Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಕ್ರಾಂತಿ ನಂತರ ಮೊದಲ, ದ್ವಿತೀಯ ವರ್ಷದ ಪದವಿ ಕಾಲೇಜು ಆರಂಭ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂಕ್ರಾಂತಿ ನಂತರ ಮೊದಲ, ದ್ವಿತೀಯ ವರ್ಷದ ಪದವಿ ಕಾಲೇಜು ಆರಂಭ

Bengaluru City

ಸಂಕ್ರಾಂತಿ ನಂತರ ಮೊದಲ, ದ್ವಿತೀಯ ವರ್ಷದ ಪದವಿ ಕಾಲೇಜು ಆರಂಭ

Public TV
Last updated: January 8, 2021 6:13 pm
Public TV
Share
2 Min Read
ashwath narayan
SHARE

– ಎಲ್ಲ ವಿವಿ ಕುಲಪತಿಗಳ ಜತೆ ಡಿಸಿಎಂ ಸಮಾಲೋಚನೆ
– ಸ್ನಾತಕೋತ್ತರ, ಡಿಪ್ಲೊಮೋ, ಎಂಜಿನಿಯರಿಂಗ್ ಕ್ಲಾಸ್ ಸ್ಟಾರ್ಟ್

ಬೆಂಗಳೂರು: ಈಗಾಗಲೇ ಪದವಿ, ಸ್ನಾತಕೋತ್ತರ, ಡಿಪ್ಲೊಮೋ ಮತ್ತು ಎಂಜಿನಿಯರಿಂಗ್ ತರಗತಿಗಳ ಅಂತಿಮ ವರ್ಷದ/ಸೆಮಿಸ್ಟರ್ ನ ಆಫ್‍ಲೈನ್ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿರುವ ಬೆನ್ನಲ್ಲೇ ಇದೇ ತರಗತಿಗಳ ಪ್ರಥಮ- ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಆಫ್‍ಲೈನ್ ತರಗತಿಗಳನ್ನು ಸಂಕ್ರಾಂತಿ ಹಬ್ಬದ ನಂತರ ಆರಂಭಿಸಲಾಗುವುದು. ಈ ಸಂಬಂಧ ವರದಿ ನೀಡುವಂತೆ ಕುಲಪತಿಗಳಿಗೆ ಸೂಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ್ ಪ್ರಕಟಿಸಿದರು.

Udupi College 4

ಬೆಂಗಳೂರಿನಲ್ಲಿ ಶುಕ್ರವಾರ ಸರ್ಕಾರಿ- ಖಾಸಗಿ ವಲಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು, ಉನ್ನತ ಶಿಕ್ಷಣ ಸೇರಿ ಸಂಬಂಧಿತ ಎಲ್ಲ ಇಲಾಖೆಗಳ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಉಪ ಮುಖ್ಯಮಂತ್ರಿಗಳು ಈ ಮಾಹಿತಿ ನೀಡಿದರು. ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲ ಕುಲಪತಿಗಳು ನೇರ ತರಗತಿಗಳನ್ನು ಆರಂಭಿಸುವಂತೆ ಸರ್ಕಾರಕ್ಕೆ ಸಲಹೆ ನೀಡಿದರು. ಹೀಗಾಗಿ ಅದಕ್ಕೆ ಸಂಬಂಧಿಸಿದ ವರದಿಯನ್ನು ಕೂಡಲೇ ಕಳಿಸುವಂತೆ ಕೋರಲಾಗಿದೆ. ನಂತರ ಮೊದಲ ಮತ್ತು ದ್ವಿತೀಯ ವರ್ಷದ ನೇರ ತರಗತಿಗಳನ್ನು ಸಂಕ್ರಾಂತಿ ಹಬ್ಬದ ನಂತರ ಯಾವ ದಿನದಿಂದ ಆರಂಭಿಸಬೇಕು ಎಂಬ ಬಗ್ಗೆ ಸ್ಪಷ್ಟ ನಿರ್ಧಾರ ಕೈಗೊಳ್ಳಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ಹೇಳಿದರು. ಈಗಾಗಲೇ ಅಂತಿಮ ವರ್ಷದ ವಿದ್ಯಾರ್ಥಿಗಳ ನೇರ ತರಗತಿಗಳು ಯಶಸ್ವಿಯಾಗಿ ನಡೆಯುತ್ತಿವೆ. ಆ ಯಶಸ್ಸಿನ ಹಿನ್ನೆಲೆಯಲ್ಲಿ ಉಳಿದ ತರಗತಿಗಳನ್ನು ಶುರು ಮಾಡಲಾಗುವುದು. ಯುಜಿಸಿ ಮತ್ತು ಕೋವಿಡ್ ಮಾರ್ಗಸೂಚಿ ಪ್ರಕಾರ ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಅವರು ಮಾಹಿತಿ ನೀಡಿದರು.

College Reopen 8

ಪರೀಕ್ಷೆ ಮತ್ತು ಮುಂದಿನ ಶೈಕ್ಷಣಿಕ ವರ್ಷ: ಮುಖ್ಯವಾಗಿ ಈ ಸಭೆಯಲ್ಲಿ 2021-22ರ ಶೈಕ್ಷಣಿಕ ವರ್ಷವನ್ನು ಯಾವಾಗಿನಿಂದ ಆರಂಭಿಸಬೇಕು ಎಂಬ ಬಗ್ಗೆ ಮಹತ್ವದ ಚರ್ಚೆ ನಡೆಯಿತು. ಮೇ ತಿಂಗಳ ಎರಡನೇ ವಾರದಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪರೀಕ್ಷೆಯನ್ನು ಈಗಾಗಲೇ ಘೋಷಣೆ ಮಾಡಲಾಗಿದೆ. ಇದನ್ನು ದೃಷ್ಟಿಯಲ್ಲಿ ಇಟ್ಟುಕೊಂಡು ಉನ್ನತ ಶಿಕ್ಷಣದ ಶೈಕ್ಷಣಿಕ ವೇಳಾಪಟ್ಟಿಯನ್ನು ರೂಪಿಸಲಾಗುವುದು ಎಂದು ಡಿಸಿಎಂ ತಿಳಿಸಿದರು.

College Reopen 4

ಹಾಗೆಯೇ, ಆನ್‍ಲೈನ್ ಪರೀಕ್ಷೆಗಳಿಗಿಂತ ಪೆನ್ ಮತ್ತು ಪೇಪರ್ ಆಧಾರಿತ ಆಫ್‍ಲೈನ್ ಪರೀಕ್ಷೆಯೇ ಉತ್ತಮ ಎಂದು ವಿಟಿಸಿಯು ಕುಲಪತಿ ಪ್ರೊ.ಕರಿಸಿದ್ದಪ್ಪ ಸೇರಿದಂತೆ ಎಲ್ಲ ಕುಲಪತಿ, ಕುಲ ಸಚಿವರು ಸಲಹೆ ಮಾಡಿದರು. ಇದನ್ನು ಸರ್ಕಾರ ಗಂಭೀರವಾಗಿ ಪರಿಶೀಲಿಸಲಿದೆ. ಯುಜಿಸಿ ನಿಯಮದಂತೆ ಮಾರ್ಚ್ ನಲ್ಲಿ ಪರೀಕ್ಷೆ ಮುಗಿಯಬೇಕಾಗುತ್ತದೆ. ಆದರೆ ಇನ್ನು ಹಲವಾರು ವಿವಿಗಳ ವ್ಯಾಪ್ತಿಯಲ್ಲಿ ಪಾಠಗಳು ಮುಗಿಯದ ಕಾರಣ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಪರೀಕ್ಷೆ ನಡೆಸುವ ಬಗ್ಗೆ ಚಿಂತಿಸಲಾಗುತ್ತಿದೆ, ಶೀಘ್ರವೇ ಈ ಬಗ್ಗೆ ಅಂತಿಮ ಮಾಹಿತಿ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿಗಳು ಹೇಳಿದರು.

College

ಬಸ್ ಪಾಸ್ ಮತ್ತು ಹಾಸ್ಟೆಲ್ ಸೌಲಭ್ಯ: ವಿದ್ಯಾರ್ಥಿಗಳ ಬಸ್ ಪಾಸ್ ಬಗ್ಗೆ ಇರುವ ಗೊಂದಲದ ಬಗ್ಗೆ ಶೀಘ್ರದಲ್ಲಿಯೇ ಸಾರಿಗೆ ಸಚಿವರೂ ಆದ ಡಿಸಿಎಂ ಲಕ್ಷ್ಮಣ ಸವದಿ ಅವರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು. ಹಳೆಯ ಪಾಸ್ ಇಟ್ಟುಕೊಂಡೇ ಓಡಾಡಬಹುದಾ? ಇಲ್ಲವಾ? ಎಂಬ ಬಗ್ಗೆ ಮಾಹಿತಿ ನೀಡಲಾಗುವುದು ಎಂದ ಡಿಸಿಎಂ, ಉಳಿದಂತೆ ತರಗತಿಗಳು ಆರಂಭವಾದ ಮೇಲೆ ಪರಿಶಿಷ್ಟ ಜಾತಿ ಮತ್ತು ವರ್ಗದ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸಲಾಗುವುದು. ಈ ಬಗ್ಗೆ ಸಮಾಜ ಕಲ್ಯಾಣ ಇಲಾಖೆ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದರು.

