Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಚಿವ ಸಂಪುಟ ಸಭೆಯಲ್ಲಿ ಲಾಕ್‍ಡೌನ್ ಸಾಧಕ-ಬಾಧಕಗಳ ಬಗ್ಗೆ ಗಂಭೀರ ಚರ್ಚೆ: ಸುಧಾಕರ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಚಿವ ಸಂಪುಟ ಸಭೆಯಲ್ಲಿ ಲಾಕ್‍ಡೌನ್ ಸಾಧಕ-ಬಾಧಕಗಳ ಬಗ್ಗೆ ಗಂಭೀರ ಚರ್ಚೆ: ಸುಧಾಕರ್

Bengaluru City

ಸಚಿವ ಸಂಪುಟ ಸಭೆಯಲ್ಲಿ ಲಾಕ್‍ಡೌನ್ ಸಾಧಕ-ಬಾಧಕಗಳ ಬಗ್ಗೆ ಗಂಭೀರ ಚರ್ಚೆ: ಸುಧಾಕರ್

Public TV
Last updated: April 26, 2021 11:00 am
Public TV
Share
3 Min Read
sudhakar 10
SHARE

ಬೆಂಗಳೂರು: ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆಯಲಿದೆ, ಬೆಂಗಳೂರಲ್ಲಿ 20 ಸಾವಿರಕ್ಕೂ ಅಧಿಕ ಹಾಗೂ ಇತರ ಜಿಲ್ಲೆಗಳಲ್ಲಿ ಸಹ ಸೋಂಕಿನ ಸಂಖ್ಯೆ ಭಾರೀ ಪ್ರಮಾಣದಲ್ಲಿ ಹೆಚ್ಚುತ್ತಿದೆ. ಹೀಗಾಗಿ ಕಠಿಣ ನಿರ್ಧಾರ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ಸುಧಾಕರ್ ತಿಳಿಸಿದರು.

ಈ ಕುರಿತು ಅವರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಯಾಬಿನೆಟ್ ಸಭೆಯಲ್ಲಿ ಇಂದು ಗಂಭೀರ ಚರ್ಚೆ ನಡೆಯಲಿದೆ. ಬೆಂಗಳೂರು ಸೇರಿ ಕೆಲ ಜಿಲ್ಲೆಗಳಲ್ಲಿ ಸೋಂಕು ಹೆಚ್ಚುತ್ತಿದೆ. ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಲಾಕ್‍ಡೌನ್ ವಿಚಾರ ಸರ್ಕಾರದ ಗಮನದಲ್ಲಿದೆ. ಇಂದು ಸಾಧಕ ಬಾಧಕ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು. ನಾವು ರಾಜಕೀಯ ಹಿನ್ನೆಲೆಯಲ್ಲಿ ನಿರ್ಧಾರ ತೆಗೆದುಕೊಳ್ಳುವುದಿಲ್ಲ, ನಮ್ಮ ಸರ್ಕಾರ ವೈಜ್ಞಾನಿಕವಾಗಿ ನಿರ್ಧಾರ ತಗೊಳ್ಳುತ್ತದೆ ಎಂದರು.

Curfew Police Check 3

ಕೆಲವರ ಸಾವು, ನೋವುಗಳನ್ನು ನೋಡಿ ಆತಂಕ, ಭಯ ಜನರಲ್ಲಿ ಹೆಚ್ಚುತ್ತಿದೆ. ಹೀಗಾಗಿ ಅಲ್ಪ ಪ್ರಮಾಣದ ರೋಗ ಲಕ್ಷಣಗಳು ಹಾಗೂ ರೋಗ ಲಕ್ಷಣಗಳು ಇಲ್ಲದಿದ್ದರೂ ಆಸ್ಪತ್ರೆಗೆ ದಾವಿಸುತ್ತಿದ್ದಾರೆ. ಇದರಿಂದ ಆರೋಗ್ಯ ವ್ಯವಸ್ಥೆ ಮೇಲೆ ಹೆಚ್ಚಿನ ಹೊರೆಯಾಗುತ್ತದೆ. ಹೀಗಾಗಿ ಅಲ್ಪ, ರೋಗ ಲಕ್ಷಣ ಇಲ್ಲದವರು ಮನೆಯಲ್ಲೇ ಟೆಲಿ ಕಾಲಿಂಗ್ ಮೂಲಕ ಚಿಕಿತ್ಸೆ ನೀಡಿ ಗುಣಪಡಿಸುತ್ತಾರೆ. ಗಂಭೀರ ಸ್ಥಿತಿಯಲ್ಲಿರುವವರು ಮಾತ್ರ ಆಸ್ಪತ್ರೆಗೆ ದಾಖಲಾದರೆ, ಪರಿಸ್ಥಿತಿ ಸುಧಾರಣೆಯಾಗಲಿದೆ ಎಂದು ತಿಳಿಸಿದರು.

