Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಯುಕ್ತ ಹೆಗ್ಡೆ ಮೇಲೆ ಹಲ್ಲೆ ಪ್ರಕರಣ- ಕವಿತಾ ರೆಡ್ಡಿ ಅರೆಸ್ಟ್, ಬಿಡುಗಡೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂಯುಕ್ತ ಹೆಗ್ಡೆ ಮೇಲೆ ಹಲ್ಲೆ ಪ್ರಕರಣ- ಕವಿತಾ ರೆಡ್ಡಿ ಅರೆಸ್ಟ್, ಬಿಡುಗಡೆ

Bengaluru City

ಸಂಯುಕ್ತ ಹೆಗ್ಡೆ ಮೇಲೆ ಹಲ್ಲೆ ಪ್ರಕರಣ- ಕವಿತಾ ರೆಡ್ಡಿ ಅರೆಸ್ಟ್, ಬಿಡುಗಡೆ

Public TV
Last updated: September 8, 2020 7:01 pm
Public TV
Share
3 Min Read
Samyuktha Hegde Kavitha reddy a
SHARE

ಬೆಂಗಳೂರು: ಪಾರ್ಕ್ ಬಳಿ ವರ್ಕ್ ಔಟ್ ಮಾಡುತ್ತಿದ್ದ ನಟಿ ಸಂಯುಕ್ತ ಹೆಗ್ಡೆ ಹಾಗೂ ಸ್ನೇಹಿತರ ಮೇಲೆ ಹಲ್ಲೆ ಮಾಡಿದ ಪ್ರಕರಣದಲ್ಲಿ ಕಾಗ್ರೆಸ್ ನಾಯಕಿ ಕವಿತಾ ರೆಡ್ಡಿಯನ್ನು ಬಂಧಿಸಲಾಗಿದೆ.

ಹೆಚ್.ಎಸ್.ಆರ್ ಲೇಔಟ್ ಪೋಲಿಸರು ಕವಿತಾ ರೆಡ್ಡಿಯನ್ನು ಬಂಧಿಸಿದ್ದು, ವೈದ್ಯಕೀಯ ಪರೀಕ್ಷೆಗೆ ಕರೆದುಕೊಂಡು ಹೋಗಿದ್ದರು. ಇತ್ತ ಪ್ರಕರಣದ ಎರಡನೇ ಅರೋಪಿ ಅನಿಲ್ ರೆಡ್ಡಿ ನಾಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಸದ್ಯ ಕವಿತಾ ರೆಡ್ಡಿ ಅವರು ಸ್ಟೇಷನ್ ಬೇಲ್ ಮೇಲೆ ಬಿಡುಗಡೆಯಾಗಿದ್ದಾರೆ ಎಂಬ ಮಾಹಿತಿ ಲಭಿಸಿದೆ.

samyuktha hegde 2

ಘಟನೆಗೆ ಸಂಬಂಧಿಸಿದಂತೆ ಕವಿತಾ ರೆಡ್ಡಿ ಕ್ಷಮೆ ಕೋರಿ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ ಮಾಡಿದ್ದರು. ಇದರ ನಡುವೆಯೇ ಸಂಯುಕ್ತ ಹೆಗ್ಡೆ ಹಾಗೂ ಕವಿತಾ ರೆಡ್ಡಿ ನಡುವೆ ಸಂಧಾನ ಮಾಡಲಾಗಿತ್ತು. ಆದರೆ ಸಂಧಾನ ಪತ್ರದಲ್ಲಿ ರಾಜಿಗೆ ಒಪ್ಪಿಗೆ ಇಲ್ಲ. ಒತ್ತಾಯದಿಂದ ರಾಜಿಗೆ ಸಹಿ ಮಾಡುತ್ತಿದ್ದೇನೆ ಎಂದು ಸಂಯುಕ್ತ ಹೆಗ್ಡೆ ಬರೆದಿದ್ದರು. ಪ್ರಕರಣದ 2ನೇ ಆರೋಪಿ ಅನಿಲ್ ರೆಡ್ಡಿ ವಿರುದ್ಧ ಕ್ರಮಕ್ಕೆ ಸಂಯುಕ್ತ ಮಾಡಿದ್ದರು. ಹೀಗಾಗಿ ಪೊಲೀಸರು ಐಪಿಸಿ ಸೆಕ್ಷನ್ 264ಬಿ, 323 224, 504, 509, 506 ಅಡಿ ಎಫ್‍ಐಆರ್ ದಾಖಲು ಮಾಡಿ ಕವಿತಾ ರೆಡ್ಡಿಯನ್ನು ಬಂಧಿಸಿದ್ದರು.

