ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಲಿ- ಬೋರ್ಡ್‍ನಲ್ಲಿ ಬರೆದು ಶಿಕ್ಷಕ ಆತ್ಮಹತ್ಯೆ

Public TV
1 Min Read
CKB TEACHER copy

ಚಿಕ್ಕಬಳ್ಳಾಪುರ: ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಲಿ ಎಂದು ಬೋರ್ಡ್ ನಲ್ಲಿ ಬರೆದು ಶಿಕ್ಷಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

CKB 3 copy

ಚಂದ್ರಶೇಖರ್(32) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕನಾಗಿದ್ದು, ಇವರು ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕಿನ ಕನಗಾನಕೊಪ್ಪ ಗ್ರಾಮದ ನಿವಾಸಿ. ಚಂದ್ರಶೇಖರ್ ಅವರು ಮಂಚೇನಹಳ್ಳಿಯ ಅನುದಾನಿತ ಆಚಾರ್ಯ ಪ್ರೌಢಶಾಲೆಯ ಶಿಕ್ಷಕಕನಾಗಿ ಕೆಲಸ ಮಾಡುತ್ತಿದ್ದರು. ಶಾಲಾ ಆಡಳಿತ ಮಂಡಳಿಯಿಂದ ಅನುದಾನಿತ ಶಿಕ್ಷಕನಾಗಿ ಅನುಮೋದನೆ ಮಾಡದ ಹಿನ್ನಲೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.

CKB 1 copy

ತನ್ನ ಆತ್ಮಹತ್ಯೆಗೆ ಆಚಾರ್ಯ ಪ್ರೌಢಶಾಲೆ ಆಡಳಿತ ಮಂಡಳಿ ಕಾರಣ ಎಂದು ಚಂದ್ರಶೇಖರ್ ಡೆತ್‍ನೋಟ್ ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ ಶಾಲೆಯ ಬೋರ್ಡ್ ನಲ್ಲಿ ವಿದ್ಯಾರ್ಥಿಗಳೇ ನಿಮ್ಮ ಭವಿಷ್ಯ ಉಜ್ವಲವಾಗಲಿ. ಹಾಗೂ ನನ್ನೆಲ್ಲಾ ಪ್ರೀತಿ ಪಾತ್ರರಲ್ಲಿ ಕ್ಷಮೆಯಾಚಿಸುತ್ತಿದ್ದೇನೆ ಎಂದು ಕೂಡ ಬರೆದಿದ್ದಾರೆ.

CKB 2 copy

ಮಂಚೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *