Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿಜಯ್ ಮಲ್ಯ ದಿವಾಳಿ ಎಂದು ಘೋಷಿಸಿದ ಯುಕೆ ಕೋರ್ಟ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ವಿಜಯ್ ಮಲ್ಯ ದಿವಾಳಿ ಎಂದು ಘೋಷಿಸಿದ ಯುಕೆ ಕೋರ್ಟ್

Latest

ವಿಜಯ್ ಮಲ್ಯ ದಿವಾಳಿ ಎಂದು ಘೋಷಿಸಿದ ಯುಕೆ ಕೋರ್ಟ್

Public TV
Last updated: July 26, 2021 10:18 pm
Public TV
Share
3 Min Read
vijay mallya
SHARE

– ಭಾರತೀಯ ಬ್ಯಾಂಕ್‍ಗಳಿಗೆ ಬಹುದೊಡ್ಡ ವಿಜಯ

ಲಂಡನ್: ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯನನ್ನು ಲಂಡನ್ ಹೈ ಕೋರ್ಟ್ ದಿವಾಳಿ ಎಂದು ಘೋಷಿಸಿದೆ. ಈ ಮೂಲಕ ಭಾರತೀಯ ಬ್ಯಾಂಕ್‍ಗಳಿಗೆ ಜಯ ಸಿಕ್ಕಂತಾಗಿದೆ.

ಎಸ್‍ಬಿಐ ನೇತೃತ್ವದ ಭಾರತೀಯ ಬ್ಯಾಂಕ್‍ಗಳ ಒಕ್ಕಟವೂ ಇದೀಗ ಸ್ಥಗಿತಗೊಂಡಿರುವ ವಿಜಯ್ ಮಲ್ಯ ಅವರ ಕಿಂಗ್‍ಫಿಶರ್ ಏರ್ ಲೈನ್ಸ್ ಗೆ ನೀಡಿದ ಸಾಲವನ್ನು ವಸೂಲಿ ಮಾಡಲು ಈ ತೀರ್ಪು ಸಹಾಯ ಮಾಡುತ್ತದೆ. ಮಲ್ಯ ಅವರು ಹೈ ಕೋರ್ಟ್ ತೀರ್ಪಿನ ಮೇಲ್ಮನವಿ ಸಲ್ಲಿಸಲು ಪ್ರಯತ್ನಿಸಿದ್ದರು ಆದರೆ ಅನುಮತಿ ನಿರಾಕರಿಸಲಾಗಿದೆ ಎಂದು ವರದಿಯಾಗಿದೆ.

vijay mallya 759

ಮೇ ತಿಂಗಳಲ್ಲಿ ಯುಕೆ ಕೋರ್ಟ್ ಎಸ್‍ಬಿಐ ನೇತೃತ್ವದ ಸಾಲದಾತ ಒಕ್ಕೂಟದ ದಿವಾಳಿತನದ ಕುರಿತು ಸಲ್ಲಿಸಿದ್ದ ಅರ್ಜಿಯನ್ನು ಎತ್ತಿ ಹಿಡಿದಿತ್ತು. ಭಾರತದಲ್ಲಿ ಮಲ್ಯ ಅವರ ಆಸ್ತಿಗಳ ಮೇಲಿನ ಭದ್ರತೆಯನ್ನು ಮನ್ನಾ ಮಾಡುವ ಪರವಾಗಿ ಅರ್ಜಿಯನ್ನು ಎತ್ತಿಹಿಡಿದಿತ್ತು.

ಭದ್ರತಾ ಹಕ್ಕುಗಳನ್ನು ಮನ್ನಾ ಮಾಡುವುದನ್ನು ತಡೆಯುವಂತೆ ಮಲ್ಯ ಪರ ವಕೀಲರು ವಾದ ಮಂಡಿಸಿದ್ದರು. ಆದರೆ ಈ ಮನವಿಯಲ್ಲಿ ಯಾವುದೇ ಸಾರ್ವಜನಿಕ ನೀತಿ ಇಲ್ಲ ಎಂದು ಘೋಷಿಸಿ ಬ್ಯಾಂಕ್‍ಗಳ ಪರವಾಗಿ ಚೀಫ್ ಇನ್ಸೋಲ್ವೆನ್ಸೀಸ್ ಆ್ಯಂಡ್ ಕಂಪನೀಸ್ ಕೋರ್ಟ್ (ಐಸಿಸಿ) ಜಡ್ಜ್ ಮೈಕೆಲ್ ಬ್ರಿಗ್ಸ್ ಆದೇಶ ನಿಡಿದ್ದರು.

vijay mallya

ಫೆಬ್ರವರಿಯಲ್ಲಿ ಡೆಪ್ಯೂಟಿ ಐಸಿಸಿ ನ್ಯಾಯಾಧೀಶ ಬರ್ನೆಟ್ ನೀಡಿದ ಆದೇಶವನ್ನು ಪ್ರಶ್ನಿಸಿ ವಿಜಯ್ ಮಲ್ಯ ಹೈ ಕೋರ್ಟ್‍ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಆರ್ಥಿಕ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಬಾರ್ನೆಟ್ ಅವರು, ಭವಿಷ್ಯದ ಕಾನೂನು ಶುಲ್ಕ ಹಾಗೂ ತನ್ನ ಜೀವನ ಸಾಗಿಸಲು ಮಾಸಿಕ 23 ಲಕ್ಷ ರೂ.ಗಳನ್ನು ಕೋರ್ಟ್ ಫಂಡ್ಸ್ ಆಫೀಸ್‍ನಿಂದ ನೀಡಲು ಅನುಮತಿಸಿದ್ದರು. ಆದರೆ ಇದರಲ್ಲಿ ಭಾರತದಲ್ಲಿನ ವಕೀಲರಿಗೆ ನೀಡುವ ಹಣವನ್ನು ಸೇರಿಸಿರಲಿಲ್ಲ. ಹೀಗಾಗಿ ಇದೀಗ ಭಾರತದಲ್ಲಿನ ವಕೀಲರ ಶುಲ್ಕವನ್ನು ಸಹ ಕೋಟ್ರ್ಸ್ ಫಂಡ್ಸ್ ಆಫೀಸ್‍ನಿಂದ ನೀಡಬೇಕು ಎಂದು ಅರ್ಜಿ ಸಲ್ಲಿಸಿದ್ದಾರೆ. ಒಟ್ಟು 12 ಕೋಟಿ ರೂ. ಆಸ್ತಿಯನ್ನು ಬಳಸಲು ಮಲ್ಯಗೆ ಬರ್ನೆಟ್ ಅವರು ಆಗ ಅನುಮತಿ ನೀಡಿದ್ದರು.

ಈಗಾಗಲೇ ಮಲ್ಯ ಭಾರತದಲ್ಲಿನ ಕಾನೂನು ಸಂಸ್ಥೆಗಳಿಗೆ ನೀಡುವ 5.7 ಕೋಟಿ ರೂ.ಗಳನ್ನು ಬಾಕಿ ಉಳಿಸಿಕೊಂಡಿದ್ದಾರೆ. ಅಲ್ಲದೆ ಭಾರತದಲ್ಲಿನ ಭವಿಷ್ಯದ ಕಾನೂನು ವೆಚ್ಚಗಳಿಗಾಗಿ ಅವರಿಗೆ ಇನ್ನೂ 2 ಕೋಟಿ ರೂ. ಅಗತ್ಯವಿದೆ ಎಂದು ಬ್ರಿಟಿಷ್ ನ್ಯಾಯಾಲಯಕ್ಕೆ ತಿಳಿಸಲಾಗಿತ್ತು.

money web

ಮಲ್ಯ ಪರ ವಕೀಲ ಫಿಲಿಪ್ ಮಾರ್ಷಲ್ ಕ್ಯೂಸಿ ಅವರು ಈ ಕುರಿತು ನ್ಯಾಯಾಲಯಕ್ಕೆ ತಿಳಿಸಿದ್ದು, ನನ್ನ ಕಕ್ಷಿದಾರ ಈ ಪ್ರಕರಣಗಳಿಗೆ ಸ್ವತಃ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಏಕೆಂದರೆ ಅವರು `ಜೈಲುವಾಸ ಅನುಭವಿಸುತ್ತಿದ್ದಾರೆ’. ವಿಜಯ್ ಮಲ್ಯ ಅವರ ರಾಜಿ ಇತ್ಯರ್ಥದ 3 ಪ್ರೊಸಿಡಿಂಗ್ಸ್‍ಗಳು ಭಾರತದ ಸುಪ್ರೀಂ ಕೋರ್ಟ್ ಮುಂದಿವೆ. ತೀರ್ಪಿನ ಸಾಲದ ಮೇಲೆ ವಿಧಿಸಲಾಗುತ್ತಿರುವ ಶೇ.11.5 ಬಡ್ಡಿ ಹಾಗೂ `ಪರಾರಿಯಾದ ಆರ್ಥಿಕ ಅಪರಾಧಿ’ ಹಣೆಪಟ್ಟಿ ಕುರಿತು ಮೂರು ಸೆಟ್‍ಗಳ ವಿಚಾರಣೆಗಳು ಭಾರತದ ಸುಪ್ರೀಂ ಕೋರ್ಟ್‍ನಲ್ಲಿ ನಡೆಯುತ್ತಿವೆ ಎಂದು ಅವರು ಹೇಳಿದ್ದರು.

ಬಡ್ಡಿದರ ಪಾವತಿಸುವ ಸವಾಲಿನಲ್ಲಿ ಮಲ್ಯ ಯಶಸ್ವಿಯಾದರೆ, ತೀರ್ಪಿನ ಸಾಲವನ್ನು 5,851 ಕೋಟಿ ರೂ.ಗೆ ಇಳಿಸಲಾಗುತ್ತದೆ. ಉಳಿದ ಹಣವನ್ನು ಆಸ್ತಿಗಳ ಮೂಲಕ ಪೂರೈಸಬಹುದು. ಅವರ ಆಸ್ತಿಗಳು ಮೂರನೇ ವ್ಯಕ್ತಿಗಳ ಕೊಡುಗೆಗಳಾಗಿವೆ. ರಾಜಿ ಇತ್ಯರ್ಥಕ್ಕೆ ಅನುಮೋದನೆ ನೀಡಿದರೆ ತೀರ್ಪಿನ ಸಂಪೂರ್ಣ ಸಾಲವನ್ನು ತೀರಿಸಲಾಗುತ್ತದೆ ಎಂದು ಅವರು ನ್ಯಾಯಾಲಯಕ್ಕೆ ವಿವರಿಸಿದ್ದರು.

VIJAY MALLYA

ಭಾರತದಲ್ಲಿನ ವಕೀಲರಿಗೆ ಸೂಚನೆ ನೀಡಲು ಅವಕಾಶ ನೀಡದಿರುವುದು ಆಕ್ರಮಣಕಾರಿ. ಅಲ್ಲದೆ ಭಾರತದಲ್ಲಿ ಈ ಪ್ರಕರಣಗಳು ಪ್ರಗತಿ ಸಾಧಿಸುತ್ತಿಲ್ಲ. ವಿಚಾರಣೆಗಳು ಪ್ರಗತಿ ಸಾಧಿಸದಿರಲು ಹಣದ ಕೊರತೆ ಹಾಗೂ ಕೊರೊನಾ ಪರಿಸ್ಥಿತಿ ಕಾರಣ ಎಂದು ಮಲ್ಯ ಪರ ವಕೀಲ ಮಾರ್ಷಲ್ ಅವರು ಈ ಹಿಂದೆ ಕೋರ್ಟ್‍ಗೆ ತಿಳಿಸಿದ್ದರು.

TAGGED:bankruptLondon High CourtPublic TVvijay mallyaದಿವಾಳಿಕೋರಪಬ್ಲಿಕ್ ಟಿವಿಲಂಡನ್ ಹೈ ಕೋರ್ಟ್ವಿಜಯ್ ಮಲ್ಯ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

CRIME
Bengaluru City

ಬೆಂಗಳೂರು | ಮನೆ ಬಳಿ ಆಟೋ ನಿಲ್ಲಿಸೋ ವಿಚಾರಕ್ಕೆ ಗಲಾಟೆ – ಸ್ನೇಹಿತನ ಕೊಲೆಯಲ್ಲಿ ಅಂತ್ಯ

Public TV
By Public TV
1 minute ago
pakistan claims 145 terrorists 17 security personnel killed in coordinated balochistan operations
Latest

ದೊಡ್ಡ ಕಾರ್ಯಾಚರಣೆ| 145 ಬಲೂಚ್‌ ಉಗ್ರರ ಹತ್ಯೆ, 17 ಭದ್ರತಾ ಸಿಬ್ಬಂದಿ ಸಾವು: ಪಾಕಿಸ್ತಾನ

Public TV
By Public TV
28 minutes ago
CPI video of fighting for arrest of Davangere riot accused goes viral
Crime

ʻಕೈʼ ಮುಖಂಡನ ಮಕ್ಕಳಿಂದ ಪೊಲೀಸರ ಮೇಲೆ ಹಲ್ಲೆ ಕೇಸ್ -‌ ಬಂಧನಕ್ಕೆ ಹೋರಾಡಿದ್ದ ಲೇಡಿ ಸಿಪಿಐ ವಿಡಿಯೋ ವೈರಲ್‌

Public TV
By Public TV
50 minutes ago
Body of boy who went missing 3 days ago found in Bengaluru water board sump 2
Bengaluru City

3 ದಿನದ ಹಿಂದೆ ನಾಪತ್ತೆಯಾಗಿದ್ದ ಬಾಲಕ ಜಲಮಂಡಳಿಯ ಸಂಪ್‌ನಲ್ಲಿ ಶವವಾಗಿ ಪತ್ತೆ

Public TV
By Public TV
1 hour ago
Budget 2026 1 1
Latest

ವಿಕಸಿತ ಭಾರತಕ್ಕೆ ಕೇಂದ್ರದ ಯುವಶಕ್ತಿ ಬಜೆಟ್ – ಜೀರಾಮ್‌ಜೀ ಯೋಜನೆಗೆ 95,692 ಕೋಟಿ ಮೀಸಲು; ಹಿಂದಿಗಿಂತಲೂ ಹೆಚ್ಚು!

Public TV
By Public TV
9 hours ago
big bulletin 01 February 2026 part 1
Big Bulletin

ಬಿಗ್‌ ಬುಲೆಟಿನ್‌ 01 February 2026 ಭಾಗ-1

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?