Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಶಾಲೆಗಳಲ್ಲಿ ದೈಹಿಕ ಶಿಕ್ಷಣ, ಶಿಕ್ಷಕರ ನೇಮಕ ಮಾಡಿ, ಕನಿಷ್ಠ ಒಂದು ಗಂಟೆ ಕ್ರೀಡೆಗೆ ಮೀಸಲಿಡಿ: ನಾರಾಯಣಗೌಡ

Public TV
Last updated: August 14, 2021 4:42 pm
Public TV
Share
3 Min Read
NARYAN GOWDA 1
SHARE

– ಮುಂದಿನ ಒಲಿಂಪಿಕ್ಸ್‌ಗೆ ನಮ್ಮ ರಾಜ್ಯದಿಂದ 100 ಕ್ರೀಡಾಪಟುಗಳು

ಬೆಂಗಳೂರು: ಕಳೆದ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ನಮ್ಮ ದೇಶ ಉತ್ತಮ ಸಾಧನೆ ಮಾಡಿದೆ. ಇನ್ನೂ ಹೆಚ್ಚಿನ ಸಾಧನೆ ಆಗಬೇಕೆಂದರೆ ಈಗಲೇ ಸಿದ್ಧತೆ ಮಾಡಬೇಕು. ಬಾಲ್ಯದಲ್ಲಿಯೇ ಕ್ರೀಡೆಯಲ್ಲಿ ಆಸಕ್ತಿ ಮೂಡುವಂತಾಗಬೇಕು. ಹಾಗಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ದೈಹಿಕ ಶಿಕ್ಷಕರನ್ನು ನೇಮಕ ಮಾಡಿ, ಕನಿಷ್ಠ ಒಂದು ಗಂಟೆ ಕ್ರೀಡೆಗೆ ಮೀಸಲಿಡಿ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದಾರೆ.

tokoyo olympics

ಕ್ರೀಡೆಯಲ್ಲಿ ಮಕ್ಕಳಿಗೆ ಸೂಕ್ತ ತರಬೇತಿಯೂ ಸಿಗಬೇಕು. ಆಗ ಮಾತ್ರ ಕ್ರೀಡೆಯಲ್ಲಿ ಸಾಧನೆ ಸಾಧ್ಯ. ಅದಕ್ಕಾಗಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಕ್ರೀಡೆಗೆ ಹೆಚ್ಚಿನ ಅವಕಾಶ ನೀಡಬೇಕು. ಖಾಲಿ ಇರುವ ದೈಹಿಕ ಶಿಕ್ಷಕರ ಹುದ್ದೆ ಭರ್ತಿಯಾಗಬೇಕು. ಶಾಲೆಯಲ್ಲಿ ಪ್ರತಿ ನಿತ್ಯ ವ್ಯಾಯಾಮ, ಕ್ರೀಡೆಗೆ ಒಂದು ಗಂಟೆ ಸಮಯ ಮೀಸಲಿಡಿ. ವಿದ್ಯಾರ್ಥಿ ದೆಸೆಯಲ್ಲೇ ಕ್ರೀಡೆಯ ತರಬೇತಿ ಆಗಬೇಕು. ಆಸಕ್ತಿ ಇರುವ ಸಮರ್ಥ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಮುಂದುವರಿಯುತ್ತಾರೆ. ಕ್ರೀಡಾಂಗಣ, ಕ್ರೀಡಾ ಸೌಲಭ್ಯ ಇದ್ದ ಮಾತ್ರಕ್ಕೆ ಸಾಧನೆ ಆಗಲಾರದು. ಬುನಾದಿ ಸರಿಯಾಗಿರಬೇಕು. ಪ್ರಾಥಮಿಕ ಮತ್ತು ಪ್ರೌಢ ಶಾಲೆ ಹಂತದಲ್ಲೇ ವ್ಯಾಯಾಮ, ಕ್ರೀಡೆ ಬಗ್ಗೆ ಸೂಕ್ತ ತರಬೇತಿ ನೀಡುವ ಪ್ರಕ್ರಿಯೆ ಆರಂಭವಾಗಬೇಕು. ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ 39,308 ದೈಹಿಕ ಶಿಕ್ಷಕರ ಹುದ್ದೆಗಳು ಖಾಲಿ ಇದೆ. ಇದು ಬೆಳೆವ ಸಿರಿಯನ್ನು ಮೊಳಕೆಯಲ್ಲೇ ಚಿವುಟಿದಂತೆ ಆಗುತ್ತಿದೆ. ಮುಂದಿನ ಒಲಿಂಪಿಕ್ಸ್‍ಗೆ ನಮ್ಮ ರಾಜ್ಯದಿಂದ 100 ಕ್ರೀಡಾಪಟುಗಳನ್ನು ಕಳುಹಿಸುವ ಗುರಿ ಹೊಂದಿದ್ದೇವೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಕ್ರೀಡಾಪಟುಗಳನ್ನು ಅಂತಾರಾಷ್ಟ್ರೀಯ ಮಟ್ಟಕ್ಕೆ ಕಳುಹಿಸಬೇಕೆಂದರೆ ಈಗಿನಿಂದಲೇ ಸಿದ್ಧತೆ ಆಗಬೇಕು. ದೈಹಿಕ ಶಿಕ್ಷಕರ ನೇಮಕವಾಗಬೇಕು. ಮಾನಸಿಕ ಹಾಗೂ ದೈಹಿಕ ಸದೃಢತೆಗೆ ಇದು ಸಹಕಾರಿಯಾಗುತ್ತದೆ. ಶಿಕ್ಷಣ ಸಚಿವರು ಕಡ್ಡಾಯವಾಗಿ ದೈಹಿಕ ಶಿಕ್ಷಕರ ನೇಮಕಕ್ಕೆ ಕ್ರಮ ತೆಗೆದುಕೊಳ್ಳಿ ಎಂದು ಸಚಿವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ckb school

