Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶಿವಮೊಗ್ಗ ವಿಮಾನ ನಿಲ್ದಾಣ ವಿನ್ಯಾಸ ಬದಲಿಸಿ: ಕಾಂಗ್ರೆಸ್ ಆಗ್ರಹ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಶಿವಮೊಗ್ಗ ವಿಮಾನ ನಿಲ್ದಾಣ ವಿನ್ಯಾಸ ಬದಲಿಸಿ: ಕಾಂಗ್ರೆಸ್ ಆಗ್ರಹ

Bengaluru City

ಶಿವಮೊಗ್ಗ ವಿಮಾನ ನಿಲ್ದಾಣ ವಿನ್ಯಾಸ ಬದಲಿಸಿ: ಕಾಂಗ್ರೆಸ್ ಆಗ್ರಹ

Public TV
Last updated: June 21, 2021 3:46 pm
Public TV
Share
3 Min Read
congress flag
SHARE

ಬೆಂಗಳೂರು: ರಾಜಕೀಯ ಪಕ್ಷದ ಚಿಹ್ನೆಯ ಪ್ರಚಾರಕ್ಕೆ ಸಾರ್ವಜನಿಕ ಹಣ ಮತ್ತು ಜಾಗ ಬಳಕೆ ಮಾಡುವುದು ಸರಿಯಲ್ಲ. ಈ ಹಿಂದಿನ ಪ್ರಕರಣಗಳಲ್ಲಿ ಹೈಕೋರ್ಟ್ ಹಾಗೂ ಚುನಾವಣ ಆಯೋಗ ಇದನ್ನು ವಿರೋಧಿಸಿವೆ. ಹೀಗಾಗಿ ಸರ್ಕಾರ ಶಿವಮೊಗ್ಗ ವಿಮಾನ ನಿಲ್ದಾಣದ ವಿನ್ಯಾಸವನ್ನು ಬದಲಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಸೋಮವಾರ ಬೆಂಗಳೂರಿನ ಕ್ವೀನ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಶಾಸಕ ಎನ್.ಎ ಹ್ಯಾರಿಸ್ ಹಾಗೂ ಎಐಸಿಸಿ ವಕ್ತಾರರಾದ ಬ್ರಿಜೆಶ್ ಕಾಳಪ್ಪ ಅವರು ಜಂಟಿ ಪತ್ರಿಕಾಗೋಷ್ಠಿ ನಡೆಸಿ ಈ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದರು. ಈ ವೇಳೆ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಸಂಯೋಜಕರಾದ ಎಂ. ರಾಮಚಂದ್ರಪ್ಪ ಹಾಗೂ ಎಂ.ಎ ಸಲೀಂ ಅವರು ಉಪಸ್ಥಿತರಿದ್ದರು.

Harris 2 1

ಶಿವಮೊಗ್ಗ ವಿಮಾನ ನಿಲ್ದಾಣ ನಿರ್ಮಾಣವಾಗುತ್ತಿದ್ದು, ಇದರ ವಿನ್ಯಾಸ ಕಮಲದ ಆಕಾರದಲ್ಲಿದೆ. ಕಮಲ ಯಾವ ಪಕ್ಷದ ಚಿಹ್ನೆ ಎಂದು ಎಲ್ಲರಿಗೂ ಗೊತ್ತಿದೆ. ಪಕ್ಷದ ಚಿಹ್ನೆಗೆ ಪ್ರಚಾರ ನೀಡಲು ಸರ್ಕಾರದ ಹಣ ಬಳಕೆ ಮಾಡುವುದು ಸರಿಯಲ್ಲ. ಈ ವಿಚಾರವಾಗಿ ನಮ್ಮ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಈ ವಿನ್ಯಾಸ ನಿರ್ಮಾಣ ಕೂಡಲೇ ನಿಲ್ಲಿಸಬೇಕು ಹಾಗೂ ಇದನ್ನು ಬದಲಿಸಬೇಕು. ಸರ್ಕಾರದ ಹಣದಲ್ಲಿ ನಿಮ್ಮ ಪಕ್ಷದ ಪ್ರಚಾರ ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ ಎಂದರು. ಇದನ್ನೂ ಓದಿ: ಮೈಸೂರು ನಿರ್ಗಮಿತ ಡಿಸಿ ರೋಹಿಣಿ ಸಿಂಧೂರಿಗೆ ಸಂಕಷ್ಟ

