ಹಾವೇರಿ: ಶಾಸಕ ನೆಹರು ಓಲೇಕಾರ ಮೂರು ಬಾರಿ ಶಾಸಕರಾಗಿದ್ದಾರೆ. ಹೀಗಾಗಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಬೆಂಬಲಿಗರು ಒತ್ತಾಯಿಸಿದ್ದಾರೆ. ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯವರೇ ಸಿಎಂ ಆಗಿರೋದರಿಂದ ಓಲೇಕಾರಗೆ ಸಚಿವ ಸ್ಥಾನ ದೊರೆತರೆ ಜಿಲ್ಲೆ ಮತ್ತಷ್ಟು ಅಭಿವೃದ್ಧಿ ಆಗಲಿದೆ ಎಂದಿದ್ದಾರೆ.
ಮೂರು ಬಾರಿ ಶಾಸಕರಾಗಿರೋ ಓಲೇಕಾರಗೆ ಸಚಿವ ಸ್ಥಾನ ನೀಡುವಂತೆ ನಗರಸಭೆ ನಾಮನಿರ್ದೇಶಿತ ಸದಸ್ಯರು ಹಾಗೂ ಸ್ಥಳೀಯ ಬಿಜೆಪಿ ಮುಖಂಡರಿಂದ ಒತ್ತಾಯಿಸಿದ್ದಾರೆ. ಬೇಕೇ ಬೇಕು ಸಚಿವ ಸ್ಥಾನ ಬೇಕು ಅಂತಾ ಘೋಷಣೆ ಹಾಕಿ ಸಚಿವ ಸ್ಥಾನಕ್ಕೆ ಓಲೇಕಾರ ಬೆಂಬಲಿಗರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: 2 ದಿನಗಳಲ್ಲಿ ದೆಹಲಿಗೆ ಸಿಎಂ ಬೊಮ್ಮಾಯಿ – ಕ್ರಿಯಾಶೀಲ ಕ್ಯಾಬಿನೆಟ್ ಟೀಮ್ ಬಗ್ಗೆ ಸೂಚನೆ
ಈಗ ಹಾವೇರಿ ಜಿಲ್ಲೆಯವರೇ ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದಾರೆ. ನೂತನ ಸಚಿವ ಸಂಪುಟದಲ್ಲಿ ಅನುಭವಿ ರಾಜಕಾರಣಿ ನೆಹರು ಓಲೇಕಾರ ಅವರಿಗೆ ಸಚಿವ ಸ್ಥಾನ ನೀಡಬೇಕು. ಇನ್ನು ಹಾವೇರಿ ಜಿಲ್ಲೆಗೆ ಕೈಗಾರಿಕೆಗಳನ್ನ ಸ್ಥಾಪನೆ ಉದ್ಯೋಗ ಅವಕಾಶ ಸೃಷ್ಠಿ ಮಾಡಬೇಕು. ಹೀಗಾಗಿ ನೆಹರು ಓಲೇಕಾರಗೆ ಸಚಿವ ಸ್ಥಾನ ಮಾಡಬೇಕು ಬೆಂಬಲಿಗರು ಒತ್ತಾಯಿಸಿದ್ದಾರೆ.