Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಶ್ಯಾಮಪ್ರಸಾದ್ ಮುಖರ್ಜಿ ಬಲಿದಾನ ದಿನಾಚರಣೆ, ಜುಲೈ 6ರವರೆಗೆ 11 ಲಕ್ಷ ಸಸಿ ನೆಡಲು ಯೋಜನೆ: ರವಿಕುಮಾರ್

Public TV
Last updated: June 22, 2021 6:31 pm
Public TV
Share
2 Min Read
ravikumar bjp office
SHARE

ಬೆಂಗಳೂರು: ಭಾರತೀಯ ಜನತಾ ಪಕ್ಷವನ್ನು ಕಟ್ಟಿ ಬೆಳೆಸಲು ಭದ್ರ ನೆಲೆಯನ್ನು ಒದಗಿಸಿಕೊಟ್ಟ ಮತ್ತು ಸಿದ್ಧಾಂತದ ಆಧಾರ ಒದಗಿಸಿದ ಹಾಗೂ ಕಾಶ್ಮೀರ ಮತ್ತು ಜಮ್ಮು ಪ್ರದೇಶಗಳು ಭಾರತದಲ್ಲೇ ಉಳಿಯಲು ಕಾರಣಕರ್ತರಾದ ಮಹಾನ್ ಚಿಂತಕರಾದ ಡಾ. ಶ್ಯಾಮಪ್ರಸಾದ ಮುಖರ್ಜಿ ಅವರ ಬಲಿದಾನ ದಿನವನ್ನು ನಾಳೆ ಆಚರಿಸಲಾಗುವುದು. 300 ವೆಬೆಕ್ಸ್ ವಿಚಾರಸಂಕಿರಣಗಳನ್ನು ಹಮ್ಮಿಕೊಂಡು ಅವರ ವಿಚಾರಧಾರೆ, ಜೀವನ ಮತ್ತು ಸಾಧನೆ ಕುರಿತು ತಿಳಿಸಿಕೊಡಲಾಗುವುದು ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯರಾದ ಎನ್.ರವಿಕುಮಾರ್ ಹೇಳಿದ್ದಾರೆ.

ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 23ರಿಂದ ಡಾಕ್ಟರ್ ಮುಖರ್ಜಿ ಅವರ ಜನ್ಮದಿನವಾದ ಜುಲೈ 6ರವರೆಗೆ 11 ಲಕ್ಷ ಸಸಿ ನೆಡಲು ಯೋಜಿಸಲಾಗಿದೆ ಎಂದರು.ಜೂನ್ 27ರಂದು ಪ್ರಧಾನಿಯವರ ಸಾಮಾಜಿಕ ಚಿಂತನೆಯ ಮನ್ ಕಿ ಬಾತ್ ಮಾತುಗಳನ್ನು ರಾಜ್ಯದ 58 ಸಾವಿರಕ್ಕೂ ಹೆಚ್ಚು ಬೂತ್‍ಗಳಲ್ಲಿ ಮತ್ತು ಮನೆ ಮನೆಗಳಲ್ಲಿ ಕೇಳಿಸಲು ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು. ಇದನ್ನೂ ಓದಿ: ಚೀನಾಗೆ ಸ್ಯಾಮ್‍ಸಂಗ್ ಶಾಕ್ – ನೋಯ್ಡಾಕ್ಕೆ ಡಿಸ್‍ಪ್ಲೇ ಘಟಕ ಸ್ಥಳಾಂತರ

Vaccine 6 medium

ಕೋವಿಡ್ ಲಸಿಕೆ ನೀಡುವ ವಿಷಯದಲ್ಲಿ ಕರ್ನಾಟಕವು ಐತಿಹಾಸಿಕ ಸಾಧನೆ ಮಾಡಿದೆ. ಅತಿ ಹೆಚ್ಚು ಲಸಿಕೆ ನೀಡಿದ ದೇಶದ ಎರಡನೇ ರಾಜ್ಯವಾಗಿ ಕರ್ನಾಟಕ ಹೊರಹೊಮ್ಮಿದೆ. ಭಾರತವು ನಿನ್ನೆ 83 ಲಕ್ಷ ಜನರಿಗೆ ಲಸಿಕೆ ನೀಡಿದೆ ಎಂದ ಅವರು, ಕಾಂಗ್ರೆಸ್‍ನ ಸಿದ್ದರಾಮಯ್ಯ ಅವರು ಲಸಿಕೆ ಹಾಕಿಸಿಕೊಳ್ಳಲು ಮನವಿ ಮಾಡಿದ್ದಕ್ಕೆ ಅವರಿಗೆ ಧನ್ಯವಾದ ಸಮರ್ಪಿಸಿದರು. ಕಾಂಗ್ರೆಸ್ ಪಕ್ಷದ ಮುಖಂಡರು ಈ ಹಿಂದೆ ಲಸಿಕೆಯನ್ನು ಟೀಕಿಸಿದ್ದರು ಎಂದು ನೆನಪಿಸಿದರು. ಕೊರೋನಾ ಮುಕ್ತ ಮತ್ತು ಲಸಿಕೆಯುಕ್ತ ಬೂತ್ ನಿರ್ಮಿಸಲು ಪಕ್ಷದ ಕಾರ್ಯಕರ್ತರು ಶ್ರಮಿಸಲಿದ್ದಾರೆ ಎಂದರು.