samyuktha hegde

ಹಲ್ಲೆ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿದ್ದ ಸಂಯುಕ್ತ, ಪಾರ್ಕ್ ಬಳಿ ನಾವು  ವರ್ಕ್ ಔಟ್ ಮಾಡುತ್ತಿದ್ದಾಗ ಕವಿತಾ ರೆಡ್ಡಿ ನಮ್ಮನ್ನು ನಿಂದಿಸಿ, ಹಲ್ಲೆ ಮಾಡಲು ಯತ್ನಿಸಿದರು ಎಂದು ಆರೋಪಿಸಿದ್ದರು. ನಮ್ಮ ದೇಶದ ಭವಿಷ್ಯವು ಇಂದು ನಾವು ಏನು ಮಾಡುತ್ತೇವೆ ಎಂಬುದರ ಮೇಲೆ ಅವಲಂಬಿತವಾಗಿದೆ. ಅಗರ ಕೆರೆ ಬಳಿಯ ಉದ್ಯಾನವನದಲ್ಲಿ ಕವಿತಾ ರೆಡ್ಡಿ ನಮ್ಮನ್ನು ನಿಂದಿಸಿ, ಅಸಹ್ಯಕರವಾಗಿ ವರ್ತಿಸಿದರು. ಇದಕ್ಕೆ ಸಾಕ್ಷಿದಾರರು ಹಾಗೂ ಹೆಚ್ಚಿನ ವಿಡಿಯೋ ಪುರಾವೆಗಳು ಸಹ ಇವೆ. ಈ ಕುರಿತು ಗಮನಹರಿಸಬೇಕೆಂದು ನಾನು ವಿನಂತಿಸುತ್ತೇನೆ ಎಂದು ಬೆಂಗಳೂರು ಪೊಲೀಸರಿಗೆ ಹಾಗೂ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಟ್ಯಾಗ್ ಮಾಡಿದ್ದರು.

 

View this post on Instagram

 

A post shared by Samyuktha Hegde (@samyuktha_hegde) on Sep 4, 2020 at 5:38am PDT

ಸಿಲಿಕಾನ್ ಸಿಟಿಯ ಅಗರ ಉದ್ಯಾನವನದಲ್ಲಿ ಸಂಯುಕ್ತ ಅಸಭ್ಯವಾಗಿ ವರ್ತನೆ ಮಾಡಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದರು. ಸಾರ್ವಜನಿಕರು ವಾಕಿಂಗ್ ಮಾಡುವ ಪಾರ್ಕ್‍ನಲ್ಲಿ ಸಂಯುಕ್ತ ಹೆಗ್ಡೆ ಮತ್ತವರ ಸಂಗಡಿಗರು ಹುಲಾ ಹೂಪ್ ಡ್ಯಾನ್ಸ್ ಮಾಡಿದ್ದರು. ತುಂಡು ಬಟ್ಟೆ ತೊಟ್ಟು ಡ್ಯಾನ್ಸ್ ಮಾಡಿದ್ದಾರೆ ಎಂದು ಕವಿತಾ ರೆಡ್ಡಿ ಹಾಗೂ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಕವಿತಾ ರೆಡ್ಡಿ ವಿರುದ್ಧ ನಟಿ ಸಂಯುಕ್ತ ಆಕ್ರೋಶ ವ್ಯಕ್ತಪಡಿಸಿದ್ದು, ಈ ರೀತಿ ಮಾಡಿದ್ದಾರೆ ಎಂದು ವಿಡಿಯೋ ಮೂಲಕ ಕೂಗಾಡಿದ್ದರು. ಈ ವೇಳೆ ಸ್ಥಳೀಯರು ನಟಿಯ ವಿರುದ್ಧ ಧಿಕ್ಕಾರ ಕೂಗಿ, ನಂತರ ಪಾರ್ಕ್ ಗೇಟ್ ಲಾಕ್ ಮಾಡಿ ಪೊಲೀಸರಿಗೆ ಕರೆ ಮಾಡಿದ್ದರು.

