇಜನಕ್ಕೆ ವಿವಿಧ ಸೌಲಭ್ಯ ಕಲ್ಪಿಸಲು ತೋಟಗಾರಿಕೆ ಸಚಿವರಿಗೆ ಮನವಿ

Districts

ಲಿಂಬೆ ಅಭಿವೃದ್ಧಿ ಮಂಡಳಿ ಉತ್ತೇಜನಕ್ಕೆ ವಿವಿಧ ಸೌಲಭ್ಯ ಕಲ್ಪಿಸಲು ತೋಟಗಾರಿಕೆ ಸಚಿವರಿಗೆ ಮನವಿ

Public TV
Last updated: July 8, 2021 12:21 pm
Public TV
Share
3 Min Read
r shankar
SHARE

ವಿಜಯಪುರ: ಇಂಡಿಯಲ್ಲಿ ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಗೆ ಸ್ವತಂತ್ರವಾದ ಕಟ್ಟಡ (ಟ್ರೈನಿಂಗ್ ಸೆಂಟರ್, ಮಾರ್ಕೆಟಿಂಗ್, ಮಣ್ಣು ನೀರು ಪರಿಶೀಲನಾ ಲ್ಯಾಬೋರೆಟರಿ ಕೇಂದ್ರ) ನಿರ್ಮಿಸಲು 5 ಕೋಟಿ ಅನುದಾನ ನೀಡಲು ಹಾಗೂ ಇನ್ನಿತರ ಬೇಡಿಕೆಗಳ ಬಗ್ಗೆ ಲಿಂಬೆ ಅಭಿವೃದ್ಧಿ ಮಂಡಳಿ ಅಧ್ಯಕ್ಷರಾದ ಅಶೋಕ್ ಎಸ್ ಅಲ್ಲಾಪೂರ್ ಅವರು ತೋಟಗಾರಿಕೆ ಹಾಗೂ ರೇಷ್ಮೆ ಖಾತೆ ಸಚಿವ ಆರ್. ಶಂಕರ ಅವರಿಗೆ ಬುಧವಾರ ಬೆಂಗಳೂರನಲ್ಲಿ ಮನವಿ ಸಲ್ಲಿಸಿದ್ದಾರೆ.

R Shankar medium

ಭಾರತವು ಲಿಂಬೆ ಹಣ್ಣಿನ ಉತ್ಪಾದನೆಯಲ್ಲಿ ಪ್ರಪಂಚದಲ್ಲಿಯೇ 3ನೇ ಸ್ಥಾನ ಪಡೆದಿದ್ದು, ಮೊದಲನೇ ಸ್ಥಾನದಲ್ಲಿ ಚೈನಾ ಇದ್ದರೆ, ಎರಡನೇ ಸ್ಥಾನದಲ್ಲಿ ಮೆಕ್ಸಿಕೊ ಇದೆ. ಕರ್ನಾಟಕವು ದೇಶದ ಲಿಂಬೆ ಉತ್ಪಾದನೆಯಲ್ಲಿ 4ನೇ ಸ್ಥಾನದಲ್ಲಿದ್ದು, ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ಗುಜರಾತ್ ರಾಜ್ಯಗಳು ಮುಂಚೂಣಿಯಲ್ಲಿದೆ. ಕರ್ನಾಟಕದಲ್ಲಿ ಸುಮಾರು 21,660 ಹೆಕ್ಟೆರ್ ಪ್ರದೇಶದಲ್ಲಿ ಲಿಂಬೆ ಬೆಳೆಯನ್ನು ಬೆಳೆಯುತ್ತಿದ್ದು, ಲಿಂಬೆ ಒಂದು ಪ್ರಮುಖ ವಾಣಿಜ್ಯ ಬೆಳೆಯಾಗಿದೆ.

