Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಜನಾ, ರಾಗಿಣಿ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂಜನಾ, ರಾಗಿಣಿ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ

Bengaluru City

ಸಂಜನಾ, ರಾಗಿಣಿ ಜಾಮೀನು ಅರ್ಜಿ ನಾಳೆಗೆ ಮುಂದೂಡಿಕೆ

Public TV
Last updated: September 24, 2020 6:25 pm
Public TV
Share
3 Min Read
sanjjana ragini
SHARE

ಬೆಂಗಳೂರು: ನಟಿ ರಾಗಿಣಿ ಮತ್ತು ಸಂಜನಾ ಸಲ್ಲಿಸಿರುವ ಬೇಲ್ ಅರ್ಜಿಯ ವಿಚಾರಣೆ ಬೆಂಗಳೂರಿನ ಎನ್‍ಡಿಪಿಎಸ್ ಕೋರ್ಟ್ ನಾಳೆಗೆ ಮುಂದೂಡಿಕೆಯಾಗಿದೆ.

ಸದ್ಯ ಇಬ್ಬರೂ ನಟಿಯರು ನ್ಯಾಯಾಂಗ ಬಂಧನದಡಿ ಪರಪ್ಪನ ಅಗ್ರಹಾರದಲ್ಲಿದ್ದಾರೆ. ಸೋಮವಾರ ರಾಗಿಣಿ ಮತ್ತು ಸಂಜನಾ ಅವರ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನ್ಯಾಯಾಲಯದ ಎದುರು ಹಾಜರುಪಡಿಸಲಾಗಿತ್ತು. ರಾಗಿಣಿ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ ಆದೇಶವನ್ನು ಕಾಯ್ದಿರಿಸಿತ್ತು. ಇತ್ತ ಸಂಜನಾ ಗಲ್ರಾನಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಸಿಸಿಬಿ ಪರ ವಕೀಲರು ಸಮಯಾವಕಾಶ ಕೇಳಿದ್ದರು. ಇಂದು ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸೇರಿದಂತೆ ಇನ್ನುಳಿದ ಆರೋಪಿಗಳ ಅರ್ಜಿ ನ್ಯಾಯಾಲಯದ ಮುಂದೆ ಬಂದಿತ್ತು.

RAGINI SANJJANAA

ಸಂಜನಾ ಪರ ವಕೀಲ ಶ್ರೀನಿವಾಸ್ ಮೂರ್ತಿ, ರವಿಶಂಕರ್ ಹೇಳಿಕೆಯನ್ನು ಎಸಿಪಿ ಗೌತಮ್ ರೆಕಾರ್ಡ್ ಮಾಡಿದ್ದಾರೆ. ಅದರಲ್ಲಿ ನಗರದ ವಿವಿಧೆಡೆ ಪಾರ್ಟಿ ನಡೆಸಿರುವುದಾಗಿ ಹೇಳಿದ್ದಾರೆ. ಈ ಸ್ಟೇಟ್ ಮೆಂಟ್ ಬಿಟ್ಟರೆ ಯಾವುದೇ ಮಟಿರಿಯಲ್ ಇಲ್ಲ. ಕೇವಲ ರವಿಶಂಕರ್ ಹೇಳಿಕೆ ಆಧಾರದ ಮೇಲೆ ಎಫ್‍ಐಆರ್ ಮಾಡಲಾಗಿದೆ. ದಾಖಲಾಗಿರುವ ಎಫ್‍ಐಅರ್ ನಲ್ಲಿ ಅನೇಕ ಸೆಕ್ಷನ್ ಗಳನ್ನ ಹಾಕಲಾಗಿದೆ. ಆದ್ರೆ ಆರೋಪಗಳಿಗೆ ಯಾವುದೇ ಸಾಕ್ಷ್ಯಗಳಿಲ್ಲ ಎಂದು ವಾದ ಮಂಡಿಸಿದರು.

