ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ಸಮೀಪದ ದಾಸನಪುರದಲ್ಲಿ, ವಾಯ್ಸ್ ಆಫ್ ನೀಡ್ ಫೌಂಡೇಶನ್ ವತಿಯಿಂದ ದಿವ್ಯಾಂಗರಿಗೆ ಕೋವಿಡ್ ಲಸಿಕೆ ಹಾಗೂ ದಿನಸಿ ಪದಾರ್ಥಗಳ ಕಿಟ್ ಗಳನ್ನು ವಿತರಿಸಲಾಯಿತು.
- Advertisement 2
ಲಸಿಕೆ ಮತ್ತು ದಿನಸಿ ಪದಾರ್ಥಗಳ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಯಲಹಂಕ ಗ್ರಾಮಾಂತರ ಬಿಜೆಪಿ ಅಧ್ಯಕ್ಷ ಹನುಮಯ್ಯ ಚಾಲನೆ ನೀಡಿದರು. ಇದುವರೆಗೂ ದಾಸನಪುರ ಹೋಬಳಿಯಲ್ಲಿ 700 ರಿಂದ 800 ದಿವ್ಯಾಂಗರಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಈ ಸಂಸ್ಥೆಯ ಉದ್ದೇಶ ದಾಸನಪುರ ಹೋಬಳಿಯ ಎಲ್ಲಾ ದಿವ್ಯಾಂಗರಿಗೆ ಸಂಸ್ಥೆಯಿಂದ ಉಚಿತ ಕೋವಿಡ್ ಲಸಿಕೆಯನ್ನು ನೀಡಬೇಕೆಂದಿದೆ ಅದಕ್ಕಾಗಿ ಲಸಿಕಾ ಅಭಿಯಾನ ಆರಂಭಿಸಿ ಜನರ ಸೇವೆಗೆ ಮುಂದಾಗಿದೆ. ಇದನ್ನೂ ಓದಿ: 45 ವರ್ಷ ಮೇಲ್ಪಟ್ಟ 6 ಲಕ್ಷಕ್ಕೂ ಹೆಚ್ಚು ಮಂದಿಗೆ ವ್ಯಾಕ್ಸಿನೇಷನ್ – ಬೆಂಗಳೂರು ವರದಿ ಬಿಡುಗಡೆ
- Advertisement 3
- Advertisement 4
ದಾಸನಪುರದಲ್ಲಿ ಈಗಾಗಲೇ ದಿವ್ಯಾಂಗರಿಗೆ ಕೋವಿಡ್ ಲಸಿಕೆಯನ್ನು ನೀಡಲಾಗುತ್ತಿದ್ದು, ಒಟ್ಟಿನಲ್ಲಿ ಈ ಸಾರ್ಥಕ ಕಾರ್ಯಕ್ಕೆ ವಾಯ್ಸ್ ಆಫ್ ನೀಡ್ ಫೌಂಡೇಶನ್ಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ. ಈ ವೇಳೆ ಅರುಣ್, ಹನುಮಯ್ಯ, ಬಾಲು, ವಸಂತ್, ಕೇಶವ್ ಇನ್ನಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.