i lemon

ಕರ್ನಾಟಕದಲ್ಲಿ ಬೆಳೆಯುವ ಲಿಂಬೆ ವಿಶೇಷವಾಗಿ ವಿಜಯಪುರ ಜಿಲ್ಲೆಯಲ್ಲಿ ಬೆಳೆಯುವ ‘ಖಾಗಜಿ’ ತಳಿಯ ಲಿಂಬೆಯು ಉತ್ತರ ಭಾರತ ಹಾಗೂ ಗಲ್ಫ್ ದೇಶಗಳಲ್ಲಿ ಹೆಚ್ಚಿನ ಬೇಡಿಕೆ ಹೊಂದಿರುತ್ತದೆ. ಆದರೆ, ಇತ್ತೀಚಿನ ದಿನಗಳಲ್ಲಿ ಲಿಂಬೆ ಬೆಳೆಗಾರರಿಗೆ ಮಾರುಕಟ್ಟೆಯ ಅನಿಶ್ಚಿತ ದರದಿಂದ ಮಧ್ಯವರ್ತಿಗಳ ಹಾವಳಿಯಿಂದ ಹಾಗೂ ನೀರಿನ ಅಭಾವದಿಂದ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ. ಇದನ್ನೆಲ್ಲ ಮನಗೊಂಡ ಘನತೆಯುಕ್ತ ಕರ್ನಾಟಕ ಸರಕಾರ 2017 ರಲ್ಲಿ ಲಿಂಬೆ ಬೆಳೆಗಾರರಿಗೆ ಅನುಕೂಲವಾಗಲು ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಯನ್ನು ಇಂಡಿಯಲ್ಲಿ ಸ್ಥಾಪಿಸಿದ್ದು, ಸದರಿ ಮಂಡಳಿಯ ಬೇಡಿಕೆಗಳು ಈ ಕೆಳಗಿನಂತೆ ಮಾನ್ಯ ಸಚಿವರ ಗಮನಕ್ಕೆ ತಂದಿದ್ದಾರೆ.

