ಯಾದಗಿರಿ: ಶೌಚಾಲಯಲ್ಲಿ ಬಿಟ್ಟು ಹೋಗಿದ್ದ ನವಜಾತ ಶಿಶುವನ್ನ ರಕ್ಷಣೆ ಮಾಡಲಾಗಿದೆ. ಸುರಪುರ ನಗರದ ಕಬಡಗೇರಾ ಓಣಿಯ ರಾಜ್ ಅಹ್ಮದ್ ಮನೆಯ ಹತ್ತಿರದ ಸರ್ಕಾರಿ ಶೌಚಾಲಯದಯಲ್ಲಿ 2 ದಿನಗಳ ಹಿಂದೆ ಜನಿಸಿದ ನವಜಾತ ಗಂಡು ಮಗು ಪತ್ತೆಯಾಗಿತ್ತು.
ಶಿಶುವನ್ನು ಸಾರ್ವಜನಿಕರು ಕಾಪಾಡಿ ತಮ್ಮ ಮನೆಯಲ್ಲಿ ಸಂರಕ್ಷಣೆ ಮಾಡಿದ್ದರು. ವಿಷಯ ತಿಳಿದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಉಪ ನಿರ್ದೇಕರಾದ ಪ್ರಭಾಕರ್ ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ಯಾದಗಿರಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿ ಮತ್ತು ಪೊಲೀಸರ ಜೊತೆ ಮಗುವನ್ನು ವಶಕ್ಕೆ ಪಡೆದಿದ್ದಾರೆ.
ಸದ್ಯ ಮಗುವಿಗೆ ಯಾದಗಿರಿ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಬಳಿಕ ನಿಯಮಾನುಸಾರ ಮಗುವನ್ನು ಕಲಬುರಗಿಯ ಅಮೂಲ್ಯ ಶಿಶು ಗೃಹಕ್ಕೆ ಕಳುಹಿಸುವ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಮಕ್ಕಳ ರಕ್ಷಣಾ ಇಲಾಖೆಯವರು ತಿಳಿಸಿದ್ದಾರೆ. ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿದೆ.