ಸಚಿವ ಆನಂದ್ ಸಿಂಗ್ ಕಾರು ಚಾಲಕನಿಗೆ ಕೊರೊನಾ ಸೋಂಕು

Public TV
1 Min Read
anand singh bng a copy

ಬಳ್ಳಾರಿ: ಅರಣ್ಯ ಸಚಿವ ಆನಂದ್ ಸಿಂಗ್ ಕಾರು ಚಾಲಕನಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

ಚಾಲಕನಿಗೆ ಕೊರೊನಾ ದೃಢಪಟ್ಟ ಹಿನ್ನೆಲೆ ಹೊಸಪೇಟೆ ನಗರದ ರಾಣಿಪೇಟೆಯ ಕಚೇರಿಯನ್ನು ಇಂದು ಸೀಲ್‍ಡೌನ್ ಮಾಡಲಾಗಿದೆ. ಸಚಿವ ಆನಂದ್ ಸಿಂಗ್ ಅವರ ಕಾರು ಚಾಲಕರ ಪ್ರಾಥಮಿಕ ಸಂಪರ್ಕದಲ್ಲಿದ್ದವರನ್ನು ಸ್ವಯಂ ಕ್ವಾರಂಟೈನ್‍ನಲ್ಲಿರುವಂತೆ ಸೂಚಿಸಲಾಗಿದೆ. ಸೋಂಕು ತಗುಲಿದ ವಾಹನ ಚಾಲಕನನ್ನು ಹೊಸಪೇಟೆ ನಗರದ ಕೋವಿಡ್ -19 ಆಸ್ಪತ್ರೆಗೆ ದಾಖಲಿಸಲಾಗಿದೆ.

WhatsApp Image 2020 07 20 at 5.44.00 PM

ಕಾರು ಚಾಲಕನ ಕುಟುಂಬ ಸದಸ್ಯರನ್ನು ಸಹ ಕ್ವಾರಂಟೈನ್ ಮಾಡಲಾಗಿದೆ. ಅಲ್ಲದೆ ಸಚಿವ ಆನಂದ್ ಸಿಂಗ್ ಅವರ ಆಪ್ತ ಸಹಾಯಕರು, ಸಚಿವರ ಕಾರ್ಯಾಲಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಿಬ್ಬಂದಿಯನ್ನೂ 14 ದಿನಗಳ ಕಾಲ ಹೋಮ್ ಕ್ವಾರಂಟೈನ್‍ನಲ್ಲಿರಲು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ. ಅಲ್ಲದೆ ಸಚಿವರ ಕಚೇರಿಗೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *