‘ವೈದ್ಯರ ನಡೆ, ಹಳ್ಳಿ ಕಡೆ’ ಮೊಬೈಲ್ ಕ್ಲಿನಿಕ್ ವಾಹನಕ್ಕೆ ಸುಧಾಕರ್ ಹಸಿರು ನಿಶಾನೆ

Public TV
3 Min Read
SUDAKAR

ಚಿಕ್ಕಬಳ್ಳಾಪುರ: ಹಳ್ಳಿಯಲ್ಲಿರುವ ಕೊರೊನಾ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡುವ ನಿಟ್ಟಿನಲ್ಲಿ ‘ವೈದ್ಯರ ನಡೆ, ಹಳ್ಳಿಯ ಕಡೆ’ ಎಂಬ ಮೊಬೈಲ್ ಕ್ಲಿನಿಕ್ ವಾಹನಕ್ಕೆ ವೈದ್ಯಕೀಯ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಕೆ.ಸುಧಾಕರ್ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

SUDAKAR 2 2 medium

ಜಿಲ್ಲೆಯ ಗೌರಿಬಿದನೂರು ತಾಲೂಕಿನ ಮಂಚೇನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ.ಕೆ ಸುಧಾಕರ್, ಈ ವಿಶೇಷ ವಾಹನದಲ್ಲಿ ವೈದ್ಯರು ಹಾಗೂ ಸಹಾಯಕ ಸಿಬ್ಬಂದಿ ತಂಡ ತಮ್ಮ ವ್ಯಾಪ್ತಿಯ ಗ್ರಾಮಗಳಿಗೆ ಭೇಟಿ ಕೊಟ್ಟು ಅಲ್ಲಿನ ಸಾರ್ವಜನಿಕರಿಗೆ ರ್ಯಾಪಿಡ್ ಆಂಟಿಜನ್ ಕೊರೊನಾ ಪರೀಕ್ಷೆ ಮಾಡಲಿದ್ದಾರೆ. ಸೋಂಕು ದೃಢಪಟ್ಟವರಿಗೆ ಸೂಕ್ತ ಚಿಕಿತ್ಸೆ ನೀಡಿ ಅಗತ್ಯವಿರುವರಿಗೆ ಆರೋಗ್ಯ ಕಿಟ್ ಗಳನ್ನು ಸ್ಥಳದಲ್ಲಿಯೇ ವಿತರಿಸುವ ವ್ಯವಸ್ಥೆಯೂ ಸಹ ಇರಲಿದೆ ಎಂದರು. ಇದನ್ನೂ ಓದಿ:ಉಚಿತ ಊಟ ವಿತರಿಸುತ್ತಿರೋ ವೈದ್ಯ ದಂಪತಿ

SUDAKAR 3 1 medium

ವ್ಯಾಪಕವಾಗಿ ಸೋಂಕು ಹರಡುತ್ತಿರುವುದರಿಂದಾಗಿ ಹಳ್ಳಿಗಳಲ್ಲಿ ಪರೀಕ್ಷೆ ಮಾಡಿ ಸೂಕ್ತ ಮುನ್ನೆಚ್ಚರಿಕಾ ಕ್ರಮ ವಹಿಸುದು ಅನಿವಾರ್ಯವಾಗಿದೆ. ಇದರಿಂದ ಮತ್ತಷ್ಟು ಸೋಂಕು ಹರಡುವುದನ್ನು ಕೂಡಲೇ ತಪ್ಪಿಸಬಹುದು. ಕೋವಿಡ್ ಸೋಂಕಿನ ಸರಪಳಿಯನ್ನು ತುಂಡರಿಸಲು ಈ ಕಾರ್ಯಕ್ರಮ ಪರಿಣಾಮಕಾರಿಯಾಗಿ ಅನುಕೂಲವಾಗಲಿದೆ. ರೋಗ ಲಕ್ಷಣಗಳಿದ್ದು ರ್ಯಾಟ್ ಪರೀಕ್ಷೆಯಲ್ಲಿ ನೆಗೆಟಿವ್ ವರದಿ ಬಂದ ಪಕ್ಷದಲ್ಲಿ ಗಂಟಲು ಮತ್ತು ಮೂಗಿನ ದ್ರವ ಸಂಗ್ರಹಿಸಿ ಆರ್‍ಟಿಪಿಸಿಆರ್ ಪರೀಕ್ಷೆಗೆ ಒಳಪಡಿಸಲು ಸಹಾ ಕ್ರಮ ತೆಗೆದುಕೊಳ್ಳಲಾಗುತ್ತದೆ. ಈ ಸೌಲಭ್ಯವನ್ನು ಜನರು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ:ಆರೋಗ್ಯ ಸಚಿವರ ಜೊತೆಯಲ್ಲಿ ಹೋಗಿ ಆಸ್ಪತ್ರೆಯಲ್ಲಿ ವೈದ್ಯರಿಗೆ ಬ್ಲಾಕ್‍ಮೇಲ್

ಇದೇ ವೇಳೆ ರಾಜ್ಯದಲ್ಲಿ ಸದ್ಯ ಆಕ್ಸಿಜನ್ ಸಮಸ್ಯೆ ಏನೂ ಇಲ್ಲ. ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿರುವಂತೆ ಐಸಿಯು, ವೆಂಟಿಲೇಟರ್ ಹಾಗೂ ಆಕ್ಸಿಜನ್ ಮೇಲೆ ಬೇಡಿಕೆ ಕಡಿಮೆಯಾಗಿದೆ. ಎಲ್ಲೂ ಕೂಡ ಆಕ್ಸಿಜನ್ ಸಮಸ್ಯೆ ಕಂಡುಬರುತ್ತಿಲ್ಲ ಎಂದರು.

SUDAKAR 5 1 medium

ನಂತರ ತಾಲೂಕಿನ ಕುಲುಮೇನಹಳ್ಳಿ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ತೆರೆದಿರುವ ಕೋವಿಡ್ ಆರೈಕೆ ಕೇಂದ್ರವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಾದ ಆರ್.ಲತಾ, ಜಿಲ್ಲಾ ಪಂಚಾಯಿತಿ ಸಿಇಒ ಪಿ.ಶಿವಶಂಕರ್, ನಗರಸಭೆ ಅಧ್ಯಕ್ಷರಾದ ಆನಂದರೆಡ್ಡಿ, ಉಪವಿಭಾಗಾಧಿಕಾರಿಗಳಾದ ಎ.ಎನ್.ರಘುನಂದನ್, ತಹಶೀಲ್ದಾರ್ ಗಣಪತಿಶಾಸ್ತ್ರಿ, ತಾಲೂಕು ಪಂಚಾಯಿತಿ ಇಒ ಹರ್ಷವರ್ದನ್, ಪೌರಾಯುಕ್ತ ಲೋಹಿತ್ ಕುಮಾರ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲೆಯಾದ್ಯಂತ 650 ಅಲೆಮಾರಿ-ಅರೆ ಅಲೆಮಾರಿ ಜನಾಂಗದವರಿಗೆ ಆಹಾರ ಕಿಟ್

ಜಿಲ್ಲೆಯ ಆವಲಗುರ್ಕಿ ಗ್ರಾಮ ಪಂಚಾಯಿತಿಯ ಸೂಲಕುಂಟೆ ಗ್ರಾಮದಲ್ಲಿರುವ ಅಲೆಮಾರಿ ಹಾಗೂ ಅರೆ ಅಲೆಮಾರಿ ನಿವಾಸಿಗಳಿಗೆ ಜಿಲ್ಲಾಡಳಿತ ಮತ್ತು ಇಶಾ ಪ್ರತಿಷ್ಠಾನ ವತಿಯಿಂದ ಉಚಿತ ಆಹಾರ ಧಾನ್ಯಗಳ ಕಿಟ್‍ಗಳನ್ನು ಡಾ.ಕೆ.ಸುಧಾಕರ್ ವಿತರಿಸಿದರು.