vishwanath 1 medium

ಕಾಮನ್ ಕಾಸ್ ವರ್ಸಸ್ ಬಿಎಸ್ ಪಿ ನಡುವಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ 2016ರ ಜುಲೈ 7ರಂದು ಒಂದು ತೀರ್ಪು ಕೊಟ್ಟಿದೆ. ಬಿಎಸ್ ಪಿಯು ತಮ್ಮ ಪಕ್ಷದ ಚಿಹ್ನೆ ಆನೆ ಆಕಾರದಲ್ಲಿ ಹಲವು ಪ್ರತಿಮೆ ನಿರ್ಮಾಣ ಮಾಡಿದ್ದಾಗ, ರಾಜಕೀಯ ಪಕ್ಷದ ಚಿಹ್ನೆ ಪ್ರಚಾರಕ್ಕೆ ತೆರಿಗೆದಾರರ ಹಣವನ್ನು ಬಳಸುವಂತಿಲ್ಲ ಎಂದು ತೀರ್ಪು ನೀಡಿತ್ತು. ಇನ್ನು ಚುನಾವಣಾ ಆಯೋಗವು, 2016ರ ಸೆಪ್ಟೆಂಬರ್ 8ರಂದು ಈ ವಿಚಾರವಾಗಿ ಒಂದು ನಿರ್ಣಯಕೈಗೊಳ್ಳುತ್ತದೆ. ಅದೇನೆಂದರೆ, ಸಾರ್ವಜನಿಕ ಹಣ ಮತ್ತು ಜಾಗವನ್ನು ಬಳಸಿಕೊಂಡು ರಾಜಕೀಯ ಪಕ್ಷ ಅಥವಾ ಅದರ ಚಿಹ್ನೆಗೆ ಪ್ರಚಾರ ನೀಡಿದರೆ, ಅದು ಪಾರದರ್ಶಕ ಚುನಾವಣೆಗೆ ವಿರುದ್ಧವಾದುದ್ದು. 1968ರ ಚುನಾವಣಾ ಚಿಹ್ನೆ ಆದೇಶದ ಪ್ಯಾರಾ 16ರ ನಿಯಮಾವಳಿ ಉಲ್ಲಂಘನೆ ಮಾಡಿದರೆ ಆ ಪಕ್ಷ ತನ್ನ ಚುನಾವಣೆ ಚಿಹ್ನೆಯನ್ನೆ ಕಳೆದುಕೊಳ್ಳಲಿದೆ. ಹೀಗಾಗಿ ಬಿಜೆಪಿ ಕೂಡಲೇ ಶಿವಮೊಗ್ಗ ವಿಮಾನ ನಿಲ್ದಾಣವನ್ನು ಕಮಲದ ವಿನ್ಯಾಸದಲ್ಲಿ ನಿರ್ಮಾಣ ಮಾಡುವುದನ್ನು ನಿಲ್ಲಿಸಬೇಕು. ಒಂದುವೇಳೆ ನೀವು ಇದನ್ನು ಮುಂದುವರಿಸಿದರೆ ನೀವು ನಿಮ್ಮ ಚಿಹ್ನೆ ಕಳೆದುಕೊಳ್ಳಬೇಕಾಗುತ್ತದೆ ಎಂದು ಈ ಮೂಲಕ ಭಾರತೀಯ ಜನತಾ ಪಕ್ಷಕ್ಕೆ ಎಚ್ಚರಿಕೆ ನೀಡುತ್ತೇವೆ ಎಂದರು.

Aravind Bellad Letter 2 medium

ಭದ್ರಾ ಮೇಲ್ದಂಡೆ ಯೋಜನೆ ವಿಚಾರವಾಗಿ ಆರೋಪ ಮಾಡಿರುವುದು ಕಾಂಗ್ರೆಸ್ ಪಕ್ಷದವರಲ್ಲ. ಈ ಟೆಂಡರ್ ಕರೆಯುವ ಸಂದರ್ಭದಲ್ಲಿ ಅವ್ಯವಹಾರ ನಡೆದಿದೆ ಎಂದು ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ಹೆಚ್. ವಿಶ್ವನಾಥ್ ಅವರು. ಆದರೆ ಬೊಮ್ಮಾಯಿ ಅವರು ಇದರಲ್ಲಿ ಯಾವುದೇ ಅವ್ಯವಹಾರ ನಡೆದಿಲ್ಲ ಹೀಗಾಗಿ ತನಿಖೆ ಅಗತ್ಯವಿಲ್ಲ ಎಂದಿದ್ದಾರೆ. ವಿಧಾನ ಪರಿಷತ್ ಸದಸ್ಯರೇ ಈ ಆರೋಪ ಮಾಡಿರುವ ಹಿನ್ನೆಲೆಯಲ್ಲಿ ಜಂಟಿ ಸದನ ಸಮಿತ ರಚಿಸಬೇಕು ಎಂಬುದು ಕಾಂಗ್ರೆಸ್ ಆಗ್ರಹವಾಗಿದೆ ಎಂದರು.

MND HDK medium

ದೂರವಾಣಿ ಕದ್ದಾಲಿಕೆ ವಿಚಾರವಾಗಿ ಶಾಸಕ ಅರವಿಂದ್ ಬೆಲ್ಲದ್ ಅವರು ಆರೋಪಿಸಿದ್ದಾರೆ. ಈ ಪ್ರಕರಣವನ್ನು ಬೊಮ್ಮಾಯಿ ಅವರು ನಗರ ಪೊಲೀಸ್ ಆಯುಕ್ತರಿಗೆ ವಹಿಸಿದ್ದಾರೆ. ಈ ಹಿಂದೆ ಇದೇ ದೂರವಾಣಿ ಕದ್ದಾಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಿಬಿಐ ನನಗೆ 2019ರ ನವೆಂಬರ್ 21ರಂದು ನೋಟೀಸ್ ಜಾರಿ ಮಾಡಿ 16 ತಾಸುಗಳ ಕಾಲ ವಿಚಾರಣೆ ನಡೆಸಿತ್ತು. ಆಗ ನಾನು ಕೇಂದ್ರ ಅಥವಾ ರಾಜ್ಯ ಸರ್ಕಾರದ ಯಾವುದೇ ಹುದ್ದೆಯಲ್ಲಿರಲಿಲ್ಲ. ಕದ್ದಾಲಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ಅವರನ್ನು ವಿಚಾರಣೆಗೆ ಒಳಪಡಿಸಿತ್ತು. ಈಗಲೂ ಅದರ ವಿಚಾರಣೆ ನಡೆಯುತ್ತಲೇ ಇದೆ. ಆಗ ಕುಮಾರಸ್ವಾಮಿ ಅವರ ವಿಚಾರಣೆ ನಡೆದಿದೆಯಾದರೆ, ಈಗ ಯಡಿಯೂರಪ್ಪನವರ ವಿಚಾರಣೆ ಯಾಕಿಲ್ಲ? ಈ ವಿಚಾರಣೆಯನ್ನು ಸಿಬಿಐಗೆ ಯಾಕೆ ವಹಿಸಿಲ್ಲ? ಆಗ ಸಿಕ್ಕಸಿಕ್ಕವರ ವಿಚಾರಣೆ ಮಾಡುತ್ತಿದ್ದ ಸಿಬಿಐ, ಈಗ ಯಾಕೆ ಮಾಡುತ್ತಿಲ್ಲ? ಹೀಗಾಗಿ ಈ ಪ್ರಕರಣ ಸಿಬಿಐಗೆ ವಹಿಸಬೇಕು’ ಎಂದು ಆಗ್ರಹಿಸಿದರು.