samyuktha hegde 3

ಗೇಟ್ ಓಪನ್ ಮಾಡುವಂತೆ ಸಂಯುಕ್ತ ಮತ್ತು ಕವಿತಾ ರೆಡ್ಡಿ ನಡುವೆ ವಾಗ್ವಾದ ನಡೆದಿತ್ತು. ಅಷ್ಟರಲ್ಲಿ ಪೊಲೀಸರು ಸ್ಥಳಕ್ಕೆ ಬಂದಿದ್ದರು. ಆಗ ತಕ್ಷಣ ಇನ್‍ಸ್ಟಾಗ್ರಾಮ್‍ನಲ್ಲಿ ಲೈವ್ ಬಂದ ಸಂಯುಕ್ತ, ನಾನು ಏನೂ ತಪ್ಪು ಮಾಡಿಲ್ಲ. ಸುಮ್ಮನೆ ನಮ್ಮನ್ನು ಕೂಡಿ ಹಾಕಿದ್ದಾರೆ ಎಂದು ದೂರಿದ್ದರು. ನಂತರ ಪೊಲೀಸರು ಸಂಯುಕ್ತ ಹಾಗೂ ಅವರ ಸ್ನೇಹಿತರನ್ನು ಅಲ್ಲಿಂದ ಕರೆದುಕೊಂಡು ಹೋಗಿದ್ದರು.

Samyuktha Hegde

ಈ ಕುರಿತು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆಯುತ್ತಿದ್ದು, ಹಲವರು ಸಂಯುಕ್ತ ಹೆಗ್ಡೆ ಪರ ಪೋಸ್ಟ್ ಮಾಡಿ, ಈ ಘಟನೆಯಲ್ಲಿ ಸಂಯುಕ್ತಾ ಅವರದ್ದು ತಪ್ಪಿಲ್ಲ. ಕವಿತಾ ರೆಡ್ಡಿಯವರದ್ದೇ ತಪ್ಪಿದೆ ಎಂದು ಹೇಳುತ್ತಿದ್ದಾರೆ. ಇನ್ನೂ ಕೆಲವರು ಸಾರ್ವಜನಿಕ ಸ್ಥಳಗಳಲ್ಲಿ ಡ್ರೆಸ್ ಹೇಗೆ ಧರಿಸಬೇಕು ಎಂಬುದನ್ನು ನಟಿಯರು ತಿಳಿದುಕೊಂಡಿರಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿ ಕವಿತಾ ರೆಡ್ಡಿ ಪರ ಪೋಸ್ಟ್ ಮಾಡುತ್ತಿದ್ದಾರೆ. ಸಂಯುಕ್ತ ಹೆಗ್ಡೆ ಅವರ ವಿಡಿಯೋ ಇದೀಗ ಭಾರೀ ವೈರಲ್ ಆಗಿದ್ದು, ತುಂಬಾ ಜನ ಸಂಯುಕ್ತ ಹೆಗ್ಡೆ ಪರ ಮಾತನಾಡುತ್ತಿದ್ದಾರೆ.

