ಬೆಂಗಳೂರು: ಇಂದು ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಗಳ ಎರಡನೇ ವರ್ಷದ ಪುಣ್ಯ ಸ್ಮರಣೆಯಾಗಿದೆ. ಈ ಹಿನ್ನೆಲೆಯಲ್ಲಿ ಎಲ್ಲರೂ ಶ್ರೀಗಳನ್ನು ನೆನಪಿಸಿಕೊಳ್ಳುತ್ತಿದ್ದಾರೆ. ಅಂತೆಯೇ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಕೂಡ ಶ್ರೀಗಳಿದ್ದ ದಿನಗಳನ್ನು ಮೆಲುಕು ಹಾಕಿಕೊಂಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ದಾಸ, ನಡೆದಾಡುವ ದೇವರು, ತ್ರಿವಿಧ ದಾಸೋಹಿ ಎಂದೇ ವಿಶ್ವಖ್ಯಾತಿ ಗಳಿಸಿದ್ದ ನಮ್ಮೆಲರ ಪ್ರೀತಿಯ ಶ್ರೀ ಶಿವಕುಮಾರ ಸ್ವಾಮೀಜಿ ರವರ 2ನೇ ಪುಣ್ಯಸ್ಮರಣೆ ಇಂದು. ಅವರ ಸಾಮಾಜಿಕ ಕಳಕಳಿಯ ಕಾರ್ಯಗಳು ಎಷ್ಟೋ ಜನರಿಗೆ ಸ್ಪೂರ್ತಿಯಾಗಿವೆ. ಲಕ್ಷಾಂತರ ಮಕ್ಕಳಿಗೆ ದಾರಿದೀಪ ಆಗಿದ್ದರು. ಅವರ ಕೆಲಸದಿಂದ ಸದಾ ಜೀವಂತ ಎಂದು ಬರೆದುಕೊಂಡಿದ್ದಾರೆ. ಸದ್ಯ ತಮ್ಮ ನೆಚ್ಚಿನ ನಟ ಶ್ರೀಗಳ ಕುರಿತು ಮಾಡಿರುವ ಟ್ವೀಟ್ ಗಳನ್ನು ಅವರ ಅಭಿಮಾನಿಗಳು ವೈರಲ್ ಮಾಡುತ್ತಿದ್ದಾರೆ.
ನಡೆದಾಡುವ ದೇವರು, ತ್ರಿವಿಧ ದಾಸೋಹಿ ಎಂದೇ ವಿಶ್ವಖ್ಯಾತಿ ಗಳಿಸಿದ್ದ ನಮ್ಮೆಲರ ಪ್ರೀತಿಯ ಶ್ರೀ ಶಿವಕುಮಾರ ಸ್ವಾಮೀಜಿ ರವರ ೨ನೇ ಪುಣ್ಯಸ್ಮರಣೆ ಇಂದು. ಅವರ ಸಾಮಾಜಿಕ ಕಳಕಳಿಯ ಕಾರ್ಯಗಳು ಎಷ್ಟೋ ಜನರಿಗೆ ಸ್ಪೂರ್ತಿಯಾಗಿವೆ. ಲಕ್ಷಾಂತರ ಮಕ್ಕಳಿಗೆ ದಾರಿದೀಪ ಆಗಿದ್ದರು. ಅವರ ಕೆಲಸದಿಂದ ಸದಾ ಜೀವಂತ pic.twitter.com/DXqHpYRyQG
— Darshan Thoogudeepa (@dasadarshan) January 21, 2021
ಶ್ರೀ ಕ್ಷೇತ್ರ ಸಿದ್ದಗಂಗೆಯಲ್ಲಿ ಇಂದು ನಸುಕಿನ ಜಾವ 4 ಗಂಟೆಯಿಂದಲೇ ವಿವಿಧ ಪೂಜಾ ಕಾರ್ಯಗಳು ಆರಂಭವಾಗಿವೆ. ಅಲಂಕೃತ ಗೊಂಡ ಶ್ರೀಗಳ ಗದ್ದುಗೆಯಲ್ಲಿ ಪೂಜಾ ಕೈಂಕರ್ಯ ನಡೆಯುತ್ತಿವೆ. ಲಗುನ್ಯಾಸ ಸಹಿತ ಮುದ್ರಾ ರುದ್ರಾಭಿಷೇಕ, ಚಮಕ ಸಹಿತ ರುದ್ರಾಭಿಷೇಕಗಳನ್ನು ಮಾಡಲಾಗುತ್ತಿದೆ. ಶ್ರಿ ಸಿದ್ದಲಿಂಗ ಸ್ವಾಮೀಜಿಗಳು ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಬೆಳಗ್ಗಿನಿಂದಲೆ ಶ್ರೀಮಠಕ್ಕೆ ಭಕ್ತರ ದಂಡು ಆಗಮಿಸ್ತಿದೆ.
ನಡೆದಾಡುವ ದೇವರು, ತ್ರಿವಿಧ ದಾಸೋಹಿ ಎಂದೇ ವಿಶ್ವಖ್ಯಾತಿ ಗಳಿಸಿದ್ದ ನಮ್ಮೆಲರ ಪ್ರೀತಿಯ ಶ್ರೀ ಶಿವಕುಮಾರ ಸ್ವಾಮೀಜಿ ರವರ ೨ನೇ ಪುಣ್ಯಸ್ಮರಣೆ ಇಂದು. ಅವರ ಸಾಮಾಜಿಕ ಕಳಕಳಿಯ ಕಾರ್ಯಗಳು ಎಷ್ಟೋ ಜನರಿಗೆ ಸ್ಪೂರ್ತಿಯಾಗಿವೆ. ಲಕ್ಷಾಂತರ ಮಕ್ಕಳಿಗೆ ದಾರಿದೀಪ ಆಗಿದ್ದರು. ಅವರ ಕೆಲಸದಿಂದ ಸದಾ ಜೀವಂತ pic.twitter.com/QovEz8ZJUr https://t.co/c049oR9wR2
— D Company(R)Official (@Dcompany171) January 21, 2021