RAGINI SANJJANAA 3

ಎಕ್ಸ್ ಟೆಸಿ ಮಾತ್ರೆ ಸೇವಿಸಿದ್ದಾರೆಂದು ಆರೋಪಿಸಲಾಗಿದ್ದು, ಎಫ್‍ಐಆರ್ ನಲ್ಲಿ ನಿರ್ದಿಷ್ಟ ಆರೋಪಗಳೇ ಇಲ್ಲ. ಎಕ್ಸ್ ಟೆಸಿ ಮಾತ್ರೆಯ ಪ್ರಸ್ತಾಪ ಬಿಟ್ಟರೇ ಬೇರೆ ಯಾವುದೇ ಆರೋಪಗಳಿಲ್ಲ. ಇತರೆ ಆರೋಪಿಗಳ ಹೇಳಿಕೆಯ ಮೇಲೆ ಪ್ರಕರಣ ನಿಂತಿದೆ. ಆದ್ರೆ ಸಂಜನಾ ಗಲ್ರಾನಿ ಅವರನ್ನ ಯಾಕೆ ಬಂಧಿಸಲಾಗಿದೆ ಎಂಬುವುದು ಇದುವರೆಗೂ ಗೊತ್ತಾಗಿಲ್ಲ. ಕಕ್ಷಿದಾರರಿಗೆ ಬಂಧನ ವೇಳೆ ಯಾಕೆ ಅರೆಸ್ಟ್ ಮಾಡಲಾಗ್ತಿದೆ ಅಂತ ಹೇಳಿಲ್ಲ. ಹಾಗಾಗಿ ಸಂಜನಾ ಗಲ್ರಾನಿ ಅವರ ಬಂಧನ ಕಾನೂನೂ ಬಾಹಿರವಾಗಿದ್ದು, ಇಲ್ಲಿಯವರೆಗೂ ಪೊಲೀಸರು ನ್ಯಾಯಾಲಯದ ಮುಂದೆ ಯಾವ ಸಾಕ್ಷ್ಯವನ್ನ ಹಾಜರುಪಡಿಸಿಲ್ಲ. ಇದೇ ವೇಳೆ ವಕೀಲರು ಕೆಲ ಹಳೆ ಪ್ರಕರಣಗಳ ಉದಾಹರಣೆಗಳನ್ನು ನ್ಯಾಯಾಲಯದ ಗಮನಕ್ಕೆ ತಂದರು.

RAGINI SANJJANA

ಸಿಸಿಬಿ ಪರ ವಕೀಲರು, ನ್ಯಾಯಾಲಯ ಮುಂದೆ ಮುಚ್ಚಿದ ಲಕೋಟೆಯಲ್ಲಿ ಕೆಲ ಸಿಡಿಗಳನ್ನು ಸಲ್ಲಿಸಿದರು. ಪ್ರಕರಣ ತನಿಖಾ ಹಂತದಲ್ಲಿ ಇರೋದರಿಂದ ಸಿಡಿಯಲ್ಲಿನ ಮಾಹಿತಿ ಬಹಿರಂಗಪಡಿಸಲು ಸಾಧ್ಯವಿಲ್ಲ. ಆರೋಪಿ ರವಿಶಂಕರ್ ಹೇಳಿಕೆಯ ಆಧಾರದ ಮೇಲೆ ಎಫ್‍ಐಆರ್ ದಾಖಲಾಗಿದೆ. ವಿಚಾರಣೆ ವೇಳೆ ಬಯಲಿಗೆ ಬಂದ ಅಂಶಗಳ ಮೇಲೆ ತನಿಖೆ ನಡೆಯುತ್ತಿದೆ. ಡ್ರಗ್ ಸೇವನೆ ಮಾಡಿರುವುದೇ ಒಳ್ಳೆಯ ಎವಿಡೆನ್ಸ್ ಆಗುತ್ತೆ. ತನಿಖೆ ಮುಗಿಯುವ ಮುನ್ನವೇ, ಜಾಮೀನು ನೀಡುವುದು ಸರಿಯಲ್ಲ. ಕೊಕೇನ್ ಮತ್ತು ಇತರೆ ಪಿಲ್ ಸರಬರಾಜಿನ ಬಗ್ಗೆ ರವಿಶಂಕರ್ ಮಾಹಿತಿ ನೀಡಿದ್ದಾನೆ. ಇದೇ ವೇಳೆ ರವಿಶಂಕರ್ ಗೆ ಪ್ರತೀಕ್ ಶೆಟ್ಟಿ, ವೈಭವ್ ಜೈನ್ ಪರಿಚಯವಾದ ಬಗ್ಗೆ ವಿವರಣೆಯನ್ನು ನ್ಯಾಯಲಯಕ್ಕೆ ನೀಡಿದರು.

