Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ವಿದೇಶಗಳಿಗಿಂತ ನಮ್ಮೂರೇ ಸಾಕು: ಸೌಂದರ್ಯ ಜಯಮಾಲಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ವಿದೇಶಗಳಿಗಿಂತ ನಮ್ಮೂರೇ ಸಾಕು: ಸೌಂದರ್ಯ ಜಯಮಾಲಾ

Bengaluru City

ವಿದೇಶಗಳಿಗಿಂತ ನಮ್ಮೂರೇ ಸಾಕು: ಸೌಂದರ್ಯ ಜಯಮಾಲಾ

Public TV
Last updated: May 17, 2020 6:35 pm
Public TV
Share
3 Min Read
SOUNDARYA JAYAMALA 1
SHARE

ಬೆಂಗಳೂರು: ವಿದೇಶಕ್ಕೆ ಹೋಗಿ ಬಂದವರೆಂದರೆ ಪ್ರತಿಷ್ಟೆಯ ಪ್ರಶ್ನೆಯಾಗಿತ್ತು. ಆದರೆ ಇದೀಗ ವಿದೇಶಕ್ಕೆ ಹೋಗಿ ಬಂದವರೆಂದರೆ ದೂರ ಉಳಿಯುವ ಪರಿಸ್ಥಿತಿ ಎದುರಾಗಿದೆ. ಎಲ್ಲಾ ಕೊರೊನಾ ಮಾಯೆ. ವಿದೇಶದಲ್ಲಿ ಸಿಲುಕಿದವರ ಸ್ಥಿತಿ ಹೇಗಿತ್ತು, ಯಾವ ರೀತಿಯ ತೊಂದರೆ ಅನುಭವಿಸಿದರು ಎಂದು ಅವರ ಬಾಯಿಂದಾನೇ ಕೇಳಿದರೆ ಗೊತ್ತಾಗುತ್ತದೆ. ವಿದೇಶದಲ್ಲಿ ಪಟ್ಟ ಕಷ್ಟ, ಪಡಿಪಾಟಲು ಹೇಳತೀರದು. ಆ ಸಂದರ್ಭವನ್ನು ಇದೀಗ ಹಿರಿಯ ನಟಿ ಹಾಗೂ ವಿಧಾನ ಪರಿಷತ್ ಸದಸ್ಯೆ ಜಯಮಾಲಾ ಪುತ್ರಿ ಸೌಂದರ್ಯ ಜಯಮಾಲಾ ಅವರು ವಿವರಿಸಿದ್ದಾರೆ.

soundaryajay 72370803 698357093990349 9102256885747954226 n

ಕೊರೊನಾ ತುರ್ತು ಪರಿಸ್ಥಿತಿಯ ಈ ಸಂದರ್ಭದಲ್ಲಿ ನೂರಾರು ಜನ ಭಾರತೀಯರು ವಿವಿಧ ದೇಶಗಳಲ್ಲಿ ಸಿಲುಕಿದ್ದಾರೆ. ಇವರನ್ನು ತವರಿಗೆ ಕರೆತರಲು ಸರ್ಕಾರ ಸಹ ಸಾಹಸಪಡುತ್ತಿದ್ದು, ಒಂದೇ ಭಾರತ್ ಮಿಷನ್ ಮೂಲಕ ಏರ್‍ಲಿಫ್ಟ್ ಮಾಡಲಾಗುತ್ತಿದೆ. ಆದರೂ ವಿದೇಶಗಳಲ್ಲಿ ಸಿಲುಕಿದವರ ಸ್ಥಿತಿ ಹೇಳತೀರದಾಗಿದೆ. ಇಂಗ್ಲೆಂಡ್‍ನಲ್ಲಿ ಸಿಲುಕಿದ್ದ ಜಯಮಾಲಾ ಪುತ್ರಿ ಸೌಂದರ್ಯ ಜಯಮಾಲಾ ಅವರು ತಮ್ಮ ಅನುಭವ ಹಂಚಿಕೊಂಡಿದ್ದಾರೆ.

ಕಳೆದೆರಡು ತಿಂಗಳು ಅನುಭವಿಸಿದ ಯಾತನೆ ನೆನಸಿಕೊಂಡರೆ ಮತ್ತೆ ಯಾವತ್ತೂ ಬೇರೆ ದೇಶಕ್ಕೆ ಹೋಗಬಾರದು. ವಿದೇಶಗಳಿಗಿಂತ ನಮ್ಮೂರೇ ಸಾಕು ಎಂದೆನಿಸಿದೆ ಎಂದು ಸೌಂದರ್ಯ ಜಯಮಾಲಾ ನಿಟ್ಟುಸಿರು ಬಿಟ್ಟಿದ್ದಾರೆ.

b467c66b8767fe9f2ea11d5cb8af6cfb

ಇಂಗ್ಲೆಂಡ್‍ನ ವೇಲ್ಸ್ ನ ‘ಸ್ವಾನ್‍ಸೀ ವಿವಿ’ ಯಲ್ಲಿ ಅಂತಿಮ ವರ್ಷದ ಬಿಎಸ್‍ಸಿ(ಬಾಟನಿ) ಆನರ್ಸ್ ವ್ಯಾಸಂಗ ಮಾಡುತ್ತಿದ್ದೆ. ಫ್ರೆಂಡ್ ಜೊತೆ ಅಲ್ಲಿಯೇ ಅಪಾರ್ಟ್‍ಮೆಂಟ್‍ವೊಂದರಲ್ಲಿ ಬಾಡಿಗೆಗೆ ನೆಲೆಸಿದ್ದೆವು.

