Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಾಕ್ಸಿನ್ ಹಾಕುವುದರಲ್ಲಿ ರಾಜ್ಯಕ್ಕೆ ಮೈಸೂರು ನಂಬರ್ ಒನ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Corona | ವಾಕ್ಸಿನ್ ಹಾಕುವುದರಲ್ಲಿ ರಾಜ್ಯಕ್ಕೆ ಮೈಸೂರು ನಂಬರ್ ಒನ್

Corona

ವಾಕ್ಸಿನ್ ಹಾಕುವುದರಲ್ಲಿ ರಾಜ್ಯಕ್ಕೆ ಮೈಸೂರು ನಂಬರ್ ಒನ್

Public TV
Last updated: June 19, 2021 11:54 am
Public TV
Share
3 Min Read
FotoJet 9 2
SHARE

ಮೈಸೂರು: 45 ವರ್ಷ ಮೇಲ್ಪಟ್ಟ 10 ಲಕ್ಷಕ್ಕೂ ಅಧಿಕ ಜನರಿಗೆ ಮೈಸೂರು ಜಿಲ್ಲೆಯಲ್ಲಿ ಕೋವಿಡ್-19 ಲಸಿಕೆ ನೀಡಲಾಗಿದೆ. ಕೊರೊನಾ ಸೋಂಕಿನ ಮೂರನೇ ಅಲೆ ಬರುವ ಮುನ್ನವೇ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ. ಈ ನಿಟ್ಟಿನಲ್ಲಿ ಮೈಸೂರು ಜಿಲ್ಲಾಡಳಿ ಕ್ಷಿಪ್ರವಾಗಿ ಕಾರ್ಯ ನಿರ್ವಹಿಸುತ್ತಿದೆ. ಜಿಲ್ಲೆಯ 34,06,521 ಜನಸಂಖ್ಯೆಯಲ್ಲಿ – 24,75,988 ಜನರಿಗೆ ಲಸಿಕೆ ನೀಡಬೇಕಾಗಿದ್ದು, ಇಲ್ಲಿವರೆಗೂ 10,30,825 ಮಂದಿಗೆ ನೀಡಲಾಗಿದೆ. 45 ವರ್ಷ ಮೇಲ್ಪಟವರಿಗೆ ಮೊದಲ ಡೋಸ್‍ನಲ್ಲಿ ಶೇ. 73.54ರಷ್ಟು ಪ್ರಗತಿ ಸಾಧಿಸಿ ರಾಜ್ಯದಲ್ಲಿ ಮೈಸೂರು ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಎರಡನೇ ಡೋಸ್ 1,24,674 ಮಂದಿಗೆ ಹಾಕಲಾಗಿದೆ.

corona vaccine 1 medium

ಅದೇ ರೀತಿ 18ರಿಂದ 44 ವರ್ಷದೊಳಗಿನವರಲ್ಲಿ ಇದುವರೆಗೂ 1,34,277 ಲಸಿಕೆ ಹಾಕಲಾಗಿದೆ. ಲಸಿಕೆ ಪಡೆದರೆ ಜನರ ಜೀವ ಸುರಕ್ಷಿತವಾಗಿರಲಿದ್ದು ಸೋಂಕು ತಗುಲಿದರೂ ಚಿಕಿತ್ಸೆ ನೀಡುವುದು ಸುಲಭವಾಗಲಿದೆ. ಹೀಗಾಗಿ ನಿತ್ಯ ಗರಿಷ್ಠ ಮಟ್ಟದಲ್ಲಿ ಲಸಿಕೆ ನೀಡುವ ಗುರಿ ನಿಗದಿಪಡಿಸಿಕೊಂಡಿದ್ದು, ಪ್ರಸ್ತುತ ಲಸಿಕೆ ಲಭ್ಯತೆ ಪ್ರಕಾರ ದಿನ ಸುಮಾರು 6,000 ಮಂದಿಗೆ ವ್ಯಾಕ್ಸಿನೇಷನ್ ಮಾಡಲಾಗುತ್ತಿದೆ.

170 ಪ್ರಾಥಮಿಕ ಆರೋಗ್ಯ ಕೇಂದ್ರ, 6 ಸಾರ್ವಜನಿಕರ ಆಸ್ಪತ್ರೆಗಳು, ಜಿಲ್ಲಾ ಆಸ್ಪತ್ರೆ, ಮೆಡಿಕಲ್ ಆಸ್ಪತ್ರೆ, ಇಎಸ್‍ಐ, ರೈಲ್ವೆ ಹಾಗೂ ಬೀಡಿ ಕಾರ್ಮಿಕರ ಆಸ್ಪತ್ರೆಗಳಲ್ಲಿ ಲಸಿಕೆ ನೀಡಲಾಗುತ್ತಿದೆ. ನಿತ್ಯವೂ ಲಸಿಕೆ ಲಭ್ಯತೆ ಆಧಾರದ ಮೇಲೆ ವ್ಯಾಕ್ಸಿನೇಷನ್ ನೀಡಲಾಗುತ್ತಿದ್ದು, ನಿಗದಿತ ಸಮಯದೊಳಗೆ ಗುರಿ ತಲುಪಲು ಜಿಲ್ಲಾಡಳಿತ ಶ್ರಮಿಸುತ್ತಿದೆ.

