Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading:ವರುಣನ ಅಬ್ಬರ – ತುಂಬಿದ ಕಾವೇರಿ, ಲಕ್ಷ್ಮಣ ತೀರ್ಥ ನದಿ
Share
NotificationShow More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Dakshina Kannada | ವರುಣನ ಅಬ್ಬರ – ತುಂಬಿದ ಕಾವೇರಿ, ಲಕ್ಷ್ಮಣ ತೀರ್ಥ ನದಿ

Dakshina Kannada

ವರುಣನ ಅಬ್ಬರ – ತುಂಬಿದ ಕಾವೇರಿ, ಲಕ್ಷ್ಮಣ ತೀರ್ಥ ನದಿ

Public TV
Last updated: August 4, 2020 8:17 pm
Public TV
Share
2 Min Read
rain
SHARE

– ಜಲಪಾತದಲ್ಲಿ ಧುಮ್ಮಿಕ್ಕಿ ಹರಿಯುತ್ತಿರೋ ಶರಾವತಿ
– ಮನೆಯ ಮೇಲೆ ಮರ ಬಿದ್ದು ಜಖಂ

ಶಿವಮೊಗ್ಗ/ಮಡಿಕೇರಿ: ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುತ್ತಮುತ್ತ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭಾರೀ ಗಾಳಿ ಮಳೆಗೆ ಬೃಹತ್ ಗಾತ್ರದ ಮರವೊಂದು ಮನೆಯ ಮೇಲೆ ಬಿದ್ದ ಪರಿಣಾಮ ಮನೆ ಜಖಂಗೊಂಡಿರುವ ಘಟನೆ ನಗರ ಹೋಬಳಿಯ ಮಾಸ್ತಿಕಟ್ಟೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಇಂದ್ರಮನೆಯಲ್ಲಿ ನಡೆದಿದೆ.

ಘಟನೆಯಲ್ಲಿ ಮನೆಯಲ್ಲಿದ್ದ ಮಗು ಹಾಗೂ ನಾಲ್ವರು ಅಪಾಯದಿಂದ ಪಾರಾಗಿದ್ದು, ಇಬ್ಬರು ಮಹಿಳೆಯರು ಗಾಯಗೊಂಡಿದ್ದಾರೆ. ಗಾಯಾಳು ಮಹಿಳೆಯರಿಗೆ ಮಾಸ್ತಿಕಟ್ಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಗಾಳಿ ಮಳೆಗೆ ಮರ ಮನೆ ಮೇಲೆ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಯಾಗಿದ್ದು, ವಾಸ ಮಾಡಲು ಸಾಧ್ಯವಾಗದಂತೆ ಆಗಿದೆ. ಸುಮಾರು 8 ಲಕ್ಷ ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ. ಸ್ಥಳಕ್ಕೆ ಗ್ರಾಮ ಪಂಚಾಯ್ತಿ ಅಧ್ಯಕ್ಷ ಹಾಗೂ ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

0d82fc46 86eb 40b6 9200 a7cc11b23e64

ಇತ್ತ ಉತ್ತಮ ಮಳೆಯ ಕಾರಣ ರಾಜ್ಯದ ಪ್ರಸಿದ್ಧ ಜಲಪಾತಗಳಲ್ಲಿ ಒಂದಾದ ಜಿಲ್ಲೆಯ ಸಾಗರ ತಾಲೂಕಿನ ಜೋಗ ಜಲಪಾತದಲ್ಲಿ ಶರಾವತಿ ಧುಮ್ಮಿಕ್ಕಿ ಹರಿಯುತ್ತಿದೆ. ಜೋಗದ ವೈಭೋಗವನ್ನು ವೀಕ್ಷಿಸಲು ಹೊರ ರಾಜ್ಯಗಳಿಂದ ಪ್ರವಾಸಿಗರು ಜೋಗಕ್ಕೆ ಭೇಟಿ ನೀಡುತ್ತಿದ್ದರು. ಆದರೆ ಈ ಬಾರಿ ಕೊರೊನಾದಿಂದ ಜೋಗ ಜಲಪಾತ ವೀಕ್ಷಣೆಗೆ ಪ್ರವಾಸಿಗರು ಇಲ್ಲದಂತಾಗಿದೆ.

