– ಕೇವಲ 300 ಮಂದಿ ಭಾಗಿಗಷ್ಟೇ ಅವಕಾಶ
ಮೈಸೂರು: ದಸರಾ ಅಂದ್ರೇನೇ ರೋಮಾಂಚನ ಆಗುತ್ತೆ. ದಸರಾದ ಅದ್ಧೂರಿತನ ನೋಡೋದೇ ಚಂದ. ಆದರೆ ಈ ಬಾರಿ ವಿಶ್ವವಿಖ್ಯಾತ ದಸರಾ ಸಂಭ್ರಮವನ್ನು ಕೊರೊನಾ ಕಿತ್ತುಕೊಂಡಿದೆ. ಇಂದು ಜಂಬೂ ಸವಾರಿ ನಡೆಯಲಿದೆ. ನಿನ್ನೆ ಅರಮನೆಯಲ್ಲಿ ಆಯುಧಪೂಜೆ ನೆರವೇರಿಸಲಾಯ್ತು.
- Advertisement 2
ಪಟ್ಟದ ಆನೆ, ಕುದುರೆ, ಹಸು, ಒಂಟೆಗಳನ್ನ ಆನೆ ಬಾಗಿಲ ಬಳಿಯಿಂದ ಕೋಡಿ ಸೋಮೇಶ್ವರ ಸ್ವಾಮಿ ದೇಗುಲಕ್ಕೆ ಕರೆತರಲಾಯಿತು. ಈ ವೇಳೆ ಪಲ್ಲಕ್ಕಿ ಮೇಲಿದ್ದ ಪಟ್ಟದ ಕತ್ತಿ ಸಮೇತ ರಾಜವಂಶಸ್ಥರು ದೇಗುಲಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ರು. ಅರಮನೆಯ ಕಲ್ಯಾಣ ಮಂಟಪದಲ್ಲಿ ಆಯುಧಗಳಿಗೆ ಯದವೀರ್ ಪೂಜೆ ಸಲ್ಲಿಸಿದ್ರು. ನಂತರ ಸವಾರಿ ತೊಟ್ಟಿಯಲ್ಲಿ ಆನೆ, ಒಂಟೆ, ಕುದುರೆ, ಪಲ್ಲಕಿ, ಕುದುರೆಗಳಿಗೂ ಮತ್ತು ಕಾರುಗಳಿಗೂ ಯದುವೀರ್ ಪೂಜೆ ಸಲ್ಲಿಸಿದ್ರು.
- Advertisement 3
- Advertisement 4
ಅರಮನೆಯ ಕೋಡಿ ಸೋಮೇಶ್ವರ ದೇವಸ್ಥಾನದ ಬಳಿ ಜಂಬೂಸವಾರಿ ಗಜಪಡೆಗೆ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ನೇತೃತ್ವದಲ್ಲಿ ಪೂಜೆ ನೆರವೇರಿತು. ಶೃಂಗಾರಗೊಂಡಿದ್ದ ಆನೆಗಳಿಗೆ ಕಬ್ಬು, ಬಾಳೆಹಣ್ಣು, ತೆಂಗಿನಕಾಯಿ, ಹಣ್ಣು ಬೆಲ್ಲ ತಿನ್ನಿಸಿ ಪೂಜೆ ಸಲ್ಲಿಸಲಾಯ್ತು. ಇದೇ ವೇಳೆ, ಅಭಿಮನ್ಯು ಆನೆಯ ಮಾವುತ, ಕಾವಾಡಿಗನ ಹೆಸರಿನಲ್ಲಿ ಅರ್ಚನೆ ಮಾಡಿಸಲಾಯ್ತು.
300 ಮೀಟರ್ ಜಂಬೂಸವಾರಿ, 300 ಮಂದಿಗಷ್ಟೇ ಅವಕಾಶ:
ಇಂದು ಸರಳ ದಸರೆಯ ಜಂಬೂಸವಾರಿ ನಡೆಯಲಿದೆ. ಇದೇ ಮೊದಲ ಬಾರಿಗೆ 750 ಕೆಜಿ ತೂಕದ ಚಿನ್ನದ ಅಂಬಾರಿಯನ್ನು ಅಭಿಮನ್ಯು ಹೊತ್ತು ಗಾಂಭೀರ್ಯದ ಹೆಜ್ಜೆ ಹಾಕಲಿದ್ದಾನೆ. ಆದರೆ ಮೈಸೂರಿನ ಪ್ರಮುಖ ರಸ್ತೆಗಳಲ್ಲಿ ಅಲ್ಲ. ಇಷ್ಟು ಸಮಯ ಐದೂವರೆ ಕಿಲೋ ಮೀಟರ್ ನಡೀತಿದ್ದ ಜಂಬೂ ಸವಾರಿ ಈ ಬಾರಿ ಕೇವಲ 400 ಮೀಟರ್ಗಷ್ಟೇ ಸೀಮಿತವಾಗಿದೆ. ಅಲ್ಲದೇ ಈ ಬಾರಿ ಕೇವಲ 30 ರಿಂದ 40 ನಿಮಿಷಗಳಲ್ಲಿ ಜಂಬೂಸವಾರಿ ಪೂರ್ಣಗೊಳ್ಳಲಿದೆ.
ಅರಮನೆ ಆವರಣದಲ್ಲಷ್ಟೇ ಸರಳವಾಗಿ ಚಾಮುಂಡಿ ಅಮ್ಮನ ಅಂಬಾರಿ ಸಾಗಲಿದೆ. ಕೇವಲ 300 ಮಂದಿಗಷ್ಟೇ ಅವಕಾಶ ನೀಡಲಾಗಿದೆ. ಇದಕ್ಕಾಗಿ ಕುರ್ಚಿ, ಶಾಮಿಯಾನ ವ್ಯವಸ್ಥೆ ಮಾಡಲಾಗಿದೆ. ಜಂಬೂಸವಾರಿ ತೆರಳುವ ಎಡ ಮತ್ತು ಬಲ ಭಾಗದಲ್ಲಿ ಆಸನದ ವ್ಯವಸ್ಥೆ ಮಾಡಲಾಗಿದೆ. ಕಟ್ಟಡ ಹತ್ತಿ ದಸರಾ ವೀಕ್ಷಣೆಗೆ ಅವಕಾಶ ಇಲ್ಲ. ಇದಕ್ಕಾಗಿ ರಾಜ್ಯ ಸರ್ಕಾರ ಸಕಲ ಸಿದ್ಧತೆಗಳನ್ನು ನಡೆಸಿದೆ. ಅರಮನೆಯಲ್ಲಿ ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿದೆ.
ಇಂದು ಭುವನೇಶ್ವರಿ ದೇವಾಲಯದಲ್ಲಿ ಯದುವೀರ್ ಬನ್ನಿಪೂಜೆ ಸಲ್ಲಿಸಲಿದ್ದಾರೆ. ಬಳಿಕ ಮಧ್ಯಾಹ್ನ 2.59 ರಿಂದ 3.20ಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ನಂದಿಧ್ವಜಕ್ಕೆ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ಸಂಜೆ 4.15ರೊಳಗೆ ಸಲ್ಲುವ ಶುಭ ಕುಂಭಲಗ್ನದಲ್ಲಿ ಸಿಎಂ ಚಾಮುಂಡಿದೇವಿಗೆ ಪುಷ್ಪಾರ್ಚನೆ ಮಾಡಲಿದ್ದಾರೆ. ಜಂಬೂ ಸವಾರಿಯಲ್ಲಿ 2 ಟ್ಯಾಬ್ಲೋ, ಕೆಲವೇ ಜನಪದ ಕಲಾತಂಡಗಳು ಪಾಲ್ಗೊಳ್ಳಲಿವೆ. ಇನ್ನು ಬನ್ನಿ ಮಂಟಪದಲ್ಲಿ ಪಂಜಿನ ಕವಾಯತನ್ನು ಈ ಬಾರಿ ರದ್ದುಗೊಳಿಸಲಾಗಿದೆ.
ಇಂದಿನ ಸರಳಾತಿ ಸರಳ ದಸರಾ ಜಂಬೂಸವಾರಿ ಹಿನ್ನೆಲೆ ಮೈಸೂರು ಅರಮನೆಯ ಸುತ್ತ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಅರಮನೆಯ ಸುತ್ತಲಿನ ಕನಿಷ್ಠ 200 ಮೀಟರ್ ದೂರದಲ್ಲೂ ಯಾರು ನಿಲ್ಲುವಂತಿಲ್ಲ. ಕಟ್ಟಡಗಳನ್ನ ಹತ್ತಿ ದಸರಾ ವೀಕ್ಷಿಸುವಂತಿಲ್ಲ ಎಂದು ಆದೇಶಿಸಲಾಗಿದೆ.