– ಲಗ್ಗೆರೆಯಲ್ಲಿ ಒಂದು ಲಕ್ಷ ಫುಡ್ ಕಿಟ್ ವಿತರಣೆಗೆ ಚಾಲನೆ
ಬೆಂಗಳೂರು: ಕೋವಿಡ್ ಸಂಕಷ್ಟದಲ್ಲಿರುವ ಜನರಿಗೆ ಶಾಸಕ ಮುನಿರತ್ನ ಆಯೋಜಿಸಿದ್ದ ಒಂದು ಲಕ್ಷ ಆಹಾರ ಕಿಟ್ ವಿತರಣೆ ಮಾಡುವ ಕಾರ್ಯಕ್ರಮಕ್ಕೆ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಭಾನುವಾರ ಲಗ್ಗೆರೆಯಲ್ಲಿ ಚಾಲನೆ ನೀಡಿದರು. ಈ ವೇಳೆ ಸಂಪುಟದಲ್ಲಿ ಮುನಿರತ್ನಗೆ ಅವಕಾಶ ಸಿಗುತ್ತೆ ಎಂದು ಹೇಳಿದರು.

ಅಕ್ಕಿ, ಬೇಳೆ, ಅಡುಗೆ ಎಣ್ಣೆ ಸೇರಿದಂತೆ ವಿವಿಧ ಆಹಾರ ಪದಾರ್ಥಗಳಿದ್ದ ಕಿಟ್ಗಳನ್ನು ಹಂಚುವುದಕ್ಕೆ ಸಾಂಕೇತಿಕವಾಗಿ ಚಾಲನೆ ನೀಡಿದ ನಂತರ ಮಾಧ್ಯಮಗಳ ಜತೆ ಮಾತನಾಡಿದ ಅವರು, ಮುನಿರತ್ನ ಕೆಲಸ ಶ್ಲಾಘನೀಯ. ಒಂದು ಲಕ್ಷ ರೇಷನ್ ಕಿಟ್ ವಿತರಣೆ ಅಂದರೆ ಸಣ್ಣ ಸಂಗತಿ ಅಲ್ಲ. ಯಾರೇ ಬಂದರೂ ರೇಷನ್ ಕೊಡಲಾಗುತ್ತಿದೆ. ಇದು ಖಂಡಿತಾ ಒಳ್ಳೆಯ ಕೆಲಸ ಎಂದರು.

ನಗರದಲ್ಲಿ ಯಾರೂ ಹಸಿವಿಂದ ಇರಬಾರದು. ಎಲ್ಲರಿಗೂ ಆಹಾರ ಸಿಗಬೇಕು. ಈ ನಿಟ್ಟಿನಲ್ಲಿ ಮುನಿರತ್ನ ಅರ್ಥಪೂರ್ಣ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಎಲ್ಲರೂ ದೈಹಿಕ ಅಂತರ ಪಾಲಿಸುತ್ತಾ ಬಂದು ಕಿಟ್ಗಳನ್ನು ಸ್ವೀಕರಿಸುತ್ತಿದ್ದಾರೆಂದು ಡಿಸಿಎಂ ಹೇಳಿದರು.
ರಾಜ್ಯದಲ್ಲಿ #SevaHiSangathan ಅಭಿಯಾನ ಮೂಲಕ ಸಚಿವರು,ಶಾಸಕರು,ಪಕ್ಷದ ನಾಯಕರು, ನಮ್ಮ ಕಾರ್ಯಕರ್ತರ ಶ್ರಮದಿಂದ ಕೊರೋನಾ ಸಂಕಷ್ಟದಲ್ಲಿರುವವರಿಗೆ ಅಗತ್ಯ ನೆರವು ನೀಡಲಾಗುತ್ತಿದೆ.
ಲಗ್ಗೆರೆಯಲ್ಲಿ ಶಾಸಕರಾದ @MunirathnaMLA ಅವರ ನೇತೃತ್ವದಲ್ಲಿ ನಡೆಯುತ್ತಿರುವ ಸೇವಾಕಾರ್ಯಗಳಲ್ಲಿ ಪಾಲ್ಗೊಂಡು ಅಗತ್ಯದಲ್ಲಿರುವವರಿಗೆ ದಿನಸಿ ಕಿಟ್ ನೀಡಲಾಯಿತು. pic.twitter.com/0hw2KTCesj
— Dr. C.N. Ashwath Narayan (@drashwathcn) June 6, 2021
ಮುನಿರತ್ನಗೆ ಅವಕಾಶ ಸಿಗುತ್ತೆ:
ಉಪ ಚುನಾವಣೆಯಲ್ಲಿ ಉತ್ತಮ ಗೆಲುವು ಸಾಧಿಸಿದ ಶಾಸಕ ಮುನಿರತ್ನ ಅವರಿಗೆ ಸಂಪುಟ ಸೇರುವ ಅವಕಾಶ ಸಿಗುತ್ತದೆ. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟ ಭರವಸೆ ನೀಡಿದ್ದಾರೆ. ಅವರು ತಪ್ಪದೆ ಮಾತು ಉಳಿಸಿಕೊಳ್ಳುತ್ತಾರೆ, ಈ ಬಗ್ಗೆ ಸಂಶಯ ಬೇಡ ಎಂದು ಇದೇ ವೇಳೆ ಉಪ ಮುಖ್ಯಮಂತ್ರಿಗಳು ಹೇಳಿದರು.
ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾರ್ಡ್ ನಂ.69 ಲಗ್ಗೆರೆಯಲ್ಲಿ ಕೊರೋನಾ ಲಾಕಡೌನ್ ಹಿನ್ನೆಲೆಯಲ್ಲಿ ಇಂದು ಸಂಕಷ್ಟಕ್ಕೊಳಗಾಗಿರುವವರಿಗೆ ಉಚಿತ ದಿನಸಿ ಪದಾರ್ಥಗಳನ್ನು ಕರ್ನಾಟಕ ಸರ್ಕಾರದ ಮಾನ್ಯ ಉಪ ಮುಖ್ಯಮಂತ್ರಿಗಳಾದ ಡಾ.ಅಶ್ವಥ ನಾರಾಯಣ್ ರವರು ಜೋತೆ ವಿತರಣೆ ಮಾಡಿದೆ, ಸರ್ಕಾರಿ ಶಾಲಾ ಆವರಣದಲ್ಲಿ ಸಸಿ ನೆಟ್ಟು, pic.twitter.com/5W4wBcDsNe
— FcIix (@fclixpcrtocol) June 6, 2021