Corona Vaccine 3

ವೈದ್ಯರು, ಪೊಲೀಸರು, ಆರೋಗ್ಯ ಕಾರ್ಯಕರ್ತೆಯರು, ಪತ್ರಕರ್ತರು ಸೇರಿದಂತೆ ಹಲವರಿಗೆ ಈಗಾಗಲೇ ಲಸಿಕೆ ನೀಡಲಾಗಿದೆ. ಉಳಿದಂತೆ ವಿಶೇಷಚೇತನರು, ಕೈದಿಗಳು, ಶವಾಗಾರದಲ್ಲಿ ಕಾರ್ಯನಿರ್ವಹಿಸುವವರು, ಸ್ವಯಂಸೇವಕರು, ಶಿಕ್ಷಕರು, ಸಾರಿಗೆ ಇಲಾಖೆ ಸಿಬ್ಬಂದಿ, ಆಟೋ ಮತ್ತು ಕ್ಯಾಬ್ ಚಾಲಕರು, ಸೆಸ್ಟ್ ಸಿಬ್ಬಂದಿ, ನೀರು ಸರಬರಾಜು ಇಲಾಖೆ, ಅಗ್ನಿಶಾಮಕ ದಳ, ಅಂಚೆ ಇಲಾಖೆ, ಬೀದಿಬದಿ ವ್ಯಾಪಾರಿಗಳು, ಭದ್ರತಾ ಸಿಬ್ಬಂದಿ, ನ್ಯಾಯಾಲಯ ಸಿಬ್ಬಂದಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಆಸ್ಪತ್ರೆಗಳಿಗೆ ಔಷಧಗಳನ್ನು ನೀಡುತ್ತಿರುವವರಿಗೆ ವ್ಯಾಕ್ಸಿನ್ ಹಾಕಲಾಗುತ್ತಿದೆ.

corona vaccine students 2

ಮೇನಲ್ಲಿ ಸಾವಿರಕ್ಕೂ ಅಧಿಕ ಸಾವು:
ಕೋವಿಡ್ ಎರಡನೇ ಅಲೆಯ ಅಬ್ಬರದಲ್ಲಿ ಮೈಸೂರು ನಗರದಲ್ಲೇ ಮೇ ತಿಂಗಳಲ್ಲಿ ಮೃತಪಟ್ಟವರ ಸಂಖ್ಯೆ ಒಂದು ಸಾವಿರಕ್ಕೂ ಹೆಚ್ಚು. ವಿವಿಧ ಅಂಕಿ ಅಂಶಗಳ ಪ್ರಕಾರ ಈ ಸಂಖ್ಯೆ ಸತ್ಯವಾಗಿದೆ. ಮೈಸೂರು ನಗರದಲ್ಲಿ ಕೋವಿಡ್ ಸೋಂಕಿಗೆ ತುತ್ತಾಗಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಒಂದು ಸಾವಿರಕ್ಕೂ ಹೆಚ್ಚು ಕೋವಿಡ್ ಸೋಂಕಿತರ ಅಂತ್ಯ ಸಂಸ್ಕಾರ ನಡೆದಿದೆ. ಇದನ್ನೂ ಓದಿ: ಮೈಸೂರಲ್ಲಿ ಕೊರೊನಾ ಡೆತ್ ರೇಟ್ ಹೆಚ್ಚಾಗೋಕೆ ಕಾರಣ ತಿಳಿಸಿದ ಡಿಸಿ ಬಗಾದಿ ಗೌತಮ್

ಮೈಸೂರು ಮಹಾನಗರ ಪಾಲಿಕೆಯ ಜನನ-ಮರಣ ವಿಭಾಗದ ದಾಖಲಾತಿಯ ಪ್ರಕಾರ ಮೇ ತಿಂಗಳಲ್ಲಿ ಒಂದು ಸಾವಿರ ಜನ ಮೃತಪಟ್ಟಿದ್ದಾರೆ. ಏಪ್ರಿಲ್ ತಿಂಗಳಿನಲ್ಲಿ 372 ಸೋಂಕಿತರ ಶವ ಸಂಸ್ಕಾರ ನಡೆದಿದೆ. ಜೂನ್ 6ರವರೆಗೂ 129 ಜನೆ ಅಂತ್ಯಸಂಸ್ಕಾರ 129 ಮಂದಿಯ ಮಾಡಲಾಗಿದೆ. ಇದನ್ನೂ ಓದಿ: 2 ರಿಂದ 4 ವಾರದ ಒಳಗಡೆ ಮೂರನೇ ಕೊರೊನಾ ಅಲೆ – ತಜ್ಞರ ಎಚ್ಚರಿಕೆ

