ಹಾಸನ: ರಾಜ್ಯದಲ್ಲಿ ಭ್ರಷ್ಟಾಚಾರವನ್ನು ತೊಲಗಿಸಲು ಲೋಕಾಯುಕ್ತ ಸಂಸ್ಥೆಗೆ ಸಂಪೂರ್ಣ ಅಧಿಕಾರ ನೀಡಬೇಕು ಎಂದು ಒತ್ತಾಯಿಸಿ ಅರಸೀಕೆರೆ ತಾಲೂಕಿನ ಹೆಚ್.ಜಿ ವೀರಭದ್ರಪ್ಪ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಏಕಾಂಗಿಯಾಗಿ ಧರಣಿ ನಡೆಸಿದರು.
ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು ಕರ್ನಾಟಕ ಲೋಕಾಯುಕ್ತ ಸಂಸ್ಥೆಗೆ ಸಂಪೂರ್ಣ ಅಧಿಕಾರವನ್ನು ನೀಡಿ ಭ್ರಷ್ಟಾಚಾರವನ್ನು ನಿರ್ಮೂಲನೆಗೆ ಸಹಕಾರ ಮಾಡಬೇಕು ಎಂದು ಏಕಾಂಗಿಯಾಗಿ ಧರಣಿ ಕುಳಿತು ಆಗ್ರಹಿಸಿದ್ದಾರೆ. ಭ್ರಷ್ಟಾಚಾರ ನಿರ್ಮೂಲನೆಗೆ ಕರ್ನಾಟಕ ಲೋಕಾಯುಕ್ತ ಸಂಸ್ಥೆಯನ್ನು ಸ್ಥಾಪನೆ ಮಾಡಲಾಗಿದೆ. ಆದರೆ ಈ ಸಂಸ್ಥೆಗೆ ಹೆಚ್ಚಿನ ಅಧಿಕಾರವನ್ನು ನೀಡಿಲ್ಲ. ಆದ್ದರಿಂದ ಮುಂದಿನ ದಿನಗಳಲ್ಲಾದರೂ ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಗೆ ಸಂಪೂರ್ಣ ಅಧಿಕಾರ ನೀಡುವ ಮೂಲಕ ಭ್ರಷ್ಟಾಚಾರ ನಿರ್ಮೂಲನಾ ರಾಜ್ಯವನ್ನಾಗಿ ಮಾಡಬೇಕು ಎಂದು ಮನವಿಮಾಡಿಕೊಂಡರು. ಇದನ್ನೂ ಓದಿ: ಬೇಲೂರು ಚೆನ್ನಕೇಶವ ದೇಗುಲ ಓಪನ್ – ಭಕ್ತರ ದರ್ಶನಕ್ಕೆ ಅವಕಾಶ
ಧರಣಿಯೊಂದಿಗೆ, ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿಗಳು, ರಾಜ್ಯಪಾಲರು ಹಾಗೂ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆಯಲಾಗಿದ್ದು, ಜಿಲ್ಲಾಧಿಕಾರಿಗಳ ಮೂಲಕ ಮನವಿ ಕೂಡ ಸಲ್ಲಿಸಿದ್ದಾರೆ.