lemon2

* ಲಿಂಬೆ ಹಣ್ಣನ್ನು ಬೆಂಬಲ ಬೆಲೆಯೊಂದಿಗೆ ಖರೀದಿಸಿ, ಲಿಂಬೆ ಬೆಳೆಗಾರರನ್ನು ಪ್ರೋತ್ಸಾಹಿಸಬೇಕು.
* ಇಂಡಿ, ಸಿಂಧಗಿ ಮತ್ತು ಬಿಜಾಪುರ ತಾಲ್ಲೂಕಿಗೆ ಒಂದರಂತೆ ಪ್ರತ್ಯೇಕವಾಗಿ ಮೂರು ಶಿಥಲ ಘಟಕಗಳನ್ನು ನಿರ್ಮಿಸುವುದು.
* ಎಲ್ಲ ತಾಲ್ಲೂಕು ಕೇಂದ್ರಗಳಲ್ಲಿ ಹಾಪ್‍ಕಾಮ್ಸ್ ಮಳಿಗೆಗಳನ್ನು ಸ್ಥಾಪಿಸುವುದು.
* ಇಂಡಿಯಲ್ಲಿ ಕರ್ನಾಟಕ ರಾಜ್ಯ ಲಿಂಬೆ ಅಭಿವೃದ್ಧಿ ಮಂಡಳಿಗೆ ಸ್ವತಂತ್ರವಾದ ಕಟ್ಟಡ (ಟ್ರೈನಿಂಗ್ ಸೆಂಟರ್, ಮಾರ್ಕೆಟಿಂಗ್, ಮಣ್ಣು ನೀರು ಪರಿಶೀಲನಾ ಲ್ಯಾಬೋರೆಟರಿ ಕೇಂದ್ರ) ನಿರ್ಮಿಸಲು 5.00 ಕೋಟಿ ಅನುದಾನ ನೀಡುವುದು.
* ಇಂಡಿ, ಸಿಂಧಗಿ ಮತ್ತು ವಿಜಯಪುರ ತಾಲೂಕಿಗಳಿಗೆ ಪ್ರೋಸೆಸಿಂಗ್ ಘಟಕಗಳನ್ನು ನಿರ್ಮಿಸಲು ತಲಾ 20 ಎಕರೆಯಂತೆ ಸರ್ಕಾರದ ಜಮೀನು ನೀಡುವುದು.
* ವಿಜಯಪುರ ಜಿಲ್ಲೆಯ ಲಿಂಬೆ ಹಣ್ಣು ವಿಶೇಷ ಗುಣವನ್ನು ಹೊಂದಿದ್ದು, ಕೆಲವೇ ದಿನಗಳಲ್ಲಿ ಜಿ.ಐ. ಟ್ಯಾಗ್ ಹೊಂದಲಿದ್ದು, ವಿಶ್ವವ್ಯಾಪ್ತಿ ಪರಿಚಯಿಸಲಿದೆ. ಇದರ ಉಪ ಉತ್ಪನ್ನಗಳ ಮೌಲವರ್ದಿತ ಬೆಲೆ ಸಿಗಲು ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಾದ ಬಿಸಿಯೂಟ, ಶಾಲಾಕಾಲೇಜುಗಳ ಹಾಸ್ಟೆಲ್ ಹಾಗೂ ರಾಜ್ಯದ ರೇಷನ್ ಪಡಿತರಿದಾರರಾದ ಎ.ಪಿ.ಎಲ್, ಹಾಗೂ ಬಿ.ಪಿ.ಎಲ್. ಕಾರ್ಡ್‍ದಾರರಿಗೆ ಪಿಕಲ್ ಇಂಡಸ್ಟ್ರೀಸ್‍ಗಳನ್ನು ನಿರ್ಮಿಸಿ, ಇಂದಿನ ಕೊರೊನಾಗೆ ಔಷಧಿಯ ಬೂಸ್ಟರ್ ರೀತಿಯಲ್ಲಿ ಬಳಸಿ, ಲಿಂಬೆ ಬೆಳೆಗಾರರಿಗೆ ಲಾಭ ಸಿಗುವಂತೆ ತಕ್ಷಣವೇ ಕ್ರಮಕೈಗೊಳ್ಳುವುದು.
* ರಬ್ಬರ್, ಕಾಫಿ, ತೆಂಗು, ಮಾವು, ಸಾಂಬರ್ ಅಭಿವೃದ್ಧಿ ಮಂಡಳಿಯಂತೆ ಸಮಾನ ಸ್ಥಾನಮಾನವನ್ನು ನೀಡಿ, ಕಂಪನಿ ಆಕ್ಟ್ ನಲ್ಲಿ ರಿಜಿಸ್ಟರ್ ಮಾಡಿಸಿ, ಪ್ರತ್ಯೇಕ ಕಾಯ್ದೆಯನ್ನು ಪಾಸ್ ಮಾಡಿಸಿ, ವಿಶೇಷ ಸೌಲಭ್ಯಗಳನ್ನು ದೊರಕುವಂತೆ ಆಗಬೇಕು.
* ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ (ODOP) ಒಂದು ಜಿಲ್ಲೆ ಒಂದು ಬೆಳೆ ಕಿರು ಉದ್ದಿಮೆದಾರರಿಗೆ, ಸಣ್ಣ ಗುಡಿಕೈಗಾರಿಕೆಗಳಿಗೆ ಹೆಚ್ಚಿನ ಉತ್ತೇಜನ ನೀಡಿ ಸರ್ಕಾರದಿಂದಲೂ ಆರ್ಥಿಕ ಸಹಾಯ ನೀಡಿ ಕೈಗಾರಿಕೆಗಳನ್ನು ಸ್ಥಾಪಿಸಬೇಕು.
* ಪ್ರಸ್ತುತ ವರ್ಷ 2021-22ನೇ ಸಾಲಿಗೆ 500 ಲಕ್ಷಗಳ ಅನುದಾನ ನೀಡಿದ್ದಲ್ಲಿ, ಲಿಂಬೆ ಬೆಳೆಗಾರರಿಗೆ KSOCA ಸಂಸ್ಥೆ ವತಿಯಿಂದ ಸಾವಯವ ಪ್ರಮಾಣೀಕರಣ ಪತ್ರ, ಸಹಾಯಧನ ರೂಪದಲ್ಲಿ Citrus Special, ಸಣ್ಣ ಪ್ರಮಾಣದ ಸತ್ಯೋತ್ಪಾದನೆ ಘಟಕಗಳು, FPO ಗಳ ರಚನೆ, ಯಾಂತ್ರಿಕರಣ, ಲಿಂಬೆ ಬೆಳೆಯ ಪ್ರಾತ್ಯಕ್ಷತೆ, ಪ್ರಾಥಮಿಕ ಸಂಸ್ಕರಣಾ ಘಟಕ / ಮೌಲ್ಯವರ್ಧನಾ ಘಟಕ ನಿರ್ಮಿಸಿಕೊಳ್ಳುವವರಿಗೆ ಸಹಾಯಧನ, ಲಿಂಬೆ ಖರೀದಿದಾರರ ಮತ್ತು ಮಾರಾಟಗಾರರ ಮೇಳ, ರೈತರಿಗೆ ಒಳ ರಾಜ್ಯ ಮತ್ತು ಹೊರ ರಾಜ್ಯ ಪ್ರವಾಸ ಹಾಗೂ ಲಿಂಬೆ ಬೆಳೆಯಲ್ಲಿ ಹೊಸ ತಂತ್ರಜ್ಞಾನಗಳನ್ನು ಅಳವಡಿಸಿಕೊಳ್ಳಲು ರೈತರಿಗೆ ಧನಸಹಾಯ ನೀಡುವ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅನುಕೂಲವಾಗುವುದು ಎಂದು ಅಶೋಕ್.ಎಸ್ ಅಲ್ಲಾಪೂರ್ ಅವರು ಮನವಿ ಮೂಲಕ ಕೋರಿದ್ದಾರೆ.

