– ರೋಗ ನಿರೋಧಕ ಶಕ್ತಿ ಹೆಚ್ಚಿಸಲು ಕಿಟ್ ಸಹಕಾರಿ
ಶಿವಮೊಗ್ಗ: ಕೊರೊನಾ ಸೋಂಕು ತಡೆಗೆ ರೋಗ ನಿರೋಧಕ ಶಕ್ತಿ ವೃದ್ಧಿಸುವ ಆಯುಷ್ ಕಿಟ್ ವಿತರಣೆಗೆ ಗ್ರಾಮೀಣಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು.
ನಗರದ ಕೋಟೆ ಆಂಜನೇಯಸ್ವಾಮಿ ದೇವಾಲಯಕ್ಕೆ ಆಗಮಿಸಿದ ಸಚಿವ ಕೆ.ಎಸ್.ಈಶ್ವರಪ್ಪ ಶ್ರೀಸೀತಾರಾಮ ದೇವರಿಗೆ ಪೂಜೆ ಸಲ್ಲಿಸಿ, ನಂತರ ಕಿಟ್ ವಿತರಣೆಗೆ ಚಾಲನೆ ನೀಡಿದರು. ಇದೇ ವೇಳೆ ದೇವಸ್ಥಾನದ ಪ್ರಧಾನ ಅರ್ಚಕ ರಾಮ್ ಚರಣ್ ಅವರಿಗೆ ಆಯುಷ್ ಕಿಟ್ ವಿತರಿಸಿದರು. ನಂತರ ಹಿರಿಯರಾದ ನಾಗಭೂಷಣ ಭಟ್ಟರಿಗೆ ಮೊಬೈಲ್ ನಲ್ಲಿದ್ದ ಆಧಾರ್ ಕಾರ್ಡ್ ಪರಿಶೀಲಿಸಿ ಕಿಟ್ ವಿತರಣೆ ಮಾಡಿದರು.
ದೇವಸ್ಥಾನದ ಎದುರಿನ ಕಾಂಡಿಮೆಂಟ್ಸ್ ಗೆ ತೆರಳಿ ಅಲ್ಲಿನ ಎಲ್ಲ ನಿವಾಸಿಗಳ ಆಧಾರ್ ಕಾರ್ಡ್ ಪರಿಶೀಲಿಸಿ ಕಿಟ್ ನೀಡಲಾಯಿತು. ನಂತರ ಪುತ್ರ ಜಿ.ಪಂ.ಸದಸ್ಯ ಕಾಂತೇಶ್, ಪಾಲಿಕೆ ಆಡಳಿ ಪಕ್ಷದ ನಾಯಕ ಚನ್ನಬಸಪ್ಪ ಆಯುರ್ವೇದಿಕ್ ಕಿಟ್ ಹಂಚಿಕೆಯನ್ನು ಮುಂದುವರೆಸಿದರು. ಕಾರ್ಯಕ್ರಮದಲ್ಲಿ ಆರ್ಯ ವೈಶ್ಯ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಡಿ.ಎಸ್.ಅರುಣ್, ಪಾಲಕೆ ಮೇಯರ್ ಸುವರ್ಣ ಶಂಕರ್, ಉಪಮೇಯರ್ ಸುರೇಖಾ ಮುರುಳೀಧರ್ ಉಪಸ್ಥಿತರಿದ್ದರು.