ಬೆಂಗಳೂರು: ಕಲಬುರಗಿ ಸಂಸದ ಡಾ. ಉಮೇಶ್ ಜಾಧವ್ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಇಂದು ಬೆಳಗ್ಗೆ ಸಣ್ಣದಾಗಿ ಎದೆ ನೋವು ಕಾಣಿಸಿಕೊಂಡ ಪರಿಣಾಮ ಅವರು ನಗರದ ಜಯದೇವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಂಸದರು, ಇಂದು ಬೆಳಗ್ಗೆ ಸಣ್ಣದಾಗಿ ಎದೆ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆ ದಾಖಲಾಗಿದ್ದೇನೆ. ಈ ಬಗ್ಗೆ ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಮಾಹಿತಿ ನೀಡಿದ್ದಾರೆ.
Due to mild chest pain felt this morning, visited #JayadevaHospital, Bangalore & I have undergone some routine test under the supervision of Dr Manjunath CN, Director.
I am being advised to get admitted for further evaluation.
Nothing to worry, I will be fine soon.@BJP4India
— Dr. Umesh G Jadhav MPLS (@UmeshJadhav_BJP) September 28, 2020
ಕಳೆದ ಆಗಸ್ಟ್ ತಿಂಗಳಲ್ಲಿ ಉಮೇಶ್ ಜಾಧವ್ ಹಾಗೂ ಅವರ ಪುತ್ರ, ಚಿಂಚೋಳಿ ಶಾಸಕ ಡಾ. ಅವಿನಾಶ್ ಜಾಧವ್ ಅವರಿಗೆ ಕೊರೊನಾ ದೃಢಪಟ್ಟಿತ್ತು. ಕೂಡಲೇ ತಂದೆ- ಮಗ ಖಾಸಗಿ ಆಸ್ಪತ್ರೆಯತ್ತ ಮುಖ ಮಾಡದೆ ಬೆಂಗಳೂರಿನ ಸರ್ಕಾರಿ ಬೌರಿಂಗ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರು.
ತಮಗೆ ಕೋವಿಡ್ 19 ದೃಢಪಟ್ಟ ಕೂಡಲೇ ಸಂಪರ್ಕಕ್ಕೆ ಬಂದ ಎಲ್ಲರೂ ಪರೀಕ್ಷೆ ಮಾಡಿಸಿಕೊಳ್ಳುವಂತೆ ಹೇಳಿದ್ದಲ್ಲದೇ, ತಮ್ಮ ಜೊತೆ ಇದ್ದ 40ಕ್ಕೂ ಹೆಚ್ಚು ಜನರ ತಪಾಸಣೆ ಮಾಡಿಸಿದ್ದರು.