Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Kalaburagi

ಶೇ.100ರಷ್ಟು ಲಸಿಕೆ ಹಾಕಿಸುವ ಗ್ರಾಮ ಪಂಚಾಯಿತಿಗಳಿಗೆ 25 ಲಕ್ಷ ವಿಶೇಷ ಅನುದಾನ ನೀಡಿ: ಪ್ರಿಯಾಂಕ್ ಖರ್ಗೆ

Public TV
Last updated: August 10, 2021 4:13 pm
Public TV
Share
2 Min Read
priyank kharge 1
SHARE

ಕಲಬುರಗಿ: ಶೇ.100ರಷ್ಟು ಲಸಿಕಾಕರಣ ಪೂರ್ಣಗೊಳಿಸುವ ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತಿಗಳಿಗೆ ಸರ್ಕಾರ 25 ಲಕ್ಷ ರೂ. ವಿಶೇಷ ಪ್ರೋತ್ಸಾಹ ಅನುದಾನ ಘೋಷಿಸಲಿ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಆಗ್ರಹಿಸಿದ್ದಾರೆ.

ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, 25 ಲಕ್ಷ ರೂ. ವಿಶೇಷ ಪ್ರೋತ್ಸಾಹ ಅನುದಾನದಲ್ಲಿ ಗ್ರಾಮಾಂತರ ಪ್ರದೇಶಗಳಲ್ಲಿ ತುರ್ತಾಗಿ ಹಾಗೂ ಅವಶ್ಯಕತೆ ಇರುವ ಜನಪರ ಕಾರ್ಯಕ್ರಮ ಅಥವಾ ಯೋಜನಗಳ ಜಾರಿಗೆ ತರಲು ಅನುಕೂಲವಾಗುತ್ತದೆ. ಸರ್ಕಾರ ಈ ನಿಟ್ಟಿಯಲ್ಲಿ ಯೋಚಿಸಿದರೆ ನಾನು ನನ್ನ ಶಾಸಕರ ನಿಧಿಯಿಂದ ಅಗತ್ಯವಿರುವ ಅನುದಾನ ಒದಗಿಸಲು ಸಿದ್ದನಿದ್ದೇನೆ ಎಂದು ಶಾಸಕರು ಹೇಳಿದ್ದಾರೆ.

mdk vaccine web

ಬಿಜೆಪಿ ನಾಯಕರ ಅವೈಜ್ಞಾನಿಕ ಸಲಹೆಗಳ ಪರಿಣಾಮವಾಗಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆ ಹಾಕಿಸಿಕೊಳ್ಳಲು ಹಿಂಜರಿದಿದ್ದರಿಂದ ಕೋವಿಡ್ ಲಸಿಕಾಕರಣ ಅಭಿಯಾನಕ್ಕೆ ಸಮರ್ಪಕ ವೇಗ ದೊರಕದೆ, ಕುಂಟುತ್ತ ಸಾಗಿದೆ. ಕೊರೊನಾ ಮೂರನೆಯ ಅಲೆ ರಾಜ್ಯದ ಬಾಗಿಲ ಬಳಿ ಕುಳಿತಿದೆ ಎಂದು ತಜ್ಞರು ಎಚ್ಚರಿಸಿದ್ದರೂ ನಿದ್ದೆಗಣ್ಣಿನಲ್ಲಿರುವ ಸರ್ಕಾರ, ಸಾಂಕ್ರಾಮಿಕ ರೋಗ ನಿಯಂತ್ರಣಕ್ಕೆ ದಿಟ್ಟ ಕ್ರಮ ಕೈಗೊಳ್ಳುವಲ್ಲಿ ವಿಫಲವಾಗುತ್ತಿದೆ. ಜೊತೆಗೆ ಜಿಲ್ಲೆಯ ಕುರಿತ ತನ್ನ ದಿವ್ಯ ನಿರ್ಲಕ್ಷ್ಯತನ ಮುಂದುವರೆಸಿದೆ. ಜಿಲ್ಲೆಯ ಬಿಜೆಪಿ ನಾಯಕರು ಈ ಕುರಿತು ಮೌನವಹಿಸಿದ್ದು ಗಮನಸಿದರೆ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕ ಹಾಗೂ ಕಲಬುರಗಿ ಜಿಲ್ಲೆಗೆ ತೋರಿಸುತ್ತಿರುವ ಅಲಕ್ಷ್ಯತನಕ್ಕೆ ಸಮ್ಮತಿಸುತ್ತಿದ್ದಾರೆ ಎನಿಸುತ್ತದೆ ಎಂದರು.

ಗೋಮೂತ್ರ ಸೇವನೆ ಹಾಗೂ ಮೈಗೆ ಹಸುವಿನ ಸಗಣಿ ಮೆತ್ತಿಕೊಳ್ಳುವುದರಿಂದ ಕೊರೊನಾ ಸೋಂಕು ನಿವಾರಿಸಿಬಹುದು ಎಂದು ಬಿಜೆಪಿ ನಾಯಕರು ಕರೆ ಕೊಟ್ಟ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಲಸಿಕೆ ಪಡೆದುಕೊಳ್ಳಲು ಮುಂದೆ ಬರಲಿಲ್ಲ. ಆರಂಭಿಕ ಹಂತದಲ್ಲೇ ಹೀಗೆ ಅವೈಜ್ಞಾನಿಕ ವಿಚಾರಗಳನ್ನು ಜನರ ತಲೆಯೊಳೆಗೆ ತುಂಬಿದ ಬಿಜೆಪಿ ಲಸಿಕಾಕರಣ ವೇಗ ಪಡೆದುಕೊಳ್ಳುಲು ವಿಫಲವಾಗಿರುವುದಕ್ಕೆ ನೇರ ಕಾರಣವಾಗಿದೆ ಎಂದು ದೂರಿದ್ದಾರೆ.

VACCINE 4

ಪ್ರತಿಯೊಬ್ಬರು ಲಸಿಕೆ ಹಾಕಿಸಿಕೊಳ್ಳುವುದರ ಮೂಲಕ ಕೊರೊನಾ ಸೋಂಕನ್ನು ತಡೆಗಟ್ಟಬಹುದು. ಲಸಿಕೆ ಹಾಕಿಸಿಕೊಳ್ಳುವದರಿಂದ ಯಾವುದೇ ಅಡ್ಡಪರಿಣಾಮಗಳಿಲ್ಲ ಎಂದು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಡುವಲ್ಲಿ ಸರ್ಕಾರ ವಿಫಲವಾದರೆ, ಹಸುವಿನ ಮೂತ್ರ ಸೇವನೆ ಹಾಗೂ ಸಗಣಿ ಬಳಿದುಕೊಂಡರೆ ಕೊರೊನಾ ವಾಸಿಯಾಗುತ್ತದೆ ಎನ್ನುವ ಅವೈಜ್ಞಾನಿಕ ವಿಚಾರಗಳನ್ನು ಜನರಿಗೆ ಬಿಜೆಪಿ ನಾಯಕರು ಹೇಳುತ್ತಲೇ ಹೋಗಿದ್ದರಿಂದ ಮಹತ್ವಾಕಾಂಕ್ಷಿ ಅಭಿಯಾನಕ್ಕೆ ಹಿನ್ನೆಡೆಯಾಗುವಂತಾಗಿದೆ ಎಂದರು.

Vaccine 6 medium

ಲಭ್ಯವಿರುವ ಅಂಕಿ ಅಂಶಗಳ ಪ್ರಕಾರ, ಕಲಬುರಗಿ ಜಿಲ್ಲೆಯಲ್ಲಿ ಮೊದಲ ಡೋಸ್ ಲಸಿಕೆ ಹಾಕಿಸಿಕೊಂಡವರು ಕೇವಲ ಶೇ.36 ಹಾಗೂ ಎರಡನೆಯ ಡೋಸ್ ಹಾಕಿಸಿಕೊಂಡವರು ಕೇವಲ ಶೇ.9 ಜನ ಮಾತ್ರ. ಅಂದರೆ ಒಟ್ಟು 19 ಲಕ್ಷ ವಯಸ್ಕರ ಜನಸಂಖ್ಯೆಯಲ್ಲಿ 8,75,095 ಜನರು ಲಸಿಕೆ ಪಡೆದುಕೊಂಡಿದ್ದಾರೆ. ಇವರಲ್ಲಿ 7,06,232 ಜನರು ಮೊದಲನೆಯ ಡೋಸ್ ಪಡೆದರೆ, ಕೇವಲ 1,68,863 ಜನರು ಎರಡನೆಯ ಡೋಸ್ ಪಡೆದುಕೊಂಡಿದ್ದಾರೆ. ಮೊದಲನೆಯ ಹಾಗೂ ಎರಡನೆಯ ಡೋಸ್ ಸೇರಿದಂತೆ ಕಲಬುರಗಿ ನಗರ ವ್ಯಾಪ್ತಿಯಲ್ಲಿ 2,92,539 ಜನರು ಲಸಿಕೆ ಪಡೆದರೆ, ಚಿತ್ತಾಪುರ ತಾಲೂಕಿನಲ್ಲಿ 1,03,554 ಜನರು ಲಸಿಕೆ ಪಡೆದಿದ್ದಾರೆ. ಕ್ರಮವಾಗಿ ಆಳಂದ 97,074, ಚಿಂಚೋಳಿ 82,237, ಜೇವರ್ಗಿ 81,866, ಕಲಬುರಗಿ ಗ್ರಾಮೀಣ 79, 355, ಸೇಡಂ- 70,855 ಹಾಗೂ ಅಫಝಲಪುರ ತಾಲೂಕಿನಲ್ಲಿ ಒಟ್ಟು 67,615 ಜನರು ಲಸಿಕೆ ಪಡೆದಿದ್ದಾರೆ. ಜಿಲ್ಲೆಯ ಒಟ್ಟು 19 ಲಕ್ಷ ವಯಸ್ಕರ ಜನಸಂಖ್ಯೆಯ ಆಧಾರಕ್ಕೆ ಹೋಲಿಸಿದರೆ ಲಸಿಕೆ ಪಡೆದರವರ ಸಂಖ್ಯೆ ಗಣನೀಯ ಏರಿಕೆಯಾಗಬೇಕಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಹಾಗೂ ಜಿಲ್ಲಾಡಳಿತ ಈ ಕೂಡಲೇ ಪ್ರತಿಯೊಬ್ಬರಿಗೂ ಲಸಿಕೆ ಹಾಕಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.

TAGGED:Corona VaccineCorona VirusPriyank KhargePublic TVಕೊರೊನಾ ಲಸಿಕೆಕೊರೊನಾ ವೈರಸ್ಪಬ್ಲಿಕ್ ಟಿವಿಪ್ರಿಯಾಂಕ್ ಖರ್ಗೆ
Share This Article
Facebook Whatsapp Whatsapp Telegram

Cinema Updates

madenur manu
ಮಡೆನೂರು ಮನು ಪರಪ್ಪನ ಅಗ್ರಹಾರ ಜೈಲಿನಿಂದ ರಿಲೀಸ್
11 hours ago
Akhil Akkineni Zainab Ravdjee
ಗರ್ಲ್ ಫ್ರೆಂಡ್ ಝೈನಬ್ ಮದ್ವೆಯಾದ ನಾಗಾರ್ಜುನ ಪುತ್ರ ಅಖಿಲ್
1 day ago
shivani swamy
‘ಸರಿಗಮಪ ಸೀಸನ್‌ 21’ರ ವಿನ್ನರ್‌ ಆದ ಬೀದರ್‌ ಪ್ರತಿಭೆ ಶಿವಾನಿ ಸ್ವಾಮಿ
1 day ago
Kamal Haasan
ಕರ್ನಾಟಕದಲ್ಲಿ ಥಗ್‌ ಲೈಫ್‌ ರಿಲೀಸ್‌ಗಾಗಿ ಸುಪ್ರೀಂಗೆ PIL
2 days ago

You Might Also Like

tractor fire
Chamarajanagar

ಬೆಂಕಿ ಬಿದ್ದರೂ ತಿಳಿಯದೇ ಟ್ರ್ಯಾಕ್ಟರ್‌ ಚಾಲನೆ- ನಾಲ್ವರು ಅಪಾಯದಿಂದ ಪಾರು

Public TV
By Public TV
4 hours ago
Extreme Poverty India
Latest

ಭಾರತಕ್ಕೆ ಗುಡ್‌ನ್ಯೂಸ್: ದೇಶದ ಕಡುಬಡತನ ಪ್ರಮಾಣ 27.1% ರಿಂದ 5.3% ಕ್ಕೆ ಇಳಿಕೆ

Public TV
By Public TV
4 hours ago
big bulletin 07 June 2025 part 2
Big Bulletin

ಬಿಗ್‌ ಬುಲೆಟಿನ್‌ 07 June 2025 ಭಾಗ-2

Public TV
By Public TV
4 hours ago
big bulletin 07 June 2025 part 1
Big Bulletin

ಬಿಗ್‌ ಬುಲೆಟಿನ್‌ 07 June 2025 ಭಾಗ-1

Public TV
By Public TV
4 hours ago
BSY Grandson Wedding CM Siddaramaiah
Bengaluru City

ಬಿಎಸ್‌ವೈ ಮೊಮ್ಮಗನ ಆರತಕ್ಷತೆಯಲ್ಲಿ ಸಿಎಂ, ಡಿಸಿಎಂ ಭಾಗಿ

Public TV
By Public TV
5 hours ago
bengaluru stambede rcb
Bengaluru City

ಚಿನ್ನಸ್ವಾಮಿ ಕಾಲ್ತುಳಿತ – ಪರಿಹಾರ ಮೊತ್ತ 25 ಲಕ್ಷಕ್ಕೆ ಹೆಚ್ಚಿಸಿದ ಸರ್ಕಾರ

Public TV
By Public TV
6 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?