ನಿರಾಶ್ರಿತಳಾಗಿ ಉಳಿದುಕೊಂಡಿದ್ದೆ

ಇತ್ತೀಚೆಗೆ ಕೊರೊನಾದಿಂದಾಗಿ ಇಂಗ್ಲೆಂಡ್‍ನಲ್ಲಿ ಏಕಾಏಕಿ ಲಾಕ್‍ಡೌನ್ ಹೇರಲಾಗಿತ್ತು. ಇದರಿಂದಾಗಿ ಎರಡು ತಿಂಗಳುಗಳ ಕಾಲ ಎಲ್ಲೂ ಹೊರಹೋಗದಂತೆ ಬಂಧಿಯಾದ್ದೆವು, ತುಂಬಾ ಭಯವಾಗಿತ್ತು. ಅಲ್ಲದೆ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದಂತೆ, ವಿದೇಶಿ ವಿದ್ಯಾರ್ಥಿಗಳು ಹೊರ ಹೋಗದಂತೆ ನಿರ್ಬಂಧ ಹೇರಲಾಯಿತು. ಇದರ ಬೆನ್ನಲ್ಲೇ ನಮ್ಮ ವಿವಿಯ ಇಬ್ಬರು ಪ್ರೊಫೆಸರ್‍ಗಳು ಹಾಗೂ ಒಬ್ಬ ವಿದ್ಯಾರ್ಥಿ ಕೂಡ ಮೃತಪಟ್ಟರು. ಇನ್ನೂ ಭಯದ ವಾತಾವರಣ ನಿರ್ಮಾಣವಾಯಿತು. ಅಲ್ಲದೆ ಇಡೀ ವಿವಿಯನ್ನು ಸೀಲ್‍ಡೌನ್ ಮಾಡಲಾಯಿತು. ಹೀಗಾಗಿ ಮಾರ್ಚ್ 22ರಂದು ದುಬೈ ಮೂಲಕ ಬೆಂಗಳೂರಿಗೆ ಬರುವ ಪ್ಲ್ಯಾನ್ ಮಾಡಿಕೊಂಡಿದ್ದೆ. ಆದರೆ ಅಲ್ಲಿಯೂ ಪ್ರಯಾಣ ನಿರ್ಬಂಧಿಸಲಾಯಿತು. ಇದರಿಂದ ಮತ್ತೆ ಲಂಡನ್‍ಗೆ ಬರಬೇಕಾದ ಪರಿಸ್ಥಿತಿ ಎದುರಾಯಿತು. ಭಾರತಕ್ಕೆ ಹಿಂದಿರುಗುವ ಹಿನ್ನೆಲೆ ಬಾಡಿಗೆ ಮನೆ ಸಹ ಖಾಲಿ ಮಾಡಿದ್ದೆವು. ಹೀಗಾಗಿ ಲಂಡನ್ ವಿಮಾನ ನಿಲ್ದಾಣದಲ್ಲೇ ನಿರಾಶ್ರಿತಳಾಗಿ ಉಳಿಯುವಂತಾಯಿತು ಎಂದು ವಿದೇಶದಲ್ಲಿ ಪಟ್ಟ ಕಷ್ಟವನ್ನು ನೆನಪು ಮಾಡಿಕೊಂಡಿದ್ದಾರೆ.

 

View this post on Instagram

 

I have traveled through the most dangerous airports, with many cases of COVID transmissions during flight and I have come out of one successfully, currently in quarantine from my second trip. Here is how I escaped COVID-19

A post shared by Soundarya (@soundaryajay) on May 12, 2020 at 9:40am PDT

ವಿಮಾನ ನಿಲ್ದಾಣದಲ್ಲಿ ಹೆಚ್ಚು ದಿನ ಇರಲು ಸಾಧ್ಯವಾಗದ ಕಾರಣ, ಕುವೈತ್‍ನ ಸ್ನೇಹಿತೆಯ ಸಹಾಯದಿಂದ ಮತ್ತೆ ಬಾಡಿಗೆ ಮನೆ ಮಾಲೀಕರಿಗೆ ವಿಷಯ ಮುಟ್ಟಿಸಿದೆ. ನಂತರ ಮನೆಗೆ ತೆರಳಿದೆ. ಆದರೆ ಅದಾಗಲೇ ವಿದ್ಯುತ್, ನೀರು, ಇಂಟರ್‍ನೆಟ್, ಫೋನ್ ಸೇರಿದಂತೆ ಎಲ್ಲ ರೀತಿಯ ಸಂಪರ್ಕ ಕಡಿತಗೊಳಿಸಲಾಗಿತ್ತು. ಇರುವುದರಲ್ಲೇ ನೆಮ್ಮದಿ ಕಂಡುಕೊಂಡ ನನಗೆ, ಸ್ನೇಹಿತೆ ಸಹಾಯ ಮಾಡಿದಳು. ಹೀಗೆ ಭಯದಲ್ಲೇ ದಿನದೂಡುತ್ತಿರುವಾಗ ಕೇಂದ್ರ ಸರ್ಕಾರದಿಂದ ಏರ್‍ಲಿಫ್ಟ್ ಸುದ್ದಿ ಬಂತು. ಈ ಹಿಂದೆ ಕೂಡ ಇದೇ ರೀತಿಯ ಸುದ್ದಿಗಳು ಹರಿದಾಡಿದ್ದರಿಂದ ನಾನು ಮತ್ತೆ ಸುಳ್ಳು ಸುದ್ದಿ ಎಂದುಕೊಂಡಿದ್ದೆ. ಆದರೆ ಏರ್ ಇಂಡಿಯಾ ವಿಮಾನ ಸಂಸ್ಥೆಯಿಂದ ಕರೆ ಬಂದಾಗ ಹೋದ ಜೀವ ಬಂದಂತಾಯಿತು. ಅಲ್ಲದೆ ಲಂಡನ್‍ನಿಂದ ಬೆಂಗಳೂರಿಗೆ ಹೊರಟ ಮೊದಲ ವಿಮಾನದಲ್ಲೇ ನನಗೆ ಟಿಕೆಟ್ ಸಹ ಲಭಿಸಿತ್ತು. ಹೀಗಾಗಿ ಖುಷಿ ಇಮ್ಮಡಿಯಾಯಿತು. ನಂತರ ವಿಮಾನ ಏರಿ ಹೇಗೋ ಬೆಂಗಳೂರಿಗೆ ಬಂದಿಳಿದೆ. ಸದ್ಯ ಬೆಂಗಳೂರಿನ ಹೋಟೆಲ್‍ವೊಂದರಲ್ಲಿ ಕ್ವಾರಂಟೈನ್‍ನಲ್ಲಿದ್ದೇನೆ ಎಂದು ಹೇಳಿದ್ದಾರೆ.

TAGGED:foreignersindiaJayamalaLockdownPublic TVQuarantineSoundarya Jayamalaಕ್ವಾರಂಟೈನ್ಜಯಮಾಲಾಪಬ್ಲಿಕ್ ಟಿವಿಭಾರತಲಾಕ್‍ಡೌನ್ವಿದೇಶಿಗರುಸೌಂದರ್ಯ ಜಯಮಾಲಾ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

Umrah yathra pilgrims
Latest

ಇರಾನ್‌-ಇಸ್ರೇಲ್‌ ಯುದ್ಧ; ಉತ್ತರ ಕನ್ನಡ ಜಿಲ್ಲೆಯ 150 ಕ್ಕೂ ಹೆಚ್ಚು ಯಾತ್ರಿಕರ ಉಮ್ರಾ ಯಾತ್ರೆ ರದ್ದು

Public TV
By Public TV
8 minutes ago
Keir Starmer Emmanuel Macron Friedrich Merz
Latest

ಇರಾನ್‌ ವಿರುದ್ಧ ಅಮೆರಿಕ ಜೊತೆ ಕೈಜೋಡಿಸಲು ಯುಕೆ, ಫ್ರಾನ್ಸ್‌, ಜರ್ಮನಿ ಸಿದ್ಧ

Public TV
By Public TV
36 minutes ago
parents bengaluru
Bengaluru City

ಒಂದನೇ ತರಗತಿಗೆ ದಾಖಲಾತಿ ವಯಸ್ಸಿನ ಮಿತಿ ಸಡಿಲ ಮಾಡಿ: ಸರ್ಕಾರಕ್ಕೆ ಪೋಷಕರ ಮನವಿ

Public TV
By Public TV
1 hour ago
krishna Byregowda
Bengaluru City

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ: ಕೃಷ್ಣ ಭೈರೇಗೌಡ

Public TV
By Public TV
2 hours ago
plane
Bengaluru City

ಇರಾನ್ – ಇಸ್ರೇಲ್ ವಾರ್; ಬೆಂಗಳೂರಿನಿಂದ ಹೊರಡಬೇಕಿದ್ದ 10 ವಿಮಾನಗಳು ಕ್ಯಾನ್ಸಲ್

Public TV
By Public TV
2 hours ago
Israeli strikes 1
Latest

ಆಪರೇಷನ್ ʻರೋರಿಂಗ್ ಲಯನ್ʼ – ಲೆಬನಾನ್‌ ಮೇಲೆ ಇಸ್ರೇಲ್‌ ಮಿಸೈಲ್‌ ಮಳೆ; 31 ಮಂದಿ ಸಾವು

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?