Samyuktha Hegde 4

TAGGED:bengalurucongressKavitha ReddypolicePublic TVSamyuktha Hegdeಕವಿತಾ ರೆಡ್ಡಿಕಾಂಗ್ರೆಸ್ಪಬ್ಲಿಕ್ ಟಿವಿಪೊಲೀಸ್ಬೆಂಗಳೂರುಸಂಯುಕ್ತ ಹೆಗ್ಡೆ
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda 1
ದೇಶಾದ್ಯಂತ ಅನ್ನದಾನ ಮಾಡಲು ಮುಂದಾದ ರಶ್ಮಿಕಾ-ವಿಜಯ್
Cinema Latest South cinema Top Stories
Rajath Kishan and Dog Satish
ಶೌಚಾಲಯದಲ್ಲಿದ್ದ ವಿಡಿಯೋವೊಂದಕ್ಕೆ ಸುದೀಪ್ ಮೂವಿ ಹಾಡು – ಡಾಗ್ ಸತೀಶ್ ವಿರುದ್ಧ ರಜತ್ ದೂರು
Bengaluru City Cinema Karnataka Latest Main Post Sandalwood
Vijay Sangeetha Sornalingam
ನಟಿ ಜೊತೆ ವಿವಾಹೇತರ ಸಂಬಂಧ ಆರೋಪ; ಡಿವೋರ್ಸ್‌ಗೆ ಅರ್ಜಿ ಸಲ್ಲಿಸಿದ ನಟ ವಿಜಯ್‌ ಪತ್ನಿ
Cinema Latest Main Post South cinema
The Kerala Story 2
‘ದಿ ಕೇರಳ ಸ್ಟೋರಿ 2’ ಸಿನಿಮಾಗೆ ಬಿಗ್‌ ರಿಲೀಫ್‌ – ರಿಲೀಸ್‌ಗಿದ್ದ ತಡೆಯಾಜ್ಞೆ ತೆರವುಗೊಳಿಸಿದ ಹೈಕೋರ್ಟ್‌
Cinema Court Latest Main Post South cinema

You Might Also Like

parents bengaluru
Bengaluru City

ಒಂದನೇ ತರಗತಿಗೆ ದಾಖಲಾತಿ ವಯಸ್ಸಿನ ಮಿತಿ ಸಡಿಲ ಮಾಡಿ: ಸರ್ಕಾರಕ್ಕೆ ಪೋಷಕರ ಮನವಿ

Public TV
By Public TV
12 minutes ago
krishna Byregowda
Bengaluru City

ಮಧ್ಯಪ್ರಾಚ್ಯದಲ್ಲಿ ಸಿಲುಕಿರೋ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಕ್ರಮ: ಕೃಷ್ಣ ಭೈರೇಗೌಡ

Public TV
By Public TV
22 minutes ago
plane
Bengaluru City

ಇರಾನ್ – ಇಸ್ರೇಲ್ ವಾರ್; ಬೆಂಗಳೂರಿನಿಂದ ಹೊರಡಬೇಕಿದ್ದ 10 ವಿಮಾನಗಳು ಕ್ಯಾನ್ಸಲ್

Public TV
By Public TV
24 minutes ago
Israeli strikes 1
Latest

ಆಪರೇಷನ್ ʻರೋರಿಂಗ್ ಲಯನ್ʼ – ಲೆಬನಾನ್‌ ಮೇಲೆ ಇಸ್ರೇಲ್‌ ಮಿಸೈಲ್‌ ಮಳೆ; 31 ಮಂದಿ ಸಾವು

Public TV
By Public TV
40 minutes ago
kalaburagi murder
Crime

ಕಲಬುರಗಿ| ಜಮೀನಿನಲ್ಲಿ ಯುವಕ ಅನುಮಾನಾಸ್ಪದ ಸಾವು – ಕೊಲೆ ಶಂಕೆ

Public TV
By Public TV
42 minutes ago
US Soldiers Killed
Latest

ಇರಾನ್‌ ಪ್ರತೀಕಾರದ ದಾಳಿ – ಅಮೆರಿಕದ 560 ಸೈನಿಕರ ಸಾವು?

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?