Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಶೇ.100ರಷ್ಟು ಲಸಿಕೆ ಹಾಕಿಸುವ ಗ್ರಾಮ ಪಂಚಾಯಿತಿಗಳಿಗೆ 25 ಲಕ್ಷ ವಿಶೇಷ ಅನುದಾನ ನೀಡಿ: ಪ್ರಿಯಾಂಕ್ ಖರ್ಗೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Kalaburagi | ಶೇ.100ರಷ್ಟು ಲಸಿಕೆ ಹಾಕಿಸುವ ಗ್ರಾಮ ಪಂಚಾಯಿತಿಗಳಿಗೆ 25 ಲಕ್ಷ ವಿಶೇಷ ಅನುದಾನ ನೀಡಿ: ಪ್ರಿಯಾಂಕ್ ಖರ್ಗೆ

Kalaburagi

ಶೇ.100ರಷ್ಟು ಲಸಿಕೆ ಹಾಕಿಸುವ ಗ್ರಾಮ ಪಂಚಾಯಿತಿಗಳಿಗೆ 25 ಲಕ್ಷ ವಿಶೇಷ ಅನುದಾನ ನೀಡಿ: ಪ್ರಿಯಾಂಕ್ ಖರ್ಗೆ

Public TV
Last updated: August 10, 2021 4:13 pm
Public TV
Share
2 Min Read
priyank kharge 1
SHARE

ಕಲಬುರಗಿ: ಶೇ.100ರಷ್ಟು ಲಸಿಕಾಕರಣ ಪೂರ್ಣಗೊಳಿಸುವ ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತಿಗಳಿಗೆ ಸರ್ಕಾರ 25 ಲಕ್ಷ ರೂ. ವಿಶೇಷ ಪ್ರೋತ್ಸಾಹ ಅನುದಾನ ಘೋಷಿಸಲಿ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, 25 ಲಕ್ಷ ರೂ. ವಿಶೇಷ ಪ್ರೋತ್ಸಾಹ ಅನುದಾನದಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ತುರ್ತಾಗಿ ಹಾಗೂ ಅವಶ್ಯಕತೆ ಇರುವ ಜನಪರ ಕಾರ್ಯಕ್ರಮ ಅಥವಾ ಯೋಜನಗಳ ಜಾರಿಗೆ ತರಲು ಅನುಕೂಲವಾಗುತ್ತದೆ. ಸರ್ಕಾರ ಈ ನಿಟ್ಟಿಯಲ್ಲಿ ಯೋಚಿಸಿದರೆ ನಾನು ನನ್ನ ಶಾಸಕರ ನಿಧಿಯಿಂದ ಅಗತ್ಯವಿರುವ ಅನುದಾನ ಒದಗಿಸಲು ಸಿದ್ದನಿದ್ದೇನೆ ಎಂದು ಶಾಸಕರು ಹೇಳಿದ್ದಾರೆ.

mdk vaccine web

ಬಿಜೆಪಿ ನಾಯಕರ ಅವೈಜ್ಞಾನಿಕ ಸಲಹೆಗಳ ಪರಿಣಾಮವಾಗಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಹಾಕಿಸಿಕೊಳ್ಳಲು ಹಿಂಜರಿದಿದ್ದರಿಂದ ಕೋವಿಡ್ ಲಸಿಕಾಕರಣ ಅಭಿಯಾನಕ್ಕೆ ಸಮರ್ಪಕ ವೇಗ ದೊರಕದೆ, ಕುಂಟುತ್ತ ಸಾಗಿದೆ. ಕೊರೊನಾ ಮೂರನೆಯ ಅಲೆ ರಾಜ್ಯದ ಬಾಗಿಲ ಬಳಿ ಕುಳಿತಿದೆ ಎಂದು ತಜ್ಞರು ಎಚ್ಚರಿಸಿದ್ದರೂ ನಿದ್ದೆಗಣ್ಣಿನಲ್ಲಿರುವ ಸರ್ಕಾರ, ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ದಿಟ್ಟ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗುತ್ತಿದೆ. ಜೊತೆಗೆ ಜಿಲ್ಲೆಯ ಕುರಿತ ತನ್ನ ದಿವ್ಯ ನಿರ್ಲಕ್ಷ್ಯತನ ಮುಂದುವರೆಸಿದೆ. ಜಿಲ್ಲೆಯ ಬಿಜೆಪಿ ನಾಯಕರು ಈ ಕುರಿತು ಮೌನವಹಿಸಿದ್ದು ಗಮನಸಿದರೆ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಹಾಗೂ ಕಲಬುರಗಿ ಜಿಲ್ಲೆಗೆ ತೋರಿಸುತ್ತಿರುವ ಅಲಕ್ಷ್ಯತನಕ್ಕೆ ಸಮ್ಮತಿಸುತ್ತಿದ್ದಾರೆ ಎನಿಸುತ್ತದೆ ಎಂದರು.

ಗೋಮೂತ್ರ ಸೇವನೆ ಹಾಗೂ ಮೈಗೆ ಹಸುವಿನ ಸಗಣಿ ಮೆತ್ತಿಕೊಳ್ಳುವುದರಿಂದ ಕೊರೊನಾ ಸೋಂಕು ನಿವಾರಿಸಿಬಹುದು ಎಂದು ಬಿಜೆಪಿ ನಾಯಕರು ಕರೆ ಕೊಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಲಸಿಕೆ ಪಡೆದುಕೊಳ್ಳಲು ಮುಂದೆ ಬರಲಿಲ್ಲ. ಆರಂಭಿಕ ಹಂತದಲ್ಲೇ ಹೀಗೆ ಅವೈಜ್ಞಾನಿಕ ವಿಚಾರಗಳನ್ನು ಜನರ ತಲೆಯೊಳೆಗೆ ತುಂಬಿದ ಬಿಜೆಪಿ ಲಸಿಕಾಕರಣ ವೇಗ ಪಡೆದುಕೊಳ್ಳುಲು ವಿಫಲವಾಗಿರುವುದಕ್ಕೆ ನೇರ ಕಾರಣವಾಗಿದೆ ಎಂದು ದೂರಿದ್ದಾರೆ.

VACCINE 4

ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳುವುದರ ಮೂಲಕ ಕೊರೊನಾ ಸೋಂಕನ್ನು ತಡೆಗಟ್ಟಬಹುದು. ಲಸಿಕೆ ಹಾಕಿಸಿಕೊಳ್ಳುವದರಿಂದ ಯಾವುದೇ ಅಡ್ಡಪರಿಣಾಮಗಳಿಲ್ಲ ಎಂದು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವಲ್ಲಿ ಸರ್ಕಾರ ವಿಫಲವಾದರೆ, ಹಸುವಿನ ಮೂತ್ರ ಸೇವನೆ ಹಾಗೂ ಸಗಣಿ ಬಳಿದುಕೊಂಡರೆ ಕೊರೊನಾ ವಾಸಿಯಾಗುತ್ತದೆ ಎನ್ನುವ ಅವೈಜ್ಞಾನಿಕ ವಿಚಾರಗಳನ್ನು ಜನರಿಗೆ ಬಿಜೆಪಿ ನಾಯಕರು ಹೇಳುತ್ತಲೇ ಹೋಗಿದ್ದರಿಂದ ಮಹತ್ವಾಕಾಂಕ್ಷಿ ಅಭಿಯಾನಕ್ಕೆ ಹಿನ್ನೆಡೆಯಾಗುವಂತಾಗಿದೆ ಎಂದರು.

Vaccine 6 medium

ಲಭ್ಯವಿರುವ ಅಂಕಿ ಅಂಶಗಳ ಪ್ರಕಾರ, ಕಲಬುರಗಿ ಜಿಲ್ಲೆಯಲ್ಲಿ ಮೊದಲ ಡೋಸ್ ಲಸಿಕೆ ಹಾಕಿಸಿಕೊಂಡವರು ಕೇವಲ ಶೇ.36 ಹಾಗೂ ಎರಡನೆಯ ಡೋಸ್ ಹಾಕಿಸಿಕೊಂಡವರು ಕೇವಲ ಶೇ.9 ಜನ ಮಾತ್ರ. ಅಂದರೆ ಒಟ್ಟು 19 ಲಕ್ಷ ವಯಸ್ಕರ ಜನಸಂಖ್ಯೆಯಲ್ಲಿ 8,75,095 ಜನರು ಲಸಿಕೆ ಪಡೆದುಕೊಂಡಿದ್ದಾರೆ. ಇವರಲ್ಲಿ 7,06,232 ಜನರು ಮೊದಲನೆಯ ಡೋಸ್ ಪಡೆದರೆ, ಕೇವಲ 1,68,863 ಜನರು ಎರಡನೆಯ ಡೋಸ್ ಪಡೆದುಕೊಂಡಿದ್ದಾರೆ. ಮೊದಲನೆಯ ಹಾಗೂ ಎರಡನೆಯ ಡೋಸ್ ಸೇರಿದಂತೆ ಕಲಬುರಗಿ ನಗರ ವ್ಯಾಪ್ತಿಯಲ್ಲಿ 2,92,539 ಜನರು ಲಸಿಕೆ ಪಡೆದರೆ, ಚಿತ್ತಾಪುರ ತಾಲೂಕಿನಲ್ಲಿ 1,03,554 ಜನರು ಲಸಿಕೆ ಪಡೆದಿದ್ದಾರೆ. ಕ್ರಮವಾಗಿ ಆಳಂದ 97,074, ಚಿಂಚೋಳಿ 82,237, ಜೇವರ್ಗಿ 81,866, ಕಲಬುರಗಿ ಗ್ರಾಮೀಣ 79, 355, ಸೇಡಂ- 70,855 ಹಾಗೂ ಅಫಝಲಪುರ ತಾಲೂಕಿನಲ್ಲಿ ಒಟ್ಟು 67,615 ಜನರು ಲಸಿಕೆ ಪಡೆದಿದ್ದಾರೆ. ಜಿಲ್ಲೆಯ ಒಟ್ಟು 19 ಲಕ್ಷ ವಯಸ್ಕರ ಜನಸಂಖ್ಯೆಯ ಆಧಾರಕ್ಕೆ ಹೋಲಿಸಿದರೆ ಲಸಿಕೆ ಪಡೆದರವರ ಸಂಖ್ಯೆ ಗಣನೀಯ ಏರಿಕೆಯಾಗಬೇಕಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ಈ ಕೂಡಲೇ ಪ್ರತಿಯೊಬ್ಬರಿಗೂ ಲಸಿಕೆ ಹಾಕಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

TAGGED:Corona VaccineCorona VirusPriyank KhargePublic TVಕೊರೊನಾ ಲಸಿಕೆಕೊರೊನಾ ವೈರಸ್ಪಬ್ಲಿಕ್ ಟಿವಿಪ್ರಿಯಾಂಕ್ ಖರ್ಗೆ
Share This Article
Facebook Whatsapp Whatsapp Telegram

Cinema news

Karunya Ram Samrudhi Ram
25 ಲಕ್ಷ ವಂಚನೆ – ತಂಗಿ ವಿರುದ್ಧವೇ ನಟಿ ಕಾರುಣ್ಯಾ ರಾಮ್‌ ದೂರು
Cinema Crime Latest Main Post Sandalwood
Kavya
BBK 12 | ಧ್ರುವಂತ್‌ ಔಟ್‌ – Top 6 ಸ್ಪರ್ಧಿಯಾಗಿ ಕಾವ್ಯ ಸೇಫ್‌
Cinema Latest Main Post TV Shows
Shri Mahadev
ಅಮೂಲ್ಯ ನಟನೆಯ ಪೀಕಬೂ ಚಿತ್ರಕ್ಕೆ ಶ್ರೀರಾಮ್ ಹೀರೋ
Cinema Latest Sandalwood Top Stories
bigg boss 1
Bigg Boss: ಇಂದು ಮಿಡ್‌ ವೀಕ್‌ ಎಲಿಮಿನೇಷನ್‌ – ಮನೆಯಿಂದ ಹೊರ ಹೋಗೋದ್ಯಾರು?
Cinema Latest Top Stories TV Shows

You Might Also Like

boys drown in pond in mudhol bagalkote
Bagalkot

ತಂದೆ ಎದುರೇ ಕೊಳದಲ್ಲಿ ಮುಳುಗಿ ಪ್ರಾಣ ಬಿಟ್ಟ ಬಾಲಕರು!

Public TV
By Public TV
6 minutes ago
Priyank Kharge 2
Bengaluru City

ಸರ್ವ ಧರ್ಮಗ್ರಂಥಗಳ ಹೆಸರಲ್ಲಿ ರಾಜಕೀಯ ಮಾಡುವ ಬಿಜೆಪಿ ಸಂಸ್ಕೃತಿ ಕಲಿತಿಲ್ಲ: ಪ್ರಿಯಾಂಕ್‌ ಖರ್ಗೆ ವಾಗ್ದಾಳಿ

Public TV
By Public TV
12 minutes ago
KH Muniyappa
Bengaluru City

ಶಿಡ್ಲಘಟ್ಟ ಕೇಸ್ | ರಾಜೀವ್‌ಗೌಡ ಮಾತನಾಡಿದ್ದು ಸರಿಯಲ್ಲ, ಕರೆದು ಬುದ್ಧಿ ಹೇಳ್ತಿನಿ: ಕೆ.ಹೆಚ್.ಮುನಿಯಪ್ಪ

Public TV
By Public TV
23 minutes ago
stone pelting in front of Reddys house over banner issue police lathi charge Ballari
Bellary

ಬಳ್ಳಾರಿ ಬ್ಯಾನರ್‌ ಬಡಿದಾಟದ ವಿಡಿಯೋ ಇದ್ದಲ್ಲಿ ಸೆಂಡ್‌ ಮಾಡಿ – ಸಿಐಡಿ ಮನವಿ

Public TV
By Public TV
28 minutes ago
Mamata Banerjee 1
Latest

ಇ.ಡಿ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ತಡೆ – ಸಿಎಂ ಮಮತಾ ಬ್ಯಾನರ್ಜಿ, ಪೊಲೀಸರಿಗೆ ನೋಟಿಸ್‌

Public TV
By Public TV
29 minutes ago
Chandravva Bagalkote
Bagalkot

ಪ್ರಭುಲಿಂಗ ದೇವರಿಗೆ 16 ಲಕ್ಷ ಮೌಲ್ಯದ ಬೆಳ್ಳಿ ಬಾಗಿಲು ಮಾಡಿಸಿದ್ದ ಅಜ್ಜಿಯ ಹತ್ಯೆ!

Public TV
By Public TV
36 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?