ಅಹಮದಾಬಾದ್: ಚುನಾವಣೆ ಪ್ರಚಾರದ ವೇಳೆ ವೇದಿಕೆ ಮೇಲೆ ಭಾಷಣ ಮಾಡುತ್ತಿದ್ದಾಗಲೇ ಗುಜರಾತ್ ಸಿಎಂ ವಿಜಯ್ ರೂಪಾನಿ ಕುಸಿದಿದ್ದಾರೆ. ಭಾನುವಾರ ವಡೋದರಾದ ನಿಜಾಮಪುರನಲ್ಲಿ ಮುಖ್ಯಮಂತ್ರಿಗಳು ಎಲೆಕ್ಷನ್ ಕ್ಯಾಂಪನ್ ನಲ್ಲಿ ಭಾಗಿಯಾಗಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಸಿಎಂ ಕುಸಿಯುತ್ತಿದ್ದಂತೆ ಅಧಿಕಾರಿಗಳು ಕಾರ್ಯಕ್ರಮವನ್ನ ರದ್ದುಗೊಳಿಸಿ, ವೇದಿಕೆಯಲ್ಲಿಯೇ ವೈದ್ಯರು ಪ್ರಥಮ ಚಿಕಿತ್ಸೆ ನೀಡಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮುಖ್ಯಮಂತ್ರಿಗಳನ್ನ ಅಹಮಾದಾಬಾದ್ ಗೆ ಶಿಫ್ಟ್ ಮಾಡಲಾಗಿದೆ. ಸಿಎಂ ಅವರ ವೈದ್ಯಕೀಯ ವರದಿ ಬಂದಿದ್ದು, ಗಾಬರಿಯಾಗುವಂತಿದಿಲ್ಲ. ಇಸಿಜಿ, ಸಿಟಿ ಸ್ಕ್ಯಾನ್ ಸೇರಿದಂತೆ ಎಲ್ಲ ವೈದ್ಯಕೀಯ ಪರೀಕ್ಷೆಗಳನ್ನ ನಡೆಸಲಾಗಿದ್ದು, ಸಿಎಂ ಆರೋಗ್ಯವಾಗಿದ್ದಾರೆ. 24 ಗಂಟೆ ವೈದ್ಯರ ನಿಗಾದಲ್ಲಿ ಇರಿಸಲಾಗಿದೆ ಎಂದು ಯು.ಎನ್. ಆಸ್ಪತ್ರೆಯ ಡಾಕ್ಟರ್ ಆರ್.ಕೆ.ಪಟೇಲ್ ಮಾಹಿತಿ ನೀಡಿದ್ದಾರೆ.
ವಡೋದರಾದ ನಿಜಾಮಪುರನಲ್ಲಿ ಮೂರನೇ ಬಾರಿ ಚುನಾವಣೆ ಪ್ರಚಾರ ನಡೆಸುತ್ತಿದ್ದರು. ವೇದಿಕೆ ಮೇಲೆ ಮತದಾರರನ್ನು ಉದ್ದೇಶಿಸಿ ಮತನಾಡುವಾಗ ಸಿಎಂ ದಿಢೀರ್ ಕುಸಿದರು. ಚುನಾವಣೆ ಹಿನ್ನೆಲೆ ನಿರಂತರ ಪ್ರಚಾರದಲ್ಲಿ ತೊಡಗಿಕೊಂಡಿರುವ ಸಿಎಂ ಕಳೆದ ಎರಡು ದಿನಗಳಿಂದ ಸರಿಯಾಗಿ ವಿಶ್ರಾಂತಿ ಸಹ ಪಡೆದುಕೊಂಡಿರಲಿಲ್ಲ. ಈ ಹಿನ್ನೆಲೆ ಕಡಿಮೆ ರಕ್ತದೊತ್ತಡದಿಂದಾಗಿ ಕುಸಿದಿದ್ದಾರೆ ಎಂದು ವರದಿಯಾಗಿದೆ.
ವಡೋದರ ಸೇರಿದಂತೆ 6 ಮಹಾನಗರ ಪಾಲಿಕೆಗಳಲ್ಲಿ ಫೆಬ್ರವರಿ 21ರಂದು ಚುನಾವಣೆ ನಡೆಯಲಿದೆ. ಇತ್ತ ಪ್ರಧಾನಿ ನರೇಂದ್ರ ಮೋದಿ ಅವರು ಕರೆ ಮಾಡಿ ಸಿಎಂ ಆರೋಗ್ಯ ವಿಚಾರಿಸಿದ್ದಾರೆ ಡಿಸಿಎಂ ನಿತಿನ್ ಪಟೇಲ್ ಹೇಳಿದ್ದಾರೆ.
LIVE – વડોદરા ખાતે આગામી સ્થાનિક સ્વરાજ્યની ચૂંટણી અંતર્ગત આયોજિત જાહેરસભા#ગુજરાત_મક્કમ_ભાજપ_અડીખમ https://t.co/i7uZZhLLim
— Vijay Rupani (@vijayrupanibjp) February 14, 2021