ಕೇವಲ ಕ್ರೀಡಾಪಟುವಾಗುವುದಕ್ಕೆ ಮಾತ್ರವಲ್ಲ, ನಮ್ಮ ಜೀವನವನ್ನು ಸುಂದರವಾಗಿ ರೂಪಿಸುವಲ್ಲಿ ವ್ಯಾಯಾಮ ಮತ್ತು ಕ್ರೀಡೆಗಳು ಅತ್ಯಂತ ಮಹತ್ವ ಪಾತ್ರ ವಹಿಸುತ್ತವೆ. ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ವ್ಯಾಯಾಮ ಮತ್ತು ಕ್ರೀಡೆಗಳು ಸುಲಭವಾದ ಮಾರ್ಗಗಳು. ಕ್ರೀಡೆ ಮತ್ತು ವ್ಯಾಯಾಮ ಸ್ಪರ್ಧಾತ್ಮಕ ಭಾವನೆ, ಸ್ನೇಹಪರ ಭಾವನೆ, ಶಿಸ್ತು, ಆತ್ಮಸ್ಥೈರ್ಯ, ಕೌಶಲ್ಯತೆಯನ್ನು ಮೂಡಿಸಿ ಶಾರೀರಿಕ ಸಂಪತ್ತನ್ನು ಹಾಗೂ ಬೌದ್ದಿಕ ಸಾಮಥ್ರ್ಯವನ್ನು ವೃದ್ಧಿಸುತ್ತದೆ. ಕ್ರೀಡೆಯು ಮನರಂಜನೆ ನೀಡುವುದರೊಂದಿಗೆ ಪ್ರೀತಿ, ಸಹಕಾರ, ಸಹಬಾಳ್ವೆ, ದೇಶಪ್ರೇಮದ ಭಾವೈಕ್ಯತೆಯನ್ನು ಬೆಳೆಸುತ್ತದೆ. ಪ್ರತಿನಿತ್ಯ ವ್ಯಾಯಾಮ ಮಾಡುವುದರಿಂದ ಶಾರೀರಿಕ ಬೆಳವಣಿಗೆಯೊಂದಿಗೆ ಆರೋಗ್ಯದ ಸಮತೋಲನವನ್ನು ಕಾಪಾಡಿಕೊಳ್ಳಲು ಸಾಧ್ಯ. ದೈಹಿಕ ಆರೋಗ್ಯ, ವ್ಯಕ್ತಿತ್ವ ನಿರ್ಮಾಣ ಮತ್ತು ಬೌದ್ಧಿಕ ಬೆಳವಣಿಗೆಯನ್ನು ಶಾರೀರಿಕ ಚಟುವಟಿಕೆಗಳ ಮೂಲಕ ಸಾಧಿಸುವುದು ದೈಹಿಕ ಶಿಕ್ಷಣದ ಮುಖ್ಯ ಉದ್ದೇಶ. ದೈಹಿಕ ಶಿಕ್ಷಣದಿಂದ ನಾಯಕತ್ವ, ಹೋರಾಟ ಮನೋಭಾವ, ಸೋಲನ್ನು ಎದುರಿಸುವ ಶಕ್ತಿ, ಮುಂತಾದ ಗುಣಗಳು ಬೆಳೆಯುತ್ತವೆ. ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪಠ್ಯಕ್ರಮಗಳು ಎಷ್ಟು ಮುಖ್ಯವೋ ಪಠ್ಯೇತರ ಚಟುವಟಿಕೆಗಳು ಕೂಡ ಅಷ್ಟೇ ಮುಖ್ಯ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ನೀರಜ್‌ ಚೋಪ್ರಾ ತರಬೇತಿಗಾಗಿ 7 ಕೋಟಿ ರೂ. ಖರ್ಚು ಮಾಡಿದ್ದ ಸರ್ಕಾರ

