ಮಂಗಳೂರು: ವೃದ್ಧ ತಾಯಿಗೆ ಅಮಾನುಷವಾಗಿ ಹಲ್ಲೆ ಮಾಡಿದ ಮಗ ಹಾಗೂ ಮೊಮ್ಮಗನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ಸವಣಾಲು ಗ್ರಾಮದ ಹಲಸಿನ ಕಟ್ಟೆ ನಿವಾಸಿ 70 ವರ್ಷದ ವೃದ್ಧೆ ಅಪ್ಪಿ ಶೆಟ್ಟಿಯವರಿಗೆ ಅವರ ಹಿರಿಯ ಪುತ್ರ ಶ್ರೀನಿವಾಸ ಶೆಟ್ಟಿ ಹಾಗೂ ಮೊಮ್ಮಗ ಪ್ರದೀಪ್ ಶೆಟ್ಟಿ ಹಿಗ್ಗಾಮುಗ್ಗ ಥಳಿಸಿ ಎತ್ತಿ ನೆಲಕ್ಕೆ ಎಸೆದಿದ್ದರು. ಈ ಅಮಾನವೀಯ ದೃಶ್ಯವನ್ನು ಇನ್ನೋರ್ವ ಮೊಮ್ಮಗ ಮೊಬೈಲ್ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲ ತಾಣದಲ್ಲಿ ವೈರಲ್ ಮಾಡಿದ್ದರು.
ಇದೀಗ ಬೆಳ್ತಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳ ವಿರುದ್ಧ ಹಿರಿಯ ನಾಗರಿಕ ದೌರ್ಜನ್ಯ ಹಾಗೂ ಹಲ್ಲೆ ಪ್ರಕರಣ ದಾಖಲಿಸಿದ್ದಾರೆ. ವೃದ್ಧೆ ಅಪ್ಪಿ ಶೆಟ್ಟಿಯವರನ್ನು ಆರೈಕೆಗಾಗಿ ಹಿರಿಯ ನಾಗರಿಕ ಪಾಲನಾ ಕೇಂದ್ರಕ್ಕೆ ಸ್ಥಳಾಂತರಿಸಲಾಗಿದೆ.