vlcsnap 2020 08 04 20h08m01s020

ಇನ್ನೂ ದಕ್ಷಿಣ ಕನ್ನಡ ಜಿಲ್ಲಾದ್ಯಂತ ಮಳೆ ಆರಂಭಗೊಂಡಿದ್ದು, ಸಂಜೆಯಿಂದ ಗಾಳಿ ಮಳೆ ಸುರಿಯಲಾರಂಭಿಸಿದೆ. ನಾಳೆ ರಾತ್ರಿಯವರೆಗೂ ಭಾರೀ ಮಳೆಯಾಗುವ ಮುಸ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಿದೆ. ಜಿಲ್ಲೆಯ ಬೆಳ್ತಂಗಡಿ, ಸುಳ್ಯ, ಪುತ್ತೂರು ತಾಲೂಕಿನಾದ್ಯಂತ ಹೆಚ್ಚಿನ ಮಳೆಯಾಗಿದ್ದು, ಮಂಗಳೂರು ನಗರದಲ್ಲೂ ಬಿರುಸಿನ ಮಳೆಯಾಗಿದೆ. ಆಗಸ್ಟ್ 6 ರಿಂದ 9 ರವರೆಗೂ ಮಳೆ ಮುಂದುವರಿಯಲಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಸಮುದ್ರ ಹಾಗೂ ನದಿ ಪಾತ್ರದ ಜನ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದ್ದು, ಮೀನುಗಾರಿಕೆ ನಡೆಸದಂತೆ ಎಚ್ಚರಿಕೆ ನೀಡಿದೆ.

vlcsnap 2020 08 04 20h06m52s569

ಕೊಡಗು ಜಿಲ್ಲೆಯಲ್ಲಿ ಮಳೆರಾಯ ಎರಡು ದಿನಗಳಿಂದ ಅಬ್ಬರಿಸುತ್ತಿದ್ದಾನೆ. ಪರಿಣಾಮ ಜಿಲ್ಲೆಯ ಕಾವೇರಿ, ಲಕ್ಷ್ಮಣ ತೀರ್ಥ ಮತ್ತು ಬೇಟೋಳಿ ಹೊಳೆಗಳು ತುಂಬಿ ಹರಿಯುತ್ತಿವೆ. ಭಾಗಮಂಡಲ ಸೇರಿದಂತೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಕಾವೇರಿ ನದಿ ಅಪಾಯದ ಮಟ್ಟದಲ್ಲಿ ಹರಿಯುತ್ತಿದೆ.

ಮಡಿಕೇರಿ ತಾಲ್ಲೂಕಿನ ನಾಪೋಕ್ಲು ಸಮೀಪ ಕಾವೇರಿ ತುಂಬಿ ಹರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಎದುರಾಗಿದೆ. ಮತ್ತೊಂದೆಡೆ ದಕ್ಷಿಣ ಕೊಡಗಿನ ನಿಟ್ಟೂರು ಬಾಳೆಲೆಯಲ್ಲಿ ಹರಿಯುವ ಲಕ್ಷಣತೀರ್ಥ ನದಿ ಕೂಡ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಜಿಲ್ಲೆಯ ಹಲವೆಡೆ ಮರಗಳು ರಸ್ತೆಗೆ ಉರುಳಿ ಬಿದ್ದಿದೆ. ನಿನ್ನೆಗಿಂತಲೂ ಇಂದು ಮಳೆ ಪ್ರಮಾಣ ತೀವ್ರಗೊಂಡಿದೆ.

vlcsnap 2020 08 04 20h07m10s460

ಸುಂಟಿಕೊಪ್ಪ, ಹರದೂರು ನಡುವೆ ಹಲವು ಮರಗಳು ಬಿದ್ದಿದ್ದು, ಸಂಚಾರಕ್ಕೆ ತೀವ್ರ ತೊಂದರೆಯಾಗಿದೆ. ಈ ನಡುವೆ ಜಿಲ್ಲಾ ಪಂಚಾಯಿತಿ ಸದಸ್ಯ ಸುಂಟಿಕೊಪ್ಪದ ಲತೀಫ್ ನೇತೃತ್ವದ ತಂಡ ತಕ್ಷಣವೇ ಕಾರ್ಯಾಚರಣೆ ನಡೆಸಿ ಮರಗಳನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವುಮಾಡುತ್ತಿದೆ.

TAGGED:DamageJog FallsmadikeriMangaluruPublic TVrainrivershivamoggatreeಜೋಗ್ ಜಲಪಾತನದಿಪಬ್ಲಿಕ್ ಟಿವಿಮಂಗಳೂರುಮಡಿಕೇರಿಮರಮಳೆಶಿವಮೊಗ್ಗಹಾನಿ
Share This Article
FacebookWhatsappWhatsappTelegram

Cinema news

Vijay Trisha Krishnan
ತಿರುಪತಿಯಿಂದ ನೇರ ವಿಜಯ್ ಮನೆಗೆ ತೆರಳಿದ ತ್ರಿಷಾ
CinemaLatestNationalTop Stories
Trisha at tirupati
ನಟ ವಿಜಯ್‌ ಗೆಲುವಿಗಾಗಿ ತಿಮ್ಮಪ್ಪನ ಮೊರೆ ಹೋದ ತ್ರಿಷಾ
CinemaLatestNationalTop Stories
darshan 1
ಜೈಲಿನಲ್ಲಿ ಅಮಾನವೀಯ ವರ್ತನೆ, ಸಹಕೈದಿಗಳಿಂದ ಬೆದರಿಕೆ- ವೃತ್ತಿಜೀವನಕ್ಕೆ ಮರಣಗಂಟೆ: ಸುಪ್ರೀಂನಲ್ಲಿ ದರ್ಶನ್ ಅಳಲು
Bengaluru CityCinemaCourtLatestMain Post
Sara Govindu
ನಿರ್ಮಾಪಕ ಸಾ.ರಾ ಗೋವಿಂದ್ ವಿರುದ್ಧ ಎಫ್‌ಐಆರ್‌
Bengaluru CityCrimeDistrictsKarnatakaLatestSandalwoodTop Stories

You Might Also Like

ಸಾಂದರ್ಭಿಕ ಚಿತ್ರ
Latest

ಬಂಗಾಳದಲ್ಲಿ ಕೇಸರಿ ಸುನಾಮಿ – ಮಮತಾ ಆಡಳಿತಕ್ಕೆ ಅಂತ್ಯ ಹಾಡಲು ಆರ್‌ಎಸ್‌ಎಸ್ ‘ಸೈಲೆಂಟ್ ಆಪರೇಷನ್’ ಯಶಸ್ವಿ!

Public TV
ByPublic TV
35 minutes ago
Duck
Chikkamagaluru

ಬಾತುಕೋಳಿ ಹಿಡಿಯಲು ಹೋಗಿ ನಾಲ್ವರು ಮಕ್ಕಳು ನೀರುಪಾಲು – ಮುಗಿಲು ಮುಟ್ಟಿದ ಪೋಷಕರ ಆಕ್ರಂದನ

Public TV
ByPublic TV
37 minutes ago
01 1
Latest

ಗಂಗೋತ್ರಿಯಿಂದ ಗಂಗಾ ಸಾಗರದ ತನಕ ಕಮಲ ಅರಳಿದೆ, ಬಂಗಾಳ ಭಯಮುಕ್ತವಾಗಿದೆ: ಮೋದಿ

Public TV
ByPublic TV
46 minutes ago
pm modi 5
Latest

ಬಂಗಾಳದಲ್ಲಿ ಕಮಲ ಅರಳಿದೆ, ಅದ್ಭುತ ಜನಾದೇಶ ಸಿಕ್ಕಿದೆ: ಮೋದಿ ಕೃತಜ್ಞತೆ

Public TV
ByPublic TV
1 hour ago
Siddaramaiah
Bengaluru City

SIR ಮೋಸದಾಟ, ಚುನಾವಣಾ ಆಯೋಗದ ಕೈವಾಡದಿಂದ ಮಮತಾಗೆ ಸೋಲು: ಸಿದ್ದರಾಮಯ್ಯ ಆಕ್ರೋಶ

Public TV
ByPublic TV
1 hour ago
Narenndra Modi BJP Victory Specch delhi lection
Latest

ವಾಜಪೇಯಿ ಕನಸು ನನಸು – ಬಿಜೆಪಿ ಆಡಳಿತ ರಾಜ್ಯಗಳ ಸಂಖ್ಯೆ 20ಕ್ಕೆ ಏರಿಕೆ

Public TV
ByPublic TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?