ಬೆಳಗಾವಿ: ಯಮಕನಮರಡಿ ಶಾಸಕ ಸತೀಶ್ ಜಾರಕಿಹೊಳಿ ಜನ್ಮದಿನದ ನಿಮಿತ್ತ ಇಂದು ಜಾರಕಿಹೊಳಿ ಬೆಂಬಲಿಗರು ತಾಲೂಕಿನ ಕೊರೊನಾ ವಾರಿಯರ್ಸ್ಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ವಿತರಣೆ ಮಾಡಿದರು.
ಕೊರೊನಾ ವೇಳೆ ಹಗಲಿರುಳು ಶ್ರಮಿಸುತ್ತಿರುವ ಸತೀಶ್ ಜಾರಕಿಹೊಳಿ ಫೌಂಡೇಶನ್ ಹಾಗೂ ಸತೀಶ್ ಶುಗರ್ಸ್ ವತಿಯಿಂದ ಕೊರೊನಾ ವಾರಿಯರ್ಸ್ಗಳಾದ ಪೊಲೀಸ್ ಇಲಾಖೆ ಸಿಬ್ಬಂದಿ, ಅಂಗನವಾಡಿ ಆಶಾ ಕಾರ್ಯಕರ್ತೆಯರು ಹಾಗೂ ಆರೋಗ್ಯ ಕಾರ್ಯಕರ್ತರಿಗೆ ಬೆಂಬಲಿಗರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು- ಆಸ್ಪತ್ರೆಗೆ ಕರೆದೊಯ್ದ ಪುತ್ರ ಯತೀಂದ್ರ
ಈ ವೇಳೆ ಮಾತನಾಡಿದ ಜಾರಕಿಹೊಳಿ ಆಪ್ತ ಸಹಾಯಕ ಕಿರಣ ರಜಪೂತ, ಸತೀಶ್ ಜಾರಕಿಹೊಳಿ ಅವರ ಜನ್ಮದಿನದ ಅಂಗವಾಗಿ ಜಿಲ್ಲೆಯಾದ್ಯಂತ ಕೊರೊನಾ ನಿಯಂತ್ರಣದಲ್ಲಿ ಮುಂಚೂಣಿಯಲ್ಲಿರುವ ವಾರಿಯರ್ಸ್ಗಳಿಗೆ ಜಿಲ್ಲೆಯಾದ್ಯಂತ ಸೂಮಾರು 10 ಸಾವಿರಾರ ಸ್ಯಾನಿಟೈಸರ್ 10 ಸಾವಿರ ಮಾಸ್ಕ್ ವಿತರಣೆ ಮಾಡಲಾಗುತ್ತಿದೆ. ಇದಲ್ಲದೇ ಸತೀಶ್ ಜಾರಕಿಹೊಳಿ ಫೌಂಡೇಶನ್ ಹಾಗೂ ಸತೀಶ್ ಶುಗರ್ಸ್ ತಾಲೂಕಿನಲ್ಲಿ ಕೊರೊನಾದಿಂದ ಮೃತಪಟ್ಟ ವ್ಯಕ್ತಿಗಳನ್ನು ಆಯಾ ಧರ್ಮದ ಅನುಸಾರ ಸರಕಾರದ ನಿಯಮದ ಪ್ರಕಾರ ಅಂತ್ಯ ಸಂಸ್ಕಾರ ಮಾಡಲಾಗುತ್ತಿದೆ ಎಂದು ಹೆಳಿದರು. ಇದನ್ನೂ ಓದಿ: ನಾವು ಪವರ್ ಬೆಗ್ಗರ್ಸ್ ಬಗ್ಗೆ ಮಾತನಾಡಲ್ಲ: ಡಿಕೆಶಿ
ಈ ಸಂಧರ್ಭದಲ್ಲಿ ಯಮಕನಮರಡಿ ಬ್ಲಾಕ್ ಕಾಂಗ್ರೆಸ್ ಯುವ ಘಟಕ ಅಧ್ಯಕ್ಷ ವಿನಯ ಪಾಟೀಲ, ಇಲಿಯಾಸ ಇನಾಮದಾರ, ಅಕ್ಷಯ ವಿರಮುಖ, ಸಂಜು ಗಂಡ್ರಾಳಿ, ಜಿ.ಪಂ ಸದಸ್ಯ ಮಹಾಂತೇಶ ಮಗದುಮ್ಮ ಸೇರಿದಂತೆ ಸತೀಶ್ ಜಾರಕಿಹೊಳಿ ಬೆಂಬಲಿಗರು ಇದ್ದರು.