Lemons4

ಇಂಡಿ ನಿಂಬೆಹಣ್ಣಿನ ವಿಶೇಷತೆ ಏನು?
ಇಂಡಿ ತಾಲೂಕಿನಲ್ಲಿ ಬೆಳೆಯಲಾಗುತ್ತಿರುವ ನಿಂಬೆ ಹಣ್ಣಲ್ಲಿ ರಸ ಹೆಚ್ಚು. ವಾರಗಟ್ಟಲೆ ಇಟ್ಟರೂ ಒಣಗುವುದಿಲ್ಲ ಮತ್ತು ಹಾಳಾಗುವುದಿಲ್ಲ. ಈ ನಿಂಬೆಯನ್ನು ಬೇರೆ ಕಡೆ ಬೆಳೆದರೂ ಇಲ್ಲಿನ ಗುಣಮಟ್ಟ, ವಿಶೇಷತೆ ಇರುವುದಿಲ್ಲ. ಈ ಪರಿಸರದ ಮಣ್ಣು ಮತ್ತು ಹವಾಗುಣದಿಂದ ಗುಣಮಟ್ಟದ ನಿಂಬೆ ಬೆಳೆಯಲಾಗುತ್ತದೆ. ಇದನ್ನೂ ಓದಿ:ಇಂಡಿ ನಿಂಬೆಗೆ ಜಿಐ ಮಾನ್ಯತೆ ಪಡೆಯಲು ಸದ್ದಿಲ್ಲದೆ ನಡೆಯುತ್ತಿದೆ ಸಿದ್ಧತೆ

 

TAGGED:Ashok.S.bengalurufarmerMinister R.ShankarplanterPublic TVಅಶೋಕ್.ಎಸ್ತೋಟಪಬ್ಲಿಕ್ ಟಿವಿ lemonಬೆಂಗಳೂರುರೈತಲಿಂಬೆಸಚಿವ ಆರ್.ಶಂಕರ್
Share This Article
Facebook Whatsapp Whatsapp Telegram

Cinema news

Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood
chandrachuda
ಪೈರಸಿ ವಿರುದ್ಧ ಕಿಚ್ಚನ ನಡೆ, ಕುಂಬಳಕಾಯಿ ಕಳ್ಳ ಅಂದ್ರೆ ಹೆಗಲು ಮುಟ್ಟಿಕೊಳ್ಳೋದು ಯಾಕೆ? – ಚಕ್ರವರ್ತಿ ಚಂದ್ರಚೂಡ್
Cinema Latest Sandalwood Top Stories

You Might Also Like

MGNREGA VB G RAM G
Latest

ಮನರೇಗಾ ರದ್ದು ಮೂಲಕ SC/ST, ಹಿಂದುಳಿದ ಭೂಹೀನರ ಅನ್ನ ಕಸಿಯುವ ಕುತಂತ್ರ – ಎಐಸಿಸಿ ಪರಿಶಿಷ್ಟ ಜಾತಿ ಘಟಕ ಆಕ್ರೋಶ

Public TV
By Public TV
2 hours ago
Bengaluru PG fined Rs 50000 for not maintaining cleanliness
Bengaluru City

ಸ್ವಚ್ಛತೆ ಕಾಪಾಡದ್ದಕ್ಕೆ ಬೆಂಗಳೂರು ಪಿಜಿಗೆ ಬಿತ್ತು 50 ಸಾವಿರ ದಂಡ

Public TV
By Public TV
2 hours ago
Pakistan Army Asim Munir
Latest

ಆಪರೇಷನ್‌ ಸಿಂಧೂರ ವೇಳೆ ದೇವರ ದಯೆಯಿಂದ ಬದುಕುಳಿದಿದ್ದೇವೆ: ಮುನೀರ್‌

Public TV
By Public TV
2 hours ago
Mandya Youth Drowned In Cauvery River
Districts

ಕಾವೇರಿ ನದಿಯಲ್ಲಿ ಈಜಲು ಹೋಗಿ ಯುವಕ ಸಾವು

Public TV
By Public TV
3 hours ago
ಡಿಕೆ ಆದಿಕೇಶವುಲು ಪುತ್ರಿ ಕಲ್ಪಜಾ, ಪುತ್ರ ಶ್ರೀನಿವಾಸ್‌
Bengaluru City

ಉದ್ಯಮಿ ರಘುನಾಥ್‌ ಹತ್ಯೆ ಕೇಸ್‌ – ಸಿಬಿಐನಿಂದ ಟಿಟಿಡಿ ಮಾಜಿ ಅಧ್ಯಕ್ಷ ಆದಿಕೇಶವುಲು ಮಕ್ಕಳು ಅರೆಸ್ಟ್‌

Public TV
By Public TV
3 hours ago
DK Shivakumar 9
Bengaluru City

ಗಾಂಧೀಜಿ ಹೆಸರಿಗೆ ಕತ್ತರಿ, ಬಿಜೆಪಿ ಅಂತಿಮ ದಿನಗಳು ಆರಂಭ: ಡಿಕೆಶಿ

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?