SPORTS

ಈ ಹಿಂದೆ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಪ್ರತಿನಿತ್ಯ ಒಂದು ಗಂಟೆ ಅವಧಿ ವಿದ್ಯಾರ್ಥಿಗಳ ದೈಹಿಕ ಶಿಕ್ಷಣಕ್ಕಾಗಿ ಮೀಸಲಿಡಲಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಈ ಪದ್ಧತಿಯನ್ನು ಕೈಬಿಟ್ಟಿರುವುದು, ಕ್ರಮೇಣವಾಗಿ ಕಡಿಮೆ ಮಾಡುತ್ತಿರುವುದು ವಿಷಾದದ ಸಂಗತಿ. ವಿದ್ಯಾರ್ಥಿಗಳ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಸಹ ಮುಖ್ಯವಾಗಿರುವುದರಿಂದ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಪ್ರತಿನಿತ್ಯ ಒಂದು ಗಂಟೆ ಅವಧಿಯನ್ನು ದೈಹಿಕ ಶಿಕ್ಷಣಕ್ಕಾಗಿ ಮೀಸಲಿಡುವುದು ಅತ್ಯವಶ್ಯಕವಾಗಿದೆ. ಇದನ್ನು ಹೊಸ ಶಿಕ್ಷಣ ನೀತಿಯಲ್ಲೂ ಸಹ ಉಲ್ಲೇಖಿಸಲಾಗಿದೆ. ಆದುದರಿಂದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಪ್ರತಿನಿತ್ಯ ಕನಿಷ್ಠ ಒಂದು ಗಂಟೆ ಅವಧಿಯನ್ನು ವಿದ್ಯಾರ್ಥಿಗಳ ದೈಹಿಕ ಶಿಕ್ಷಣಕ್ಕಾಗಿ ಮೀಸಲಿಡುವಂತೆ ಸೂಚಿಸುವಂತೆ ಶಿಕ್ಷಣ ಸಚಿವರಿಗೆ ನಾರಾಯಣಗೌಡ ಪತ್ರ ಬರೆದು ಮನವಿ ಮಾಡಿಕೊಂಡಿದ್ದು, ಸಂಬಂಧಪಟ್ಟವರಿಗೆಲ್ಲಾ ಕಟ್ಟುನಿಟ್ಟಾಗಿ ನಿರ್ದೇಶನಗಳನ್ನು ನೀಡುವಂತೆ ಕೋರಿದ್ದಾರೆ. ಖಾಲಿ ಇರುವ ದೈಹಿಕ ಶಿಕ್ಷಕ ಹುದ್ದೆಗಳನ್ನು ಆದ್ಯತೆಯ ಮೇಲೆ ಶೀಘ್ರವಾಗಿ ಭರ್ತಿ ಮಾಡಿ ವಿದ್ಯಾರ್ಥಿಗಳು ಕ್ರೀಡಾ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಲು ಅನುಕೂಲ ಕಲ್ಪಿಸುವಂತೆ ವಿನಂತಿಸಿಕೊಂಡಿದ್ದಾರೆ.

TAGGED:BC NageshCoronanarayana gowdaPhysical EducationPublic TVಕೊರೊನಾದೈಹಿಕ ಶಿಕ್ಷಣನಾರಾಯಣ ಗೌಡಪಬ್ಲಿಕ್ ಟಿವಿಬಿ.ಸಿ.ನಾಗೇಶ್ಶಾಲೆ
Share This Article
Facebook Whatsapp Whatsapp Telegram

You Might Also Like

Ben Duckett
Cricket

1st Test: ಮಿಂಚಿದ ಡಕೆಟ್- ಭಾರತದ ವಿರುದ್ಧ ಇಂಗ್ಲೆಂಡ್‌ಗೆ 5 ವಿಕೆಟ್‌ಗಳ ಜಯ

Public TV
By Public TV
2 hours ago
Shubhanshu Shukla 3
Latest

ನಾಳೆ ಬಾಹ್ಯಾಕಾಶ ಯೋಜನೆಯ ಆಕ್ಸಿಯಮ್ 4 ಉಡಾವಣೆ – ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲ ಪ್ರಯಾಣ

Public TV
By Public TV
3 hours ago
Anantkumar Hegde Gunman Sridhar
Districts

ಮಾಜಿ ಸಂಸದ ಅನಂತ್‌ಕುಮಾರ್ ಹೆಗಡೆ ಗನ್ ಮ್ಯಾನ್ ಶ್ರೀಧರ್ ಅಮಾನತು

Public TV
By Public TV
3 hours ago
Family Man Season 3
Cinema

ಫ್ಯಾಮಿಲಿ ಮ್ಯಾನ್-3 : ಫಸ್ಟ್ ಲುಕ್ ರಿವೀಲ್

Public TV
By Public TV
3 hours ago
ajit kumar buzz cut hairdo
Cinema

ತಲಾ ಅಜಿತ್ ನ್ಯೂ ಲುಕ್ ವೈರಲ್ – ಬಾಲ್ಡ್ ಲುಕ್ ಯಾಕೆ ಗೊತ್ತಾ..?

Public TV
By Public TV
3 hours ago
MB Patil
Bengaluru City

ಶಾಸಕರ ಅಸಮಾಧಾನ ಎಲ್ಲವನ್ನೂ ಸಿಎಂ ಹ್ಯಾಂಡಲ್ ಮಾಡ್ತಾರೆ: ಸಚಿವ ಎಂಬಿ ಪಾಟೀಲ್

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?