ISHA FOUNDATION medium

ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸುಧಾಕರ್, ಆಧ್ಯಾತ್ಮ ಚಿಂತಕರಾದ ಇಶಾ ಪ್ರತಿಷ್ಠಾನದ ಸಂಸ್ಥಾಪಕ ಸದ್ಗುರು ಜಗ್ಗಿ ವಾಸುದೇವ್ ಅವರು ತಮ್ಮ ಅನುಯಾಯಿಗಳಾದ ರಾಘವೇಂದ್ರ ಶಾಸ್ತ್ರಿ ಹಾಗೂ ಪ್ರಭಾಕರ್ ಅವರ ಮೂಲಕ ಸರ್ಕಾರಿ ಆಸ್ಪತ್ರೆಗಳು ಸೇರಿದಂತೆ ರಾಜ್ಯಾದ್ಯಂತ ಹಲವು ಕಡೆ ಸೇವಾ ಕಾರ್ಯಗಳನ್ನು ಮಾಡುತ್ತಿದ್ದಾರೆ. ಅಲ್ಲದೇ ಆಸ್ಪತ್ರೆಗಳಿಗೆ ಸಾಂದ್ರಕಗಳು, ಆಕ್ಸಿಜನ್ ಸಿಲಿಂಡರ್‍ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ವೈದ್ಯರು, ದಾದಿಯರು, ರೋಗಿಗಳಿಗೆ ಉಚಿತವಾಗಿ ಆಹಾರ ಪದಾರ್ಥಗಳು, ಮಾಸ್ಕ್ ಗಳನ್ನು, ಕೋವಿಡ್ ಸುರಕ್ಷತಾ ಸಾಮಗ್ರಿಗಳನ್ನು ಈಗಾಗಲೇ ನೀಡಿದ್ದಾರೆ ಎಂದು ಅವರ ಕಾರ್ಯವನ್ನು ಪ್ರಶಂಸಿದರು. ಇದನ್ನೂ ಓದಿ:ಕೊರೊನಾ ವಾರಿಯರ್ಸ್‍ಗೆ ಚಿಕನ್ ಬಿರಿಯಾನಿ ವಿತರಿಸಿದ ಚಿಕ್ಕಬಳ್ಳಾಪುರ ನಗರಸಭಾ ಸದಸ್ಯ

SUDAKAR 4 1 medium

ಜಿಲ್ಲೆಗೆ ಈಗಾಗಲೇ 100 ಆಕ್ಸಿಜನ್ ಸಿಲಿಂಡರ್ ಗಳನ್ನು ನೀಡಿದ್ದು, ಇನ್ನೂ 100 ಸಿಲಿಂಡರ್ ಗಳನ್ನು ನೀಡಲು ಒಪ್ಪಿಗೆ ನೀಡಿದ್ದಾರೆ. ಇದೀಗ ಜಿಲ್ಲೆಯಾದ್ಯಂತ 650 ಅಲೆಮಾರಿ-ಅರೆ ಅಲೆಮಾರಿ ಜನಾಂಗದವರು, ಅಶಕ್ತರು, ಬಲಹೀನ ವರ್ಗದವರಿಗೆ ಆಹಾರ ಸಾಮಾಗ್ರಿಗಳು, ರೋಗಿಗಳಿಗೆ ಹಾಲು, ಬಿಸ್ಕೇಟ್, ಔಷಧಿಗಳನ್ನು ನೀಡುತ್ತಿದ್ದಾರೆ. ಇವತ್ತಿನ ಕಷ್ಟಕಾಲದಲ್ಲಿ ಇದು ಅತ್ಯಂತ ಪುಣ್ಯದ ಕೆಲಸವಾಗಿದೆ ಎಂದು ಕೃತಜ್ಞತೆ ಸಲ್ಲಿಸಿದರು.

Share This Article
Leave a Comment

Leave a Reply

Your email address will not be published. Required fields are marked *