College Reopen 5

ಈ ಆನ್‍ಲೈನ್ ಸಭೆಯಲ್ಲಿ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್, ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ ಸೇರಿದಂತೆ ರಾಜ್ಯದ ಎಲ್ಲ ವಿವಿಗಳ ಕುಲಪತಿ, ಕುಲ ಸಚಿವರು ಪಾಲ್ಗೊಂಡಿದ್ದರು.

TAGGED:Ashwath NarayancollegeGraduate CollegekarnatakaPublic TVಅಶ್ವಥ್ ನಾರಾಯಣ್ಕರ್ನಾಟಕಕಾಲೇಜ್ಪದವಿ ಕಾಲೇಜ್ಪಬ್ಲಿಕ್ ಟಿವಿ
Share This Article
Facebook Whatsapp Whatsapp Telegram

Cinema news

sudeep 1 1
ಇಷ್ಟು ದಿನ ತಾಳ್ಮೆಯಿಂದ ಇದ್ದಿದ್ದು ಸಾಕು – ಕೆಣಕಿದ್ರೆ ಅವರದ್ದೇ ಭಾಷೆಯಲ್ಲಿ ಉತ್ತರ ಕೊಡಿ; ಗುಡುಗಿದ ಕಿಚ್ಚ
Cinema Dharwad Latest Sandalwood Top Stories
Nora Fatehi
ಸಾವು ರಪ್ಪನೆ ಕಣ್ಮುಂದೆ ಬಂದು ಹೋಯ್ತು – ಕಾರು ಅಪಘಾತದ ಬಳಿಕ ನೋರಾ ಫತೇಹಿ ರಿಯಾಕ್ಷನ್‌
Bollywood Cinema Latest Main Post
nora fatehi gets into an accident suffered a concussion after a drunk driver rammed into her car
ನೋರಾ ಫತೇಹಿ ಕಾರಿಗೆ ಡಿಕ್ಕಿ – ಅಪಾಯದಿಂದ ನಟಿ ಪಾರು
Cinema Latest South cinema
Rashmika Mandanna and Vijay Deverakondas Wedding AI Photos
ಶ್ರೀವಲ್ಲಿ ಮದ್ವೇಲಿ ಪ್ರಭಾಸ್, ಪ್ರಿನ್ಸ್; ವೈರಲ್ ಹಿಂದಿನ ಅಸಲಿಯತ್ತೇನು?
Cinema Latest South cinema Top Stories

You Might Also Like

Gruhalakshmi Scheme 1
Bengaluru City

ರಾಜ್ಯದ ಮಹಿಳೆಯರಿಗೆ ಗುಡ್‌ನ್ಯೂಸ್‌ – ನಾಳೆಯಿಂದಲೇ ಬ್ಯಾಂಕ್ ಖಾತೆಗೆ ʻಗೃಹಲಕ್ಷ್ಮಿʼ ಹಣ

Public TV
By Public TV
41 minutes ago
RANJAN
Bengaluru City

ಮಕ್ಕಳ ಧ್ವನಿ, ಆಟವಾಡ್ತಿರೋದನ್ನ ಕಂಡ್ರೆ ನನಗೆ ಆಗಲ್ಲ – ಪೊಲೀಸರ ಮುಂದೆ ಸೈಕೋ ರಂಜನ್ ಹೇಳಿಕೆ

Public TV
By Public TV
1 hour ago
South Africa Shooting
Latest

ದಕ್ಷಿಣ ಆಫ್ರಿಕಾದಲ್ಲಿ ಸಾಮೂಹಿಕ ಗುಂಡಿನ ದಾಳಿ – 10 ಮಂದಿ ಬಲಿ

Public TV
By Public TV
1 hour ago
Hebbal
Bengaluru City

ವಾಹನ ಸವಾರರಿಗೆ ಗುಡ್‌ನ್ಯೂಸ್‌ – ಹೆಬ್ಬಾಳ ಮೇಲ್ಸೆತುವೆ ಹೊಸ ಲೂಪ್ ರ‍್ಯಾಂಪ್‌ ಓಪನ್

Public TV
By Public TV
2 hours ago
RCB Win 05
Bengaluru City

2026ರ ಐಪಿಎಲ್‌ ಬೆಂಗಳೂರಿನಲ್ಲೇ ನಡೆಯುತ್ತಾ? – ಪರಮೇಶ್ವರ್‌ ಹೇಳಿದ್ದೇನು?

Public TV
By Public TV
2 hours ago
Rajgoal Nagar
Bengaluru City

ಸಹಾಯ ಪಡೆದವಳನ್ನ ಮಂಚಕ್ಕೆ ಕರೆದ ಆನ್‌ಲೈನ್‌ ಗೆಳೆಯ – ಮಹಿಳೆ ಆತ್ಮಹತ್ಯೆಗೆ ಯತ್ನ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?