ಜನರು ಆತಂಕದಿಂದ ಆಸ್ಪತ್ರೆಗೆ ದಾಖಲಾಗುತ್ತಿರುವುದರಿಂದ ಆಕ್ಸಿಜನ್ ಅಭಾವ ಸೃಷ್ಟಿಯಾಗಿದೆ. ಲಕ್ಷಣ ಇಲ್ಲದವರು, ಕಡಿಮೆ ಲಕ್ಷ ಮನೆಯಲ್ಲೇ ಚಿಕಿತ್ಸೆ ಪಡೆಯಿರಿ. ಇದರಿಂದ ಈಗ ಸೃಷ್ಟಿಯಾಗಿರುವ ಬಿಕ್ಕಟ್ಟು ತಪ್ಪಲಿದೆ. ಜನ ಅನಗತ್ಯವಾಗಿ ಆತಂಕ ಪಡೋದು ಬೇಡ, ಆಕ್ಸಿಜನ್ ಸ್ಯಾಚುರೇಷನ್ 90, 92 ಬಂದರೂ ಹಲವರು ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ ಎಂದರು.

Curfew Police Check 2

ನಾವು ಎರಡನೇ ಅಲೆಯಲ್ಲಿದ್ದೇವೆ, ಬೇರೆ ದೇಶಗಳು ಮೂರು, ನಾಲ್ಕನೇ ಅಲೆಯಲ್ಲಿದ್ದಾರೆ. ಒಂದು ಅಲೆ 60-90 ದಿನಗಳ ಕಾಲ ಇರುತ್ತದೆ. ನಮ್ಮ ದೇಶದಲ್ಲಿ ಎರಡನೇ ಅಲೆ ಇನ್ನೂ 30-40 ದಿನ ಇರುತ್ತೆ ಎಂದು ತಜ್ಞರು ಅಭಿಪ್ರಾಯ ಪಟ್ಟಿದಾರೆ. ಇಷ್ಟು ದಿನ ಜನ ಎಚ್ಚರಿಕೆ ವಹಿಸಬೇಕು.

ದಿನ ನಿತ್ಯದ ಜೀವನ ಸಾಗಿಸಬೇಕಾದಲ್ಲಿ ಮರ್ಗಸೂಚಿಗಳನ್ನು ಪಾಲಿಸಬೇಕು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಅನಗತ್ಯವಾಗಿ ಮನೆಯಿಂದ ಹೊರಬಾರದು. ಇಲ್ಲವಾದಲ್ಲಿ ಅಪಾಯ ತಪ್ಪಿದ್ದಲ್ಲ. ಒಂದೊಂದು ಅಲೆ ಸುಮಾರು 60-90 ದಿನಗಳ ಕಾಲ ಇರುತ್ತದೆ. ಈಗ ನಾವು 2 ತಿಂಗಳು ತಲುಪಿದ್ದೇವೆ. ಇನ್ನೂ 30-40 ದಿನ ಈ ಅಲೆ ಇರಲಿದೆ ಎಂದು ತಜ್ಞರು ಹೇಳಿದ್ದಾರೆ. ಈ 40 ದಿನ ಅನಗತ್ಯವಾಗಿ ಓಡಾಡಬಾರದು. ರೋಗ ಲಕ್ಷಣಗಳು ಇಲ್ಲದಿದ್ದರೂ ಕೆಲವರಿಗೆ ಪಾಸಿಟಿವ್ ಇರುತ್ತದೆ. ಕೆಲವರು ರೋಗ ಲಕ್ಷಣಗಳು ಇಲ್ಲದವರು ಬೇಕಾಬಿಟ್ಟಿಯಾಗಿ ಓಡಾಡಿ ಇತರರಿಗೆ ಹಬ್ಬಿಸುತ್ತಿದ್ದಾರೆ. ದಯವಿಟ್ಟು ಮನೆಯಲ್ಲೇ ಇರಿ ಎಂದು ಕೇಳಿಕೊಂಡರು.

BSY 1 4

ಕೋಲಾರದಲ್ಲಿ ಆಕ್ಸಿಜನ್ ಸಮಸ್ಯೆಯಿಂದ ನಾಲ್ವರು ನಿಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಇನ್ ಟೈಮ್ ನಲ್ಲಿ ಆಕ್ಸಿಜನ್ ಪೂರೈಸಲು ಆದಷ್ಟು ಶ್ರಮ ಪಡುತ್ತಿದ್ದೇವೆ. ಈಗಾಗಲೇ ಕಾಲ್ ಸೆಂಟರ್ ಮಾಡಿ 50 ಜನರನ್ನು ನೇಮಿಸಲಾಗಿದೆ. ಅಲ್ಲದೆ ಆಕ್ಸಿಜನ್, ರೆಮ್‍ಡಿಸಿವಿರ್ ಗೆ ಅಂತಾನೆ ಒಬ್ಬ ಐಎಎಸ್ ಅಧಿಕಾರಿ ನೇಮಿಸಲಾಗಿದೆ. ಹೀಗಾಗಿ ಯಾವ ಕಾರಣಕ್ಕೆ ನಿಧನರಾಗಿದ್ದಾರೆ ಎಂಬ ಮಾಹಿತಿಯನ್ನು ಡಿಎಚ್‍ಒ ಬಳಿ ಪಡೆಯುತ್ತೇವೆ. ಡೆತ್ ಆಡಿಟ್ ಬಂದ ಮೇಲೆ ಮಾತನಾಡುತ್ತೇನೆ ಎಂದರು.

ಸರ್ಕಾರದ ಸ್ಟೋರ್ಸ್‍ನಲ್ಲಿ 26 ಸಾವಿರ ರೆಮ್‍ಡಿಸಿವಿರ್ ಬೇಕು. ಯಾರಾದರೂ ದುರುದ್ದೇಶದಿಂದ ರೆಮ್‍ಡಿಸಿವಿರ್ ಸ್ಟಾಕ್ ಮಾಡಿಕೊಂಡು, ಕೃತಕ ಅಭಾವ ಸೃಷ್ಟಿಸಿದರೆ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಗೃಹ ಇಲಾಖೆಯಿಂದ ಮನವಿ ಮಾಡಿದ್ದು, ಕಾನೂನು ಕ್ರಮವನ್ನೂ ಕೈಗೊಳ್ಳುತ್ತೇವೆ. ಆಕ್ಸಿಜನ್, ರೆಮ್‍ಡಿಸಿವಿರ್ ಕೊರತೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಈ ಸೋಂಕು ನಮ್ಮ ನಿರೀಕ್ಷೆಗೂ ಮೀರಿ ಏರಿಕೆಯಾಗಿದೆ. ಅನೇಕ ದೇಶಗಳಲ್ಲಿ 1ನೇ ಅಲೆಗಿಂತ 2ನೇ ಅಲೆಯಲ್ಲಿ ಶೇ.200-500ರಷ್ಟು ಹೆಚ್ಚಗಿದೆ. ನಮ್ಮ ದೇಶದಲ್ಲಿ ಮೊದಲ ಅಲೆಗಿಂತ 2ನೇ ಅಲೆಯಲ್ಲಿ ಶೇ.267ರಷ್ಟು ಹೆಚ್ಚಾಗಿದೆ. ಹೀಗಾಗಿ ಗಂಭೀರ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

Bus Curfew 2

ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಭೇಟಿ ಮಾಡಲು ಆರೋಗ್ಯ ಇಲಾಖೆಯ ಸಾಂಕ್ರಮಿಕ ರೋಗ ತಜ್ಞ ಡಾ.ಮೊಹಮದ್ ಷರೀಫ್ ಆಗಮಿಸಿದ್ದು, ಸದಾಶಿವನಗರದಲ್ಲಿರುವ ಸಚಿವ ಸುಧಾಕರ್ ಮನೆಗೆ ಭೇಟಿ ನೀಡಿ, ವೈರಸ್ ಭೀಕರತೆ ಹಾಗೂ ಸಧ್ಯದ ಪರಿಸ್ಥಿತಿಯ ಬಗ್ಗೆ ಸುಧಾಕರ್ ಗೆ ಮಾಹಿತಿ ನೀಡಿದ್ದಾರೆ.

TAGGED:bengaluruCorona Virusdr. k sudhakarPublic TVಕೊರೊನಾ ವೈರಸ್ಡಾ ಕೆ ಸುಧಾಕರ್ಪಬ್ಲಿಕ್ ಟಿವಿಬೆಂಗಳೂರು
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

chikkamagaluru bandh
Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ ಕೇಸ್ – ಚಿಕ್ಕಮಗಳೂರು ಕೊತಕೊತ; ಮುಚ್ಚಿದ ಅಂಗಡಿಗಳು, ರಸ್ತೆಗಳು ಖಾಲಿ ಖಾಲಿ

Public TV
By Public TV
32 minutes ago
Snehamayi Krishna 2
Bengaluru City

ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

Public TV
By Public TV
1 hour ago
Sringeri Bandh
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌ – ಇಂದು ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಬಂದ್

Public TV
By Public TV
2 hours ago
Powerful Drug Lord El Mencho
Latest

‘ಪವರ್‌ಫುಲ್‌ ಡ್ರಗ್ಸ್‌ ಲಾರ್ಡ್‌’ ಎಲ್‌ ಮೆಂಚೊಗೆ ಗುಂಡಿಕ್ಕಿ ಹತ್ಯೆಗೈದ ಮೆಕ್ಸಿಕನ್‌ ಸೇನೆ

Public TV
By Public TV
2 hours ago
mukul roy
Latest

ಮಾಜಿ ರೈಲ್ವೆ ಸಚಿವ, ಬಂಗಾಳದ ‘ರಾಜಕೀಯದ ಚಾಣಕ್ಯ’ ಮುಕುಲ್ ರಾಯ್ ನಿಧನ

Public TV
By Public TV
2 hours ago
mobile ban
Bengaluru City

ರಾಜ್ಯದ 16 ವರ್ಷದೊಳಗಿನ ಮಕ್ಕಳಿಗೆ ಶಾಲಾ-ಕಾಲೇಜುಗಳಲ್ಲಿ ಮೊಬೈಲ್ ನಿಷೇಧ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?