RAGINI SANJJANAA 2

ಎಲ್ಲಾ ಆರೋಪಿಗಳ ಮೊಬೈಲ್ ಸದ್ಯ ವಶಕ್ಕೆ ಪಡೆಯಲಾಗಿದ್ದು, ಅದರಲ್ಲಿನ ಮೆಸೇಜ್ ನಮಗೆ ಈ ಡ್ರಗ್ ವ್ಯವಹಾರದ ಬಗ್ಗೆ ತಿಳಿಸುತ್ತಿದೆ. ಕೆಲವರ ಮೊಬೈಲ್ ರಿಟ್ರಿವ್ ಮಾಡಿದ ಬಳಿಕ ಮತ್ತಷ್ಟು ಸಾಕ್ಷಿ ಲಭ್ಯವಾಗಲಿದೆ. ಅಲ್ಲದೇ ಆರೋಪಿ ಪೆಪ್ಪರ್ ನ ಬಂಧಿಸಿದಾಗ ಡ್ರಗ್ ಪತ್ತೆಯಾಗಿದೆ. ಆ ಆರೋಪಿಯ ಜೊತೆ ರಾಗಿಣಿ ಸೇರಿದಂತೆ ಎಲ್ಲರೂ ಸಂಪರ್ಕದಲ್ಲಿದ್ದಾರೆ. ಇನ್ನೂ ಎನ್ ಡಿಪಿಎಸ್ ಪ್ರಕಾರ 10 ಗ್ರಾಂ ಕಮರ್ಷಿಯಲ್ ಆಗುತ್ತದೆ ಎಂದು ವಾದಿಸಿದರು.

Ragini 4 3

ಇನ್ನೂ ಸಂಜನಾ ಮತ್ತು ರಾಗಿಣಿ ವೈದ್ಯಕೀಯ ಪರೀಕ್ಷೆಗೆ ನಿರಾಕರಿಸಿದ್ದರು. ಬಳಿಕ ಮನವೊಲಿಕೆ ನಂತರವಷ್ಟೇ ಸ್ಯಾಂಪಲ್ ನೀಡಿದರು. ರಕ್ತ, ಮೂತ್ರ, ಕೂದಲು ಮಾದರಿ ನೀಡಲು ಸಂಜನಾ ರಾಗಿಣಿ ನಿರಾಕರಿಸಿದ್ದರು. ಇನ್ನೂ ಆರೋಪಿ ರಾಗಿಣಿ ಮೂತ್ರದ ಬದಲಿಗೆ ನೀರು ತುಂಬಿ ನೀಡಿದ್ದರು. ಹಾಗಾಗಿ ತನಿಖೆ ವೇಳೆ ಜಾಮೀನು ನೀಡಬಾರದು ಎಂದು ಸಿಸಿಬಿ ಪರ ವಕೀಲರು ತಮ್ಮ ವಾದವನ್ನು ನ್ಯಾಯಾಲಯದ ಮುಂದೆ ಇರಿಸಿದರು.

Sanjjanaa

ವಾದ ಪ್ರತಿವಾದ ಆಲಿಸಿದ ನ್ಯಾಯಾಲಯ ಅರ್ಜಿಯ ವಿಚಾರಣೆಯನ್ನು ನಾಳೆಗೆ ಮುಂದೂಡಿಕೆ ಮಾಡಿದ್ದಾರೆ. ಪ್ರತೀಕ್ ಶೆಟ್ಟಿ ಜಾಮೀನು ಅರ್ಜಿ ವಿಚಾರಣೆ 28 ಕ್ಕೆ ಮುಂದೂಡಿಕೆಯಾಗಿದೆ. ಆರೋಪಿಗಳಾದ ನಿಯಾಜ್ ಅಹಮ್ಮದ್ ಮತ್ತು ವೈಭವ್ ಜೈನ್ ಜಾಮೀನು ಅರ್ಜಿ ಸಹ ಸೆಪ್ಟೆಂಬರ್ 29ಕ್ಕೆ ಮುಂದೂಡಿಕೆಯಾಗಿದೆ.

TAGGED:ಜಾಮೀನುನಟಿ ರಾಗಿಣ ದ್ವಿವೇದಿನಟಿ ಸಂಜನಾ ಗಲ್ರಾನಿನ್ಯಾಯಾಲಯಪಬ್ಲಿಕ್ ಟಿವಿಬೆಂಗಳೂರುಸಿಸಿಬಿ
Share This Article
Facebook Whatsapp Whatsapp Telegram

Cinema news

Darshan 7
ದರ್ಶನ್ ಹೆಚ್ಚುವರಿ ಬ್ಲಾಂಕೆಟ್‌ ಸೌಲಭ್ಯಕ್ಕೆ ಕುತ್ತು – ಕಾರಾಗೃಹ ಡಿಜಿಪಿ ಹೊಸ ಆದೇಶ
Bengaluru City Cinema Latest Sandalwood
Veer Kambala
ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ʻವೀರ ಕಂಬಳʼಕ್ಕೆ ರಿಲೀಸ್ ಡೇಟ್ ಫಿಕ್ಸ್
Cinema Latest Sandalwood Top Stories
Raghavendra Mahatme
ಶ್ರೀ ರಾಘವೇಂದ್ರ ಮಹಾತ್ಮೆ : ವಿವಾಹ ವೈಭವ ಸಂಚಿಕೆ
Cinema Latest Top Stories TV Shows
vidnyan mane and palash smriti
ಬೇರೊಬ್ಬಳೊಂದಿಗೆ ಏಕಾಂತದಲ್ಲಿದ್ದಾಗ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದ ಪಾಲಶ್ – ಸ್ಮೃತಿ ಮಂಧಾನ ಗೆಳೆಯ ವಿಧ್ಯಾನ್ ಮಾನೆ
Bollywood Cricket Latest National Sports Top Stories

You Might Also Like

infant selling case
Chamarajanagar

ತಂದೆ-ತಾಯಿ ಮಾರಾಟ ಮಾಡಿದ್ದ 6 ತಿಂಗಳ ಮಗು ಪತ್ತೆ; ಐವರು ಆರೋಪಿಗಳು ಅರೆಸ್ಟ್‌

Public TV
By Public TV
26 seconds ago
01 23
Big Bulletin

ಬಿಗ್‌ ಬುಲೆಟಿನ್‌ 24 January 2026 ಭಾಗ-1

Public TV
By Public TV
2 minutes ago
02 20
Big Bulletin

ಬಿಗ್‌ ಬುಲೆಟಿನ್‌ 24 January 2026 ಭಾಗ-2

Public TV
By Public TV
4 minutes ago
03 17
Big Bulletin

ಬಿಗ್‌ ಬುಲೆಟಿನ್‌ 24 January 2026 ಭಾಗ-3

Public TV
By Public TV
6 minutes ago
Minor son stabbing father then commits suicide shooting himself in Dakshina Kannada
Crime

ತಂದೆಗೆ ಚಾಕು ಇರಿದು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾದ ಅಪ್ರಾಪ್ತ ಮಗ

Public TV
By Public TV
12 minutes ago
towing
Bengaluru City

ಬೆಂಗಳೂರಿನಲ್ಲಿ ಶೀಘ್ರದಲ್ಲೇ ಮತ್ತೆ ಟೋಯಿಂಗ್ – ಟ್ರಾಫಿಕ್ ಕಂಟ್ರೋಲ್‌ಗೆ ಮಾಸ್ಟರ್ ಪ್ಲ್ಯಾನ್‌

Public TV
By Public TV
35 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?