RAMESH JARAKIHOLI 1

ಈಗ ರಮೇಶ್ ಜಾರಕಿಹೊಳಿ ಅವರು ಮತ್ತೆ ಸಚಿವರಾಗಲು ಪ್ರಯತ್ನಿಸುತ್ತಿದ್ದಾರೆ. ಇವತ್ತಿನ ಪತ್ರಿಕೆಗಳಲ್ಲಿ ಬಂದಿರುವ ವರದಿ ಪ್ರಕಾರ, ತಮಿಳುನಾಡಿನ ಮಾಜಿ ಮಂತ್ರಿಯೊಬ್ಬರು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಬಂಧನಕ್ಕೆ ಒಳಗಾಗಿದ್ದಾರೆ. 376 ಪ್ರಕರಣದಲ್ಲಿ ಯಾವುದೇ ಆರೋಪಿ ನಾನು ಅತ್ಯಾಚಾರ ಮಾಡಿದ್ದೇನೆ ಎಂದು ಒಪ್ಪಿಕೊಂಡಿರುವ ಉದಾಹರಣೆ ಇಲ್ಲ. ರಮೇಶ್ ಜಾರಕಿಹೊಳಿ ಅವರನ್ನು ಬಂಧಿಸದೇ, ಅವರನ್ನು ಸ್ವತಂತ್ರವಾಗಿ ಬಿಟ್ಟು ಅವರು ಮತ್ತೆ ಸಚಿವರಾಗಲು ಮುಂದಾಗಿದ್ದಾರೆ ಎಂದರೆ, ಇದು ಕೇವಲ ಆ ಹೆಣ್ಣಿನ ಮೇಲಾದ ಬಲತ್ಕಾರವಲ್ಲ. ಇಡೀ ಕಾನೂನು ವ್ಯವಸ್ಥೆ ಮೇಲಿನ ಬಲತ್ಕಾರವಾಗುತ್ತದೆ. ಇದುವರೆಗೂ ಅವರ ಬಂಧನವಾಗದಿರುವುದು ದೊಡ್ಡ ತಪ್ಪು, ಇನ್ನಾದರೂ ತನಿಖಾ ಸಂಸ್ಥೆಗಳು ಬಂಧನ ಮಾಡಿ ವಿಚಾರಣೆ ನಡೆಸಬೇಕು ಎಂದು ಆಗ್ರಹಿಸಿದರು.

TAGGED:congressPublic TVRamesh jarakiholishivamoggaಕಾಂಗ್ರೆಸ್ಪಬ್ಲಿಕ್ ಟಿವಿರಮೇಶ್ ಜಾರಕಿಹೊಳಿಶಿವಮೊಗ್ಗ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ನಮ್ಮದು ‘ವಿರೋಶ್‌’ ಜೋಡಿ, ಮದುವೆಗೆ ಬನ್ನಿ..: ಆಮಂತ್ರಣ ನೀಡಿದ ರಶ್ಮಿಕಾ ಮಂದಣ್ಣ
Cinema Latest Top Stories
Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories

You Might Also Like

Indias Big Decolonisation Move Chakravarti Rajagopalachari replaces Lutyens at Rashtrapati Bhavan Delhi 1
Latest

ವಸಾಹತುಶಾಹಿ ವಿರುದ್ಧ ಕೇಂದ್ರದ ಸಮರ – ಲುಟ್ಯೆನ್ಸ್ ಪ್ರತಿಮೆ ತೆಗೆದು ರಾಜಗೋಪಾಲಾಚಾರಿ ಪುತ್ಥಳಿ ಅನಾವರಣ

Public TV
By Public TV
24 minutes ago
School 3
Bengaluru City

ಮಿಷನ್ ಪ್ರಕೃತಿ | ಕುಂದಾಪುರ, ಚಾ. ನಗರ ಸೇರಿ ರಾಜ್ಯದ 10 ಶಾಲೆಗಳಿಗೆ ʻಅತ್ಯುತ್ತಮ ಶಾಲೆʼ ಪ್ರಶಸ್ತಿ‌

Public TV
By Public TV
2 hours ago
opd hospital Karnataka
Latest

ಮಾ.11 ರಿಂದ ಒಪಿಡಿ ಸೇವೆ ಬಂದ್‌ – ಸರ್ಕಾರದ ವಿರುದ್ಧ ಸಿಡಿದ ವೈದ್ಯರು

Public TV
By Public TV
2 hours ago
Chandru Lamani
Bengaluru City

ಲಂಚ ಪಡೆಯುವಾಗ ಸಿಕ್ಕಿಬಿದ್ದ ಚಂದ್ರು ಲಮಾಣಿ – ಶಾಸಕರ ಉಚ್ಚಾಟನೆಗೆ ಬಿಜೆಪಿ ಚಿಂತನೆ

Public TV
By Public TV
2 hours ago
Iqbal Hussain
Districts

ಸಚಿವರ ಬದಲಾವಣೆಗಾಗಿ ಹೈಕಮಾಂಡ್‌ಗೆ ಪತ್ರ ಬರೆದಿರೋದು ನಿಜ: ಇಕ್ಬಾಲ್ ಹುಸೇನ್

Public TV
By Public TV
2 hours ago
Margaret Alva
Bengaluru City

ಶಿಸ್ತು, ಜವಾಬ್ದಾರಿ ಇರಬೇಕು – ಅರೆ ಬೆತ್ತಲೆ ಪ್ರತಿಭಟನೆಯನ್ನು ಖಂಡಿಸಿದ ಕೈ ನಾಯಕಿ ಮಾರ್ಗರೇಟ್‌ ಆಳ್ವ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?