corona vaccine students 4

ಕೋವಿಡ್‍ನಿಂದ ಮೃತಪಟ್ಟವರ ಶವ ಸಂಸ್ಕಾರಕ್ಕಾಗಿಯೇ ಪಾಲಿಕೆ ಆಡಳಿತ ಹಿಂದೂಗಳಿಗೆ ಮೂರು, ಮುಸ್ಲಿಮರಿಗೆ ಎರಡು, ಕ್ರಿಶ್ಚಿಯನ್ನರಿಗೆ ನಾಲ್ಕು ಒಟ್ಟು 9 ಸ್ಮಶಾನಗಳನ್ನು ಮೀಸಲಿಟ್ಟಿದೆ. ಇಲ್ಲಿ ನಡೆದಿರುವ ಅಂತ್ಯ ಸಂಸ್ಕಾರಗಳ ಲೆಕ್ಕವೇ ಮೇ ತಿಂಗಳಲ್ಲಿ ಒಂದು ಸಾವಿರ ದಾಟಿದೆ. ಕೋವಿಡ್‍ನಿಂದ ಮೃತಪಟ್ಟರೂ ಪಾಲಿಕೆ ವ್ಯಾಪ್ತಿಯ ಯಾವೊಂದು ಸ್ಮಶಾನದಲ್ಲಿ ಅಂತ್ಯಸಂಸ್ಕಾರ ನಡೆಸದೆ ತಮ್ಮ ಜಮೀನು, ಊರಿಗೆ ಕೊಂಡೊಯ್ದು ಅಂತ್ಯಸಂಸ್ಕಾರ ನಡೆಸಿದವರ ಲೆಕ್ಕ ಇದರಲ್ಲಿ ಸೇರ್ಪಡೆಯಾಗಿಲ್ಲ. ಇದನ್ನೂ ಓದಿ: ದೇಶದಲ್ಲಿ 74 ದಿನಗಳ ನಂತ್ರ ಅತಿ ಕಡಿಮೆ ಸಕ್ರಿಯ ಪ್ರಕರಣ -ಗುಣಮುಖರ ಪ್ರಮಾಣ ಶೇ.96.16

coronavirus vaccine Serum Institute COVID 19

ಮೈಸೂರಿನ ಆಸ್ಪತ್ರೆಗಳಿಗೆ ದಾಖಲಾಗಿದ್ದ ಜಿಲ್ಲೆಯ ಗ್ರಾಮೀಣ ಪ್ರದೇಶದವರು ಹಾಗೂ ಹೊರ ಜಿಲ್ಲೆಯ ಕೆಲವು ಕೋವಿಡ್ ಪೀಡಿತರು ಮೃತಪಟ್ಟ ಬಳಿಕ ಪಾಲಿಕೆಯ ಸ್ಮಶಾನಗಳಲ್ಲೇ ಅಂತ್ಯಸಂಸ್ಕಾರ ನಡೆಸಲಾಗಿದೆ.  ಇದನ್ನೂ ಓದಿ: ವಿಶ್ವ ನಾಯಕರ ಪೈಕಿ ಶೇ.66 ಅಂಕದೊಂದಿಗೆ ಮೋದಿ ನಂಬರ್ 1

TAGGED:Corona VacicneCorona VirusCovid 19karnatakamysuruPublic TVಕರ್ನಾಟಕಕೊರೊನ ಲಸಿಕೆಕೊರೊನಾ ವೈರಸ್ಕೋವಿಡ್ 19ಪಬ್ಲಿಕ್ ಟಿವಿಮೈಸೂರು
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

soraba bjp worker
Crime

ಶಿವಮೊಗ್ಗದ ಸೊರಬದಲ್ಲಿ ಬಿಜೆಪಿ ಮುಖಂಡನ ಪತ್ನಿ ನೇಣಿಗೆ ಶರಣು – ಪತಿ ಬಂಧನ

Public TV
By Public TV
3 hours ago
Donovan Ferreira
Cricket

ಪಂಜಾಬ್‌ ಗೆಲುವಿನ ಓಟಕ್ಕೆ ಬ್ರೇಕ್‌ – ರಾಜಸ್ಥಾನ್‌ಗೆ 6 ವಿಕೆಟ್‌ಗಳ ಜಯ

Public TV
By Public TV
4 hours ago
Apekshaben Sonis victory
Latest

100% ಮುಸ್ಲಿಂ ಮತದಾರರ ವಾರ್ಡ್‌ನಲ್ಲಿ ಸ್ವತಂತ್ರ ಹಿಂದೂ ಅಭ್ಯರ್ಥಿಗೆ ಗೆಲುವು

Public TV
By Public TV
4 hours ago
01 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-1

Public TV
By Public TV
4 hours ago
02 22
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-2

Public TV
By Public TV
4 hours ago
03 20
Big Bulletin

ಬಿಗ್‌ ಬುಲೆಟಿನ್‌ 28 April 2026 ಭಾಗ-3

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?