ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಸಿಎಂ ಆದೇಶ

Public TV
1 Min Read
bsy 3

ಬೆಂಗಳೂರು: ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆಗೆ ಸಿಎಂ ಯಡಿಯೂರಪ್ಪ ಅವರು ಆದೇಶ ಮಾಡಿದ್ದಾರೆ.

ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಬೆನ್ನಲ್ಲೇ ವೀರಶೈವ ಲಿಂಗಾಯತ ಸಮುದಾಯದ ನಾಯಕರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡುವಂತೆ ಸಿಎಂ ಯಡಿಯೂರಪ್ಪ ಅವರಿಗೆ ಒತ್ತಡ ಹೇರಿದ್ದರು. ಈ ಒತ್ತಡಕ್ಕೆ ಮಣಿದ ಯಡಿಯೂರಪ್ಪನವರು ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ರಚನೆ ಮಾಡುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ ನೀಡಿದ್ದಾರೆ.

Laxman Savadi Lingayat

ರಾಜ್ಯದಲ್ಲೀಗ ಪ್ರಾಧಿಕಾರ ಮತ್ತು ಮೀಸಲು ಪಾಲಿಟಿಕ್ಸ್ ಜೋರಾಗ್ತಿದೆ. ಬೈ ಎಲೆಕ್ಷನ್ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುತ್ತಲೇ, ವೀರಶೈವ ಲಿಂಗಾಯತರು ಧ್ವನಿ ಮುನ್ನಲೆಗೆ ಬಂದಿದೆ. ವೀರಶೈವ ಲಿಂಗಾಯತ ಸಮುದಾಯದ ಅಭಿವೃದ್ಧಿಗೆ ಪ್ರಾಧಿಕಾರ ರಚನೆ ಮಾಡಬೇಕೆಂದು ಡಿಸಿಎಂ ಲಕ್ಷ್ಮಣ ಸವದಿ, ಸಚಿವರಾದ ಸೋಮಣ್ಣ, ಬಿಸಿ ಪಾಟೀಲ್, ಶಾಸಕ ರಾಜಕುಮಾರ್ ಪಾಟೀಲ್ ತೇಲ್ಕೂರು ಅವರಿದ್ದ ನಿಯೋಗ ಮುಖ್ಯಮಂತ್ರಿಗೆ ಮನವಿ ಮಾಡಿದೆ.

BSY

ಜೊತೆಗೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿದ ನಂತರ ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಯುವ ಘಟಕದ ರಾಜ್ಯಾಧಕ್ಷರು ಸಿಎಂ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದರು. ನಮ್ಮ ಸಮಾಜದ ಕಡು ಬಡವರು, ಸಮಾಜದ ಹಿಂದುಳಿದ ವರ್ಗಕ್ಕೆ ಮತ್ತು ಯುವಕರಿಗೆ ಸಹಾಯ ಆಗಬೇಕು. ಹೀಗಾಗಿ ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವಂತೆ ಆಗ್ರಹಿಸಿದ್ದರು.

Capture 4

ಬೆಳಗಾವಿ ಬಸವ ಕಲ್ಯಾಣ ಉಪ ಚುನಾವಣೆ ಘೋಷಣೆಗೂ ಮುನ್ನವೇ, ಮರಾಠ ಸಮುದಾಯ ಓಲೈಸುವ ಸಲುವಾಗಿ ಮರಾಠ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಿ ಸಿಎಂ ಬಿಎಸ್‍ವೈ ಆದೇಶ ಹೊರಡಿಸಿದ್ದರು. ಅಲ್ಲದೇ 50 ಕೋಟಿ ರೂ. ಅನುದಾನವನ್ನು ಮೀಸಲಿಟ್ಟಿದ್ದಾರೆ. ರಾಜ್ಯ ಸರ್ಕಾರದ ಈ ತೀರ್ಮಾನಕ್ಕೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಕನ್ನಡ ಪರ ಸಂಘಟನೆಗಳು ಡಿಸೆಂಬರ್ 5ರಂದು ಕರ್ನಾಟಕ ಬಂದ್‍ಗೆ ಕರೆಕೊಟ್ಟಿದೆ.

Share This Article
Leave a Comment

Leave a Reply

Your email address will not be published. Required fields are marked *