ಬಡವರ ಮನೆಗಳನ್ನು ಗುರುತಿಸಿ ಆಹಾರ ಪೊಟ್ಟಣ ನೀಡುವುದು, ಅಪಘಾತ ವಿಮೆ, ಜೀವವಿಮೆ ಮಾಡಿಸಿಕೊಡುವುದು, ಪಡಿತರ ಚೀಟಿ ಮಾಡಿಸಿ ಕೊಡುವ ಆಂದೋಲನವೂ ನಡೆಯುತ್ತಿದೆ. ವಯಸ್ಸಾದವರು, ಕೊರೊನಾ ಸೋಂಕಿಗೆ ಒಳಗಾದವರು ಮತ್ತು ಅಸಹಾಯಕರಿಗೆ ನೆರವಾಗಲು ಆರೋಗ್ಯ ಸ್ವಯಂಸೇವಕರು ಮುಂದಾಗಲಿದ್ದಾರೆ. ಆಕ್ಸಿಮೀಟರ್, ಥರ್ಮಲ್ ಸ್ಕ್ಯಾನರ್ ಕಿಟ್ ಇಟ್ಟುಕೊಂಡು ತಪಾಸಣೆ ಮಾಡುವ ಕೆಲಸವನ್ನು ಈ ಸ್ವಯಂಸೇವಕರು ಮಾಡಲಿದ್ದಾರೆ. ರಾಜ್ಯದ ಎಲ್ಲಾ ಒಂದೂಕಾಲು ಕೋಟಿ ಕುಟುಂಬಗಳನ್ನೂ ತಲುಪುವ ಗುರಿ ಇದೆ. ಇದೊಂದು ದೊಡ್ಡ ಅಭಿಯಾನ ಎಂದು ವಿವರಿಸಿದರು.

SIDDU medium

ಇನ್ನು ಪಕ್ಷದ ರಾಜ್ಯ ಕಾರ್ಯಕಾರಿಣಿ ಸಭೆಯು ಜೂನ್ 26ರಂದು ಬೆಳಿಗ್ಗೆ 10.30ಕ್ಕೆ ಆರಂಭವಾಗಲಿದೆ. ಪದಾಧಿಕಾರಿಗಳು ರಾಜ್ಯದ ಸಭೆಯಲ್ಲಿ ಭಾಗವಹಿಸುವರು. ಉಳಿದವರು ಜಿಲ್ಲಾ ಕೇಂದ್ರಗಳಿಂದ ಜೋಡಣೆ ಆಗಲಿದ್ದು, ಇದೊಂದು ಹೈಬ್ರಿಡ್ ಸಭೆ ಆಗಲಿದೆ. ರಾಜ್ಯದ ಉಸ್ತುವಾರಿಗಳಾದ ಅರುಣ್ ಸಿಂಗ್ ಅವರು ವೆಬೆಕ್ಸ್ ಮೂಲಕ ಸಭೆಯಲ್ಲಿ ಭಾಗವಹಿಸುವರು. ಮುಖ್ಯಮಂತ್ರಿಗಳಾದ  ಬಿ.ಎಸ್.ಯಡಿಯೂರಪ್ಪ, ಪಕ್ಷದ ರಾಜ್ಯಾಧ್ಯಕ್ಷರಾದ ನಳಿನ್ ಕುಮಾರ್ ಕಟೀಲ್, ಕೇಂದ್ರದ ಸಚಿವರು ಭಾಗವಹಿಸಲಿದ್ದಾರೆ. ಇದೇ 25ರಂದು ರಾಜ್ಯ ಪದಾಧಿಕಾರಿಗಳ ಸಭೆ ನಡೆಯಲಿದೆ ಎಂದು ತಿಳಿಸಿದರು.

PM Modi in Sweden

ಕೋವಿಡ್ ಸಮರ್ಥ ನಿರ್ವಹಣೆ, ವೈದ್ಯಕೀಯ ಕ್ಷೇತ್ರದಲ್ಲಿನ ದೇಶದ ಸಾಧನೆ ಕುರಿತು ಕಾರ್ಯಕರ್ತರಿಗೆ ತಿಳಿಸಲಾಗುವುದು. ಜೂನ್- ಜುಲೈಯಲ್ಲಿ 6 ವಿಷಯಗಳ ಕುರಿತು ಕಾರ್ಯಕರ್ತರಿಗೆ ಪ್ರಶಿಕ್ಷಣ ವರ್ಗ ಏರ್ಪಡಿಸಲಾಗುವುದು. ನರೇಂದ್ರ ಮೋದಿ ಸರಕಾರದ ಏಳು ವರ್ಷಗಳ ಸಾಧನೆ, ರಾಷ್ಟ್ರೀಯ ಭದ್ರತೆ, ವಿದೇಶಾಂಗ ನೀತಿಯಲ್ಲಿ ಭಾರತದ ಸಾಧನೆ, ಆತ್ಮನಿರ್ಭರ ಭಾರತ, ಕೃಷಿ ಸುಧಾರಣೆ ಕಾಯ್ದೆ ಮತ್ತು ಸಾಧನೆಗಳು, ಡಾ.ಶ್ಯಾಮಪ್ರಸಾದ ಮುಖರ್ಜಿ ಅವರ ಚಿಂತನೆಗಳು ಮತ್ತು ಜೀವನ ಸಾಧನೆ ಹಾಗೂ ಬಡವರಿಗಾಗಿ ಆರಂಭಿಸಿದ ಯೋಜನೆಗಳ ಕುರಿತು ಪ್ರಶಿಕ್ಷಣ ನಡೆಯಲಿದೆ ಎಂದರು.

TAGGED:Balidan DivasbjpkannadanewsravikumarSyama Prasad Mukherjeeಕರ್ನಾಟಕಕಾಂಗ್ರೆಸ್ನರೇಂದ್ರ ಮೋದಿಬಿಜೆಪಿರವಿಕುಮಾರ್ಶ್ಯಾಮಪ್ರಸಾದ್ ಮುಖರ್ಜಿ
Share This Article
Facebook Whatsapp Whatsapp Telegram

You Might Also Like

a.s.ponnanna madikeri bus
Kodagu

ಮಡಿಕೇರಿ-ನಾಪೋಕ್ಲು-ವಿರಾಜಪೇಟೆ ಮಾರ್ಗ ಬಸ್ ಸಂಚಾರಕ್ಕೆ ಪೊನ್ನಣ್ಣ ಚಾಲನೆ

Public TV
By Public TV
20 minutes ago
Karnataka Congress Meet to Rajnath Singh
Karnataka

ಸಿಎಂ ನೇತೃತ್ವದ ನಿಯೋಗದಿಂದ ರಕ್ಷಣಾ ಸಚಿವರ ಭೇಟಿ – ರಾಜ್ಯದಲ್ಲಿ 2 ಡಿಫೆನ್ಸ್ ಕಾರಿಡಾರ್‌ಗೆ ಮನವಿ

Public TV
By Public TV
26 minutes ago
Siddaramaiah 4
Latest

ರಾಜ್ಯದ ಮನವಿಗಳಿಗೆ ಕೇಂದ್ರ ರಕ್ಷಣಾ ಸಚಿವರ ಸಕಾರಾತ್ಮಕ ಸ್ಪಂದನೆ: ಸಿದ್ದರಾಮಯ್ಯ

Public TV
By Public TV
28 minutes ago
Kapchen Rajkumar Elephant Attack
Latest

ಕಾಡಾನೆ ದಾಳಿಗೆ ಮಾಜಿ ಶಾಸಕ ಬಲಿ

Public TV
By Public TV
33 minutes ago
ramayana first look yash
Cinema

ರಾಮಾಯಣದಲ್ಲಿ ಯಶ್ ಪಾತ್ರ ಬರೀ 15 ನಿಮಿಷ?

Public TV
By Public TV
41 minutes ago
Central govt Approves for air show at Mysuru Dasara
Karnataka

ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಏರ್ ಶೋ ನಡೆಸಲು ಕೇಂದ್ರ ಒಪ್ಪಿಗೆ

Public TV
By Public TV
48 minutes ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?